Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 29:11 - ಕನ್ನಡ ಸತ್ಯವೇದವು C.L. Bible (BSI)

11 ಈ ಕಾರಣ, ನಿನ್ನ ಕುರಿತ ದಿವ್ಯದರ್ಶನ ನಿಗೂಢ ಗ್ರಂಥವಾಕ್ಯವಾಗಿಬಿಟ್ಟಿದೆ. ಅದನ್ನು ಅಕ್ಷರಬಲ್ಲವನಿಗೆ, “ದಯಮಾಡಿ ಇದನ್ನು ಓದು,” ಎಂದು ಕೊಟ್ಟರೆ, ಅವನು : “ಇದು ನಿಗೂಢವಾಗಿದೆ, ಆಗುವುದಿಲ್ಲ,” ಎನ್ನುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ದೈವದರ್ಶನವೆಲ್ಲಾ ಮುದ್ರೆಹಾಕಿದ ಶಾಸ್ತ್ರದ ಮಾತಿನ ಹಾಗಿದೆ; ಅದನ್ನು ಅಕ್ಷರ ಬಲ್ಲವನಿಗೆ, “ಇದನ್ನು ಓದು” ಎಂದು ಹೇಳಿದರೆ ಅವನು, “ಮುದ್ರೆ ಹಾಕಿದೆಯಲ್ಲಾ, ಆಗುವುದಿಲ್ಲ” ಎಂದು ಹೇಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ದೈವದರ್ಶನವೆಲ್ಲಾ ಮುದ್ರೆಹಾಕಿದ ಶಾಸ್ತ್ರದ ಮಾತಿನ ಹಾಗಿದೆ; ಅದನ್ನು ಅಕ್ಷರಬಲ್ಲವನಿಗೆ - ದಯಮಾಡಿ ಓದೆಂದು ಒಪ್ಪಿಸಿದರೆ ಅವನು - ಮುದ್ರೆಹಾಕಿದೆಯಲ್ಲಾ, ಆಗುವದಿಲ್ಲ ಅನ್ನುವನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ನಾನು ಖಂಡಿತವಾಗಿ ಹೇಳುತ್ತೇನೆ, ಈ ಸಂಗತಿಗಳು ನೆರವೇರುವವು. ಆದರೆ ನೀವು ನನ್ನನ್ನು ಅರ್ಥಮಾಡಿಕೊಳ್ಳುವುದಿಲ್ಲ. ನನ್ನ ಮಾತುಗಳು ಒಂದು ಪುಸ್ತಕದಲ್ಲಿ ಬರೆದು ಮುಚ್ಚಿ ಅದಕ್ಕೆ ಮುದ್ರೆಹಾಕಿ ಇರಿಸಿದಂತಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ದರ್ಶನವೆಲ್ಲಾ ನಿಮಗೆ ಮುದ್ರೆ ಹಾಕಿದ ಗ್ರಂಥದ ವಾಕ್ಯಗಳ ಹಾಗಾಯಿತು. ಅದನ್ನು ಅಕ್ಷರ ಬಲ್ಲವನಿಗೆ ಕೊಟ್ಟು, “ಇದನ್ನು ಓದು,” ಎಂದು ವಿನಂತಿಸಿದರೆ ಅವನು, “ಮುದ್ರೆ ಹಾಕಿದೆಯೆಲ್ಲಾ, ಆಗುವುದಿಲ್ಲ,” ಅನ್ನುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 29:11
11 ತಿಳಿವುಗಳ ಹೋಲಿಕೆ  

ಅದಕ್ಕೆ ಪ್ರತ್ಯುತ್ತರವಾಗಿ ಯೇಸು, “ಸ್ವರ್ಗಸಾಮ್ರಾಜ್ಯದ ರಹಸ್ಯಗಳನ್ನು ಅರಿತುಕೊಳ್ಳುವ ಸದವಕಾಶ ಲಭಿಸಿರುವುದು ನಿಮಗೆ, ಅವರಿಗಲ್ಲ.


“ದಾನಿಯೇಲನೇ, ನೀನು ಈ ಮಾತುಗಳನ್ನು ಮುಚ್ಚಿಡು; ಇವುಗಳನ್ನು ಬರೆಯುವ ಗ್ರಂಥಕ್ಕೆ ಮುದ್ರೆಹಾಕು; ಅಂತ್ಯಕಾಲದವರೆಗೆ ಮರೆಯಾಗಿರಲಿ. ಬಹುಜನರು ಅತ್ತಿತ್ತ ಅಲೆದಾಡುವರು (ಸತ್ಯಕ್ಕಾಗಿ). ಅಧರ್ಮ ಹೆಚ್ಚುತ್ತಿರುವುದು.”


ದಿವ್ಯಬೋಧನೆಯನ್ನು ಸುಭದ್ರವಾಗಿ ಇರಿಸು. ಅದನ್ನು ನನ್ನ ಶಿಷ್ಯರಿಗೆ ಉಪದೇಶಮಾಡಿ ಸುರಕ್ಷಿತವಾಗಿರಿಸು.


ಅವನು, “ದಾನಿಯೇಲನೇ ಹೋಗು; ಈ ಮಾತುಗಳು ಅಂತ್ಯಕಾಲದವರೆಗೂ ಮುಚ್ಚಲ್ಪಟ್ಟು ಮುದ್ರಿತವಾಗಿವೆ.


ಆ ಸಮಯದಲ್ಲಿ ಯೇಸುಸ್ವಾಮಿ, “ಪಿತನೇ, ಪರಲೋಕ ಭೂಲೋಕಗಳ ಒಡೆಯನೇ, ಜ್ಞಾನಿಗಳಿಗೂ ಮೇಧಾವಿಗಳಿಗೂ ಈ ವಿಷಯಗಳನ್ನು ಮರೆಮಾಡಿ ಮಕ್ಕಳಂಥವರಿಗೆ ನೀವು ಶ್ರುತಪಡಿಸಿದ್ದೀರಿ; ಇದಕ್ಕಾಗಿ ನಿಮ್ಮನ್ನು ವಂದಿಸುತ್ತೇನೆ.


ಇದನ್ನೂ ನಾನು ಕಂಡೆ: ಯಜ್ಞದ ಕುರಿಮರಿಯಾದಾತನು ಏಳು ಮುದ್ರೆಗಳಲ್ಲಿ ಒಂದನ್ನು ಒಡೆದನು. ಆ ನಾಲ್ಕು ಜೀವಿಗಳಲ್ಲಿ ಒಂದು ಜೀವಿ ಗುಡುಗಿನಂತಿದ್ದ ಸ್ವರದಿಂದ, “ಇಲ್ಲಿ ಬಾ,” ಎಂದು ಕರೆಯುವುದನ್ನು ನಾನು ಕೇಳಿಸಿಕೊಂಡೆ.


ಅದಕ್ಕೆ ಪ್ರತ್ಯುತ್ತರವಾಗಿ ಯೇಸು ಹೀಗೆಂದರು: “ಯೋನ್ನನ ಮಗ ಸಿಮೋನನೇ, ನೀನು ಧನ್ಯ! ಈ ವಿಷಯವನ್ನು ನಿನಗೆ ಶ್ರುತಪಡಿಸಿದ್ದು ನರಮಾನವ ಶಕ್ತಿ ಅಲ್ಲ. ಸ್ವರ್ಗದಲ್ಲಿರುವ ನನ್ನ ಪಿತನೇ.


ಯಾಜಕರು, ಪ್ರವಾದಿಗಳು ಮದ್ಯಪಾನದಿಂದ ಮತ್ತರಾಗಿದ್ದಾರೆ; ದ್ರಾಕ್ಷಾರಸದಿಂದ ಓಲಾಡುತ್ತಿದ್ದಾರೆ; ಕುಡಿತದಿಂದ ತೂರಾಡುತ್ತಿದ್ದಾರೆ. ದ್ರಾಕ್ಷಾರಸವೇ ಅವರನ್ನು ಮುಳುಗಿಸಿಬಿಟ್ಟಿದೆ. ಹೌದು, ಅವರು ಮದ್ಯದಲ್ಲಿ ತೇಲಾಡುತ್ತಿದ್ದಾರೆ. ದೈವದರ್ಶನವಾಗುತ್ತಿರುವಾಗಲೂ ಅವರು ಓಲಾಡುತ್ತಾರೆ.


ಅಕ್ಷರವಿಲ್ಲದವನಿಗೆ, “ದಯವಿಟ್ಟು ಇದನ್ನು ಓದು,” ಎಂದು ಒಪ್ಪಿಸಿದರೆ, ಅವನು : “ನನಗೆ ಅಕ್ಷರವಿದ್ಯೆ ಇಲ್ಲ,” ಎನ್ನುತ್ತಾನೆ.


ಆ ದಿನದಂದು ಕಿವುಡರು ಗ್ರಂಥವಾಕ್ಯಗಳನ್ನು ಓದುವುದನ್ನು ಕೇಳುವರು. ಕುರುಡರಿಗೆ ಮಬ್ಬಿನಲ್ಲೂ ಕತ್ತಲಲ್ಲೂ ಕಣ್ಣು ಕಾಣಿಸುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು