Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 29:13 - ಕನ್ನಡ ಸತ್ಯವೇದವು C.L. Bible (BSI)

13 ಸರ್ವೇಶ್ವರ ಹೀಗೆಂದರು : “ಈ ಜನರು ನನ್ನನ್ನು ಸಮೀಪಿಸುವುದು ಬರೀ ಮಾತಿನ ಮರ್ಯಾದೆಯಿಂದ, ಇವರು ನನ್ನನ್ನು ಸನ್ಮಾನಿಸುವುದು ಬರೀ ಮಾತಿನ ಮಾಲೆಯಿಂದ, ಇವರ ಹೃದಯವಾದರೋ ಬಲು ದೂರವಿದೆ ನನ್ನಿಂದ, ಇವರು ನನಗೆ ಸಲ್ಲಿಸುವ ಭಕ್ತಿ ಕೂಡಿದೆ ಕೇವಲ ಭಯದಿಂದ, ಕಲಿತಿಹರಿವರು ಮಾನವಕಲ್ಪಿತ ಕಟ್ಟಳೆಯನು ಬಾಯಿಪಾಠದಿಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಯೆಹೋವನು ಹೇಳುವುದೇನೆಂದರೆ, “ಈ ಜನರು ಮಾತಿನಿಂದ ನನ್ನನ್ನು ಸಮೀಪಿಸಿ, ತುಟಿಯಿಂದ ನನ್ನನ್ನು ಸನ್ಮಾನಿಸುತ್ತಾರೆ, ಮನಸ್ಸನ್ನೋ ದೂರಮಾಡಿಕೊಂಡು, ಬಾಯಿಪಾಠವಾಗಿ ಕಲಿತಿರುವ ಮನುಷ್ಯರ ಆಜ್ಞೆಗೆ ಸರಿಯಾದ ಭಯಭಕ್ತಿಯನ್ನು ಮಾತ್ರ ನನ್ನಲ್ಲಿಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಮತ್ತು ಯೆಹೋವನು - ಈ ಜನರು ಮಾತಿನಿಂದ ನನ್ನನ್ನು ಸಮೀಪಿಸಿ ತುಟಿಯಿಂದ ನನ್ನನ್ನು ಸನ್ಮಾನಿಸುತ್ತಾರೆ, ಮನಸ್ಸನ್ನೋ ದೂರಮಾಡಿಕೊಂಡು ಬಾಯಿಪಾಠವಾಗಿ ಕಲಿತಿರುವ ಮನುಷ್ಯರ ಆಜ್ಞೆಗೆ ಸರಿಯಾದ ಭಯಭಕ್ತಿಯನ್ನು ಮಾತ್ರ ನನ್ನಲ್ಲಿಟ್ಟಿದ್ದಾರೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ನನ್ನ ಒಡೆಯನು ಹೇಳುವುದೇನೆಂದರೆ, “ನನ್ನನ್ನು ಪ್ರೀತಿಸುವದಾಗಿ ಇವರು ಹೇಳುತ್ತಾರೆ. ಅವರು ತಮ್ಮ ಮಾತುಗಳಿಂದ ನನ್ನನ್ನು ಗೌರವಿಸುತ್ತಾರೆ. ಆದರೆ ಅವರ ಹೃದಯಗಳು ನನ್ನಿಂದ ದೂರವಾಗಿವೆ. ಅವರು ನನಗೆ ತೋರಿಸುವ ಗೌರವವು ಅವರು ಬಾಯಿಪಾಠ ಮಾಡಿದ ಮಾನವ ನಿರ್ಮಿತವಾದ ನಿಯಮಗಳಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಕರ್ತರು ಹೇಳುವುದೇನೆಂದರೆ: “ಈ ಜನರು ಬಾಯಿಂದ ನನ್ನನ್ನು ಸಮೀಪಿಸಿ, ತಮ್ಮ ತುಟಿಗಳಿಂದ ನನ್ನನ್ನು ಸನ್ಮಾನಿಸುತ್ತಾರೆ, ಆದರೆ ಅವರ ಹೃದಯವು ನನ್ನಿಂದ ದೂರವಾಗಿದೆ. ಬಾಯಿಪಾಠವಾಗಿ ಕಲಿತಿರುವ ಮನುಷ್ಯರ ಆಜ್ಞೆಗೆ ಸರಿಯಾದ ಭಯವನ್ನು ಮಾತ್ರ ನನ್ನಲ್ಲಿಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 29:13
25 ತಿಳಿವುಗಳ ಹೋಲಿಕೆ  

ಅವರನ್ನು ನಾಟಿಮಾಡಿದವರು ನೀವು ಬೇರೂರಿ ಬೆಳೆದು ಹಣ್ಣುಬಿಡುತ್ತಿದ್ದಾರೆ ಅವರು. ನೀವು ಅವರ ಅಧರಕ್ಕೆ ಹತ್ತಿರ, ಹೃದಯಕ್ಕೆ ದೂರ.


ಇಸ್ರಯೇಲಳಿಗೆ ಇಷ್ಟು ದಂಡನೆ ಆದರೂ ಜುದೇಯವೆಂಬ ದ್ರೋಹಿಯಾದ ಅವಳ ತಂಗಿ ನನ್ನ ಕಡೆಗೆ ಪೂರ್ಣಮನಸ್ಸಿನಿಂದ ತಿರುಗಿಕೊಳ್ಳಲಿಲ್ಲ. ತಿರುಗಿಕೊಂಡಂತೆ ನಟಿಸಿದಳು ಮಾತ್ರ. ಇದು ಸರ್ವೇಶ್ವರನಾದ ನನ್ನ ನುಡಿ.”


ಆತನ ಮಾತುಗಳಿಗೆ ಯಾವುದನ್ನೂ ಸೇರಿಸಬೇಡ, ಇಲ್ಲವಾದರೆ ಆತ ನಿನ್ನನ್ನು ಖಂಡಿಸಿಯಾನು, ನೀನು ಸುಳ್ಳುಗಾರನಾಗಿ ತೋರಿಬಂದೀಯೆ!


ಇವುಗಳೆಲ್ಲವೂ ಬಳಕೆಯಿಂದ ಅಳಿದುಹೋಗುತ್ತವೆ. ಅಲ್ಲದೆ, ಅವೆಲ್ಲವೂ ಮಾನವ ವ್ಯವಸ್ಥಿತ ಬೋಧನೆ ಹಾಗೂ ನಿಬಂಧನೆಗಳು.


ನೀವು ‘ಸರ್ವೇಶ್ವರನ ಜೀವದಾಣೆ’ ಎಂದು ಪ್ರಮಾಣ ಮಾಡಿದರೂ ಆ ಪ್ರಮಾಣ ಸುಳ್ಳೇ ಸುಳ್ಳು ಎನ್ನುತ್ತಾರೆ ಸರ್ವೇಶ್ವರ.


ನಿಮ್ಮನ್ನು ನೀವೇ ಮೋಸಮಾಡಿಕೊಳ್ಳುತ್ತಿದ್ದೀರಿ. ನೀವೇ ನನ್ನ ಬಳಿಗೆ ಬಂದು ‘ನಮ್ಮ ದೇವರಾದ ಸರ್ವೇಶ್ವರನನ್ನು ನಮಗಾಗಿ ಪ್ರಾರ್ಥಿಸು. ನಮ್ಮ ದೇವರಾದ ಸರ್ವೇಶ್ವರ ಯಾವ ಅಪ್ಪಣೆ ಕೊಡುತ್ತಾರೋ ಅದನ್ನು ನಮಗೆ ತಿಳಿಸು. ಅದರಂತೆ ನಾವು ನಡೆಯುತ್ತೇವೆ,’ ಎಂಬುದಾಗಿ ನಿಮ್ಮ ದೇವರಾದ ಸರ್ವೇಶ್ವರನ ಸನ್ನಿಧಿಯಲ್ಲಿ ವಿಚಾರಿಸುವುದಕ್ಕೆ ನನ್ನನ್ನು ನೀವೇ ಕಳುಹಿಸಿದಿರಿ.


ಲಕ್ಷ್ಯವಿಡು, ಓ ಪ್ರಭು, ಎನ್ನ ನ್ಯಾಯವಾದ ಮೊರೆಗೆ I ಕಿವಿಗೊಡು, ನಿಷ್ಕಪಟ ಬಾಯಿಂದ ಬಂದ ಪ್ರಾರ್ಥನೆಗೆ II


ಆ ಧರ್ಮಭ್ರಷ್ಟ ಪ್ರಜೆಗೆ ಇದಿರಾಗಿ ಅಸ್ಸೀರಿಯವನ್ನು ಕಳುಹಿಸುತ್ತೇನೆ. ನನ್ನ ಕೋಪಕ್ಕೆ ಗುರಿಯಾದ ಜನರಿಗೆ ವಿರುದ್ಧ ಕಾರ್ಯವನ್ನು ಕೈಗೊಳ್ಳಲು ಆಜ್ಞೆ ಮಾಡುತ್ತೇನೆ. ನನ್ನ ಪ್ರಜೆಯನ್ನು ಸೂರೆಮಾಡಲು, ಕೊಳ್ಳೆಹೊಡೆಯಲು, ಬೀದಿಯ ಕಸದಂತೆ ತುಳಿದುಬಿಡಲು ಅದಕ್ಕೆ ಆಜ್ಞೆಮಾಡುತ್ತೇನೆ.


ಅದಕ್ಕೆ ಸೌಲನು, “ನಾನು ಪಾಪಮಾಡಿದ್ದೇನೆ; ದಯವಿಟ್ಟು ಇಸ್ರಯೇಲರ ಮುಂದೆ ಹಾಗು ಜನರ ಹಿರಿಯರ ಮುಂದೆ ನನ್ನ ಮಾನವನ್ನು ಉಳಿಸಿ; ನಾನು ನಿಮ್ಮ ದೇವರಾದ ಸರ್ವೇಶ್ವರಸ್ವಾಮಿಯನ್ನು ಆರಾಧಿಸಲು ಶಕ್ತನಾಗುವಂತೆ ಹಿಂದಿರುಗಿ ನನ್ನ ಜೊತೆಯಲ್ಲೇ ಬನ್ನಿ,” ಎಂದು ಬೇಡಿಕೊಂಡನು.


ದುರ್ಜನರಿಗೆ ದೇವ ಹೇಳುವನು ಇಂತೆಂದು I “ನನ್ನ ವಿಧಿಗಳ ಪಠಿಸುವ ಹಕ್ಕು ನಿಮಗೆಂತು? I ನನ್ನ ನಿಬಂಧನೆಗಳ ನೀವು ಜಪಿಸುವುದೆಂತು?” II


ಅರೀಯೇಲೇ, ಅರೀಯೇಲೇ, ದಾವೀದನು ದಂಡಿಳಿದ ಪಟ್ಟಣವೇ, ನಿನಗೆ ಧಿಕ್ಕಾರ ! ಒಂದೆರಡು ವರ್ಷ ತುಂಬಲಿ. ಹಬ್ಬಹುಣ್ಣಿಮೆಗಳು ಕಳೆಯಲಿ.


ಅಕ್ಷರವಿಲ್ಲದವನಿಗೆ, “ದಯವಿಟ್ಟು ಇದನ್ನು ಓದು,” ಎಂದು ಒಪ್ಪಿಸಿದರೆ, ಅವನು : “ನನಗೆ ಅಕ್ಷರವಿದ್ಯೆ ಇಲ್ಲ,” ಎನ್ನುತ್ತಾನೆ.


ಎಂದೇ ಸುರಿಸಿದನಾತ ರೋಷಾಗ್ನಿಯನು, ಯುದ್ಧದ ರೌದ್ರವನು ಅವರ ಮೇಲೆಲ್ಲ; ಸುತ್ತಲು ಉರಿ ಹತ್ತಿದರೂ ಅವರು ಅರಿಯಲಿಲ್ಲ, ದಹಿಸಿದರೂ ಅವರು ಕಲಿಯಲಿಲ್ಲ.


ಸ್ವಾಮೀ, ನಾವು ನಿಮ್ಮ ಮಾರ್ಗ ತಪ್ಪಿ ಅಲೆಯುವಂತೆ ಮಾಡುತ್ತೀರಿ, ಏಕೆ? ನಿಮಗೆ ಭಯಪಡದ ಹಾಗೆ ನಮ್ಮ ಹೃದಯವನ್ನು ಕಠಿಣಪಡಿಸುವುದು ಏಕೆ? ನಿಮ್ಮ ಶರಣರ ನಿಮಿತ್ತ, ನಿಮಗೆ ಬಾಧ್ಯರಾದ ಕುಲಗಳ ನಿಮಿತ್ತ, ನಮಗೆ ಪ್ರಸನ್ನಚಿತ್ತರಾಗಿರಿ.


ಇಸ್ರಯೇಲಿನ ಹಿರಿಯರಲ್ಲಿ ಕೆಲವರು ಬಂದು,


“ನರಪುತ್ರನೇ, ನಿನ್ನ ಜನರು ಗೋಡೆಗಳ ನೆರಳಿನಲ್ಲೂ ಮನೆಯ ಬಾಗಿಲುಗಳಲ್ಲೂ ನಿಂತು ನಿನ್ನ ಪ್ರಸ್ತಾಪವನ್ನೆತ್ತಿ ಒಬ್ಬರಿಗೊಬ್ಬರು, ‘ಸರ್ವೇಶ್ವರನ ಬಾಯಿಂದ ಹೊರಟ ಮಾತೇನೆಂದು ಕೇಳೋಣ ಬನ್ನಿ’ ಎಂದು ಹೇಳಿಕೊಳ್ಳುತ್ತಿದ್ದಾರೆ.


ನಮಗೆ ಅಡ್ಡ ಬರಬೇಡಿ. ನಮ್ಮ ದಾರಿಯಿಂದ ದೂರವಿರಿ. ಇಸ್ರಯೇಲರ ಪರಮಪಾವನ ಸ್ವಾಮಿಯ ವಿಷಯವನ್ನು ನಮ್ಮ ಮುಂದೆ ಎತ್ತಬೇಡಿ,” ಎಂದು ಹೇಳುತ್ತಾರೆ.


ಅವರು ಹೃದಯಪೂರ್ವಕವಾಗಿ ನನಗೆ ಪ್ರಾರ್ಥನೆಮಾಡುವುದಿಲ್ಲ. ಬದಲಿಗೆ ಅವರ ಹಾಸಿಗೆಗಳ ಮೇಲೆ ಬಿದ್ದು ಅರಚುತ್ತಾರೆ. ಧಾನ್ಯದ್ರಾಕ್ಷಾರಸಗಳಿಗಾಗಿ ಕಿರಿಚಿಕೊಳ್ಳುತ್ತಾರೆ. ನನಗೆ ವಿರುದ್ಧವಾಗಿ ಪ್ರತಿಭಟಿಸುತ್ತಾ ತಮ್ಮ ದೇಹಗಳನ್ನು ಪರಚಿಕೊಳ್ಳುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು