Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 29:2 - ಕನ್ನಡ ಸತ್ಯವೇದವು C.L. Bible (BSI)

2 ಅನಂತರ ನಾನು ಅರೀಯೇಲನ್ನು ಬಾಧಿಸುವೆನು. ಅಲ್ಲಿ ಅರಚಾಟ ಕಿರಿಚಾಟ ಇರುವುದು. ಆ ಪಟ್ಟಣವು ವಾಸ್ತವವಾಗಿ ನನಗೆ ಅರೀಯೇಲಾಗಿಯೇ ಪರಿಣಮಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆ ಮೇಲೆ ನಾನು ಅರೀಯೇಲನ್ನು ಬಾಧಿಸುವೆನು; ಅರಚಾಟ ಕಿರಿಚಾಟಗಳಿಂದ ತುಂಬುವುದು; ಆ ಪಟ್ಟಣವು ನನಗೆ ಅರೀಯೇಲಾಗಿಯೇ ಪರಿಣಮಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಆ ಪಟ್ಟಣವು ನನಗೆ ಅರೀಯೇಲಾಗಿಯೇ ಪರಿಣವಿುಸುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ನಾನು ಅರೀಯೇಲನ್ನು ಶಿಕ್ಷಿಸಿದ್ದೇನೆ. ಆ ನಗರವು ದುಃಖರೋಧನಗಳಿಂದ ತುಂಬಿದೆ. ಆದರೆ ಆಕೆ ಯಾವಾಗಲೂ ನನ್ನ ಅರೀಯೇಲಾಗಿದ್ದಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆದಾಗ್ಯೂ ನಾನು ಅರೀಯೇಲಿಗೆ ಇಕ್ಕಟ್ಟನ್ನು ಉಂಟುಮಾಡುವೆನು. ಅಲ್ಲಿ ಕಷ್ಟವೂ, ದುಃಖವೂ ಇರುವುದು. ಅವಳು ನನಗೆ ಬಲಿಪೀಠದ ಒಲೆಯಂತೆ ಇರುತ್ತಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 29:2
19 ತಿಳಿವುಗಳ ಹೋಲಿಕೆ  

ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: “ನರಪುತ್ರನೇ, ಎಲ್ಲ ಬಗೆಯ ಪಕ್ಷಿಗಳಿಗೂ ಸಮಸ್ತ ಭೂಜಂತುಗಳಿಗೂ ಹೀಗೆ ನುಡಿ: ನೀವು ಕೂಡಿಬನ್ನಿ; ನಾನು ಇಸ್ರಯೇಲಿನ ಪರ್ವತಗಳ ಮೇಲೆ ನಿಮಗಾಗಿ ಮಾಡುವ ಮಹಾಯಜ್ಞಕ್ಕೆ ಎಲ್ಲ ಕಡೆಯಿಂದಲೂ ನೆರೆದುಬಂದು ಮಾಂಸವನ್ನು ತಿಂದು, ರಕ್ತವನ್ನು ಕುಡಿಯಿರಿ.


ಆದಕಾರಣ, ನಾನು ನನ್ನ ಕೋಪವನ್ನು ಅವರ ಮೇಲೆ ಸುರಿಸಿ, ನನ್ನ ರೋಷಾಗ್ನಿಯಿಂದ ಅವರನ್ನು ಧ್ವಂಸಮಾಡಿ, ಅವರ ದುರ್ನಡತೆಯ ಹೊಣೆಯನ್ನು ಅವರ ಮೇಲೆ ಹೊರಿಸಿದ್ದೇನೆ. ಇದು ಸರ್ವೇಶ್ವರನಾದ ದೇವರ ನುಡಿ.”


ಸ್ವಾಮಿಯೇ ಶತ್ರುವಾಗಿ ಕಬಳಿಸಿದ ಇಸ್ರಯೇಲನ್ನು ನಾಶಮಾಡಿದ ಅದರ ಅರಮನೆಗಳೆಲ್ಲವನ್ನು ನೆಲಸಮಗೊಳಿಸಿದ ಅದರ ಕೋಟೆಕೊತ್ತಲಗಳನ್ನು ಯಥೇಚ್ಛವಾಗಿಸಿದ ಯೆಹೂದ ನಾಡಿನ ಗೋಳಾಟವನ್ನು.


ಅವನಿಗೆ ಹೀಗೆಂದು ಹೇಳಿ : ‘ಈ ದಿನ ನಮಗೆ ಮಹಾಸಂಕಟದ ದಿನ, ದಂಡನೆಯ ದಿನ, ನಿಂದೆ ಅವಮಾನದ ದಿನ. ಹೆರಿಗೆಯ ಕಾಲ ಬಂದಿದೆ, ಆದರೆ ಹೆರುವುದಕ್ಕೆ ಶಕ್ತಿ ಸಾಲದು.


ಬಳಿಕ, ಹಿಲ್ಕೀಯನ ಮಗನೂ ರಾಜ ಗೃಹಾಧಿಪತಿಯೂ ಆಗಿದ್ದ ಎಲ್ಯಾಕೀಮ್, ಕಾರ್ಯದರ್ಶಿ ಶೆಬ್ನ, ಆಸಾಫನ ಮಗನೂ ಮಂತ್ರಿಯೂ ಆಗಿದ್ದ ಯೋವ ಎಂಬವರು ಸಿಟ್ಟಿನಿಂದ ಬಟ್ಟೆಗಳನ್ನು ಹರಿದುಕೊಂಡು, ಅರಸ ಹಿಜ್ಕೀಯನ ಬಳಿಗೆ ಬಂದು, ಅವನಿಗೆ ಆ ಸೇನಾಪತಿಯ ಮಾತುಗಳನ್ನು ತಿಳಿಸಿದರು.


ಸರ್ವೇಶ್ವರ ಸ್ವಾಮಿಯ ಖಡ್ಗವು ರಕ್ತಮಯವಾಗಿದೆ; ಅದು ಕೊಬ್ಬಿನಿಂದಲೂ ಕುರಿಹೋತಗಳ ರಕ್ತದಿಂದಲೂ ಟಗರುಗಳ ಮೂತ್ರಪಿಂಡಗಳ ವಪೆಯಿಂದಲೂ ತುಂಬಿದೆ; ಸರ್ವೇಶ್ವರ ಬೊಚ್ರದಲ್ಲಿ ಈ ಬಲಿಯನ್ನೂ ಎದೋಮಿನಲ್ಲಿ ಈ ದೊಡ್ಡ ಸಂಹಾರವನ್ನೂ ಮಾಡಬೇಕೆಂದಿದ್ದಾರೆ.


ಬೈಗಿನಲ್ಲಿ ಇಗೋ, ಎಲ್ಲೆಲ್ಲೂ ಭಯ, ಬೆಳಗಾದಾಗ ಅವೆಲ್ಲ ಮಾಯ; ಇದೇ ನಮ್ಮನ್ನು ಸೂರೆಮಾಡುವವರ ಗತಿ, ನಮ್ಮನ್ನು ಕೊಳ್ಳೆಹೊಡೆಯುವವರ ಪಾಡು !.


ಅದೇ ದಿನ ಬೀಡುಬಿಡುವರು ಶತ್ರುಗಳು ನೋಬಿನಲ್ಲಿ; ಸಿಯೋನ್ ಬೆಟ್ಟದ ಕಡೆಗೆ, ಜೆರುಸಲೇಮಿನ ಗುಡ್ಡದ ಕಡೆಗೆ ಮುಷ್ಟಿ ತೋರಿಸುತ್ತಿಹರಿದೊ ಆ ದಿಕ್ಕಿಗೆ.


ನಿನ್ನ ಪುರದ್ವಾರಗಳಲ್ಲಿ ದುಃಖ ಪ್ರಲಾಪ ತುಂಬಿರುವುದು. ನೀನು ನಗ್ನಳಂತೆ ನೆಲದ ಮೇಲೆ ಕುಳಿತುಬಿಡುವೆ.


ನಿಮ್ಮ ಹಬ್ಬ ಹುಣ್ಣಿಮೆಗಳು, ಉತ್ಸವ ದಿನಗಳು ನನ್ನ ಮನಕ್ಕೆ ವಿರುದ್ಧ, ಹೊರಲಾಗದ ಭಾರ, ಸಹಿಸಲಾಗದ ಬೇಸರ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು