Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 29:20 - ಕನ್ನಡ ಸತ್ಯವೇದವು C.L. Bible (BSI)

20 ಏಕೆಂದರೆ ಭಯೋತ್ಪಾದಕರು ನಿಶ್ಶೇಷರಾಗುವರು, ಧರ್ಮನಿಂದಕರು ನಿರ್ನಾಮವಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಏಕೆಂದರೆ ಭಯಂಕರರು ನಿಶ್ಶೇಷವಾಗುವರು, ಧರ್ಮನಿಂದಕರು ನಿರ್ನಾಮವಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಏಕಂದರೆ ಭಯಂಕರರು ನಿಶ್ಶೇಷವಾಗುವರು, ಧರ್ಮನಿಂದಕರು ನಿರ್ನಾಮವಾಗುವರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಇದು ಕ್ರೂರಿಗಳೂ ದುಷ್ಟರೂ ನಾಶವಾದಾಗ ಆಗುವದು. ಕೆಟ್ಟಕಾರ್ಯಗಳನ್ನು ಮಾಡುವದರಲ್ಲಿ ಸಂತೋಷಿಸುವವರು ಇಲ್ಲದೆ ಹೋದಾಗ ಆ ಕಾರ್ಯಗಳು ನಡಿಯುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಭಯಂಕರನು ಇಲ್ಲವಾಗುತ್ತಾನೆ. ಅಪಹಾಸ್ಯ ಮಾಡುವವರು ಕಣ್ಮರೆಯಾಗುತ್ತಾರೆ. ಕೇಡಿಗೆ ಕಾಯುವವರೆಲ್ಲರೂ ನಾಶವಾಗುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 29:20
24 ತಿಳಿವುಗಳ ಹೋಲಿಕೆ  

ತಮ್ಮ ಹಾಸಿಗೆಯಲ್ಲೇ ಕುತಂತ್ರವನ್ನು ಕಲ್ಪಿಸಿಕೊಂಡು ಕೇಡನ್ನು ಬಗೆಯುವವರಿಗೆ ಧಿಕ್ಕಾರ! ಬೆಳಗಾದದ್ದೇ ಅವರು ಕುತಂತ್ರವನ್ನು ಕಾರ್ಯಗತ ಮಾಡುತ್ತಾರೆ. ಆ ಸಾಮರ್ಥ್ಯ ಅವರ ಕೈಯಲ್ಲಿದೆ.


ಹಣದಾಶೆಯಿಂದ ಕೂಡಿದ್ದ ಫರಿಸಾಯರು ಈ ಮಾತುಗಳನ್ನೆಲ್ಲಾ ಕೇಳಿ, ಯೇಸುವನ್ನು ಪರಿಹಾಸ್ಯಮಾಡಿದರು.


ನ್ಯಾಯಸ್ಥಾನದಲ್ಲಿ ನ್ಯಾಯಾನುಸಾರ ವಾದಿಸುವವನು ಯಾರೂ ಇಲ್ಲ; ಸತ್ಯಾನುಸಾರ ತೀರ್ಪುಕೊಡುವವನು ಯಾರೂ ಇಲ್ಲ; ನೀವು ಶೂನ್ಯವಾದುದ್ದನ್ನೇ ನಂಬುತ್ತೀರಿ, ಅಬದ್ಧವಾದುದನ್ನೇ ಆಡುತ್ತೀರಿ, ಕೇಡನ್ನು ಬಸಿರಿಸಿ ಅಕ್ರಮವನ್ನು ಹೆರುತ್ತೀರಿ.


ಅರೀಯೇಲೇ, ಗುಂಪುಗುಂಪಾಗಿ ಕೂಡಿಬರುವ ನಿನ್ನ ಶತ್ರುಗಳು ಧೂಳಿಪುಡಿಯಂತೆ ತೂರಿಹೋಗುವರು. ತಂಡೋಪತಂಡವಾಗಿ ಬಂದಿರುವ ಭಯಂಕರ ಸೈನಿಕರು ಹೊಟ್ಟಿನಂತೆ ಹಾರಿಹೋಗುವರು. ತಟ್ಟನೆ ಕ್ಷಣಮಾತ್ರದಲ್ಲಿ ಕಣ್ಮರೆಯಾಗುವರು.


ಆಯ್ಕೆಯಾದವರಿಗೆ ಅಪ್ಪಣೆಮಾಡಿದ್ದೇನೆ: ಹೌದು, ಹೆಮ್ಮೆಯಿಂದ ಮೆರೆಯುವ ಶೂರರು ನನ್ನ ಕೋಪವನ್ನು ತೀರಿಸಲಿ ಎಂದು ಅವರಿಗೆ ಕರೆನೀಡಿದ್ದೇನೆ.


ಸ್ವರ್ಗದಿಂದ ಬಂದ ಮಹಾಶಬ್ದವನ್ನು ನಾನು ಕೇಳಿಸಿಕೊಂಡೆ. ಅದು ಇಂತೆಂದಿತು : “ಇಗೋ, ನಮ್ಮ ದೇವನಿತ್ತ ಜೀವೋದ್ಧಾರ ಸಿದ್ಧಿಸಿದೆ ಆತನ ಶಕ್ತಿ, ಸಾಮ್ರಾಜ್ಯಗಳು ಕಂಗೊಳಿಸುತ್ತಿವೆ. ಆತನ ಕ್ರಿಸ್ತಾಧಿಪತ್ಯ ಸ್ಥಾಪಿತವಾಗಿದೆ. ನಮ್ಮ ಸೋದರರನು ದೂರಿದವನನ್ನು ದಬ್ಬಲಾಗಿದೆ. ಹಗಲಿರುಳು ನಮ್ಮ ದೇವರೆದುರು ದೂರಿತ್ತಿದ್ದವನನ್ನು ತಳ್ಳಲಾಗಿದೆ.


ಜನರು ನೋಡುತ್ತಾ ನಿಂತಿದ್ದರು. ಅಲ್ಲಿದ್ದ ಮುಖಂಡರು ಯೇಸುವನ್ನು ಮೂದಲಿಸುತ್ತಾ, “ಇವನು ಇತರರನ್ನು ರಕ್ಷಿಸಿದ; ಇವನು ದೇವರಿಂದಲೇ ಅಭಿಷಿಕ್ತನಾದ ಲೋಕೋದ್ಧಾರಕನು ಮತ್ತು ಅವರಿಂದಲೇ ಆಯ್ಕೆಯಾದವನು ಆಗಿದ್ದರೆ ತನ್ನನ್ನು ತಾನೇ ರಕ್ಷಿಸಿಕೊಳ್ಳಲಿ,” ಎಂದರು.


ಕಡೆಗೆ ಹೆರೋದನು ತನ್ನ ಸೈನಿಕರೊಡನೆ ಸೇರಿ ಯೇಸುವನ್ನು ಅಣಕಿಸಿ ಅವಮಾನಪಡಿಸಿದನು. ರಾಜವಸ್ತ್ರವನ್ನು ವೇಷಭೂಷಣವಾಗಿ ಅವರಿಗೆ ತೊಡಿಸಿ ಪಿಲಾತನ ಬಳಿಗೆ ಮರಳಿ ಕಳುಹಿಸಿಕೊಟ್ಟನು.


ಅವನನ್ನು ಸಬ್ಬತ್‍ದಿನದಲ್ಲಿ ಸ್ವಸ್ಥಪಡಿಸಿದ್ದೇ ಆದರೆ ಯೇಸುವಿನ ವಿರುದ್ಧ ತಪ್ಪು ಹೊರಿಸಬಹುದೆಂಬ ಉದ್ದೇಶದಿಂದ ಧರ್ಮಶಾಸ್ತ್ರಿಗಳು ಮತ್ತು ಫರಿಸಾಯರು ಹೊಂಚುಹಾಕಿ ನೋಡುತ್ತಿದ್ದರು.


ಇದಾದ ಬಳಿಕ ಆ ರಾತ್ರಿ ಕನಸಿನಲ್ಲಿ ಕಾಣಿಸಿಕೊಂಡ ನಾಲ್ಕನೇ ಮೃಗ ಭಯಂಕರವಾಗಿತ್ತು. ಹೆದರಿಸುವಂಥದಾಗಿತ್ತು. ಅಧಿಕ ಬಲವುಳ್ಳದ್ದಾಗಿತ್ತು. ಅದಕ್ಕೆ ಕಬ್ಬಿಣದ ದೊಡ್ಡ ಹಲ್ಲುಗಳಿದ್ದವು. ಅದು ತನ್ನ ಬಲಿಯನ್ನು ತುಂಡುತುಂಡಾಗಿಸಿ ಕಬಳಿಸುತ್ತಿತ್ತು. ಮಿಕ್ಕದ್ದನ್ನು ಕಾಲುಗಳಿಂದ ತುಳಿಯುತ್ತಾ ಇತ್ತು. ಅದು ಮುಂಚಿನ ಮೃಗಗಳಿಗಿಂತ ವಿಲಕ್ಷಣವಾಗಿತ್ತು. ಅದಕ್ಕೆ ಹತ್ತು ಕೊಂಬುಗಳಿದ್ದವು.


ಆಕಾಶವನು ಹರಡಿ ಭೂಮಿಯನು ಸ್ಥಾಪಿಸಿದಾ ನಿನ್ನ ಸೃಷ್ಟಿಕರ್ತ ಸರ್ವೇಶ್ವರನನು ಮರೆತುಬಿಟ್ಟೆಯಾ? ನಾಶಮಾಡಲು ಹವಣಿಸುವ ಹಿಂಸಕನ ಕ್ರೋಧಕೆ ನೀ ಎಡೆಬಿಡದೆ ದಿನವೆಲ್ಲ ಅಂಜುತ್ತಿರಬೇಕೆ? ಆ ಹಿಂಸಕನ ಕ್ರೋಧವು ಈಗ ಹೋದುದೆಲ್ಲಿಗೆ?


ಸರ್ವೇಶ್ವರ ಹೀಗೆನ್ನುತ್ತಾರೆ : “ಹೌದು, ಅಪಹರಿಸಲಾಗುವುದು ಬಲಾಢ್ಯನ ಸೆರೆಯಾಳುಗಳನು ಕಸಿದುಕೊಳ್ಳಲಾಗುವುದು ಭೀಕರನ ಕೊಳ್ಳೆಯನು. ನಿನ್ನೊಡನೆ ಹೋರಾಡುವವನ ಸಂಗಡ ಹೊರಾಡುವೆ ನಾನೇ. ಅಷ್ಟೇ ಅಲ್ಲ, ನಿನ್ನ ಮಕ್ಕಳನು ಉದ್ಧರಿಸುವೆ ನಾನೇ.


ದಲಿತರಿಗೆ, ದಿಕ್ಕಿಲ್ಲದವರಿಗೆ ನ್ಯಾಯವನು ದೊರಕಿಸುವೆ I ಈ ಪರಿ ಇಳೆಮಾನವರ ತುಳಿತದಿಂದ ಪಾರುಮಾಡುವೆ II


ಸೊಕ್ಕೇರಿದ ಗರ್ವಿ ಕುಚೋದ್ಯನೆನಿಸಿಕೊಳ್ಳುವನು; ಅಹಂಕಾರ, ಮದಮತ್ಸರಗಳಿಂದ ಅವನು ವರ್ತಿಸುವನು.


ಸರ್ವೇಶ್ವರ ಇಂತೆನ್ನುತ್ತಾರೆ : “ನಾನು ಲೋಕದವರಿಗೆ ಪಾಪದ ಫಲವನ್ನೂ ದುರುಳರಿಗೆ ದುಷ್ಕೃತ್ಯಗಳ ಫಸಲನ್ನೂ ತಿನ್ನಿಸುವೆನು. ಸೊಕ್ಕಿದವನ ಕೊಬ್ಬನ್ನು ಕರಗಿಸುವೆನು. ಬಲಾತ್ಕಾರ ಮಾಡುವವರ ಹೆಮ್ಮೆಯನ್ನು ಅಡಗಿಸುವೆನು.


ಆದುದರಿಂದ ಸರ್ವೇಶ್ವರ ಇಂತೆನ್ನುತ್ತಾರೆ: “ಈ ಪೀಳಿಗೆಯ ಮೇಲೆ ನಾನೇ ವಿನಾಶವನ್ನು ಬರಮಾಡುತ್ತೇನೆ. ಆ ಕೇಡಿನಿಂದ ನೀವು ತಲೆತಪ್ಪಿಸಿಕೊಳ್ಳಲಾರಿರಿ. ತಲೆಯೆತ್ತಿ ನಡೆಯಲು ನಿಮಗೆ ಸಾಧ್ಯವಾಗದು. ಕಾಲವು ಅಷ್ಟು ಹದಗೆಟ್ಟಿರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು