Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 3:1 - ಕನ್ನಡ ಸತ್ಯವೇದವು C.L. Bible (BSI)

1 ಇಗೋ, ಪ್ರಭುವೂ ಸೇನಾಧೀಶ್ವರ ಆದ ಸರ್ವೇಶ್ವರಸ್ವಾಮಿ ಜೆರುಸಲೇಮ್ ಮತ್ತು ಜುದೇಯದ ಜನರ ಜೀವನಕ್ಕೆ ಆಧಾರವಾದ ಅನ್ನಪಾನಗಳನ್ನೆಲ್ಲ ತೆಗೆದುಬಿಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಇಗೋ, ಕರ್ತನೂ, ಸೇನಾಧೀಶ್ವರನೂ ಆಗಿರುವ ಯೆಹೋವನೆಂಬ ನಾನು ಯೆರೂಸಲೇಮಿನಿಂದಲೂ, ಯೆಹೂದದಿಂದಲೂ ಜೀವನಕ್ಕೆ ಆಧಾರವಾದ ಅನ್ನಪಾನಗಳನ್ನೆಲ್ಲಾ ತೆಗೆದುಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಇಗೋ, ಕರ್ತನೂ ಸೇನಾಧೀಶ್ವರನೂ ಆಗಿರುವ ಯೆಹೋವನೆಂಬ ನಾನು ಜೀವನಕ್ಕೆ ಆಧಾರಕೋದ್ಧಾರಕವಾದ ಅನ್ನಪಾನಗಳನ್ನೆಲ್ಲಾ ಯೆರೂಸಲೇವಿುನಿಂದಲೂ ಯೆಹೂದದಿಂದಲೂ ತೆಗೆದುಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ನಾನು ಹೇಳುವದನ್ನೆಲ್ಲಾ ಮನದಟ್ಟುಮಾಡಿಕೊಳ್ಳಿರಿ: ನಮ್ಮ ಒಡೆಯನೂ ಸರ್ವಶಕ್ತನೂ ಆದ ಯೆಹೋವನು ಯೆಹೂದ ಮತ್ತು ಇಸ್ರೇಲಿನ ಆಧಾರಗಳನ್ನೆಲ್ಲಾ ತೆಗೆದುಬಿಡುವನು. ಆತನು ಅವರ ಅನ್ನಪಾನಗಳನ್ನೆಲ್ಲಾ ತೆಗೆದುಬಿಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಇಗೋ, ಕರ್ತನೂ ಸರ್ವಶಕ್ತನೂ ಆಗಿರುವ ಯೆಹೋವ ದೇವರೆಂಬ ನಾನು ಜೀವನಕ್ಕೆ ಆಧಾರವಾದ ಅನ್ನಪಾನಗಳನ್ನೆಲ್ಲಾ ಯೆರೂಸಲೇಮಿನಿಂದಲೂ ಯೆಹೂದದಿಂದಲೂ ತೆಗೆದುಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 3:1
19 ತಿಳಿವುಗಳ ಹೋಲಿಕೆ  

ನಿಮ್ಮ ನಿಮ್ಮ ಜೀವನಾಧಾರವನ್ನು ನಾನು ತೆಗೆದುಬಿಟ್ಟಾಗ ಹತ್ತು ಮಂದಿ ಹೆಂಗಸರು ಒಂದೇ ಒಲೆಯಲ್ಲಿ ರೊಟ್ಟಿ ಸುಟ್ಟು, ಅದನ್ನು ಪಡಿ ಪ್ರಕಾರ ಹಂಚಿಕೊಡುವರು. ನೀವು ಅದನ್ನು ತಿಂದರೂ ತೃಪ್ತಿಯಾಗದು.


“ನರಪುತ್ರನೇ, ಒಂದು ನಾಡು ಅಪರಾಧವನ್ನು ನಡೆಸಿ ನನಗೆ ವಿರುದ್ಧ ಪಾಪಮಾಡಿದ ಮೇಲೆ ನಾನು ಕೈಯೆತ್ತಿ, ಅದರ ಜೀವನಾಧಾರವನ್ನು ನಿಲ್ಲಿಸಿಬಿಟ್ಟು, ಕ್ಷಾಮವನ್ನು ಬರಮಾಡಿ, ಜನ ಹಾಗೂ ಜಾನುವಾರುಗಳನ್ನು ಅದರಿಂದ ನಿರ್ಮೂಲಮಾಡುತ್ತೇನೆ.


ಇಂತಿರಲು ಒಡೆಯರು, ಸೇನಾಧೀಶ್ವರರು, ಇಸ್ರಯೇಲರ ಪರಾಕ್ರಮಿಯು ಆದ ಸರ್ವೇಶ್ವರ ಹೀಗೆನ್ನುತ್ತಾರೆ: “ಇಗೋ ನನ್ನ ಶತ್ರುಗಳಾದ ನಿಮ್ಮ ಮೇಲೆ ಸೇಡು ತೀರಿಸುವೆನು. ನನ್ನ ವಿರೋಧಿಗಳಾದ ನಿಮ್ಮನ್ನು ಸದೆಬಡಿದು ಶಾಂತನಾಗಿರುವೆನು.


“ನನ್ನೊಡೆಯಾ, ಅರಸರೇ, ಈ ಜನರು ಪ್ರವಾದಿ ಯೆರೆಮೀಯನಿಗೆ ಮಾಡಿರುವುದೆಲ್ಲ ದುಷ್ಟಕಾರ್ಯವೇ ಸರಿ. ಅವನನ್ನು ಬಾವಿಯಲ್ಲಿ ಹಾಕಿದ್ದಾರೆ. ಆಹಾರವಿಲ್ಲದೆ ಅವನು ಬಿದ್ದಲ್ಲೇ ಸಾಯುವುದು ಖಚಿತ. ಏಕೆಂದರೆ ನಗರದಲ್ಲಿ ರೊಟ್ಟಿಯೆಲ್ಲಾ ತೀರಿಹೋಗಿದೆ,” ಎಂದು ಅರಿಕೆಮಾಡಿದನು.


ಆಗ ಅರಸ ಚಿದ್ಕೀಯನು ಅಂತೆಯೆ ಅಪ್ಪಣೆಕೊಡಲು, ಯೆರೆಮೀಯನನ್ನು ರಾಜ್ಯದ ಕಾರಾಗೃಹದ ಅಂಗಳಕ್ಕೆ ಸ್ಥಳಾಂತರಿಸಲಾಯಿತು. ರೊಟ್ಟಿ ಮಾರುಕಟ್ಟೆಯಿಂದ ಪ್ರತಿದಿನ ಒಂದೊಂದು ರೊಟ್ಟಿಯನ್ನು ಅವನಿಗೆ ತಂದುಕೊಡುತ್ತಿದ್ದರು. ನಗರದ ರೊಟ್ಟಿಯೆಲ್ಲ ತೀರುವ ತನಕ ಹಾಗೆ ಮಾಡುತ್ತಿದ್ದರು. ಯೆರೆಮೀಯನು ರಾಜ್ಯದ ಕಾರಾಗೃಹದ ಅಂಗಳದಲ್ಲೇ ವಾಸಿಸುತ್ತಿದ್ದನು.


ಕೇಳು, ಸ್ವಾಮಿ ಸರ್ವೇಶ್ವರ ಆದ ನಾ ಹೇಳುವ ಮಾತನು : ತನ್ನ ಜನರ ಪರವಾಗಿ ವಾದಿಸುವ ನಿನ್ನ ದೇವರು ನಾನು; “ಇಗೋ, ಅಮಲೇರಿಸುವ ಪಾತ್ರೆಯನು ನನ್ನ ಕೋಪದಿಂದ ತುಂಬಿತುಳುಕುವಾ ಕೊಡವನು ನೀ ಕುಡಿಯಬಾರದೆಂದು ನಿನ್ನಿಂದ ತೆಗೆದುಬಿಡುವೆನು.


ಅದಕ್ಕೆ ಆ ದಳಪತಿಯು, “ನನ್ನ ಯಜಮಾನನು, ನಿಮ್ಮ ಸಂಗಡವಾಗಲಿ ಮತ್ತು ನಿಮ್ಮ ಒಡೆಯರ ಸಂಗಡವಾಗಲಿ ಮಾತ್ರ ಮಾತನಾಡಬೇಕೆಂದು ನನ್ನನ್ನು ಕಳುಹಿಸಲಿಲ್ಲ. ಈ ಗೋಡೆಯ ಮೇಲೆ ಕುಳಿತಿರುವ ಜನರ ಸಂಗಡವೂ ಮಾತನಾಡುವುದಕ್ಕಾಗಿ ಕಳುಹಿಸಿದ್ದಾರೆ. ಈ ಜನರು ನಮಗೆ ವಿರುದ್ಧವಾಗಿ ಹೋರಾಡಿದರೆ ನಿಮ್ಮ ಹಾಗೆ ಇವರು ಕೂಡ ತಮ್ಮ ಸ್ವಂತ ಮಲಮೂತ್ರವನ್ನು ತಿಂದು ಕುಡಿಯಬೇಕಾಗುತ್ತದೆ” ಎಂದು ಉತ್ತರಕೊಟ್ಟನು.


ಈ ಕಾರಣ, ನನ್ನ ಜನರು ಬುದ್ಧಿಹೀನರಂತೆ ಸೆರೆಹೋಗುವುದು ನಿಶ್ಚಯ. ಅವರ ಮುಖಂಡರು ಹಸಿವಿನಿಂದ ಸಾಯುವರು. ಅವರಲ್ಲಿ ಜನಸಾಮಾನ್ಯರು ಬಾಯಾರಿ ಸೊರಗಿಹೋಗುವರು.


ನರಮಾನವರಲ್ಲಿ ಇಡದಿರು ಭರವಸೆಯನ್ನು; ಯಾವ ಗಣನೆಗೆ ಬಂದಾನು ಅವನು? ಮೂಗಿನಲ್ಲಿ ಉಸಿರಾಡುವ ಅಲ್ಪಪ್ರಾಣಿ ಅವನು!


ತದನಂತರ ಬರಮಾಡಿದನಾ ನಾಡಿನಲಿ ಕ್ಷಾಮವನು I ಮುರಿದುಬಿಟ್ಟನು ಆಹಾರವೆಂಬಾ ಊರುಗೋಲನು II


ಸ್ವಾಮಿ ಇಂತೆನ್ನುತ್ತಾರೆ: ಸಿಯೋನಿನ ಮಹಿಳೆಯರ ಒನಪು ಒಯ್ಯಾರಗಳನ್ನು ನೋಡಿರಿ. ಅವರು ಕತ್ತುತೂಗುತ್ತಾ, ಕಡೆಗಣ್ಣು ಹಾಕುತ್ತಾ, ಕುಲುಕಿ ಹೆಜ್ಜೆಯಿಡುತ್ತಾ, ಕಾಲುಗೆಜ್ಜೆ ಜಣಜಣಿಸುತ್ತಾ ನಡೆಯುತ್ತಾರೆ.


ಅತ್ತ ಕಿತ್ತುತಿಂದರೂ ಅವರಿಗೆ ತೃಪ್ತಿಯಿಲ್ಲ. ಇತ್ತ ಕುಡಿದು ಕಬಳಿಸಿದರೂ ಅವರ ಹಸಿವು ನೀಗುವುದಿಲ್ಲ. ಒಬ್ಬೊಬ್ಬನೂ ತನ್ನ ಕಂದನನ್ನೇ ಕೊಂದು ತಿನ್ನುತ್ತಾನೆ.


ಸರ್ವೇಶ್ವರ ಸ್ವಾಮಿ ಬಹಳ ಕೋಪಗೊಂಡು ಜೆರುಸಲೇಮಿನವರ ಮೇಲೂ ಬೇರೆ ಎಲ್ಲ ಯೆಹೂದ್ಯರ ಮೇಲೂ ಇದನ್ನೆಲ್ಲ ಬರಮಾಡಿ, ಕಡೆಗೆ ಅವರನ್ನು ತಮ್ಮ ಸನ್ನಿಧಿಯಿಂದ ತಳ್ಳಿಬಿಟ್ಟರು. ಚಿದ್ಕೀಯನು ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ವಿರುದ್ಧ ತಿರುಗಿಬಿದ್ದ.


ಘೋರಕ್ಷಾಮದ ಕಾರಣ ನಗರದವರಿಗೆ ಆಹಾರ ಸಿಕ್ಕದೆ ಹೋಯಿತು. ನಗರಕ್ಕೆ ಮುತ್ತಿಗೆ ಹಾಕಿದ್ದ ಬಾಬಿಲೋನಿಯರು ಹನ್ನೊಂದನೆಯ ತಿಂಗಳಿನ ಒಂಬತ್ತನೆಯ ದಿವಸ ಪೌಳಿಗೋಡೆಯಲ್ಲಿ ಒಂದು ದ್ವಾರವನ್ನು ಮಾಡಿದರು.


ನೀರು ನಮ್ಮದಾದರೂ ಕೊಂಡುಕೊಂಡು ಕುಡಿಯುತ್ತಿದ್ದೇವೆ ಸೌದೆ ಸ್ವಂತವಾದರೂ ಕ್ರಯಕ್ಕೆ ತೆಗೆದುಕೊಳ್ಳುತ್ತಿದ್ದೇವೆ.


“ನಿಮ್ಮ ಪಟ್ಟಣಗಳಲ್ಲಿ ಹೊಟ್ಟೆಗೆ ಹಿಟ್ಟಿಲ್ಲದಂತೆ ಮಾಡಿದವನು ನಾನೇ. ನೀವು ಹೋದೆಡೆಗಳಲ್ಲೆಲ್ಲ ನಿಮಗೆ ರೊಟ್ಟಿ ಸಿಗದಂತೆ ಮಾಡಿದವನು ನಾನೇ. ಆದರೂ ನೀವು ನನ್ನ ಬಳಿಗೆ ಹಿಂದಿರುಗಲಿಲ್ಲ.” ಇದು ಸರ್ವೇಶ್ವರಸ್ವಾಮಿಯ ನುಡಿ


ನೀನೀಗ ರೋದಿಸುವುದೇಕೆ? ಪ್ರಸವವೇದನೆ ಪಡುವವಳಂತೆ ನರಳುವುದೇಕೆ? ನಿನಗೆ ರಾಜನಿಲ್ಲವೇ? ನಿನ್ನ ಸಲಹೆಗಾರ ಸತ್ತುಹೋದನೇ?


ಘೋರಕ್ಷಾಮದ ಕಾರಣ ನಗರದವರಿಗೆ ಆಹಾರ ಸಿಕ್ಕದೆ ಹೋಯಿತು. ನಗರಕ್ಕೆ ಮುತ್ತಿಗೆಹಾಕಿದ್ದ ಬಾಬಿಲೋನಿಯರು ಹನ್ನೊಂದನೆಯ ತಿಂಗಳಿನ ಒಂಬತ್ತನೆಯ ದಿವಸ ಪೌಳಿಗೋಡೆಯಲ್ಲಿ ಒಂದು ದ್ವಾರವನ್ನು ಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು