Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 3:12 - ಕನ್ನಡ ಸತ್ಯವೇದವು C.L. Bible (BSI)

12 ನನ್ನ ಜನರನ್ನೋ ಬಾಧಿಸುತ್ತಿರುವವರು ಹುಡುಗರು; ಆಳುತ್ತಿರುವವರೋ ಹೆಂಗಳೆಯರು. ಎಲೈ ನನ್ನ ಜನರೇ, ನಿಮ್ಮ ನಾಯಕರು ನಿಮ್ಮನ್ನು ತಪ್ಪುದಾರಿಗೆ ಎಳೆಯುತ್ತಿದ್ದಾರೆ. ನಿಮ್ಮ ಮಾರ್ಗವನ್ನು ವಕ್ರಗೊಳಿಸುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನನ್ನ ಪ್ರಜೆಗಳನ್ನು ಬಾಲಕರು ಬಾಧಿಸುವರು. ಸ್ತ್ರೀಯರು ಅವರನ್ನು ಆಳುವರು. ನನ್ನ ಪ್ರಜೆಗಳೇ, ನಿಮ್ಮನ್ನು ನಡೆಸುವವರು ದಾರಿತಪ್ಪಿಸುವವರಾಗಿದ್ದಾರೆ. ನೀವು ನಡೆಯತಕ್ಕ ದಾರಿಯನ್ನು ಹಾಳುಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ನನ್ನ ಜನರನ್ನೋ ಬಾಧಿಸುವವರು ಹುಡುಗರು, ಆಳುವವರು ಹೆಂಗಸರು. ನನ್ನ ಜನರೇ! ನಿಮ್ಮನ್ನು ನಡಿಸುವವರು ದಾರಿತಪ್ಪಿಸುವವರಾಗಿದ್ದಾರೆ, ನೀವು ನಡೆಯತಕ್ಕ ದಾರಿಯನ್ನು ಅಳಿಸಿಬಿಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಮಕ್ಕಳು ನನ್ನ ಜನರನ್ನು ಸೋಲಿಸಿಬಿಡುವರು. ಸ್ತ್ರೀಯರು ನನ್ನ ಜನರನ್ನು ಆಳುವರು. ನನ್ನ ಜನರೇ, ನಿಮ್ಮ ಮಾರ್ಗದರ್ಶಕರು ನಿಮ್ಮನ್ನು ತಪ್ಪುದಾರಿಯಲ್ಲಿ ನಡಿಸುವರು; ಸರಿಯಾದ ದಾರಿಯಿಂದ ನಿಮ್ಮನ್ನು ಅಡ್ಡದಾರಿಗೆ ನಡಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ನನ್ನ ಪ್ರಜೆಗಳನ್ನು ಹುಡುಗರು ಬಾಧಿಸುವರು. ಸ್ತ್ರೀಯರು ಅವರನ್ನು ಆಳುವರು. ನನ್ನ ಪ್ರಜೆಗಳೇ, ನಿಮ್ಮನ್ನು ನಡೆಸುವವರು ದಾರಿ ತಪ್ಪಿಸುವವರಾಗಿದ್ದಾರೆ. ನೀವು ನಡೆಯುವ ದಾರಿಯನ್ನು ಹಾಳು ಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 3:12
15 ತಿಳಿವುಗಳ ಹೋಲಿಕೆ  

ಸರ್ವೇಶ್ವರ ಅವರಿಗೆ ಬಾಲಕರನ್ನು ಪಾಲಕರನ್ನಾಗಿಸಿ, ಹಸುಳೆಗಳು ಅವರನ್ನು ಆಳುವಂತೆ ಮಾಡುವರು.


ನಿನ್ನ ಯೋಧರನ್ನು ನೋಡು; ಅವರೆಲ್ಲ ಹೆಣ್ಣಿಗರು. ನಿನ್ನ ದೇಶದ ದ್ವಾರಗಳು ಶತ್ರುಗಳಿಗೆ ತೆರೆದ ಬಾಗಿಲುಗಳು. ಅದರ ಕಬ್ಬಿಣದ ಅಗುಳಿಗಳು ಬೆಂಕಿಯಿಂದ ಭಸ್ಮವಾದವು.


ಅವರನ್ನು ಅವರಷ್ಟಕ್ಕೇ ಬಿಡಿ; ಅವರೊ ಕುರುಡರು, ಮತ್ತೊಬ್ಬರಿಗೆ ದಾರಿ ತೋರಿಸಲು ಹೋಗುತ್ತಾರೆ. ಕುರುಡನು ಕುರುಡನಿಗೆ ದಾರಿ ತೋರಿಸಿದರೆ ಇಬ್ಬರೂ ಹಳ್ಳದಲ್ಲಿ ಬೀಳುತ್ತಾರಷ್ಟೆ,” ಎಂದರು.


ಪ್ರವಾದಿಗಳೇ ಸುಳ್ಳು ಪ್ರವಾದನೆಮಾಡುತ್ತಾರೆ. ಯಾಜಕರು ಅಂಥವರಿಂದ ಅಧಿಕಾರ ಪಡೆದು ದೊರೆತನಮಾಡುತ್ತಾರೆ. ನನ್ನ ಜನರಿಗೆ ಚೆನ್ನಾಗಿ ಹಿಡಿಸುವುದು ಇಂಥದ್ದೇ. ಆದರೆ ಅಂತ್ಯ ಬಂದಾಗ ಏನು ಮಾಡುವರು?”


ಅಹಜ್ಯನು ಮರಣಹೊಂದಿದನೆಂಬುದನ್ನು ಅವನ ತಾಯಿ ಅತಲ್ಯಳು ಕೇಳಿದಾಗ ರಾಜಸಂತಾನದವರನ್ನೆಲ್ಲಾ ಬೇಗನೆ ಸಂಹರಿಸಿಬಿಟ್ಟಳು.


“ಕಪಟ ಧರ್ಮಶಾಸ್ತ್ರಿಗಳೇ ಮತ್ತು ಫರಿಸಾಯರೇ, ನಿಮಗೆ ಧಿಕ್ಕಾರ! ಸ್ವರ್ಗಸಾಮ್ರಾಜ್ಯದ ದ್ವಾರಗಳನ್ನು ಮಾನವರಿಗೆ ಮುಚ್ಚಿದ್ದೀರಿ. ನೀವೂ ಪ್ರವೇಶಿಸುವುದಿಲ್ಲ, ಒಳಕ್ಕೆ ಪ್ರವೇಶಿಸಲು ಯತ್ನಿಸುವವರನ್ನೂ ಬಿಡುವುದಿಲ್ಲ.


ನನ್ನ ಹಾದಿಯನು ಕಡಿದುಹಾಕಿದ್ದಾರೆ ನನ್ನ ಉಪದ್ರವವನ್ನು ಹೆಚ್ಚಿಸಿದ್ದಾರೆ ಅವರನ್ನು ತಡೆಯಲು ಯಾರೂ ಇಲ್ಲದಿದ್ದಾರೆ.


ವಿವೇಕಶೂನ್ಯನಾದ ಒಡೆಯ ಮಹಾಹಿಂಸಕ; ದುರ್ಲಾಭವನ್ನು ವಿರೋಧಿಸುವವನಿಗೆ ದೀರ್ಘಾಯುಷ್ಯ.


ಓ ನಾಡೇ, ನಿನ್ನ ಒಡೆಯ ಬಾಲಕನಾಗಿದ್ದು ನಿನ್ನ ನಾಯಕರೆಲ್ಲರು ಹೊತ್ತಾರೆಯೇ ಔತಣಕ್ಕೆ ಕುಳಿತುಕೊಳ್ಳುವಂಥವರಾಗಿದ್ದಾರೆ, ಅದು ನಿನ್ನ ದೌರ್ಭಾಗ್ಯವೇ ಸರಿ.


ಸರ್ವೇಶ್ವರ ಅವರ ಮನಸ್ಸಿನಲ್ಲಿ ಚಂಚಲಭಾವವನ್ನು ಮೂಡಿಸಿದ್ದಾರೆ. ಅಮಲೇರಿದವನು ಕಕ್ಕುತ್ತಾ ಅತ್ತಿತ್ತ ಓಲಾಡುವ ಪ್ರಕಾರ ಈಜಿಪ್ಟಿನವರು ತಮ್ಮ ಒಂದೊಂದು ಕೆಲಸಕಾರ್ಯದಲ್ಲೂ ಅಸ್ಥಿರರಾಗಿರುವಂತೆ ಮಾಡಿದ್ದಾರೆ.


ಕೇಳು, ಸ್ವಾಮಿ ಸರ್ವೇಶ್ವರ ಆದ ನಾ ಹೇಳುವ ಮಾತನು : ತನ್ನ ಜನರ ಪರವಾಗಿ ವಾದಿಸುವ ನಿನ್ನ ದೇವರು ನಾನು; “ಇಗೋ, ಅಮಲೇರಿಸುವ ಪಾತ್ರೆಯನು ನನ್ನ ಕೋಪದಿಂದ ತುಂಬಿತುಳುಕುವಾ ಕೊಡವನು ನೀ ಕುಡಿಯಬಾರದೆಂದು ನಿನ್ನಿಂದ ತೆಗೆದುಬಿಡುವೆನು.


ಜನರನ್ನು ಸನ್ಮಾರ್ಗದಿಂದ ದುರ್ಮಾರ್ಗಕ್ಕೆ ಎಳೆಯುವ ಪ್ರವಾದಿಗಳಿಗೆ ತಿನ್ನಲು ಏನಾದರೂ ಕೊಟ್ಟರೆ “ಶಾಂತಿ” ಎನ್ನುತ್ತಾರೆ. ಆದರೆ ತಿನ್ನಲು ಯಾರಾದರೂ ಕೊಡದಿದ್ದರೆ ಯುದ್ಧದ ಬೆದರಿಕೆ ಹಾಕುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು