Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 3:19 - ಕನ್ನಡ ಸತ್ಯವೇದವು C.L. Bible (BSI)

19 ಜುಮಕಿ, ಬಳೆ, ಕುಲಾವಿ, ಶಿರವಸ್ತ್ರ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಜುಮುಕಿ, ಬಳೆ, ಶಿರವಸ್ತ್ರ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19-20 ಜುಮಕಿ, ಬಳೆ, ಮುಸುಕು, ಮುಂಡಾಸ, ಕಾಲಸರಪಣಿ, ನಡುಕಟ್ಟು, ಗಂಧದ ಡಬ್ಬಿ, ತಾಯಿತಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಕಿವಿಯೋಲೆಗಳನ್ನು, ಕೈಬಳೆಗಳನ್ನು, ಸೆರಗುವಸ್ತ್ರಗಳನ್ನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಜುಮಕಿ, ಬಳೆ, ಕುಲಾವಿ, ಶಿರವಸ್ತ್ರ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 3:19
14 ತಿಳಿವುಗಳ ಹೋಲಿಕೆ  

ಮತ್ತು ನಾನು ನಿನ್ನ ಕೈಗಳಿಗೆ ಬಳೆಗಳನ್ನು,


ಸರ್ವೇಶ್ವರ ಸ್ವಾಮಿ ನಮ್ಮ ಪ್ರಾಣಗಳನ್ನು ಕಾಪಾಡಿದ್ದಾರೆ. ಅದಕ್ಕೆ ಈಡಾಗಿ ಅವರಿಗೆ ಕಾಣಿಕೆಯಾಗಿ ನಮ್ಮಲ್ಲಿ ಒಬ್ಬೊಬ್ಬನು ತನಗೆ ಸಿಕ್ಕಿದ ಚಿನ್ನದ ಒಡವೆಗಳನ್ನು, ಅಂದರೆ ತೋಳ್ಬಳೆ, ಕಡಗ, ಮುದ್ರೆಯುಂಗುರ, ಮುರುವು, ಕಂಠಮಾಲೆ, ಮುಂತಾದುವುಗಳನ್ನು ತಂದಿದ್ದೇವೆ,” ಎಂದರು.


ಹೆಂಗಸರು ಹಾಗು ಗಂಡಸರು ಧಾರಾಳ ಮನಸ್ಸಿನಿಂದ ಸರ್ವೇಶ್ವರನಿಗೆ ಚಿನ್ನದ ಕಾಣಿಕೆಗಳನ್ನು, ಅಂದರೆ ಕಡಗ, ಮೂಗುತಿ, ಮುದ್ರೆಯುಂಗುರ, ಕಂಠಮಾಲೆ ಮೊದಲಾದ ಚಿನ್ನದ ಒಡವೆಗಳನ್ನು ಸಮರ್ಪಿಸಿದರು.


“ಏನು ಒತ್ತೆಯಿಡಬೇಕು?” ಎಂದು ಅವನು ಕೇಳಲು ಆಕೆ, “ನಿನ್ನ ಮುದ್ರೆ ಉಂಗುರ, ಅದರ ದಾರ ಮತ್ತು ನಿನ್ನ ಕೈಕೋಲು, ಈ ಮೂರನ್ನೂ ಇಡು,” ಎಂದಳು. ಅವನು ಅವುಗಳನ್ನು ಕೊಟ್ಟು ಆಕೆಯನ್ನು ಸಂಭೋಗಿಸಿದನು. ಆಕೆ ಅವನಿಗೆ ಗರ್ಭವತಿ ಆದಳು.


ಬಳಿಕ ತಾನು ತಂದಿದ್ದ ಬೆಳ್ಳಿಬಂಗಾರದ ಒಡವೆಗಳನ್ನು ಹಾಗು ವಸ್ತ್ರಗಳನ್ನು ತೆಗೆದು ರೆಬೆಕ್ಕಳಿಗೆ ಕೊಟ್ಟನು. ಆಕೆಯ ಅಣ್ಣನಿಗೂ ತಾಯಿಗೂ ಬೆಲೆಬಾಳುವ ಉಡುಗೊರೆಗಳನ್ನು ಕೊಟ್ಟನು.


ಅವನು ತನ್ನ ತಂಗಿಯ ಮೇಲಿದ್ದ ಮೂಗುತಿಯನ್ನೂ ಬಳೆಗಳನ್ನೂ ನೋಡಿದನು. ಆ ಮನುಷ್ಯ ಆಕೆಗೆ ಹೇಳಿದ ಮಾತುಗಳನ್ನು ಆಕೆಯಿಂದಲೇ ಕೇಳಿ ತಿಳಿದುಕೊಂಡನು. ಬಳಿಕ ಬುಗ್ಗೆಯ ಬಳಿ ಒಂಟೆಗಳೊಂದಿಗೆ ನಿಂತಿದ್ದ ಆ ಮನುಷ್ಯನ ಬಳಿಗೆ ಓಡಿಬಂದನು.


ಒಂಟೆಗಳು ಕುಡಿದಾದ ನಂತರ ಅವನು ಆಕೆಯ ಮೂಗಿಗೆ ಅರ್ಧ ತೊಲೆಯ ತೂಕವುಳ್ಳ ಒಂದು ಚಿನ್ನದ ಮೂಗುತಿಯನ್ನೂ ಕೈಗಳಿಗೆ ಹತ್ತು ತೊಲೆಯ ತೂಕವುಳ್ಳ ಎರಡು ಚಿನ್ನದ ಬಳೆಗಳನ್ನೂ ತೊಡಿಸಿದನು.


ಅಂತೆಯೇ ಎಳೆದು ತರುವಾಗ ಆಕೆ ತನ್ನ ಮಾವನಿಗೆ ಒತ್ತೆಯ ವಸ್ತುಗಳನ್ನು ಕಳುಹಿಸುತ್ತಾ, “ಇವು ಯಾವನವೊ ಅವನಿಂದಲೇ ನಾನು ಗರ್ಭಿಣಿಯಾದುದು; ಮುದ್ರೆಯುಂಗುರ, ಅದರ ದಾರ ಮತ್ತು ಕೈಗೋಲು ಇವುಗಳನ್ನು ಗುರುತಿಸಿ ತಿಳಿದುಕೊಳ್ಳಬಹುದು,” ಎಂದು ಹೇಳಿಕಳಿಸಿದಳು.


ಅಂತೆಯೆ ಅವರು ತಮ್ಮಲ್ಲಿದ್ದ ಎಲ್ಲ ಅನ್ಯದೇವರುಗಳನ್ನೂ ತಮ್ಮ ಕಿವಿಗಳಲ್ಲಿದ್ದ ಮುರುವುಗಳನ್ನೂ ಯಕೋಬನಿಗೆ ಒಪ್ಪಿಸಿಬಿಟ್ಟರು. ಅವನು ಅವುಗಳನ್ನು ಶೆಕೆಮ್ ಪಟ್ಟಣದ ಹತ್ತಿರ ಇದ್ದ ಒಂದು ಓಕ್ ಮರದ ಬುಡದಡಿಯಲ್ಲಿ ಹೂಳಿಬಿಟ್ಟನು.


ದಿನ ಬರುವುದು, ಆಗ ಸ್ವಾಮಿ ಅವರ ಬೆಡಗಿನ ಆಭರಣಗಳೆಲ್ಲವನ್ನು ತೆಗೆದುಹಾಕುವರು. ಕಾಲಂದಿಗೆ, ತುರುಬು, ಬಲೆ, ಅರ್ಧಚಂದ್ರ,


ಕಂಠವಸ್ತ್ರ, ಕಾಲಸರಪಣಿ, ಡಾಬು, ಸುಗಂಧ ಭರಣಿ, ತಾಯಿತಿ,


ಅದಕ್ಕೆ ಆರೋನನು, “ನಿಮ್ಮ ಹೆಂಡತಿಯರು, ಗಂಡುಮಕ್ಕಳು ಹಾಗು ಹೆಣ್ಣುಮಕ್ಕಳು ಹಾಕಿಕೊಂಡಿರುವ ಚಿನ್ನದ ಕಿವಿಯೋಲೆಗಳನ್ನು ಬಿಚ್ಚಿ ನನಗೆ ಒಪ್ಪಿಸಿರಿ,” ಎಂದನು.


ಜನರೆಲ್ಲರು ತಮ್ಮ ತಮ್ಮ ಕಿವಿಯೋಲೆಗಳನ್ನು ಬಿಚ್ಚಿ ಆರೋನನ ಬಳಿಗೆ ತಂದುಕೊಟ್ಟರು.


ಕೊರಳಿಗೆ ಮಾಲೆಯನ್ನು, ಮೂಗಿಗೆ ಮೂಗುತಿಯನ್ನು, ಶಿರಸ್ಸಿಗೆ ಸುಂದರ ಕಿರೀಟವನ್ನು ಇಟ್ಟು, ನಿನ್ನನ್ನು ಆಭರಣಗಳಿಂದ ಸಿಂಗರಿಸಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು