Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 30:10 - ಕನ್ನಡ ಸತ್ಯವೇದವು C.L. Bible (BSI)

10 ಇವರು ದಿವ್ಯದರ್ಶಿಗಳನ್ನು ನೋಡಿ : “ನಿಮಗೆ ದರ್ಶನವಾಗದಿರಲಿ,” ಎನ್ನುತ್ತಾರೆ. ಪ್ರವಾದಿಗಳಿಗೆ : “ನಯವಾದುದ್ದನ್ನು ನಮಗೆ ನುಡಿಯಿರಿ. ಮಾಯವಾದವುಗಳನ್ನೇ ಪ್ರವಾದನೆ ಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಇವರು ದಿವ್ಯದರ್ಶಿಗಳಿಗೆ, “ನಿಮಗೆ ದರ್ಶನವಾಗದಿರಲಿ” ಎನ್ನುತ್ತಾರೆ, ಮತ್ತು ಪ್ರವಾದಿಗಳಿಗೆ, “ನಮಗಾಗಿ ನ್ಯಾಯವಾದವುಗಳನ್ನು ಪ್ರವಾದಿಸಬೇಡಿರಿ, ನಯವಾದವುಗಳನ್ನು ನಮಗೆ ನುಡಿಯಿರಿ, ಮೋಸವಾದವುಗಳನ್ನೇ ಪ್ರವಾದಿಸಿರಿ ಎನ್ನುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಇವರು ದಿವ್ಯದರ್ಶಿಗಳನ್ನು ಕುರಿತು - ನಿಮಗೆ ದರ್ಶನವಾಗದಿರಲಿ ಅನ್ನುತ್ತಾರೆ; ಮತ್ತು ಸಾಕ್ಷಾತ್ಕಾರಿಗಳಿಗೆ - ನಮಗಾಗಿ ನ್ಯಾಯವಾದವುಗಳನ್ನು ಸಾಕ್ಷಾತ್ಕರಿಸಬೇಡಿರಿ, ನಯವಾದವುಗಳನ್ನು ನಮಗೆ ನುಡಿಯಿರಿ, ಮಾಯವಾದವುಗಳನ್ನೇ ಸಾಕ್ಷಾತ್ಕರಿಸಿರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಅವರು ಪ್ರವಾದಿಗಳಿಗೆ, “ನಾವು ಮಾಡಬೇಕಿರುವ ಕಾರ್ಯಗಳ ಬಗ್ಗೆ ದೈವೋಕ್ತಿ ನುಡಿಯಬೇಡಿ, ನಮಗೆ ಸತ್ಯವನ್ನು ತಿಳಿಸಬೇಡಿ. ನಮಗೊಪ್ಪುವ ಮನರಂಜನೆಯ ಮಾತುಗಳನ್ನಾಡಿ. ನಮಗೋಸ್ಕರ ಒಳ್ಳೆಯ ಸಂಗತಿಗಳನ್ನೇ ನಿಮ್ಮ ದರ್ಶನಗಳಲ್ಲಿ ನೋಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಅವರು ನೋಡುವವರಿಗೆ, “ನೋಡಬೇಡಿರಿ,” ಎಂದು ಪ್ರವಾದಿಗಳಿಗೆ, “ನಿಮಗೆ ದರ್ಶನವಾಗದಿರಲಿ,” ಎನ್ನುತ್ತಾರೆ. ಪ್ರವಾದಿಗಳಿಗೆ, ನಮಗೆ ನ್ಯಾಯವಾದವುಗಳನ್ನು ಪ್ರವಾದಿಸಬೇಡಿರಿ. ನಯವಾದವುಗಳನ್ನೇ ನುಡಿಯಿರಿ. ಮಾಯವಾದವುಗಳನ್ನೇ ಪ್ರವಾದಿಸಿರಿ ಎನ್ನುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 30:10
39 ತಿಳಿವುಗಳ ಹೋಲಿಕೆ  

ಅಂಥವರು ಮಾಡುವುದು ತಮ್ಮ ಉದರಸೇವೆಯನ್ನೇ ಹೊರತು ಪ್ರಭುವಿನ ಸೇವೆಯನ್ನಲ್ಲ, ತಮ್ಮ ನಯನಾಜೂಕಿನ ನುಡಿಗಳಿಂದಲೂ ಮುಖಸ್ತುತಿಯ ಮಾತುಗಳಿಂದಲೂ ನಿಷ್ಕಪಟ ಮನಸ್ಕರನ್ನು ಮರುಳುಗೊಳಿಸುತ್ತಾರೆ.


ಬೇತೇಲಿನಲ್ಲಿ ಇನ್ನು ಪ್ರವಾದನೆ ಮಾಡಬೇಡ. ಇದು ರಾಜನ ಗರ್ಭಗುಡಿ, ರಾಜ್ಯದ ಪವಿತ್ರಾಲಯ,” ಎಂದನು.


“ನೀವಾದರೋ, ನಾಜೀರರು ವ್ರತಮುರಿದು ಮದ್ಯಪಾನ ಸೇವಿಸುವಂತೆ ಮಾಡಿದಿರಿ. ಪ್ರವಾದಿಗಳು ಪ್ರವಾದನೆ ಹೇಳದಂತೆ ಆಜ್ಞೆಮಾಡಿದಿರಿ.


ಹೀಗಿರಲು, “ಸರ್ವೇಶ್ವರನ ಹೆಸರೆತ್ತಿ ಪ್ರವಾದನೆ ಮಾಡಬೇಡ, ಮಾಡಿದರೆ ನಮ್ಮ ಕೈಯಿಂದಲೆ ನೀನು ಸಾಯುವೆ,” ಎಂದು ಅನಾತೋತಿನವರು ನನ್ನ ಪ್ರಾಣಕ್ಕೆ ಹೊಂಚುಹಾಕುತ್ತಿದ್ದರು.


ಇವರ ಸಾಕ್ಷ್ಯನೀಡಿಕೆ ಮುಗಿದ ನಂತರ ಪಾತಾಳಕೂಪದಿಂದ ಮೃಗವೊಂದು ಮೇಲೇರಿಬರುತ್ತದೆ; ಅದು ಇವರೊಡನೆ ಯುದ್ಧಮಾಡಿ, ಜಯಗಳಿಸಿ ಇವರನ್ನು ಕೊಂದುಹಾಕುತ್ತದೆ.


ನನ್ನನ್ನು ಅಸಡ್ಡೆಮಾಡುವವರಿಗೆ, ‘ನಿಮಗೆ ಶುಭವಾಗುವುದು ಎಂದು ಸರ್ವೇಶ್ವರನೇ ನುಡಿದಿದ್ದಾರೆ’ ಎಂದು ಹೇಳುತ್ತಲೇ ಇದ್ದಾರೆ. ಹಟಮಾರಿ ಹೃದಯಿಗಳೆಲ್ಲರಿಗೆ, ‘ನಿಮಗೆ ಯಾವ ಕೇಡೂ ಸಂಭವಿಸದು’ ಎಂದು ನುಡಿಯುತ್ತಾರೆ.”


“ಗಾಳಿಮಾತಿನಿಂದ ಮೋಸಮಾಡುವಂಥ ಸುಳ್ಳುಗಾರನೊಬ್ಬನು: ‘ದ್ರಾಕ್ಷಾರಸ, ಮದ್ಯಪಾನಗಳ ಕುರಿತು ಪ್ರವಾದನೆ ಮಾಡುತ್ತೇನೆ, ಎಂದು ಹೇಳಿದರೆ ಅಂಥವನೇ ಈ ಜನರಿಗೆ ಸರಿಯಾದ ಪ್ರವಾದಿ ಎನಿಸಿಕೊಳ್ಳುವನು.


ಆಗ ಆ ಕೆಡುಕರು, “ಪ್ರವಾದನೆ ಮಾಡಬೇಡ. ಇಂಥ ವಿಷಯಗಳಲ್ಲಿ ಪ್ರವಾದನೆಯ ಮಾತೆತ್ತಕೂಡದು. ಆ ವಿನಾಶ ನಮಗೆ ತಟ್ಟುವುದಿಲ್ಲ.


ಅವರಿಗೆ, ‘ನಾನು ಸುರಕ್ಷಿತನಾಗಿ ಹಿಂದಿರುಗುವವರೆಗೂ ಇವನನ್ನು ಸೆರೆಯಲ್ಲಿಟ್ಟು ಸೆರೆಮನೆಯ ಅನ್ನಪಾನಗಳನ್ನೇ ಕೊಟ್ಟು ಕರಗಿಸಬೇಕು,’ ಎಂದು ಆಜ್ಞಾಪಿಸಿದನು.


ಅಹಾಬನು ಎಲೀಯನನ್ನು ನೋಡಿ, “ಎಲೈ ವೈರಿಯೇ, ನೀನು ನನ್ನನ್ನು ಕಂಡುಹಿಡಿದೆಯಾ?” ಎಂದು ಕೇಳಿದನು. ಅವನು, “ಹೌದು, ಕಂಡುಹಿಡಿದೆ, ನೀನು ನಿನ್ನನ್ನು ಪಾಪಕ್ಕೆ ಮಾರಿಬಿಟ್ಟು, ಸರ್ವೇಶ್ವರನ ದೃಷ್ಟಿಯಲ್ಲಿ ದ್ರೋಹಿಯಾದೆ.


ಹೀಗಿರಲಾಗಿ ಸತ್ಯವನ್ನು ನುಡಿಯುವುದರಿಂದ ನಾನು ನಿಮಗೆ ಶತ್ರುವಾಗಿಬಿಟ್ಟೆನೇ?


“ಆ ವ್ಯಕ್ತಿಯ ಹೆಸರಿನಲ್ಲಿ ಉಪದೇಶ ಮಾಡಕೂಡದು ಎಂದು ನಿಮಗೆ ಕಟ್ಟಪ್ಪಣೆ ಮಾಡಿದೆವು. ಆದರೂ ನೀವು ಮಾಡಿರುವುದೇನು? ನಿಮ್ಮ ಬೋಧನೆ ಜೆರುಸಲೇಮ್ ಆದ್ಯಂತ ಹಬ್ಬಿಹರಡಿದೆ. ಅಷ್ಟುಮಾತ್ರವಲ್ಲ, ಆ ವ್ಯಕ್ತಿಯ ಕೊಲೆಗೆ ನಮ್ಮನ್ನೇ ಹೊಣೆಗಾರರನ್ನಾಗಿ ಮಾಡಬೇಕೆಂದಿರುವಿರಿ,” ಎಂದು ಆಪಾದಿಸಿದನು.


ಆದರೂ, ಈ ಸಮಾಚಾರ ಜನರಲ್ಲಿ ಮತ್ತಷ್ಟು ಹರಡದಂತೆ ಇನ್ನು ಮೇಲೆ ಯಾರ ಬಳಿಯಲ್ಲೂ ಯೇಸುವಿನ ಹೆಸರೆತ್ತದಂತೆ ಇವರಿಗೆ ಎಚ್ಚರಿಕೆ ಕೊಡೋಣ,” ಎಂದುಕೊಂಡರು.


ನಾನು ನುಡಿಯುವುದಾದರೋ ಸತ್ಯವನ್ನೇ. ಆದುದರಿಂದಲೇ ನಿಮಗೆ ನನ್ನಲ್ಲಿ ನಂಬಿಕೆ ಇಲ್ಲ.


ಲೋಕಕ್ಕೆ ನಿಮ್ಮ ಮೇಲೆ ಹಗೆಯಿಲ್ಲ. ಅದಕ್ಕೆ ಹಗೆಯಿರುವುದು ನನ್ನ ಮೇಲೆ. ಏಕೆಂದರೆ, ಅದರ ವರ್ತನೆ ಕೆಟ್ಟದೆಂದು ನಾನು ಯಥಾರ್ಥವಾಗಿ ಹೇಳುತ್ತಾ ಇದ್ದೇನೆ.


ಈ ಪದಾಧಿಕಾರಿಗಳು ಅರಸನ ಬಳಿಗೆ ಬಂದು, “ಒಡೆಯಾ, ಈ ಯೆರೆಮೀಯನಿಗೆ ಮರಣದಂಡನೆಯಾಗಬೇಕು. ಇವನು ನಗರದಲ್ಲಿರುವ ಸೈನಿಕರಿಗೂ ಜನರೆಲ್ಲರಿಗೂ ಇಂಥ ಭವಿಷ್ಯವನ್ನು ನುಡಿಯುತ್ತಾ ಅವರು ಎದೆಗುಂದುವಂತೆ ಮಾಡುತ್ತಿದ್ದಾನೆ. ಅವನು ಹಾರೈಸುವುದು ಜನರ ಕ್ಷೇಮವನ್ನಲ್ಲ ಹಾನಿಯನ್ನೇ,” ಎಂದು ದೂರಿತ್ತರು.


ಹೀಗಿರುವಲ್ಲಿ, ನಿಮ್ಮ ಮಧ್ಯೆ ಪ್ರವಾದಿಯಾಗಿ ನಟಿಸುವ ಅನಾತೋತಿನವನಾದ ಯೆರೆಮೀಯನನ್ನು ನೀನು ಖಂಡಿಸಲಿಲ್ಲವೇಕೆ?


ಯಾಜಕರೂ ಪ್ರವಾದಿಗಳೂ, “ಇವನು ಮರಣದಂಡನೆಗೆ ಪಾತ್ರನು; ನಗರಕ್ಕೆ ಅಹಿತವಾದುದನ್ನು ನುಡಿದಿದ್ದಾನೆ. ಇದನ್ನು ನೀವೇ ಕೇಳಿದ್ದೀರಿ,” ಎಂದು ನಾಯಕರಿಗೂ ಜನರೆಲ್ಲರಿಗೂ ದೂರು ಇತ್ತರು.


ಪ್ರವಾದಿಗಳೇ ಸುಳ್ಳು ಪ್ರವಾದನೆಮಾಡುತ್ತಾರೆ. ಯಾಜಕರು ಅಂಥವರಿಂದ ಅಧಿಕಾರ ಪಡೆದು ದೊರೆತನಮಾಡುತ್ತಾರೆ. ನನ್ನ ಜನರಿಗೆ ಚೆನ್ನಾಗಿ ಹಿಡಿಸುವುದು ಇಂಥದ್ದೇ. ಆದರೆ ಅಂತ್ಯ ಬಂದಾಗ ಏನು ಮಾಡುವರು?”


ಈ ಮಾತನ್ನು ಹೇಳಿದ ಪ್ರವಾದಿಗೆ ಅರಸನು, “ನಿನ್ನನ್ನು ನಾನು ಆಲೋಚನಾಮಂತ್ರಿಯನ್ನಾಗಿ ನೇಮಿಸಲಿಲ್ಲ; ಬಾಯಿಮುಚ್ಚುವಿಯೋ: ಅಥವಾ ಏಟು ತಿನ್ನುವಿಯೋ?’ ಎಂದನು. ಅದಕ್ಕೆ ಅವನು, “ನೀವು ನನ್ನ ಬುದ್ಧಿವಾದವನ್ನು ಆಲಿಸದೆ ಹೀಗೆ ಮಾಡುವುದರಿಂದ ದೇವರು ನಿಮ್ಮನ್ನು ನಾಶಮಾಡಬೇಕೆಂದು ನಿಶ್ಚಯಿಸಿಕೊಂಡಿದ್ದಾರೆಂದು ನಾನು ಬಲ್ಲೆ,” ಎಂದು ಹೇಳಿ ಸುಮ್ಮನಾದನು.


ಆಸನು ಈ ಮಾತುಗಳಿಂದ ಬೇಸರಗೊಂಡು, ದರ್ಶಿಯ ಮೇಲೆ ಕುಪಿತನಾಗಿ, ಅವನನ್ನು ಸೆರೆಮನೆಯಲ್ಲಿಡಿಸಿ ಕೋಳಹಾಕಿದನು. ಇದಲ್ಲದೆ, ಜನರಲ್ಲಿ ಕೆಲವರನ್ನು ಪೀಡಿಸಿದನು.


ಜನರು ಸದ್ಬೋಧನೆಯನ್ನು ಸಹಿಸದೆ, ಸ್ವೇಚ್ಛಾಚಾರಿಗಳಾಗುವ ಕಾಲವು ಬರುತ್ತದೆ. ತಮ್ಮ ದುರಿಚ್ಛೆಗಳಿಗೆ ಅನುಗುಣವಾಗಿ ಬೋಧಿಸುವವರಿಗೆ ಕಾತರದಿಂದ ಕಿವಿಗೊಡಲು ಕೂಡಿಕೊಳ್ಳುತ್ತಾರೆ.


ಸತ್ಯಕ್ಕೆಕಿವಿಗೊಡದೆ ಕಟ್ಟುಕತೆಗಳನ್ನು ಕೇಳಲು ಅಲೆದಾಡುತ್ತಾರೆ.


(ಪೂರ್ವಕಾಲದಲ್ಲಿ ಇಸ್ರಯೇಲರಲ್ಲಿ ಯಾವನಾದರೂ ದೇವೋತ್ತರ ಕೇಳಬೇಕಾದರೆ ದಾರ್ಶನಿಕನ ಬಳಿಗೆ ಹೋಗೋಣ ಬನ್ನಿ ಎನ್ನುವನು; ಈ ಕಾಲದಲ್ಲಿ ಪ್ರವಾದಿಗಳೆನಿಸಿಕೊಳ್ಳುವವರನ್ನು ಆ ಕಾಲದಲ್ಲಿ ದಾರ್ಶನಿಕರೆಂದು ಕರೆಯುತ್ತಿದ್ದರು.)


ಕೆಟ್ಟದ್ದನ್ನು ಒಳ್ಳೆಯದೆಂದೂ ಒಳ್ಳೆಯದನ್ನು ಕೆಟ್ಟದ್ದೆಂದೂ ಬೋಧನೆ ಮಾಡುವವರಿಗೆ ಧಿಕ್ಕಾರ ! ಕತ್ತಲನ್ನು ಬೆಳಕೆಂದೂ ಬೆಳಕನ್ನು ಕತ್ತಲೆಂದೂ ಸಾಧಿಸುವಂಥವರಿಗೆ ಧಿಕ್ಕಾರ ! ಕಹಿಯನ್ನು ಸಿಹಿಯೆಂದೂ ಸಿಹಿಯನ್ನು ಕಹಿಯೆಂದೂ ವಾದಿಸುವಂಥವರಿಗೆ ಧಿಕ್ಕಾರ !


ಸರ್ವೇಶ್ವರ ನಿಮ್ಮ ಮೇಲೆ ಗಾಢನಿದ್ರೆಯನ್ನು ಬರಮಾಡಿ ಪ್ರವಾದಿಗಳೆಂಬ ಕಣ್ಣುಗಳನ್ನು ಕಟ್ಟಿಬಿಟ್ಟಿದ್ದಾರೆ. ದಿವ್ಯದರ್ಶನಗಳೆಂಬ ಕಲೆಗಳಿಗೆ ಮುಸುಕು ಹಾಕಿಬಿಟ್ಟಿದ್ದಾರೆ.


ಅದೂ ಅಲ್ಲದೆ ಜುದೇಯದ ಅರಸ ಯೆಹೋಯಾಕೀಮನ ವಿಷಯದಲ್ಲಿ ಹೀಗೆ ಬರೆಯಿಸು: ‘ಸರ್ವೇಶ್ವರ ಹೀಗೆಂದಿದ್ದಾರೆ - ಬಾಬಿಲೋನಿನ ಅರಸನು ಬಂದು ಈ ನಾಡನ್ನು ಜನ ಅಥವಾ ಜಾನುವಾರುಗಳಿಲ್ಲದಂತೆ ಹಾಳುಮಾಡುವುದು ಖಂಡಿತ ಎಂದು ಈ ಸುರುಳಿಯಲ್ಲಿ ಬರೆಸಿದ್ದು ಏಕೆ ಎಂದು ಪ್ರಶ್ನಿಸಿ, ಆಕ್ಷೇಪಿಸಿ ಅದನ್ನು ನೀನು ಸುಟ್ಟುಬಿಟ್ಟಿಯಲ್ಲವೆ?


ಅದು ನಿನ್ನ ಸಂಗಡ ಸವಿಮಾತಾಡೀತೆ? ನಿನಗೆ ವಿನಮ್ರ ವಿಜ್ಞಾಪನೆ ಮಾಡೀತೆ?


ನೀವು ನಿಮ್ಮನಿಮ್ಮೊಳಗೆ : “ಮೃತ್ಯುವಿನೊಂದಿಗೆ ಮುಚ್ಚಳಿಕೆ, ಪಾತಾಳದೊಂದಿಗೆ ಒಪ್ಪಂದ ಮಾಡಿಕೊಂಡಿದ್ದೇವೆ. ಮಹಾವಿಪತ್ತು ನಾಡನ್ನು ಹಾದುಹೋಗುವಾಗ, ಅದು ನಮ್ಮನ್ನು ಮುಟ್ಟದು. ನಾವು ಅಸತ್ಯವನ್ನು ಆಶ್ರಯಿಸಿಕೊಂಡಿದ್ದೇವೆ. ಮೋಸವನ್ನು ಮರೆಹೊಕ್ಕಿದ್ದೇವೆ” ಎಂದು ಕೊಚ್ಚಿಕೊಳ್ಳುತ್ತಿದ್ದೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು