Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 30:12 - ಕನ್ನಡ ಸತ್ಯವೇದವು C.L. Bible (BSI)

12 ಆದಕಾರಣ, ಇಸ್ರಯೇಲಿನ ಪರಮಪಾವನ ಸ್ವಾಮಿ ಹೀಗೆನ್ನುತ್ತಾರೆ : “ನೀವು ನನ್ನ ಮಾತನ್ನು ತಿರಸ್ಕರಿಸಿ ಹಿಂಸೆ ಕುತಂತ್ರಗಳನ್ನೇ ನೆಚ್ಚಿಕೊಂಡಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆದುದರಿಂದ ಇಸ್ರಾಯೇಲರ ಸದಮಲಸ್ವಾಮಿಯು ಹೀಗೆನ್ನುತ್ತಾನೆ, “ನೀವು ಈ ನನ್ನ ಮಾತನ್ನು ಅಸಡ್ಡೆಮಾಡಿ, ಬಲಾತ್ಕಾರ ಕುಯುಕ್ತಿಗಳನ್ನು ನಂಬಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಆದಕಾರಣ ಇಸ್ರಾಯೇಲ್ಯರ ಸದಮಲಸ್ವಾವಿುಯು ಹೀಗನ್ನುತ್ತಾನೆ - ನೀವು ಈ ಮಾತನ್ನು ಅಸಡ್ಡೆಮಾಡಿ ಬಲಾತ್ಕಾರಕುಯುಕ್ತಿಗಳನ್ನು ನಂಬಿ ಅವುಗಳನ್ನೇ ಆಧಾರಮಾಡಿಕೊಂಡದರಿಂದ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಇಸ್ರೇಲಿನ ಪರಿಶುದ್ಧನು ಹೇಳುವುದೇನೆಂದರೆ, “ಯೆಹೋವನಿಂದ ಬರುವ ಸಂದೇಶವನ್ನು ಅಂಗೀಕರಿಸಲು ನೀವು ನಿರಾಕರಿಸುತ್ತೀರಿ. ನೀವು ನಿಮ್ಮ ಯುದ್ಧಗಳಿಂದಲೂ ಸುಳ್ಳಾಡುವದರಿಂದಲೂ ನಿಮಗೆ ಸಹಾಯ ಸಿಗುವದೆಂದು ಭರವಸೆಯಿಂದಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆದಕಾರಣ ಇಸ್ರಾಯೇಲರ ಪರಿಶುದ್ಧನು ಹೇಳುವುದೇನೆಂದರೆ, “ನೀವು ಈ ಮಾತನ್ನು ತಿರಸ್ಕಾರ ಮಾಡಿ ಬಲಾತ್ಕಾರ, ಕುಯುಕ್ತಿಗಳನ್ನು ನಂಬಿ, ಅವುಗಳನ್ನೇ ಆಧಾರ ಮಾಡಿಕೊಂಡದ್ದರಿಂದ

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 30:12
23 ತಿಳಿವುಗಳ ಹೋಲಿಕೆ  

ಹೀಗಿರಲು, ಒಣಗಿದ ಕಳೆಯನ್ನು ಅಗ್ನಿಜ್ವಾಲೆ ಕಬಳಿಸುವಂತೆ, ಒಣಹುಲ್ಲು ಬೆಂಕಿಯಲ್ಲಿ ಬೂದಿಯಾಗುವಂತೆ, ಅವರ ಬೇರು ಕೊಳೆತುಹೋಗುವುದು. ಅವರ ಹೂ ಧೂಳಿನಂತೆ ತೂರಿಹೋಗುವುದು. ಏಕೆಂದರೆ, ಅವರು ಸೇನಾಧೀಶ್ವರಸ್ವಾಮಿಯ ಉಪದೇಶವನ್ನು ನಿರಾಕರಿಸಿದ್ದಾರೆ. ಇಸ್ರಯೇಲಿನ ಪರಮಪಾವನ ಸ್ವಾಮಿಯ ವಾಕ್ಯವನ್ನು ಅಸಡ್ಡೆಮಾಡಿದ್ದಾರೆ.


ಅಂದಮೇಲೆ, ಈ ಬೋಧನೆಯನ್ನು ತಿರಸ್ಕರಿಸುವವನು ಮನುಷ್ಯನನ್ನು ಮಾತ್ರವಲ್ಲ, ನಿಮಗೆ ಪವಿತ್ರಾತ್ಮರನ್ನು ಪ್ರದಾನ ಮಾಡಿರುವ ದೇವರನ್ನೇ ತಿರಸ್ಕರಿಸುತ್ತಾನೆ.


ಸರ್ವೇಶ್ವರ ಇಂತೆನ್ನುತ್ತಾರೆ: “ಜುದೇಯದ ಜನರು ಪದೇಪದೇ ಮಾಡಿದ ಪಾಪಗಳಿಗಾಗಿ ಅವರಿಗೆ ಆಗಬೇಕಾದ ದಂಡನೆಯನ್ನು ನಾನು ರದ್ದುಗೊಳಿಸುವುದಿಲ್ಲ. ಏಕೆಂದರೆ ಅವರು ನನ್ನ ಧರ್ಮಶಾಸ್ತ್ರವನ್ನು ತೃಣೀಕರಿಸಿದ್ದಾರೆ. ನನ್ನ ವಿಧಿನಿಯಮಗಳನ್ನು ಮೀರಿದ್ದಾರೆ. ಅವರ ಪೂರ್ವಜರು ಆರಾಧಿಸಿದ ಸುಳ್ಳುದೇವತೆಗಳನ್ನು ಪೂಜಿಸುತ್ತಾ ದಾರಿತಪ್ಪಿದ್ದಾರೆ.


ಕೇಡನು ನೀ ಮಾಡಿದೆ ಭಯಪಡದೆ ನೋಡರಾರೂ ಎಂದುಕೊಂಡಿದ್ದೆ, ನೀನು ಜ್ಞಾನಿ ವಿವೇಕಿಯೆಂದು ತಿಳಿದುಕೊಂಡೇ ಮರುಳಾದೆ; ‘ಏಕೈಕಳು ನಾನೇ, ಇನ್ನಾರೂ ಇಲ್ಲ’ ಎಂದುಕೊಂಡೆ.


ಅನಂತರ ತಮ್ಮ ಶಿಷ್ಯರನ್ನು ಉದ್ದೇಶಿಸಿ, “ನಿಮ್ಮನ್ನು ಆಲಿಸುವವನು ನನ್ನನ್ನೇ ಆಲಿಸುತ್ತಾನೆ; ನಿಮ್ಮನ್ನು ಅಲಕ್ಷ್ಯಮಾಡುವವನು ನನ್ನನ್ನೇ ಅಲಕ್ಷ್ಯಮಾಡುತ್ತಾನೆ; ನನ್ನನ್ನು ಅಲಕ್ಷ್ಯಮಾಡುವವನಾದರೋ ನನ್ನನ್ನು ಕಳುಹಿಸಿದಾತನನ್ನೇ ಅಲಕ್ಷ್ಯಮಾಡುತ್ತಾನೆ,” ಎಂದರು.


ನೀನು ನನ್ನನ್ನು ಮರೆತುಬಿಟ್ಟು ಸುಳ್ಳನ್ನು ನಂಬಿದ್ದರಿಂದ ಇದೇ ನಿನಗೆ ಒದಗಲಿರುವ ಗತಿ. ಇದೇ ನಾನು ನಿನಗೆ ಅಳೆದುಕೊಡುವ ಪ್ರತೀಕಾರ.


ಈಜಿಪ್ಟ್ ನೀಡುವ ಸಹಾಯ ನಿರರ್ಥಕ, ನಿಷ್ಫ್ರಯೋಜಕ. ಆದುದರಿಂದಲೇ ಅದಕ್ಕೆ ನಾನು ಜಡವಾಗಿ ಬಿದ್ದಿರುವ ಘಟಸರ್ಪ ಎಂದು ಹೆಸರು ಇಟ್ಟಿದ್ದೇನೆ.


ಸರ್ವೇಶ್ವರ ಸ್ವಾಮಿಯ ನುಡಿಯಿದು : “ದ್ರೋಹಿಗಳಾದ ಈ ಪೀಳಿಗೆಗೆ ಧಿಕ್ಕಾರ ! ಇವರು ನನ್ನನ್ನು ಕೇಳದೆ ತಮ್ಮದೇ ಆದ ಯೋಜನೆಯನ್ನು ಸಾಧಿಸುತ್ತಾರೆ. ನನ್ನಾತ್ಮಪ್ರೇರಣೆಯಿಲ್ಲದೆ ತಂತ್ರೋಪಾಯಗಳನ್ನು ಹೂಡುತ್ತಾರೆ. ಪಾಪದ ಮೇಲೆ ಪಾಪವನ್ನು ಸೇರಿಸಿಕೊಳ್ಳುತ್ತಾರೆ.


ನೀವು ನಿಮ್ಮನಿಮ್ಮೊಳಗೆ : “ಮೃತ್ಯುವಿನೊಂದಿಗೆ ಮುಚ್ಚಳಿಕೆ, ಪಾತಾಳದೊಂದಿಗೆ ಒಪ್ಪಂದ ಮಾಡಿಕೊಂಡಿದ್ದೇವೆ. ಮಹಾವಿಪತ್ತು ನಾಡನ್ನು ಹಾದುಹೋಗುವಾಗ, ಅದು ನಮ್ಮನ್ನು ಮುಟ್ಟದು. ನಾವು ಅಸತ್ಯವನ್ನು ಆಶ್ರಯಿಸಿಕೊಂಡಿದ್ದೇವೆ. ಮೋಸವನ್ನು ಮರೆಹೊಕ್ಕಿದ್ದೇವೆ” ಎಂದು ಕೊಚ್ಚಿಕೊಳ್ಳುತ್ತಿದ್ದೀರಿ.


ಇಸ್ರಯೇಲ್ ಮನೆತನವೇ ಸೇನಾಧೀಶ್ವರ ಸರ್ವೇಶ್ವರ ನೆಟ್ಟ ಆ ದ್ರಾಕ್ಷಿಯ ತೋಟ. ಜುದೇಯದ ಜನರೇ ಆತ ನಾಟಿಮಾಡಿದಾ ಸುಂದರ ಸಸಿತೋಟ. ನ್ಯಾಯನೀತಿಯನು ನಿರೀಕ್ಷಿಸಿದನಾತ ಆದರೆ ಸಿಕ್ಕಿತವನಿಗೆ ರಕ್ತಪಾತ ! ಸತ್ಸಂಬಂಧವನು ಎದುರುನೋಡಿದನಾತ ಇಗೋ, ದಕ್ಕಿತವನಿಗೆ ದುಃಖಿತರ ಆರ್ತನಾದ !


ಹಿಂಸಾಚಾರದ ಸಂಪಾದನೆಯನು ನೆಚ್ಚಬೇಡಿ I ಸೂರೆಮಾಡಿ ಸೇರಿಕೊಂಡುದನು ಕೊಚ್ಚಬೇಡಿ I ಹೆಚ್ಚಿದ ಆಸ್ತಿಪಾಸ್ತಿಗೆ ಮನಸ್ಸು ಹಚ್ಚಬೇಡಿ II


ಅವರ ಮನಸ್ಸು ಯೋಚಿಸುವುದು ಹಿಂಸೆಯನ್ನು, ಅವರ ತುಟಿ ಪ್ರಸ್ತಾಪಿಸುವುದು ಹಾನಿಯನ್ನು.


ಸ್ವಾಮಿ ಜನರ ನಾಯಕರನ್ನೂ ಅಧಿಪತಿಗಳನ್ನೂ ನ್ಯಾಯವಿಚಾರಣೆಗೆ ಗುರಿಪಡಿಸುವರು. “ನೀವು ದ್ರಾಕ್ಷಾತೋಟವನ್ನು ಕಬಳಿಸಿದ್ದೀರಿ. ಬಡವರಿಂದ ಕೊಳ್ಳೆಹೊಡೆದದ್ದನ್ನು ಮನೆಗಳಲ್ಲಿ ತುಂಬಿಸಿಕೊಂಡಿದ್ದೀರಿ.


ನೀವು ನನ್ನ ಜನರನ್ನು ನಸುಕಿಬಿಟ್ಟಿದ್ದೀರಲ್ಲವೇ? ಬಡವರನ್ನು ಹಿಸುಕಿಬಿಟ್ಟಿದ್ದೀರಲ್ಲವೇ?” ಎಂದು ಸೇನಾಧೀಶ್ವರ ಸರ್ವೇಶ್ವರಸ್ವಾಮಿ ವಾದಿಸುತ್ತಾರೆ.


ಅಂತೆಯೇ, ರಾಜಧಾನಿಯಾದ ಸಮಾರ್ಯಕ್ಕಿಂತ ಇಸ್ರಯೇಲ್ ಹೆಚ್ಚಲ್ಲ. ರಾಜನಾದ ಪೆಕಹನಿಗಿಂತ ಸಮಾರ್ಯ ಹೆಚ್ಚಲ್ಲ. ನಿಮ್ಮ ವಿಶ್ವಾಸ ಸ್ಥಿರವಿಲ್ಲದಿದ್ದರೆ, ನಿಮಗೆ ಸ್ಥಿರತೆ ಇರುವುದಿಲ್ಲ.”


“ಈ ಜನರು ಸುಲಲಿತವಾಗಿ ಹರಿಯುವ ಸಿಲೋವದ ನೀರನ್ನು ಅಲ್ಲಗಳೆದು, ಅರಸನಾದ ರೆಚೀನ ಹಾಗೂ ಪೆಕಹ ಇವರುಗಳನ್ನು ನೆಚ್ಚಿಕೊಂಡು ನಲಿಯುತ್ತಿದ್ದಾರೆ.


ಇಗೋ, ಸರ್ವೇಶ್ವರ ಜಗದ ಜನಕ್ಕೆ ಅವರವರ ಪಾಪದ ಫಲವನ್ನು ಉಣಿಸಲು ತಮ್ಮ ನಿವಾಸದಿಂದ ಹೊರಟಿರುವರು. ಭೂಮಿ ತನ್ನಲ್ಲಿ ಇಂಗಿದ ರಕ್ತವನ್ನು ಬೆಳಕಿಗೆ ತರುವುದು; ಭೂನಿವಾಸಿಗಳಲ್ಲಿ ಹತರಾದವರನ್ನು ಇನ್ನು ಮರೆಮಾಚದು.


ನ್ಯಾಯಸ್ಥಾನದಲ್ಲಿ ನ್ಯಾಯಾನುಸಾರ ವಾದಿಸುವವನು ಯಾರೂ ಇಲ್ಲ; ಸತ್ಯಾನುಸಾರ ತೀರ್ಪುಕೊಡುವವನು ಯಾರೂ ಇಲ್ಲ; ನೀವು ಶೂನ್ಯವಾದುದ್ದನ್ನೇ ನಂಬುತ್ತೀರಿ, ಅಬದ್ಧವಾದುದನ್ನೇ ಆಡುತ್ತೀರಿ, ಕೇಡನ್ನು ಬಸಿರಿಸಿ ಅಕ್ರಮವನ್ನು ಹೆರುತ್ತೀರಿ.


ಹೌದು, ನಿಮಗೆ ತಪ್ಪುಮಾಡಿ ನಿಮ್ಮನ್ನು ಅಲ್ಲಗಳೆದಿದ್ದೇವೆ. ನಮ್ಮ ದೇವರಾದ ನಿಮ್ಮನ್ನು ಹಿಂಬಾಲಿಸದೆ ಹಿಂದಿರುಗಿದ್ದೇವೆ; ಹಿಂಸಾಚಾರವನ್ನೂ ದಂಗೆ ಏಳುವುದನ್ನೂ ಪ್ರಚೋದಿಸಿದ್ದೇವೆ. ನಮ್ಮ ಅಂತರಾಲೋಚನೆಗಳು ಹುಸಿ; ನಮ್ಮ ಬಾಯಿಮಾತು ಸುಳ್ಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು