Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 30:16 - ಕನ್ನಡ ಸತ್ಯವೇದವು C.L. Bible (BSI)

16 ಬದಲಿಗೆ, “ಬೇಡ ಬೇಡ, ನಾವು ಕುದುರೆಗಳ ಮೇಲೆ ಓಡಿಹೋಗುತ್ತೇವೆ,” ಎಂದುಕೊಂಡಿರಿ. ಅಂತೆಯೇ ಓಡಿಹೋಗುವಿರಿ.” ನಾವು ದೌಡೋಡುವ ಕುದುರೆಗಳ ಮೇಲೆ ಸವಾರಿಮಾಡುತ್ತೇವೆ,” ಎಂದುಕೊಂಡಿರಿ. ಅಂತೆಯೇ ದೌಡೋಡುವವರೇ ನಿಮ್ಮನ್ನು ಅಟ್ಟಿಕೊಂಡುಬರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ನೀವು, ‘ಬೇಡವೇ ಬೇಡ, ಕುದುರೆಗಳ ಮೇಲೆ ಓಡುವೆವು’ ಎಂದುಕೊಂಡಿದ್ದರಿಂದ ನೀವು ಓಡಿಯೇ ಹೋಗುವಿರಿ, ನೀವು, ‘ವೇಗವಾಗಿ ಸವಾರಿ ಮಾಡುವೆವು’ ಎಂದುಕೊಂಡಿದ್ದರಿಂದ ವೇಗಿಗಳೇ ನಿಮ್ಮನ್ನು ಅಟ್ಟಿಬಿಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ನೀವು - ಬೇಡವೇ ಬೇಡ, ಕುದುರೆಗಳ ಮೇಲೆ ಓಡುವೆವು ಎಂದುಕೊಂಡದರಿಂದ ಓಡೇ ಹೋಗುವಿರಿ; ನೀವು - ವೇಗವಾಗಿ ಸವಾರಿಮಾಡುವೆವು ಎಂದುಕೊಂಡದರಿಂದ ವೇಗಿಗಳೇ ನಿಮ್ಮನ್ನು ಅಟ್ಟಿ ಬಿಡುವರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ನೀವು, “ನಮಗೆ ಸಹಾಯ ಬೇಡ. ಓಡಿಹೋಗಲು ಕುದುರೆಗಳು ಬೇಕು” ಎಂದು ಹೇಳುವಿರಿ. ಅದು ಸರಿಯಾದ ಮಾತು. ನೀವು ಕುದುರೆಗಳ ಮೂಲಕವೇ ಓಡುವಿರಿ. ಆದರೆ ಶತ್ರುಗಳು ನಿಮ್ಮನ್ನು ಹಿಂದಟ್ಟುವರು. ಅವರು ನಿಮ್ಮ ಕುದುರೆಗಳಿಗಿಂತ ವೇಗಶಾಲಿಗಳಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಆದರೆ ನೀವು, ‘ಬೇಡವೇ ಬೇಡ. ಏಕೆಂದರೆ ನಾವು ಕುದುರೆಗಳ ಮೇಲೆ ಓಡುವೆವು,’ ಎಂದುಕೊಂಡಿದ್ದರಿಂದ ನೀವು ಓಡಿಹೋಗುವಿರಿ, ನಾವು ವೇಗವಾಗಿ ಸವಾರಿ ಮಾಡುವೆವು, ಎಂದುಕೊಂಡಿದ್ದರಿಂದ ಆ ವೇಗಿಗಳೇ ನಿಮ್ಮನ್ನು ಅಟ್ಟಿಬಿಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 30:16
20 ತಿಳಿವುಗಳ ಹೋಲಿಕೆ  

ಇಸ್ರಯೇಲರ ಪರಮಪಾವನ ಸ್ವಾಮಿಯನ್ನು ಆಶ್ರಯಿಸದೆ, ಸಹಾಯಕ್ಕಾಗಿ ಈಜಿಪ್ಟಿಗೆ ತೆರಳುವವರಿಗೆ ಧಿಕ್ಕಾರ ! ಅವರಿಗೆ ಬೇಕು ಆ ನಾಡಿನ ಅಶ್ವಬಲ, ರಥಗಳ ಸಂಖ್ಯಾಬಲ, ಸವಾರರ ಶೌರ್ಯ.


ಈಜಿಪ್ಟಿನವರು ಕೇವಲ ಮನುಷ್ಯರೇ ಹೊರತು ದೇವರಲ್ಲ. ಅವರ ಅಶ್ವಗಳು ಮೂಳೆಮಾಂಸವೇ ಹೊರತು ಆಧ್ಯಾತ್ಮಿಕ ದಿವ್ಯಶಕ್ತಿಯಲ್ಲ. ಸರ್ವೇಶ್ವರ ಕೈಯೆತ್ತುವಾಗ ಅದಕ್ಕೆ ವಿರುದ್ಧ ಸಹಾಯ ಮಾಡಿದ ಅವನು ಮುಗ್ಗರಿಸುವನು. ಆ ಸಹಾಯ ಪಡೆದ ಅವನು ಬಿದ್ದುಹೋಗುವನು. ಎಲ್ಲರೂ ಒಟ್ಟಿಗೆ ಅಳಿದುಹೋಗುವರು.


“ಅವರ ಕುದುರೆಗಳು ಚಿರತೆಗಳಿಗಿಂತ ಬಿರುಸು; ಹಸಿದ ತೋಳಗಳಿಗಿಂತ ಚುರುಕು. ಅವರ ರಾಹುತರು ರಭಸದಿಂದ ಹಾರಿಬರುವರು. ಬೇಟೆಯನ್ನು ಕಬಳಿಸಲು ಕಾತರದಿಂದ ಹಾರುವ ರಣಹದ್ದಿನಂತೆ ದೂರದಿಂದ ಧಾವಿಸಿಬರುವರು.


ಲಾಕೀಷಿನ ನಿವಾಸಿಗಳೇ, ನಿಮ್ಮ ಕುದುರೆಗಳನ್ನು ರಥಕ್ಕೆ ಹೂಡಿರಿ. ನಿಮ್ಮ ಊರೇ ಸಿಯೋನ್ ನಗರದ ಪಾಪಕ್ಕೆ ಮೂಲ ಕಾರಣ. ಹೌದು, ಇಸ್ರಯೇಲಿನ ದ್ರೋಹಗಳು ನಿಮ್ಮಲ್ಲಿಯೇ ಕಾಣಿಸಿಕೊಂಡವು.


ಆಗ ಸರ್ವೇಶ್ವರಸ್ವಾಮಿ ಬಲಿಪೀಠದ ಪಕ್ಕದಲ್ಲಿ ನಿಂತಿರುವುದನ್ನು ಕಂಡೆನು. ಅವರು ನನಗೆ ಹೀಗೆಂದು ಅಪ್ಪಣೆಮಾಡಿದರು: “ಹೊಸ್ತಿಲುಗಳು ಕದಲುವಂತೆ ಕಂಬಗಳ ಬೋದಿಗೆಗೆ ಬಲವಾಗಿ ಹೊಡೆ. ಅವು ಕುಸಿದು ಎಲ್ಲರ ತಲೆಯ ಮೇಲೆ ಬೀಳಲಿ. ಅಳಿದುಳಿದವರನ್ನು ಖಡ್ಗಕ್ಕೆ ತುತ್ತಾಗಿಸುವೆನು. ಅವರಲ್ಲಿ ಯಾರೂ ಓಡಿಹೋಗರು; ಯಾರೂ ತಪ್ಪಿಸಿಕೊಳ್ಳರು.


ಹದ್ದುಗಳ ವೇಗದಿಂದ ಹಿಂದಟ್ಟಿಬಂದರು ನಮ್ಮನ್ನು ಬೆನ್ನಟ್ಟಿ ಬೆಟ್ಟಗಳನ್ನೇರಿದರು ಅರಣ್ಯಗಳಲ್ಲಿ ನಮಗಾಗಿ ಹೊಂಚುಹಾಕಿದರು.


ಒಳಗಿದ್ದ ಎಲ್ಲ ಸೈನಿಕರು ಅದೇ ರಾತ್ರಿ ಅರಸನ ತೋಟದ ಬಳಿಯಿದ್ದ ಬಾಗಿಲಿನ ಮೂಲಕ ನಗರದಿಂದ ಓಡಿಹೋದರು. ಆ ಬಾಗಿಲು ಎರಡು ಗೋಡೆಗಳ ಮಧ್ಯೆಯಿತ್ತು. ಅವರು ಅರಾಬಾ ಎಂಬ ಕಣಿವೆ ಪ್ರದೇಶದ ಮಾರ್ಗವಾಗಿ ಪಲಾಯನ ಮಾಡಿದರು.


ಮೇಘಗಳೋಪಾದಿಯಲ್ಲಿ ಶತ್ರು ಬರುತ್ತಿರುವುದನ್ನು ನೋಡು. ಅವನ ರಥಗಳು ಬಿರುಗಾಳಿಯಂತೆ ! ಅವನ ಕುದುರೆಗಳು ರಣಹದ್ದುಗಳಂತೆ ! ಅಯ್ಯೋ ನಮಗೆ ಕೇಡು, ಇನ್ನು ನಮ್ಮ ಗತಿ ಮುಗಿಯಿತು !


ಅಶ್ವಬಲದಲಿ ಆತನಿಗೆ ಇಷ್ಟವಿಲ್ಲ I ಶೂರನ ಶಕ್ತಿಯನವನು ಮೆಚ್ಚುವುದಿಲ್ಲ II


ಪ್ರಾಣರಕ್ಷಣೆಗೆ ಸಾಲದು ಅಶ್ವದಳ I ಆತ್ಮರಕ್ಷಣೆಗೆ ಬಾರದು ಅಶ್ವಬಲ II


ನಿಮಗೆ ತಿಳಿಯದ ಭಾಷೆಯನ್ನಾಡುವ ಒಂದು ಜನಾಂಗ, ರಣಹದ್ದು ಹೇಗೆ ದೂರದಿಂದ ಹಾರಿಬರುವುದೊ ಹಾಗೆಯೇ ದೂರದಿಂದ ನಿಮ್ಮ ಮೇಲೆ ಬರುವಂತೆ ಮಾಡುವರು.


ಶತ್ರುಗಳಿಂದ ನೀವುಪರಾಜಯವನ್ನು ಹೊಂದುವಂತೆ ಸರ್ವೇಶ್ವರ ಮಾಡುವರು; ನೀವು ಒಂದೇ ದಾರಿಯಿಂದ ಅವರ ಮೇಲೆ ದಾಳಿಮಾಡಲು ಹೋಗಿ ಏಳು ದಾರಿ ಹಿಡಿದು ಓಡಿಹೋಗುವಿರಿ. ಜಗದ ರಾಜ್ಯಗಳೆಲ್ಲವೂ ಇದನ್ನು ಕಂಡು ಬೆರಗಾಗುವುವು.


ಬಾಬಿಲೋನಿಯದ ಸೈನಿಕರು ಅವನನ್ನು ಹಿಂದಟ್ಟಿ ಜೆರಿಕೋವಿನ ಬಯಲಿನಲ್ಲಿ ಹಿಡಿದರು. ಅಷ್ಟರಲ್ಲಿ ಅವನ ಸೈನಿಕರೆಲ್ಲರು ಅವನನ್ನು ಬಿಟ್ಟು ಚದರಿಹೋಗಿದ್ದರು.


ನಾಡು ಬೆಳ್ಳಿಬಂಗಾರದಿಂದ ತುಂಬಿಹೋಗಿದೆ. ಜನರ ನಿಧಿನಿಕ್ಷೇಪಗಳಿಗೆ ಮಿತಿಯಿಲ್ಲದಂತಿದೆ. ಎಲ್ಲಾ ಕಡೆ ಅಶ್ವಬಲ ಯಥೇಚ್ಛವಾಗಿದೆ. ರಥಗಳು ಅಪಾರವಾಗಿವೆ.


ಇವರನ್ನು ನೋಡಿ, ಜುದೇಯದ ಅರಸ ಚಿದ್ಕೀಯನು ಮತ್ತು ಸಮಸ್ತ ಸೈನಿಕರು ಅದೇ ರಾತ್ರಿಯಲ್ಲಿ ಹೊರಟು, ಅರಸನ ಉದ್ಯಾನ ಮಾರ್ಗವಾಗಿ ಎರಡು ಗೋಡೆಗಳ ನಡುವಣ ಬಾಗಿಲಿನಿಂದ ನಗರವನ್ನು ಬಿಟ್ಟು, ಅರಾಬಾ ಎಂಬ ಕಣಿವೆ ಪ್ರದೇಶದ ಕಡೆಗೆ ಪಲಾಯನ ಮಾಡಿದರು.


“ವೇಗಶಾಲಿಗಳು ಓಡಿಹೋಗಲಾರರು ಬಲಿಷ್ಟರು ತಪ್ಪಿಸಿಕೊಳ್ಳಲಾರರು. ಉತ್ತರದಲ್ಲಿ, ಯೂಫ್ರೆಟಿಸ್ ನದಿಯ ಹತ್ತಿರದಲ್ಲಿ, ಎಡವಿಬಿದ್ದಿರುವರು.


ಬಲವಿದೆಯೆಂದು ಅದರಲಿ ನಂಬಿಕೆಯಿಡುವೆಯಾ? ಬಲಿಷ್ಠಕಾರ್ಯಗಳನು ಅದಕ್ಕೆ ಒಪ್ಪಿಸಿಬಿಡುವೆಯಾ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು