Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 30:19 - ಕನ್ನಡ ಸತ್ಯವೇದವು C.L. Bible (BSI)

19 ಜೆರುಸಲೇಮಿನಲ್ಲಿ ವಾಸಿಸುವ ಸಿಯೋನಿನ ಜನರೇ, ನೀವಿನ್ನು ಅಳಬೇಕಾಗಿಲ್ಲ. ನಿಮ್ಮ ಕೂಗನ್ನು ಕೇಳಿದ್ದೇ, ಸರ್ವೇಶ್ವರ ನಿಮಗೆ ಕೃಪೆತೋರಿಸುವರು. ನಿಮ್ಮ ಸ್ವರವನ್ನು ಕೇಳಿದಾಕ್ಷಣ ಸದುತ್ತರವನ್ನು ದಯಪಾಲಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಯೆರೂಸಲೇಮಿನಲ್ಲಿ ವಾಸಿಸುವ ಚೀಯೋನಿನ ಜನರೇ, ನೀವು ಇನ್ನು ಅಳುವುದೇ ಇಲ್ಲ; ನೀವು ಕೂಗಿ ದುಃಖಿಸಿದ ಶಬ್ದವನ್ನು ಆತನು ಕೇಳಿ, ನಿಮಗೆ ಕೃಪೆ ತೋರಿಸೇ ತೋರಿಸುವನು; ಕೇಳಿದ ಕೂಡಲೆ ನಿಮಗೆ ಸದುತ್ತರವನ್ನು ದಯಪಾಲಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಯೆರೂಸಲೇವಿುನಲ್ಲಿ ವಾಸಿಸುವ ಚೀಯೋನಿನ ಜನರೇ, ನೀವು ಇನ್ನು ಅಳುವದೇ ಇಲ್ಲ; ನೀವು ಕೂಗಿಕೊಂಡ ಶಬ್ದವನ್ನು ಆತನು ಕೇಳಿ ನಿಮಗೆ ಕೃಪೆತೋರಿಸೇ ತೋರಿಸುವನು; ಕೇಳಿದ ಕೂಡಲೆ ನಿಮಗೆ ಸದುತ್ತರವನ್ನು ದಯಪಾಲಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಚೀಯೋನ್ ಪರ್ವತದಲ್ಲಿರುವ ಜೆರುಸಲೇಮಿನಲ್ಲಿ ಯೆಹೋವನ ಜನರು ವಾಸಿಸುವರು. ನೀವು ಇನ್ನು ಮೇಲೆ ಅಳುವದಿಲ್ಲ. ಯೆಹೋವನು ನಿಮ್ಮ ಅಳುವಿಕೆಯನ್ನು ನೋಡಿ ನಿಮ್ಮನ್ನು ಆದರಿಸುವನು. ಆತನು ನಿಮ್ಮ ಮೊರೆಯನ್ನು ಕೇಳಿ ನಿಮಗೆ ಸಹಾಯಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಏಕೆಂದರೆ, ಯೆರೂಸಲೇಮಿನಲ್ಲಿ ವಾಸಿಸುವ ಚೀಯೋನಿನ ಜನರೇ, ನೀವು ಇನ್ನು ಅಳಬೇಕಾಗಿಲ್ಲ. ನೀವು ಕೂಗಿ ದುಃಖಿಸಿದ ಶಬ್ದವನ್ನು ದೇವರು ಕೇಳಿ ನಿಮಗೆ ಕೃಪೆ ತೋರಿಸೇ ತೋರಿಸುವರು. ದೇವರು ನಿಮ್ಮ ಸ್ವರವನ್ನು ಕೇಳಿದ ಕೂಡಲೇ ಸದುತ್ತರವನ್ನು ದಯಪಾಲಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 30:19
42 ತಿಳಿವುಗಳ ಹೋಲಿಕೆ  

ನಿನ್ನ ಸೂರ್ಯನು ಇನ್ನು ತೊಲಗನು. ನಿನ್ನ ಚಂದ್ರನು ಬಿಟ್ಟು ತೊಲಗನು. ಸರ್ವೇಶ್ವರನೇ ನಿನಗೆ ನಿತ್ಯಜ್ಯೋತಿ ನಿನ್ನ ದುಃಖ ದಿನಗಳಿಗಿದೆ ಸಮಾಪ್ತಿ.


ಅವರು ಮೊರೆಯಿಡುವುದಕ್ಕೆ ಮುಂಚೆಯೇ ನಾ ಕಿವಿಗೊಡುವೆನು; ಅವರು ಪ್ರಾರ್ಥಿಸುವಾಗಲೇ ನಾನು ಸದುತ್ತರ ನೀಡುವೆನು.


ಕಷ್ಟದಲಿ ಮೊರೆಯಿಡೆ, ನೆರವಾಗುವೆ I ಆಗ ನೀ ನನ್ನನು ಕೊಂಡಾಡುವೆ II


ಆಗ ನೀವು ಪ್ರಾರ್ಥಿಸಿದರೆ, ಆ ಸ್ವಾಮಿ ನಿಮಗೆ ಉತ್ತರಿಸುವರು; ಮೊರೆಯಿಟ್ಟು ಕರೆದರೆ ‘ಇಗೋ ಆಲಿಸುತ್ತಿದ್ದೇನೆ’ ಎನ್ನುವರು. ನೀವು ದಬ್ಬಾಳಿಕೆ ನಡೆಸುವುದನ್ನೂ ಇತರರನ್ನು ಜರೆಯುವುದನ್ನೂ ಕೇಡನ್ನು ನುಡಿಯುವುದನ್ನೂ ನಿಮ್ಮ ನಡುವೆಯಿಂದ ತೊಲಗಿಸಿದರೆ


ನಿಂತಿಹನು ಕುರಿಮರಿಯಾದಾತನು ಸಿಂಹಾಸನದ ನಡುವೆ ಕಾಯುವನು ಅವರುಗಳನು ಕುರುಬನಂತೆ ನಡೆಸುವನು ಅವರನು ಜೀವಜಲದ ಒರತೆಗಳ ಬಳಿಗೆ ದೇವನೊರಸುವನು ಅವರ ಕಂಬನಿಗಳನು ಬಿಡದೆ', “ ಎಂದು ನನಗೆ ತಿಳಿಸಿದನು.


ಈಗ ಹಸಿದಿರುವವರೇ, ನೀವು ಭಾಗ್ಯವಂತರು! ನಿಮಗೆ ಸಂತೃಪ್ತಿಯಾಗುವುದು. ಈಗ ಅತ್ತು ಗೋಳಾಡುವವರೇ, ನೀವು ಭಾಗ್ಯವಂತರು! ನೀವು ನಕ್ಕುನಲಿದಾಡುವಿರಿ!


ಮರಣವನ್ನು ಶಾಶ್ವತವಾಗಿ ನಿರ್ನಾಮಮಾಡುವರು. ಸರ್ವೇಶ್ವರ ಸ್ವಾಮಿ ಎಲ್ಲರ ಕಣ್ಣೀರನ್ನು ಒರೆಸಿಬಿಡುವರು. ತಮ್ಮ ಪ್ರಜೆಗಾದ ಅವಮಾನವನ್ನು ಜಗದಿಂದಲೇ ತೊಲಗಿಸಿಬಿಡುವರು. ಸರ್ವೇಶ್ವರ ಸ್ವಾಮಿಯೇ ಇಂತೆಂದು ನುಡಿದಿದ್ದಾರೆ.


“ನನ್ನನ್ನು ಬೇಡಿಕೊ, ನಾನು ನಿನಗೆ ಸದುತ್ತರವನ್ನು ದಯಪಾಲಿಸುವೆನು. ನಿನಗೆ ತಿಳಿಯದ ಮಹತ್ತಾದ ಗೂಢಾರ್ಥಗಳನ್ನು ಗೋಚರಪಡಿಸುವೆನು.


ಯಕೋಬನಿಂದ ಒಂದು ಸಂತಾನವನ್ನು ಉತ್ಪನ್ನಮಾಡುವೆನು; ಯೆಹೂದ ವಂಶದಿಂದ, ನನ್ನ ಪರ್ವತಗಳ ಸೊತ್ತಿಗೆ ಹಕ್ಕುಬಾಧ್ಯತೆಯುಳ್ಳ ಒಂದು ಸಂತತಿಯನ್ನು ಬರಮಾಡುವೆನು. ನನ್ನಿಂದ ಆಯ್ಕೆಯಾದವರು ಆ ಸೊತ್ತನ್ನು ಅನುಭವಿಸುವರು, ನನ್ನ ಭಕ್ತಾದಿಗಳು ಅಲ್ಲಿ ವಾಸಮಾಡುವರು.


ಅವರು ಬಂದು ಹಾಡುವರು ಸಿಯೋನ್ ಶಿಖರದಲ್ಲಿ ಬರುವರು ಪ್ರವಾಹ ಪ್ರವಾಹವಾಗಿ ಧಾನ್ಯ, ದ್ರಾಕ್ಷಾರಸ, ಎಣ್ಣೆ, ಕುರಿ, ಕುರಿಮರಿ, ಸರ್ವೇಶ್ವರನ ಈ ವರದಾನಗಳನ್ನು ಅನುಭವಿಸಲಿಕ್ಕಾಗಿ. ಹದವಾಗಿ ನೀರುಹಾಯಿಸಿದ ಉದ್ಯಾನವನದಂತೆ ಅವರ ಜೀವನ ಇನ್ನು ಅವರಿಗಿರದು ವ್ಯಸನ.


ಆ ಸುರುಳಿಯನ್ನು ಬಿಚ್ಚಲೂ ನೋಡಲೂ ಯೋಗ್ಯನು ಒಬ್ಬನು ಇಲ್ಲವಲ್ಲ ಎಂದು ನಾನು ಬಹುವಾಗಿ ದುಃಖಿಸಿದೆ.


ನಮ್ಮಲ್ಲಿ ಕಾರ್ಯಸಾಧಿಸುವ ಹಾಗೂ ನಮ್ಮ ಆಶೆ-ಆಕಾಂಕ್ಷೆಗಿಂತಲೂ ಬೇಡಿಕೆ-ಕೋರಿಕೆಗಿಂತಲೂ ಅಧಿಕವಾದುದನ್ನು ಮಾಡಲು ದೇವರು ಶಕ್ತರು. ಅವರಿಗೆ ಧರ್ಮಸಭೆಯಲ್ಲೂ ಕ್ರಿಸ್ತಯೇಸುವಿನಲ್ಲೂ ಯುಗಯುಗಾಂತರಕ್ಕೂ ತಲತಲಾಂತರಕ್ಕೂ ಮಹಿಮೆ ಸಲ್ಲಲಿ! ಆಮೆನ್.


ಅನಂತರ ಇಸ್ರಯೇಲ್ ಜನಾಂಗವೆಲ್ಲವೂ ಜೀವೋದ್ಧಾರವನ್ನು ಹೊಂದುವುದು. ಇದಕ್ಕೆ ಆಧಾರವಾಗಿ ಪವಿತ್ರಗ್ರಂಥದಲ್ಲಿ ಹೀಗೆ ಬರೆಯಲಾಗಿದೆ: “ಲೋಕೋದ್ಧಾರಕನು ಬರುವನು ಸಿಯೋನಿನಿಂದ; ಅಧರ್ಮತೆಯನು ನೀಗಿಸುವನು ಯಕೋಬವಂಶದಿಂದ.


ನೀನೀಗ ರೋದಿಸುವುದೇಕೆ? ಪ್ರಸವವೇದನೆ ಪಡುವವಳಂತೆ ನರಳುವುದೇಕೆ? ನಿನಗೆ ರಾಜನಿಲ್ಲವೇ? ನಿನ್ನ ಸಲಹೆಗಾರ ಸತ್ತುಹೋದನೇ?


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - “ನಾನು ಇನ್ನೊಂದು ವಿಷಯದಲ್ಲಿ ಇಸ್ರಯೇಲ್ ವಂಶದವರ ವಿಜ್ಞಾಪನೆಯನ್ನು ಆಲಿಸಿ ನೆರವೇರಿಸುವೆನು. ಅದೇನೆಂದರೆ, ಅವರ ಜನಸಂಖ್ಯೆಯನ್ನು ಹಿಂಡಿನಂತೆ ಹೆಚ್ಚಿಸುವೆನು.


“ಇಗೋ, ಬಾಬಿಲೋನಿನಿಂದ ತಪ್ಪಿಸಿಕೊಂಡು ಓಡಿಹೋಗುವವರ ಶಬ್ದ! ನಮ್ಮ ದೇವರಾದ ಸರ್ವೇಶ್ವರನು ತನ್ನ ಆಲಯವನ್ನುನಾಶಮಾಡಿದವರಿಗೆ ಮುಯ್ಯಿತೀರಿಸಿದ್ದಾರೆ ಎಂಬ ಸಮಾಚಾರವನ್ನು ಸಿಯೋನಿನಲ್ಲಿ ಸಾರಲು ಧಾವಿಸುತ್ತಿದ್ದಾರೆ ಆ ಜನ.


ಹೌದು, ದಿನ ಬರುವುದು. ಆಗ ಕಾವಲುಗಾರರು ಎಫ್ರಯಿಮಿನ ಗುಡ್ಡಗಳ ಮೇಲೆ ನಿಂತು, ‘ಎದ್ದೇಳಿ, ಹೋಗೋಣ. ಬನ್ನಿ ಸಿಯೋನಿಗೆ, ನಮ್ಮ ದೇವರಾದ ಸರ್ವೇಶ್ವರನ ಸನ್ನಿಧಾನಕ್ಕೆ’ ಎಂದು ಕೂಗಿ ಕರೆ ನೀಡುವರು.”


ಹೌದು, ಸರ್ವೇಶ್ವರ ಹೀಗೆನ್ನುತ್ತಾರೆ: “ನಿನ್ನ ಗಾಯಗಳು ಗುಣಹೊಂದವು ನಿನ್ನ ಹುಣ್ಣನ್ನು ವಾಸಿಮಾಡಲಾಗದು.


ಹೀಗಿರಲು ಪ್ರಭುವಾದ ಸೇನಾಧೀಶ್ವರ ಸರ್ವೇಶ್ವರಸ್ವಾಮಿ ಹೇಳುವುದೇನೆಂದರೆ: “ಸಿಯೋನಿನಲ್ಲಿ ವಾಸಿಸುವ ನನ್ನ ಜನರೇ, ಈಜಿಪ್ಟಿನವರು ನಿಮಗೆ ಮಾಡಿದಂತೆ ಅಸ್ಸೀರಿಯದವರು ನಿಮ್ಮನ್ನು ಬಡಿಗೆಯಿಂದ ಹೊಡೆದು, ನಿಮಗೆ ವಿರುದ್ಧ ದೊಣ್ಣೆಯನ್ನು ಎತ್ತುವಾಗ ಅವರಿಗೆ ಹೆದರಬೇಡಿ;


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನಾಡಿನಲ್ಲಿ ಇಸ್ರಯೇಲ್ ವಂಶದವರೆಲ್ಲರೂ ನನ್ನ ಪರಿಶುದ್ಧ ಬೆಟ್ಟದಲ್ಲೇ, ಇಸ್ರಯೇಲಿನ ಪರ್ವತಾಗ್ರದಲ್ಲೇ, ನನ್ನನ್ನು ಪೂಜಿಸುವರು; ಅಲ್ಲೇ ಅವರಿಗೆ ಪ್ರಸನ್ನನಾಗುವೆನು, ಅಲ್ಲೇ ನಿಮ್ಮ ಕಾಣಿಕೆಗಳನ್ನೂ ಉತ್ತಮ ನೈವೇದ್ಯಗಳನ್ನೂ ಮೀಸಲಾದುದೆಲ್ಲವನ್ನೂ ಅಂಗೀಕರಿಸುವೆನು.


‘ಸರ್ವೇಶ್ವರ ನಮ್ಮ ಧಾರ್ಮಿಕತೆಯನ್ನು ವ್ಯಕ್ತಪಡಿಸಿದ್ದಾರೆ. ನಮ್ಮ ದೇವರಾದ ಸರ್ವೇಶ್ವರ ನಡೆಸಿದ ಮಹತ್ಕಾರ್ಯವನ್ನು ಸಿಯೋನಿನಲ್ಲಿ ಪ್ರಕಟಿಸೋಣ ಬನ್ನಿ’ ಎಂದು ಹೇಳುವರು.”


ಕಣ್ಣೀರಿಡುತ್ತಾ ಹೋದವರು ಹಿಂದಿರುಗಿ ಬರುವರು. ಪ್ರಾರ್ಥಿಸುತ್ತಾ ಅವರು ಮುನ್ನಡೆಯುವಂತೆ ಮಾಡುವೆನು ಎಡವಲಾಗದ ಸಮಮಾರ್ಗದಲ್ಲಿ ಅವರನ್ನು ನಡೆಸುವೆನು ತುಂಬಿದ ತೊರೆಯ ಬಳಿಗೆ ಬರಮಾಡುವೆನು.


ಬರಮಾಡುವೆನು ಮುಕ್ತಿಯನು ಹತ್ತಿರಕೆ ಅದಿನ್ನು ದೂರವಿರದು ನಿಮಗೆ. ತಡವಾಗದು ನಿಮಗೆ ನನ್ನ ರಕ್ಷಣೆ ಸಾಧಿಸುವೆನು ರಕ್ಷಣೆಯನ್ನು ಸಿಯೋನಿನಲೇ, ಬೀರುವೆನು ನನ್ನ ಮಹಿಮೆಯನ್ನು ಇಸ್ರಯೇಲ ಮೇಲೆ.”


ಹಿಂದಿರುಗುವರು ಸರ್ವೇಶ್ವರನಿಂದ ವಿಮೋಚನೆ ಪಡೆದವರು ಜಯಜಯಕಾರದೊಂದಿಗೆ ಸಿಯೋನನು ಸೇರುವರು. ನಿತ್ಯಾನಂದ ಸುಖವಿರುವುದು ಕಿರೀಟಪ್ರದವಾಗಿ ಸಿಗುವುದವರಿಗೆ ಹರ್ಷಾನಂದದ ಸವಿ ತೊಲಗುವುದು ದುಃಖದುಗುಡದ ಕಹಿ.


ನಾನು ಮಾಡುವ ಸೃಷ್ಟಿಕಾರ್ಯದಲ್ಲೇ ಸಂತೋಷಿಸಿ, ಎಂದೆಂದಿಗೂ ಆನಂದಿಸಿರಿ : ಹೌದು, ನಾನು ಜೆರುಸಲೇಮನ್ನು ಉಲ್ಲಾಸದ ನಿವಾಸವನ್ನಾಗಿಸುವೆನು; ಅದರ ಜನರನ್ನು ಹರ್ಷಭರಿತರನ್ನಾಗಿಸುವೆನು.


ಸರ್ವೇಶ್ವರಾ, ನಮಗೆ ಕೃಪೆತೋರಿ. ನಿಮಗಾಗಿ ಕಾದಿದ್ದೇವೆ. ದಿನದಿಂದ ದಿನಕ್ಕೆ ನಮಗೆ ಬೆಂಬಲವಾಗಿರಿ. ಆಪತ್ಕಾಲದಲ್ಲಿ ನಮಗೆ ರಕ್ಷಣೆ ನೀಡಿರಿ.


ದೀನದರಿದ್ರರು ನೀರಿಗಾಗಿ ಪರದಾಡುವಾಗ ಬಾಯಾರಿ ಅವರ ನಾಲಿಗೆ ಒಣಗಿಹೋದಾಗ ಪ್ರಸನ್ನನಾಗುವೆ ಸರ್ವೇಶ್ವರನಾದ ನಾನೇ. ಇಸ್ರಯೇಲಿನ ದೇವರಾದ ನಾನವರನ್ನು ಕೈಬಿಡುವೆನೆ?


ನಾನು ಕೂಡ ಜೆರುಸಲೇಮನ್ನು ನೋಡಿ ಆನಂದಿಸುವೆನು, ಅದರ ಜನರನ್ನು ದೃಷ್ಟಿಸಿ ಹರ್ಷಗೊಳ್ಳುವೆನು. ಇನ್ನು ಅಲ್ಲಿ ಅಳುವಾಗಲಿ, ಆಕ್ರೋಶವಾಗಲಿ ಕೇಳಿಬರದು.


ಸರ್ವೇಶ್ವರ ಹೀಗೆನ್ನುತ್ತಾರೆ: “ನಿಲ್ಲಿಸು ನಿನ್ನ ಗೋಳಾಟವನ್ನು ಒರಸು ನಿನ್ನ ಕಣ್ಗಳಿಂದ ನೀರನ್ನು. ನಿನ್ನ ಪ್ರಯಾಸ ಸಾರ್ಥಕವಾಗುವುದು ಶತ್ರುವಿನ ದೇಶದಿಂದ ನಿನ್ನ ಮಕ್ಕಳು ಹಿಂದಿರುಗುವರು. ಸರ್ವೇಶ್ವರನಾದ ನನ್ನ ನುಡಿ ಇದು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು