Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 31:4 - ಕನ್ನಡ ಸತ್ಯವೇದವು C.L. Bible (BSI)

4 ಸರ್ವೇಶ್ವರ ನನಗೆ ಹೀಗೆಂದು ಹೇಳಿದ್ದಾರೆ : “ಸಿಂಹವೋ ಪ್ರಾಯದ ಸಿಂಹವೋ ಬೇಟೆಯ ಮೇಲೆ ಬಿದ್ದು ಗುರುಗುಟ್ಟುತ್ತಿರುವಾಗ, ಆ ಕೂಗನ್ನು ಕೇಳಿ ಕುರುಬರನೇಕರು ಕೂಡಿಬಂದರೂ ಅದು ಅವರ ಕೂಗಾಟಕ್ಕೆ ಹೆದರದು, ಅವರ ಗದ್ದಲಕ್ಕೆ ಎದೆಗುಂದದು. ಅಂತೆಯೇ ಸೇನಾಧೀಶ್ವರ ಸರ್ವೇಶ್ವರ ಸ್ವಾಮಿ ಆದ ನಾನು ಯುದ್ಧಮಾಡಲು ಸಿಯೋನ್ ಶಿಖರದ ಮೇಲೆ ಇಳಿದು ಬರುವಾಗ ನನ್ನನ್ನು ಯಾರೂ ಹೆದರಿಸುವುದಿಲ್ಲ, ಎದೆಗುಂದಿಸುವಂತಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಯೆಹೋವನು ನನಗೆ ಹೀಗೆ ಹೇಳಿದ್ದಾನೆ, “ಸಿಂಹವು, ಪ್ರಾಯದ ಸಿಂಹವು, ಬೇಟೆಯ ಮೇಲೆ ಬಿದ್ದು ಗುರುಗುಟ್ಟುತ್ತಿರುವಾಗ ಕಾವಲುಗಾರನ ಕೂಗನ್ನು ಕೇಳಿ, ಕುರುಬರ ಗುಂಪು ಅದಕ್ಕೆ ವಿರುದ್ಧವಾಗಿ ಕೂಡಿಬಂದರೂ ಅದು ಅವರ ಕೂಗಾಟಕ್ಕೆ ಹೆದರದೆ, ಅವರ ಗದ್ದಲದಿಂದ ಹೇಗೆ ಧೈರ್ಯಗುಂದುವುದಿಲ್ಲವೋ ಹಾಗೆಯೇ ಸೇನಾಧೀಶ್ವರನಾದ ಯೆಹೋವನು ಯುದ್ಧಮಾಡಲು ಚೀಯೋನ್ ಪರ್ವತದ ಶಿಖರದ ಮೇಲೆ ಇಳಿಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಯೆಹೋವನು ನನಗೆ ಹೀಗೆ ಹೇಳಿದ್ದಾನೆ - ಸಿಂಹವು, ಪ್ರಾಯದ ಸಿಂಹವು, ಬೇಟೆಯ ಮೇಲೆ ಬಿದ್ದು ಗುರುಗುಟ್ಟುತ್ತಿರುವಾಗ ಕಾವಲುಗಾರನ ಕೂಗನ್ನು ಕೇಳಿ ಬಹುಮಂದಿ ಕುರುಬರು ಅದಕ್ಕೆ ವಿರುದ್ಧವಾಗಿ ಕೂಡಿ ಬಂದರೂ ಅದು ಅವರ ಕೂಗಾಟಕ್ಕೆ ಹೆದರದೆ ಅವರ ಗದ್ದಲದಿಂದ ಹೇಗೆ ಧೈರ್ಯಗುಂದುವದಿಲ್ಲವೋ ಹಾಗೆಯೇ ಸೇನಾಧೀಶ್ವರನಾದ ಯೆಹೋವನು ಯುದ್ಧಮಾಡಲು ಚೀಯೋನ್ ಪರ್ವತದ ಶಿಖರದ ಮೇಲೆ ಇಳಿಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಯೆಹೋವನು ನನಗೆ ಹೀಗೆ ಹೇಳಿದನು: “ಸಿಂಹವು ಅಥವಾ ಪ್ರಾಯದ ಸಿಂಹವು ಒಂದು ಪ್ರಾಣಿಯನ್ನು ಹಿಡಿದು ಕೊಂದಾಗ ಅದರ ಮೇಲೆ ನಿಂತು ಗರ್ಜಿಸುವದು. ಆ ಸಮಯದಲ್ಲಿ ಯಾವುದೂ ಆ ಸಿಂಹವನ್ನು ಹೆದರಿಸಲಾರದು. ಜನರು ಬಂದು ಗಟ್ಟಿಯಾಗಿ ಚೀರಿಕೊಂಡರೂ ಸಿಂಹಕ್ಕೆ ಹೆದರಿಕೆಯುಂಟಾಗದು; ದೊಡ್ಡ ಶಬ್ದ ಮಾಡಿದರೂ ಸಿಂಹವು ಓಡಿಹೋಗದು.” ಅದೇ ರೀತಿಯಲ್ಲಿ ಸರ್ವಶಕ್ತನಾದ ಯೆಹೋವನು ಚೀಯೋನ್ ಪರ್ವತಕ್ಕೆ ಬಂದು ಯುದ್ಧ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಯೆಹೋವ ದೇವರು ನನಗೆ ಹೀಗೆ ಹೇಳಿದ್ದಾನೆ: ಸಿಂಹವು, ಪ್ರಾಯದ ಸಿಂಹವು ಬೇಟೆಯ ಮೇಲೆ ಬಿದ್ದು ಗುರುಗುಟ್ಟುತ್ತಿರುವಾಗ, ಕಾವಲುಗಾರನ ಕೂಗನ್ನು ಕೇಳಿ, ಕುರುಬರ ಗುಂಪು ಅದಕ್ಕೆ ವಿರುದ್ಧವಾಗಿ ಕೂಡಿ ಬಂದರೂ, ಹೇಗೆ ಅವರ ಶಬ್ದಕ್ಕೆ ಭಯಪಡದೆ ಇಲ್ಲವೆ ಅವರ ಗದ್ದಲಕ್ಕೆ ಕುಂದಿಹೋಗದೆ ಇರುವುದೋ, ಹಾಗೆಯೇ ಸೇನಾಧೀಶ್ವರ ಯೆಹೋವ ದೇವರು ಚೀಯೋನ್ ಪರ್ವತಕ್ಕೋಸ್ಕರವೂ, ಅದರ ಗುಡ್ಡಕ್ಕೋಸ್ಕರವೂ ಯುದ್ಧಮಾಡಲು ಇಳಿದು ಬರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 31:4
21 ತಿಳಿವುಗಳ ಹೋಲಿಕೆ  

ಸಿಂಹದ ಗರ್ಜನೆಯನ್ನು ಕೇಳಿ ಹೆದರದಿರುವವರು ಯಾರು? ಸ್ವಾಮಿ ಸರ್ವೇಶ್ವರನ ನುಡಿಯನ್ನು ಕೇಳಿ ಪ್ರವಾದನೆಮಾಡದಿರುವವರು ಯಾರು?”


“ಶತ್ರುಗಳ ಕಡೆಗೆ ಸಿಂಹದಂತೆ ಗರ್ಜಿಸುವ ಸ್ವಾಮಿಯನ್ನು ಆ ಜನರು ಹಿಂಬಾಲಿಸುತ್ತಾರೆ. ಆತ ಆರ್ಭಟಿಸಲು ಅವರ ಮಕ್ಕಳು ನಡುನಡುಗುತ್ತಾ ಬರುತ್ತಾರೆ.


ನಾನೇ ಅದರ ಸುತ್ತಮುತ್ತಲು ಅಗ್ನಿ ಪ್ರಾಕಾರವಾಗಿ, ಅದರೊಳಗಿನ ವೈಭವವಾಗಿರುವೆನು. ಇದು ಸರ್ವೇಶ್ವರಸ್ವಾಮಿಯ ನುಡಿ,’ ಎಂದ.”


ಸರ್ವೇಶ್ವರ ಹೊರಟಿರುವನು ಶೂರನಂತೆ ರೌದ್ರದಿಂದಿರುವನು ಯುದ್ಧವೀರನಂತೆ ಆರ್ಭಟಿಸಿ ಗರ್ಜಿಸುವನು ರಣಕಹಳೆಯಂತೆ ಶತ್ರುಗಳ ಮೇಲೆ ಬೀಳುವನು ಪರಾಕ್ರಮಿಯಂತೆ.


ಅಂದು, ಸರ್ವೇಶ್ವರ ಜೆರುಸಲೇಮಿನ ನಿವಾಸಿಗಳನ್ನು ಕೋಟೆಯಂತೆ ಕಾಪಾಡುವರು. ಈ ಕಾರಣ, ಅವರಲ್ಲಿ ದುರ್ಬಲನು ದಾವೀದನಂತೆ ಬಲಾಢ್ಯನಾಗುವನು. ದಾವೀದನವಂಶ ದೇವದೂತರಂತೆ, ಹೌದು, ದೇವರಂತೆ, ಅವರಿಗೆ ಮುಂದಾಳಾಗುವುದು.


ಆಗ ಸಭಾಪ್ರಮುಖರಲ್ಲಿ ಒಬ್ಬರು ನನಗೆ, “ದುಃಖಿಸಬೇಡ, ಇಗೋ, ಯೂದಕುಲದ ಸಿಂಹವೂ ದಾವೀದನ ವಂಶಜರೂ ಆದ ಒಬ್ಬರು ಜಯಗಳಿಸಿದ್ದಾರೆ. ಅವರು ಆ ಏಳು ಮುದ್ರೆಗಳನ್ನು ಒಡೆದು ಈ ಸುರುಳಿಯನ್ನು ಬಿಚ್ಚಬಲ್ಲರು", ಎಂದು ಹೇಳಿದರು.


ಅನಂತರ ಪೂರ್ವಕಾಲದಲ್ಲಿ ನಡೆದಂತೆ, ಸರ್ವೇಶ್ವರ ಹೊರಟುಬಂದು ಆ ರಾಷ್ಟ್ರಗಳಿಗೆ ವಿರುದ್ಧವಾಗಿ ಪ್ರತಿಭಟಿಸುವರು.


ರಕ್ಷಿಸುವನು ಸೇನಾಧೀಶ್ವರ ಸರ್ವೇಶ್ವರ ತನ್ನ ಜನರನು ನಸುಕಿ ನಾಶಮಾಡುವರವರು ಕವಣೆಗಾರ ಶತ್ರುಗಳನು. ಭೋರ್ಗರೆಯುವರು ಕುಡಿದು ಅಮಲೇರಿದವರಂತೆ ಇರುವರು ತುಂಬಿ ತುಳುಕುವ ಬೋಗುಣಿಗಳಂತೆ ರಕ್ತತೋಯ್ದ ವೇದಿಯ ಮೂಲೆಮೂಲೆಗಳಂತೆ.


ಶತ್ರುಗಳು ಅತ್ತ ಕಾಲಿಡದಂತೆ ನನ್ನ ಆಲಯದ ಸುತ್ತಲು ಪಾಳೆಯಹಾಕಿ ಕಾವಲಿರುವೆನು. ಯಾವ ಬಾಧಕನೂ ನನ್ನ ಜನರ ಮೇಲೆ ಧಾಳಿಮಾಡದಂತೆ ನಾನೇ ಕಣ್ಣಿಟ್ಟು ನೋಡಿಕೊಳ್ಳುವೆನು.”


ಬಾಬಿಲೋನಿಯರಿಗೆ ನಿತ್ಯ ನೆಲೆಯಾದ ಗೋಮಾಳಕ್ಕೆ ಇಗೋ, ಜೋರ್ಡನ್ ದಟ್ಟಡವಿಯಿಂದ ಸಿಂಹದೋಪಾದಿ ನಾನು ಏರಿಬರುವೆನು. ಕ್ಷಣಮಾತ್ರದಲ್ಲಿ ಆ ಬಾಬಿಲೋನಿಯರನ್ನು ಅಲ್ಲಿಂದ ಓಡಿಸಿಬಿಡುವೆನು. ಅದನ್ನು ಪಾಲಿಸುವುದಕ್ಕೆ ನಾನು ಆರಿಸಿಕೊಂಡವನನ್ನೇ ನೇಮಿಸುವೆನು. ನನಗೆ ಸಮಾನನು ಯಾರು? ನ್ಯಾಯವಿಚಾರಣೆಗೆ ನನ್ನನ್ನು ಎಳೆಯಬಲ್ಲ ವ್ಯಕ್ತಿ ಯಾರು? ಮಂದೆಯನ್ನು ಕಾಯುವ ಯಾವನು ತಾನೆ ನನ್ನೆದುರಿಗೆ ನಿಲ್ಲಬಲ್ಲನು?


ಸಿಯೋನಿನ ನಿವಾಸಿಗಳೇ, ಹಾಡಿರಿ, ಮಾಡಿರಿ ಭಜನ ನಿಮ್ಮ ಮಧ್ಯೆಯಿರುವ ಆ ಘನವಂತನ ಇಸ್ರಯೇಲಿನಾ ಸ್ವಾಮಿ ಪರಮಪಾವನ.”


ಆದಕಾರಣ, ಒಡೆಯರಾದ ಸೇನಾಧೀಶ್ವರ ಸರ್ವೇಶ್ವರ ಅಸ್ಸೀರಿಯಾದ ಕೊಬ್ಬಿದ ಯೋಧರಿಗೆ ಕ್ಷಯರೋಗವನ್ನು ಬರಮಾಡುವರು. ಅವರ ದೇಹಕ್ಕೆ ಬೆಂಕಿಯಂತೆ ಉರಿಯುವ ಜ್ವರವನ್ನು ಉಂಟುಮಾಡುವರು.


ಅವನು , “ಜುದೇಯದ ಹಾಗು ಜೆರುಸಲೇಮಿನ ಎಲ್ಲ ಜನರೇ, ಅರಸ ಯೆಹೋಷಾಫಾಟನೇ, ಸರ್ವೇಶ್ವರ ಸ್ವಾಮಿ ಹೇಳುವುದನ್ನು ಕೇಳಿರಿ: ಈ ಮಹಾಸೈನ್ಯಸಮೂಹದ ನಿಮಿತ್ತ ಕಳವಳಗೊಳ್ಳಬೇಡಿ; ಹೆದರಬೇಡಿ. ಈ ಯುದ್ಧ ನಿಮ್ಮದಲ್ಲ, ದೇವರದೇ.


ಅವನು ಗಟ್ಟಿಯಾದ ಸ್ವರದಿಂದ ಕೂಗಿದನು. ಅದು ಸಿಂಹದ ಗರ್ಜನೆಯಂತಿತ್ತು. ಅವನು ಕೂಗಿದಾಗ ಏಳು ಗುಡುಗುಗಳು ಒಂದೊಂದಾಗಿ ಮಾರ್ದನಿಸಿದವು.


ಸರ್ವೇಶ್ವರ ಸ್ವಾಮಿಯೇ ನಿಮ್ಮ ಪರವಾಗಿ ಯುದ್ಧಮಾಡುವರು. ನೀವು ನೆಮ್ಮದಿಯಿಂದಿರಿ,” ಎಂದು ಹೇಳಿದನು.


ಸರ್ವೇಶ್ವರ ಅವರ ರಥಗಳ ಚಕ್ರಗಳನ್ನು ತೆಗೆದುಬಿಟ್ಟದ್ದರಿಂದ ಈಜಿಪ್ಟಿನವರು ಬಹುಕಷ್ಟದಿಂದ ಅವುಗಳನ್ನು ಸಾಗಿಸಿಕೊಂಡು ಹೋದರು. ಆಗ ಈಜಿಪ್ಟಿನವರು, “ನಾವು ಇಸ್ರಯೇಲರ ಮುಂದೆ ಗೆಲ್ಲಲಾರೆವು. ಓಡಿಹೋಗೋಣ ಬನ್ನಿ; ಸರ್ವೇಶ್ವರನು ಅವರ ಪರವಾಗಿ, ನಮಗೆ ವಿರುದ್ಧವಾಗಿ ಯುದ್ಧಮಾಡುತ್ತಿದ್ದಾನೆ,” ಎಂದುಕೊಂಡರು.


ಆಗ ಸರ್ವೇಶ್ವರ ತಮ್ಮ ಗಂಭೀರವಾದ ವಾಣಿಯನ್ನು ಕೇಳುವಂತೆ ಮಾಡುವರು. ತೀವ್ರಕೋಪ, ದಹಿಸುವ ಅಗ್ನಿಜ್ವಾಲೆ, ಸಿಡಿಯುವ ಮೋಡ, ಚಂಡಮಾರುತ, ಕಲ್ಮಳೆ - ಇವುಗಳಿಂದ ತಮ್ಮ ಶಿಕ್ಷಾಹಸ್ತವನ್ನು ಪ್ರದರ್ಶಿಸುವರು.


ಸರ್ವೇಶ್ವರ ಸ್ವಾಮಿ ವಿಧಿಸುವ ಪ್ರತಿಯೊಂದು ಪೆಟ್ಟು ತಾಳ ತಮ್ಮಟೆಯಂತೆ ಅವರ ಮೇಲೆ ಬೀಳುವುದು. ಸರ್ವೇಶ್ವರ ತಾವೇ ಅವರ ವಿರುದ್ಧವಾಗಿ ಕೈಬೀಸಿ ಯುದ್ಧಮಾಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು