Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 32:1 - ಕನ್ನಡ ಸತ್ಯವೇದವು C.L. Bible (BSI)

1 ಇಗೋ, ರಾಜನೊಬ್ಬನು ನೀತಿಗನುಸಾರ ರಾಜ್ಯವಾಳುವನು. ದೇಶಾಧಿಪತಿಗಳು ನ್ಯಾಯದಿಂದ ದೊರೆತನಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಇಗೋ, ಒಬ್ಬ ರಾಜನು ನೀತಿಗನುಸಾರವಾಗಿ ಆಳುವನು. ಅಧಿಪತಿಗಳು ನ್ಯಾಯದಿಂದ ದೊರೆತನ ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಇಗೋ, ಒಬ್ಬ ರಾಜನು ನೀತಿಗನುಸಾರವಾಗಿ ಆಳುವನು, ಅಧಿಪತಿಗಳು ನ್ಯಾಯದಿಂದ ದೊರೆತನ ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ನನ್ನ ಮಾತುಗಳನ್ನು ಕೇಳಿರಿ. ರಾಜ್ಯದಲ್ಲಿ ಧರ್ಮವು ನೆಲೆಗೊಳ್ಳುವಂತೆ ರಾಜನು ರಾಜ್ಯವಾಳಬೇಕು. ಅಧಿಕಾರಿಗಳು ನ್ಯಾಯದಿಂದ ಜನರನ್ನು ನಡೆಸಿಕೊಂಡು ಹೋಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಇಗೋ, ಒಬ್ಬ ರಾಜನು ನೀತಿಗನುಸಾರವಾಗಿ ಆಳುವನು. ಅಧಿಪತಿಗಳು ನ್ಯಾಯದಿಂದ ದೊರೆತನ ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 32:1
24 ತಿಳಿವುಗಳ ಹೋಲಿಕೆ  

ನಾನು ಈ ದೃಶ್ಯವನ್ನೂ ಕಂಡೆ: ಸ್ವರ್ಗವು ತೆರೆದಿತ್ತು. ಬಿಳಿಯ ಕುದುರೆಯೊಂದು ಕಾಣಿಸಿತು. ಅದರ ಮೇಲೆ ಒಬ್ಬನು ಕುಳಿತಿದ್ದನು. ನಂಬಿಕಸ್ಥನೆಂದೂ ಸತ್ಯವಂತನೆಂದೂ ಆತನ ಹೆಸರು; ಆತನು ನಿಷ್ಪಕ್ಷಪಾತದಿಂದ ನ್ಯಾಯತೀರ್ಪು ಕೊಡುವವನು; ನ್ಯಾಯಬದ್ಧವಾಗಿ ಯುದ್ಧಮಾಡುವವನು.


ಆ ಕಾಲದಲ್ಲಿ, ಆ ದಿನಗಳಲ್ಲಿ, ದಾವೀದನೆಂಬ ಮೂಲದಿಂದ ಸದ್ಧರ್ಮಿಯಾದ ಮೊಳಕೆಯೊಂದನ್ನು ಚಿಗುರಿಸುವೆನು. ಆತನು ನಾಡಿನಲ್ಲಿ ನ್ಯಾಯನೀತಿಯನ್ನು ನಿರ್ವಹಿಸುವನು.


ಇಸ್ರಯೇಲರ ದೇವನು, ಅವರಾಶಕ್ತನು, ಹೀಗೆಂದು ನನಗೆ ನುಡಿದನು


ಅವರು ಯಜ್ಞದ ಕುರಿಮರಿಯ ಮೇಲೆ ಯುದ್ಧಮಾಡುವರು. ಆದರೆ ಯಜ್ಞದ ಕುರಿಮರಿಗೆ ಜಯವಾಗುವುದು. ಆ ಕುರಿಮರಿಯು ಒಡೆಯರಿಗೆಲ್ಲಾ ಒಡೆಯನೂ ರಾಜಾಧಿರಾಜನೂ ಆಗಿರುವುದೇ ಇದಕ್ಕೆ ಕಾರಣ. ದೇವರ ಕರೆ ಹೊಂದಿದವರೂ ದೇವರು ಆಯ್ದುಕೊಂಡವರೂ ಆದ ಪ್ರಾಮಾಣಿಕ ಅನುಯಾಯಿಗಳು ಆ ಜಯದಲ್ಲಿ ಪಾಲುಗಾರರಾಗುವರು,” ಎಂದನು.


ಹೀಗೆ ಪಾಪವು ಮರಣದ ಮೂಲಕ ಆಳ್ವಿಕೆ ನಡೆಸಿದಂತೆ, ದೈವಾನುಗ್ರಹವು ನಮ್ಮ ಪ್ರಭು ಯೇಸುಕ್ರಿಸ್ತರ ಮುಖಾಂತರ ನಮ್ಮನ್ನು ದೇವರೊಡನೆ ಸತ್ಸಂಬಂಧದಲ್ಲಿರಿಸಿ, ಅಮರಜೀವದತ್ತ ಒಯ್ದು, ಆಳ್ವಿಕೆ ನಡೆಸುತ್ತದೆ.


ಸಂತೋಷಿಸಿರಿ, ಆನಂದಿಸಿರಿ, ಸಿಯೋನಿನ ನಿವಾಸಿಗಳೇ, ಹರ್ಷೋದ್ಗಾರ ಮಾಡಿರಿ, ಜೆರುಸಲೇಮಿನ ಜನಗಳೇ, ಇಗೋ, ಬರುತಿಹನು ನಿಮ್ಮ ಅರಸನು ನ್ಯಾಯವಂತನು, ಜಯಶೀಲನು ಆತನು ವಿನಮ್ರನು, ಹೇಸರಗತ್ತೆಯನ್ನೇರಿ ಸಾಗಿಬರುತಿಹನು.


ತದನಂತರ ಇಸ್ರಯೇಲಿನವರು ತಮ್ಮ ದೇವರಾದ ಸರ್ವೇಶ್ವರನನ್ನು ಮತ್ತು ಅರಸ ದಾವೀದನನ್ನು ಆಶ್ರಯಿಸುವರು. ಅಂತಿಮ ದಿನಗಳಲ್ಲಿ ಅವರು ಭಯಭಕ್ತಿಯುಳ್ಳವರಾಗಿ ಸರ್ವೇಶ್ವರಸ್ವಾಮಿಯನ್ನೂ ಅವರ ಕೃಪಾಶ್ರಯವನ್ನೂ ಮರೆಹೋಗುವರು.


ನನ್ನ ದಾಸ ದಾವೀದನು ಅವರಿಗೆ ರಾಜನಾಗಿರುವನು; ಅವರೆಲ್ಲರಿಗು ಒಬ್ಬನೇ ಪಾಲಕನಿರುವನು; ಅವರು ನನ್ನ ನಿಯಮಗಳನ್ನು ಅನುಸರಿಸಿ, ನನ್ನ ವಿಧಿಗಳನ್ನು ಕೈಕೊಂಡು ಆಚರಿಸುವರು.


ಅವರು ನ್ಯಾಯಾಸನದಲ್ಲಿ ಕುಳಿತವನಿಗೆ ನ್ಯಾಯವಿವೇಚನೆಯನ್ನೂ ಊರಬಾಗಿಲ ಬಳಿ ಶತ್ರುಗಳನ್ನು ತಡೆಗಟ್ಟುವವರಿಗೆ ಶೌರ್ಯವನ್ನೂ ನೀಡುವರು.


ಆದರೆ ಬಡಬಗ್ಗರಿಗೆ ತೀರ್ಪಿಡುವನು ನ್ಯಾಯನೀತಿಯಿಂದ ನಾಡ ದಲಿತರಿಗೆ ನಿರ್ಣಯಿಸುವನು ಯಥಾರ್ಥತೆಯಿಂದ ದಂಡಿಸುವನು ಲೋಕವನು ನುಡಿಯೆಂಬ ದಂಡದಿಂದ ಕೊಲ್ಲುವನು ಕೆಡುಕರನು ಉಸಿರೆಂಬ ಕತ್ತಿಯಿಂದ.


ಶಕ್ತಿಸ್ವರೂಪಿಯೇ, ನ್ಯಾಯಪ್ರಿಯ ರಾಜನೇ I ನ್ಯಾಯನೀತಿ, ಯಥಾರ್ಥತೆಗೆ ಸ್ಥಾಪಕ ನೀನೆ I ಇಸ್ರಯೇಲ ವಂಶಕ್ಕಿದನು ಮನದಟ್ಟಾಗಿಸಿದವ ನೀನೆ II


ಉಜ್ವಲಾಲೋಚನೆಯೊಂದು ತುಡುಕುತಿದೆ ಮನದಲಿ I ರಚಿಸಲಿರುವೆ ಮಹಾರಾಜನಿಗೊಂದು ಗೀತಾಂಜಲಿ I ನನ್ನ ಜಿಹ್ವೆ, ಸಜ್ಜಾದ ಬರಹಗಾರನ ಲೇಖನಿ II


ಅದು ಹಗಲಿನ ಬಿಸಿಲಲ್ಲಿ ನೆರಳನ್ನೂ ಮಳೆಗಾಳಿ ಬಂದಾಗ ಆಶ್ರಯವನ್ನೂ ಕೊಡುವ ಮಂಟಪವಾಗಿರುವುದು.


ಸದ್ಧರ್ಮವೇ ಆತನಿಗೆ ನಡುಕಟ್ಟು ಪ್ರಾಮಾಣಿಕತೆಯೇ ಸೊಂಟಪಟ್ಟಿ.


ಸ್ಥಾಪಿತವಾಗುವುದಾಗ ಅಚಲ ಒಲವಿನ ಸಿಂಹಾಸನವು, ಅದನಲಂಕರಿಸುವನು ಪ್ರಾಮಾಣಿಕ ದಾವೀದ ವಂಶಜನು. ದೊರಕಿಸುವನಾತ ನ್ಯಾಯನೀತಿಯನು, ಶೀಘ್ರದಲೆ ನೆರವೇರಿಸುವನು ಸರಿಕಂಡದುದನು.”


ಸರ್ವೇಶ್ವರ ಹೀಗೆನ್ನುತ್ತಾರೆ: “ಗಮನಿಸಿರಿ! ದಿನಗಳು ಬರಲಿವೆ. ಇಸ್ರಯೇಲ್, ಯೆಹೂದ ವಂಶಗಳ ವಿಷಯವಾಗಿ ನಾನು ನುಡಿದಿರುವ ಶುಭವಾಕ್ಯವನ್ನು ನೆರವೇರಿಸುವ ದಿನಗಳು ಬರಲಿವೆ.


ಸರ್ವೇಶ್ವರ ಸ್ವಾಮಿ ಉನ್ನತೋನ್ನತರು, ಮೇಲಿನ ಲೋಕದಲ್ಲಿ ಆಸೀನರು. ಅವರು ಜೆರುಸಲೇಮನ್ನು ನ್ಯಾಯನೀತಿಯಿಂದಲೂ ಸತ್ಯಸಂಧತೆಯಿಂದಲೂ ತುಂಬಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು