Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 32:10 - ಕನ್ನಡ ಸತ್ಯವೇದವು C.L. Bible (BSI)

10 ಈಗ ಸುಖವಾಗಿ ಕುಳಿತಿದ್ದೀರಿ, ನಿಶ್ಚಿಂತೆಯಿಂದಿದ್ದೀರಿ. ಇನ್ನು ಒಂದು ವರ್ಷದ ಮೇಲೆ ಕೆಲವು ದಿನಗಳಲ್ಲಿ ಕಳವಳಗೊಳ್ಳುವಿರಿ. ಏಕೆಂದರೆ, ಆಗ ದ್ರಾಕ್ಷೆಯ ಕೊಯಿಲು ನಿಂತುಹೋಗುವುದು. ಯಾವ ಬೆಳೆಯೂ ನಿಮಗೆ ದಕ್ಕದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನಿರ್ಭೀತರೇ, ಒಂದು ವರ್ಷದ ನಂತರ ಕೆಲವು ದಿನಗಳಲ್ಲಿ ಕಳವಳಗೊಳ್ಳುವಿರಿ. ಆಗ ದ್ರಾಕ್ಷಿಯ ಕೊಯ್ಲು ಇಲ್ಲದೆ ಹೋಗುವುದು, ಯಾವ ಬೆಳೆಯೂ ನಿಮಗೆ ದೊರೆಯುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನಿರ್ಭೀತರೇ, ಒಂದು ವರುಷದ ಮೇಲೆ ಕೆಲವು ದಿನಗಳಲ್ಲಿ ಕಳವಳಗೊಳ್ಳುವಿರಿ; ದ್ರಾಕ್ಷೆಯ ಕೊಯ್ಲು ಇಲ್ಲದೆ ಹೋಗುವದು, ಯಾವ ಬೆಳೆಯೂ ದೊರೆಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಸ್ತ್ರೀಯರೇ, ನೀವೀಗ ಭದ್ರವಾಗಿದ್ದೀರಿ ಎಂದು ನೀವು ನೆನಸುತ್ತೀರಿ, ಆದರೆ ಒಂದು ವರ್ಷದ ನಂತರ ನಿಮಗೆ ಸಂಕಟವು ಪ್ರಾರಂಭವಾಗುವದು. ಮುಂದಿನ ವರ್ಷ ನೀವು ದ್ರಾಕ್ಷಿಹಣ್ಣುಗಳನ್ನು ಕೂಡಿಸುವದಿಲ್ಲ. ಕೂಡಿಸಲು ದ್ರಾಕ್ಷಿಹಣ್ಣುಗಳೇ ಇರುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಈಗ ಸುಖವಾಗಿ ಕುಳಿತಿದ್ದೀರಿ, ನಿಶ್ಚಿಂತೆಯಿಂದಿದ್ದೀರಿ. ಇನ್ನು ಒಂದು ವರ್ಷದ ಮೇಲೆ ಕೆಲವು ದಿನಗಳಲ್ಲಿ ಕಳವಳಗೊಳ್ಳುವಿರಿ. ಏಕೆಂದರೆ, ಆಗ ದ್ರಾಕ್ಷಿ ಕೊಯಿಲು ನಿಂತುಹೋಗುವುದು. ಯಾವ ಬೆಳೆಯೂ ನಿಮಗೆ ದೊರೆಯುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 32:10
14 ತಿಳಿವುಗಳ ಹೋಲಿಕೆ  

“ನಾನು ಕೊಯ್ಲಿಗೆ ಕೈಹಾಕಲು ನೋಡಿದೆ. ಆದರೆ ದ್ರಾಕ್ಷೆಯ ಬಳ್ಳಿಗಳಲ್ಲಿ ಹಣ್ಣಿಲ್ಲ, ಅಂಜೂರದ ಮರದಲ್ಲಿ ಫಲವಿಲ್ಲ. ಎಲೆಯೂ ಬಾಡಿಹೋಗಿದೆ. ಪರರ ತುಳಿತಕ್ಕೆ ಈಡಾಗಿ ಇರುವುದು ಕಾಣುತ್ತದೆ. ಇದು ಸರ್ವೇಶ್ವರನಾದ ನನ್ನ ನುಡಿ.”


ಆ ದಿನದಂದು ಸಾವಿರ ಬೆಳ್ಳಿನಾಣ್ಯಗಳಷ್ಟು ಬೆಲೆಬಾಳುವ ಸಹಸ್ರ ದ್ರಾಕ್ಷಿಬಳ್ಳಿಗಳು ಬೆಳೆಯುವಂಥ ಪ್ರತಿಯೊಂದು ಪ್ರದೇಶದಲ್ಲೂ ಮುಳ್ಳುಪೊದೆಗಳು ಬೆಳೆದುಕೊಳ್ಳುವುವು.


ಅವರ ಆಸ್ತಿಪಾಸ್ತಿಯೆಲ್ಲಾ ಸೂರೆಯಾಗುವುದು, ಅವರ ಮನೆಮಠಗಳು ಹಾಳಾಗುವುವು; ಮನೆಗಳನ್ನು ಕಟ್ಟಿಕೊಂಡರೂ ಅವುಗಳಲ್ಲಿ ವಾಸಮಾಡರು; ದ್ರಾಕ್ಷಾತೋಟಗಳನ್ನು ಬೆಳೆಸಿಕೊಂಡರೂ ಅವುಗಳಿಂದ ದ್ರಾಕ್ಷಾರಸವನ್ನು ಕುಡಿಯರು.”


ಅಂಜೂರದ ಮರ ಚಿಗುರದೆಹೋದರೂ ದ್ರಾಕ್ಷಾಲತೆಗಳಲ್ಲಿ ಹಣ್ಣು ಕಾಣದೆಹೋದರೂ ಎಣ್ಣೆಮರಗಳ ಉತ್ಪತ್ತಿಯು ಶೂನ್ಯವಾದರೂ ಹೊಲಗದ್ದೆಗಳು ಆಹಾರ ಕೊಡದೆಹೋದರೂ ಕುರಿಹಟ್ಟಿಗಳು ಬರಿದಾಗಿಹೋದರೂ ಕೊಟ್ಟಿಗೆಗಳಲ್ಲಿ ದನಕರುಗಳು ಇಲ್ಲವಾದರೂ,


ದ್ರಾಕ್ಷಾಲತೆ ಒಣಗಿದೆ; ಅಂಜೂರದ ಗಿಡ ಬಾಡಿಹೋಗಿದೆ; ದಾಳಿಂಬೆ, ಖರ್ಜೂರ, ಸೇಬು ಮುಂತಾದ ಫಲವೃಕ್ಷಗಳು ಒಣಗಿ ಬೆಂಡಾಗಿವೆ. ನರಮಾನವರು ಸೊರಗಿ ಸಂತೋಷವಿಲ್ಲದೆ ಸಪ್ಪೆಯಾಗಿದ್ದಾರೆ.


ಅದು ನನ್ನ ದ್ರಾಕ್ಷಾತೋಟವನ್ನು ಹಾಳುಮಾಡಿದೆ; ನನ್ನ ಅಂಜೂರದ ಗಿಡವನ್ನು ಸೀಳಿಹಾಕಿದೆ; ಅದರ ತೊಗಟೆಗಳನ್ನು ಸುಲಿದು ಬಿಸಾಡಿಬಿಟ್ಟಿದೆ; ಅದರ ರೆಂಬೆಗಳು ಬಿಳಿಚಿಕೊಂಡಿವೆ.


ಹೀಗಿರಲು, ಅನೇಕ ದಿನಗಳವರೆಗೆ ಇಸ್ರಯೇಲಿನಲ್ಲಿ ರಾಜಯುವರಾಜರುಗಳು ಆಳ್ವಿಕೆ ನಡೆಸುವುದಿಲ್ಲ. ಬಲಿಯರ್ಪಣೆಗಳು ಇರುವುದಿಲ್ಲ. ವಿಗ್ರಹವೇದಿಕೆಗಳು ಅವರ ಮಧ್ಯೆ ಕಂಡುಬರುವುದಿಲ್ಲ, ಮಾಟಮಂತ್ರ ನಡೆಯುವುದಿಲ್ಲ.


‘ನನ್ನ ನಲ್ಲರು ನನಗೆ ಉಡುಗೊರೆಯಾಗಿ ಕೊಟ್ಟವುಗಳು’ ಎಂದು ಅವಳು ಹೇಳಿಕೊಳ್ಳುವ ದ್ರಾಕ್ಷಾಲತೆಗಳನ್ನೂ ಅಂಜೂರದ ವೃಕ್ಷಗಳನ್ನೂ ನಾಶಪಡಿಸುವೆನು. ಅವುಗಳನ್ನು ಕಾಡುಪೊದೆಗಳನ್ನಾಗಿ ಮಾರ್ಪಡಿಸುವೆನು. ಕಾಡುಮೃಗಗಳು ಅವುಗಳನ್ನು ಕಬಳಿಸುವುವು.


ತೊಲಗಿದೆ ಹೊಲಗಳಿಂದ ಹರ್ಷಾನಂದ, ಇಲ್ಲವಾಗಿದೆ ತೋಟಗಳಲಿ ಜಯಕಾರದ ನಾದ, ದ್ರಾಕ್ಷಾರಸವನು ತೆಗೆವವರಿಲ್ಲ ಅರಮನೆಗಳಿಂದ, ಎಂತಲೆ ನಿಂತುಹೋಗಿಹುದಲ್ಲಿ ಸುಗ್ಗಿಯ ಗೀತ.


ಅಮಲೇರಿದವರೇ, ಎಚ್ಚರಗೊಳ್ಳಿ; ಅತ್ತು ಪ್ರಲಾಪಿಸಿರಿ; ಕುಡುಕರೇ, ರೋದಿಸಿರಿ. ದ್ರಾಕ್ಷಾಬಳ್ಳಿ ನಾಶವಾಗಿದೆ; ಇನ್ನು ದ್ರಾಕ್ಷಾರಸ ದೊರಕದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು