Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 32:19 - ಕನ್ನಡ ಸತ್ಯವೇದವು C.L. Bible (BSI)

19 ಕಲ್ಮಳೆ ಸುರಿದು ಕಾಡು ಹಾಳಾದರೂ ಶತ್ರುಗಳ ಪಟ್ಟಣವು ನೆಲಸಮವಾದರೂ ನೀವು ಸಂತೋಷದಿಂದ ಬಾಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಆದರೆ ಕಲ್ಮಳೆ ಸುರಿಯಲು ವನವು ಹಾಳಾಗುವುದು, ಪಟ್ಟಣವು ನೆಲಸಮವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಆದರೆ ಕಲ್ಮಳೆಸುರಿಯಲು ವನವು ಹಾಳಾಗುವದು; ಪಟ್ಟಣವು ನೆಲಸಮವಾಗುವದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಇವು ಸಂಭವಿಸುವ ಮೊದಲು ಅರಣ್ಯವು ಆಲಿಕಲ್ಲುಗಳಿಂದ ನಾಶವಾಗಬೇಕು. ಪಟ್ಟಣವು ನೆಲಸಮವಾಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಆದರೆ ಕಲ್ಮಳೆ ಸುರಿಯುವಾಗ ವನವು ಹಾಳಾಗುವುದು. ಪಟ್ಟಣವು ಸಂಪೂರ್ಣವಾಗಿ ನೆಲಸಮವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 32:19
24 ತಿಳಿವುಗಳ ಹೋಲಿಕೆ  

ನ್ಯಾಯನೀತಿಯನ್ನು ಅದರ ಅಳತೆಗೋಲನ್ನಾಗಿಯೂ ಸತ್ಯಸಂಧತೆಯನ್ನು ಅದರ ಮಟ್ಟಗೋಲನ್ನಾಗಿಯೂ ಮಾಡುತ್ತೇನೆ. ನಿಮ್ಮ ಅಸತ್ಯದಆಶ್ರಯವನ್ನು ಕಲ್ಮಳೆ ಕೊಚ್ಚಿಕೊಂಡು ಹೋಗುವುದು. ಜಲಪ್ರವಾಹವು ನಿಮ್ಮ ಮೋಸದ ಆಸರೆಯನ್ನು ಮುಳುಗಿಸುವುದು.


ಆಗ ಸರ್ವೇಶ್ವರ ತಮ್ಮ ಗಂಭೀರವಾದ ವಾಣಿಯನ್ನು ಕೇಳುವಂತೆ ಮಾಡುವರು. ತೀವ್ರಕೋಪ, ದಹಿಸುವ ಅಗ್ನಿಜ್ವಾಲೆ, ಸಿಡಿಯುವ ಮೋಡ, ಚಂಡಮಾರುತ, ಕಲ್ಮಳೆ - ಇವುಗಳಿಂದ ತಮ್ಮ ಶಿಕ್ಷಾಹಸ್ತವನ್ನು ಪ್ರದರ್ಶಿಸುವರು.


ಇದೋ, ಸರ್ವೇಶ್ವರ ಸ್ವಾಮಿ ಬಳಿ ಮಹಾ ಬಲಿಷ್ಠನೊಬ್ಬನು ಇದ್ದಾನೆ. ಆತನು ರಭಸವಾಗಿರುವ ಕಲ್ಮಳೆಯಂತೆ, ವಿನಾಶಕರವಾದ ಬಿರುಗಾಳಿಯಂತೆ, ಕೊಚ್ಚಿ ಹರಿಯುವ ತುಂಬು ಪ್ರವಾಹದಂತೆ ಬರುವನು. ಆ ನಗರ ನೆಲಕ್ಕೆ ಕುಸಿದುಬಿದ್ದು ನೆಲಸಮವಾಗುವಂತೆ ಮಾಡುವನು.


ತಗ್ಗಿಸುವನಾತ ಎತ್ತರದಲಿ ವಾಸಿಸುವವರನು, ಕೆಡವಿ, ನೆಲಸಮಮಾಡಿ, ಧೂಳಾಗಿಸುವನು ಅವರು ವಾಸಮಾಡುವಾ ಉನ್ನತ ನಗರವನು.


ತುರಾಯಿಮರವೇ, ಗೋಳಾಡು ಬಿದ್ದುಹೋಗಿದೆ ದೇವದಾರು ನಾಶವಾಗಿವೆ ಭಾರೀ ಮರಗಳು. ರೋಧಿಸಲಿ ಬಾಷಾನಿನ ಅಲ್ಲೋನ್ ವೃಕ್ಷಗಳು ಉರುಳಿವೆ ನುಗ್ಗಲಾಗದಾ ದಟ್ಟವನಗಳು.


ಆಗ ಒಬ್ಬ ಬಲಿಷ್ಠ ದೇವದೂತನು ಬೀಸುವ ಕಲ್ಲಿನಂತಿದ್ದ ಒಂದು ದೊಡ್ಡ ಕಲ್ಲನ್ನು ಎತ್ತಿ ಸಮುದ್ರಕ್ಕೆ ಎಸೆದು ಹೀಗೆಂದನು : “ಬಾಬಿಲೋನ್ ಮಹಾನಗರವನು ಈ ಪರಿಯಾಗಿ ಎತ್ತೆಸೆಯಲಾಗುವುದು ಅವಳಿದ್ದ ಎಡೆಯು ಯಾರಿಗೂ ಕಾಣಸಿಗದಂತಾಗುವುದು.”


ಮೊದಲನೆಯ ದೇವದೂತನು ತುತೂರಿಯನ್ನು ಊದಿದನು. ಭೂಮಿಯ ಮೇಲೆ ರಕ್ತಮಿಶ್ರಿತವಾದ ಆಲಿಕಲ್ಲಿನ ಮತ್ತು ಬೆಂಕಿಯ ಸುರಿಮಳೆಯಾಯಿತು. ಪರಿಣಾಮವಾಗಿ, ಭೂಮಿಯ ಮೂರನೆಯ ಒಂದು ಭಾಗ ಸುಟ್ಟುಹೋಯಿತು. ಮರಗಳಲ್ಲಿ ಮೂರನೆಯ ಒಂದು ಭಾಗ ಭಸ್ಮವಾಯಿತು. ಹಸಿರು ಹುಲ್ಲೆಲ್ಲಾ ಉರಿದುಹೋಯಿತು.


ಮಳೆ ಬಿತ್ತು, ನೆರೆ ಬಂತು, ಗಾಳಿ ಬೀಸಿ ಆ ಮನೆಗೆ ಅಪ್ಪಳಿಸಿತು. ಆದರೂ ಅದು ಬೀಳಲಿಲ್ಲ. ಕಾರಣ ಅದರ ಅಡಿಗಟ್ಟು ಬಂಡೆಯ ಮೇಲಿತ್ತು.


ನಾಶಗೊಳಿಸುವನು ನಿನೆವೆಯನು ಮಹಾಜಲಪ್ರಳಯದಲ್ಲೋ ಎಂಬಂತೆ ಹಿಂದಟ್ಟಿ ತಳ್ಳುವನು ವಿರೋಧಿಗಳನು ಗಾಢಾಂಧಕಾರಕ್ಕೋ ಎಂಬಂತೆ.


ನಿನೆವೆಯನ್ನು ಕುರಿತ ದೈವೋಕ್ತಿ. ಎಲ್ಕೋಷ್ ಊರಿನ ನಹೂಮ ಪ್ರವಾದಿಗೆ ಆದ ದೈವದರ್ಶನವಿದು:


ನೀನು ನಿನ್ನ ಸೇವಕರ ಮೂಲಕ ಸರ್ವೇಶ್ವರನನ್ನು ನಿಂದಿಸಿರುವೆ. ಅಲ್ಲದೆ, ಈ ಮಾತುಗಳನ್ನಾಡಿ ಜಂಬಕೊಚ್ಚಿಕೊಂಡಿರುವೆ : ‘ಹತ್ತಿದ್ದೇನೆ ಗಿರಿಶಿಖರಗಳನ್ನು ರಥಸಮೂಹದೊಡನೆ ಸೇರಿದ್ದೇನೆ ಲೆಬನೋನಿನ ದುರ್ಗಮ ಸ್ಥಳಗಳನ್ನೇ. ಕಡಿದಿದ್ದೇನೆ ಅದರ ಎತ್ತರವಾದ ದೇವದಾರು ವೃಕ್ಷಗಳನ್ನೇ, ಕತ್ತರಿಸಿದ್ದೇನೆ ಅದರ ಶ್ರೇಷ್ಠವಾದ ತುರಾಯಿ ಮರಗಳನ್ನೇ. ಒಳಹೊಕ್ಕಿದ್ದೇನೆ ಅಲ್ಲಿನ ದೂರದ ಶಿಖರವನ್ನೇ, ಪ್ರವೇಶಿಸಿದ್ದೇನೆ ದಟ್ಟವಾದ ಆ ಕಾಡುಮೇಡುಗಳನ್ನೇ


ಕೋಟೆಕೊತ್ತಲಗಳಿಂದ ಕೂಡಿದ ಪಟ್ಟಣ ಪಾಳುಬಿದ್ದಿದೆ; ಕಾಡಿನಂತೆ ನಿರ್ಜನಪ್ರದೇಶವಾಗಿದೆ. ದನಕರುಗಳು ಮೇದು ಮಲಗುವ ಗೋಮಾಳವಾಗಿದೆ.


ದುರ್ಗವಾಗಿರುವೆ ನೀನು ದೀನದಲಿತರಿಗೆ, ಸುರಕ್ಷಿತ ಕೋಟೆಯಾಗಿರುವೆ ದಟ್ಟದರಿದ್ರರಿಗೆ, ನೆರಳಾಗಿರುವೆ ಬಿಸಿಲೊಳು ಬೆಂದವರಿಗೆ. ಕ್ರೂರಿಗಳ ಹೊಡೆತ ಚಳಿಗಾಲದ ಚಂಡಮಾರುತವಾಗಿರೆ, ಬಿರುಗಾಳಿಯ ಆ ಬಡಿತಕೆ ನೀನಾದೆ ಆಸರೆ.


ಪಾಳುಬಿದ್ದಿದೆ ಅಸ್ತವ್ಯಸ್ತವಾದ ನಗರ, ಯಾರೂ ಪ್ರವೇಶಿಸದಂತೆ ಮುಚ್ಚಿದೆ ಪ್ರತಿಯೊಂದು ಗೃಹ.


ಅದರ ಅಳಿದುಳಿದ ಮರಗಳು ಒಂದು ಕೂಸು ಕೂಡ ಎಣಿಸಿ ಬರೆಯುವಷ್ಟು ಕಡಿಮೆಯಾಗುವುವು.


ದೇಹಾತ್ಮದಂಥ ಅದರ ಉದ್ಯಾನವನವನ್ನೂ ಫಲಭರಿತ ತೋಟವನ್ನೂ ನಿರ್ಮೂಲ ಮಾಡುವುದು. ಮಾರಕರೋಗ ತಗಲಿದ ರೋಗಿಯಂತೆ ದೇಶವೆಲ್ಲವೂ ಕರಗಿಹೋಗುವುದು.


ಪಾಳುಬಿದ್ದಿದೆ ನಗರ, ಮುರಿದು ಬಿದ್ದಿದೆ ಪುರದ್ವಾರ.


ನಾಶಪಡಿಸಿದೆ ನೀ ನಗರವನು, ದಿಬ್ಬವಾಗಿಸಿದೆ ದುರ್ಗವನು, ಕೆಡವಿದೆ ವಿದೇಶೀಯರ ಕೋಟೆಯನು, ಮರಳಿ ಕಟ್ಟಲಾಗದ ಹಾಳೂರನ್ನಾಗಿಸಿದೆ ಅದನು.


ನೀನು ಕುಗ್ಗಿ ಭೂಮಿಯೊಳಗಿಂದ ಮಾತಾಡುವೆ. ನಿನ್ನ ನುಡಿ ಮಣ್ಣಿನೊಳಗಿಂದ ಶಿಥಿಲ ಸ್ವರವಾಗಿ ಹೊರಡುವುದು. ನಿನ್ನ ಧ್ವನಿ ಭೂತದ ಧ್ವನಿಯಂತೆ ನೆಲದೊಳಗಿಂದ ಬರುವುದು. ಧೂಳಿನೊಳಗಿಂದ ನಿನ್ನ ಮಾತು ಲೊಚಗುಟ್ಟುವಂತೆ ಕೇಳಿಸುವುದು.


ಇಗೋ, ಪ್ರಭುವಾದ ಸೇನಾಧೀಶ್ವರ ಸರ್ವೇಶ್ವರಸ್ವಾಮಿ ಮರದ ಕೊಂಬೆಗಳನ್ನು ದುಡುಮ್ಮನೆ ಬೀಳಿಸುವರು. ಉನ್ನತವಾದ ವೃಕ್ಷಗಳನ್ನು ಕಡಿದುಹಾಕುವರು. ಎತ್ತರದ ಮರಗಳನ್ನು ನೆಲಕ್ಕೆ ಉರುಳಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು