Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 33:23 - ಕನ್ನಡ ಸತ್ಯವೇದವು C.L. Bible (BSI)

23 ಶತ್ರು ಹಡಗುಗಳ ಹಗ್ಗಗಳು ಸಡಿಲ, ಅದರ ಕೂವೆಯ ಬುಡ ಸಡಿಲ; ಅದರ ಹಾಯಿಯನ್ನು ಮುದುರದಂತೆ ಹಿಡಿದುಕೊಳ್ಳಲು ಅಸಾಧ್ಯ. ಅವುಗಳನ್ನು ಸೂರೆಮಾಡಿ ಕೊಳ್ಳೆಹೊಡೆದು, ಸಮನಾಗಿ ಹಂಚಿಕೊಳ್ಳಲು ಎಲ್ಲರಿಗೂ ಆಸ್ಪದವುಂಟು. ಕುಂಟರು ಕೂಡ ತಮ್ಮ ಪಾಲನ್ನು ಪಡೆಯಬಲ್ಲರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ನಿನ್ನ ಹಗ್ಗಗಳು ಸಡಿಲವಾಗಿ ಸ್ತಂಭದ ಪಾದವನ್ನು ಸ್ಥಿರಪಡಿಸಿಕೊಳ್ಳಲಾರದೆ ಹೋದವು, ಹಾಯಿಯನ್ನು ಮುದುರದಂತೆ ಹಿಡಿದಿರಲಿಕ್ಕೂ ಆಗಲಿಲ್ಲ. ಆಗ ದೊಡ್ಡ ಸೂರೆಯು ಕೊಳ್ಳೆಯಾಗಿ ಹಂಚುವುದಕ್ಕೆ ಆಸ್ಪದವಾಯಿತು. ಕುಂಟರೂ ಸುಲಿಗೆ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ನಿನ್ನ ಹಗ್ಗಗಳು ಸಡಲಿ ಸ್ತಂಭದ ಪಾದವನ್ನು ಸ್ಥಿರಪಡಿಸಿಕೊಳ್ಳಲಾರದೆ ಹೋದವು, ಪಠವನ್ನು ಮುದುರದಂತೆ ಹಿಡಿದಿರಲಿಕ್ಕೂ ಆಗಲಿಲ್ಲ; ಆಗ ದೊಡ್ಡ ಸೂರೆಯು ಕೊಳ್ಳೆಯಾಗಿ ಹಂಚುವದಕ್ಕೆ ಆಸ್ಪದವಾಯಿತು. ಕುಂಟರೂ ಸುಲಿಗೆಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ನಿನ್ನ ಹಗ್ಗಗಳು ಸಡಲಿ, ಸ್ತಂಭದ ಪಾದವನ್ನು ಸ್ಥಿರಪಡಿಸಿಕೊಳ್ಳಲಾರದೆ ಹೋದವು. ಪಠವನ್ನು ಮುದುರದಂತೆ ಹಿಡಿದಿರಲಿಕ್ಕೂ ಆಗಲಿಲ್ಲ. ಆಗ ದೊಡ್ಡ ಸೂರೆಯು ಕೊಳ್ಳೆಯಾಗಿ ಹಂಚುವುದಕ್ಕೆ ಆಸ್ಪದವಾಯಿತು. ಕುಂಟರೂ ಸುಲಿಗೆ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 33:23
17 ತಿಳಿವುಗಳ ಹೋಲಿಕೆ  

ಆ ಕುಷ್ಠರೋಗಿಗಳು ಪಾಳೆಯದ ಅಂಚಿಗೆ ಬಂದಾಗ ಮೊದಲನೆಯ ಡೇರೆಯನ್ನು ಹೊಕ್ಕು ಉಂಡು, ಕುಡಿದು ಅದರಲ್ಲಿದ್ದ ಬೆಳ್ಳಿ ಬಂಗಾರವನ್ನೂ ಬಟ್ಟೆಗಳನ್ನೂ ತೆಗೆದುಕೊಂಡು ಬಚ್ಚಿಟ್ಟರು. ಇನ್ನೊಂದು ಡೇರೆಯನ್ನು ಹೊಕ್ಕು ಅಲ್ಲಿಂದಲೂ ತೆಗೆದುಕೊಂಡು ಅಡಗಿಸಿ ಇಟ್ಟರು.


ಜ್ಞಾನಿಗಳನ್ನು ನಾಚಿಕೆಗೀಡುಮಾಡಲು ದೇವರು ಲೋಕದ ದೃಷ್ಟಿಯಲ್ಲಿ ಮೂರ್ಖರನ್ನು ಆರಿಸಿಕೊಂಡರು; ಅಂತೆಯೇ ಬಲಿಷ್ಠರನ್ನು ಲಜ್ಜೆಗೀಡುಮಾಡಲು ಲೋಕದ ದೃಷ್ಟಿಯಲ್ಲಿ ಬಲಹೀನರನ್ನು ಆರಿಸಿಕೊಂಡರು.


ಓಡಿದರು, ದಂಡೊಡನೆ ಓಡಿದರು ದೊರೆಗಳು I ದೋಚಿಕೊಂಡರು ಕೊಳ್ಳೆಯನು ಗೃಹಿಣಿಯರು II


ಮೂರನೆಯ ದಿನ ಅವರು ಹಡಗಿನ ಕೆಲವು ಸಲಕರಣೆಗಳನ್ನು ಸ್ವತಃ ಎತ್ತಿ ಹೊರಗೆಸೆದರು.


ಅಲ್ಲಿ ಸರ್ವೇಶ್ವರ ತಮ್ಮ ಶಕ್ತಿಯನ್ನು ತೋರ್ಪಡಿಸುವರು. ನದಿಸರೋವರಗಳಂತೆ ನಮ್ಮನ್ನು ಸುತ್ತುವರಿಯುವರು. ಹುಟ್ಟುಗೋಲಿನ ದೋಣಿಯಾಗಲಿ, ದೊಡ್ಡದಾದ ಹಡಗಾಗಲಿ ಅದನ್ನು ದಾಟವು.


ಅವರು ಕೊಳ್ಳೆಗೆ ಒಳಗಾಗುವರು; ಜನ ಮಿಡತೆಗಳಂತೆ ಆ ಕೊಳ್ಳೆಗೆ ಹಾರಿಬೀಳುವರು.


ಹಾಳುಮಾಡುತ್ತಿರುವವನೇ, ನಿನಗೆ ಧಿಕ್ಕಾರ ! ನಿನ್ನನ್ನು ಯಾರೂ ಹಾಳುಮಾಡದಿದ್ದರೂ ನೀನು ಹಾಳುಮಾಡುತ್ತಿರುವೆ. ನಿನ್ನನ್ನು ಯಾರೂ ವಂಚಿಸದಿದ್ದರೂ ನೀನು ವಂಚನೆಮಾಡುತ್ತಿರುವೆ. ಇದಕ್ಕೆಲ್ಲ ಅಂತ್ಯವಿದೆ. ಈಗ ಹಾಳುಮಾಡುತ್ತಿರುವ ನೀನು ಆಗ ನೀನೇ ಹಾಳಾಗುವೆ. ಈಗ ವಂಚನೆ ಮಾಡುತ್ತಿರುವ ನೀನೇ ವಂಚಿತನಾಗುವೆ.


ಯೆಹೋಷಾಫಾಟನೂ ಅವನ ಜನರೂ ಸುಲಿಗೆಮಾಡುವುದಕ್ಕಾಗಿ ಅಲ್ಲಿಗೆ ಹೋದರು. ಅವರಿಗೆ ದ್ರವ್ಯ, ವಸ್ತ್ರ, ಶ್ರೇಷ್ಠಾಯುಧ, ಇವುಗಳು ರಾಶಿರಾಶಿಯಾಗಿ ಸಿಕ್ಕಿದವು. ಅವರು ಹೊರಲಾರದಷ್ಟನ್ನೂ ಸುಲಿದುಕೊಂಡರು. ಕೊಳ್ಳೆಯ ಮೊತ್ತ ಹೆಚ್ಚಾಗಿದ್ದುದರಿಂದ ಅವರು ಮೂರು ದಿನಗಳವರೆಗೂ ಕೂಡಿಸುತ್ತಿದ್ದರು.


ಆಗ ಜನರು ಹೊರಗೆ ಹೋಗಿ, ಸಿರಿಯಾದವರ ಪಾಳೆಯವನ್ನು ಸೂರೆಮಾಡಿಬಿಟ್ಟರು. ಸರ್ವೇಶ್ವರನ ಮಾತಿನಂತೆ ಗೋದಿಹಿಟ್ಟು ನಾಣ್ಯಕ್ಕೆ ಮೂರು ಕಿಲೋಗ್ರಾಂನಂತೆಯೂ ಜವೆಗೋದಿಯು ನಾಣ್ಯಕ್ಕೆ ಆರು ಕಿಲೋಗ್ರಾಂನಂತೆಯೂ ಮಾರಲಾಗುತ್ತಿತ್ತು.


ಆಮೇಲೆ ಆ ಹಳ್ಳದಿಂದ ಮೇಲೆ ಹತ್ತಲಾರದಷ್ಟು ಆಯಾಸಗೊಂಡ ಇನ್ನೂರು ಜನರು ಅಲ್ಲೇ ನಿಂತುಬಿಟ್ಟರು. ಆದ್ದರಿಂದ ದಾವೀದನು ಉಳಿದ ನಾನೂರು ಜನರನ್ನೇ ಕರೆದುಕೊಂಡು ಮುಂದೆ ನಡೆದನು.


ಜಿಗಿಯುವನು ಕುಂಟನು ಜಿಂಕೆಯಂತೆ ಹಾಡುವುದು ಮೂಕನ ನಾಲಿಗೆ ಹರ್ಷಗೀತೆ. ಒರತೆಗಳು ಒಡೆಯುವುವು ಅರಣ್ಯದಲಿ ನದಿಗಳು ಹುಟ್ಟಿಹರಿಯುವುವು ಒಣನೆಲದಲಿ.


ಶೆಬದವರು, ದೆದಾನಿನವರು, ತಾರ್ಷೀಷಿನ ವರ್ತಕರು ಹಾಗು ಅದರ ಸಿಂಹಪ್ರಾಯರೆಲ್ಲರು ನಿನ್ನನ್ನು ನೋಡಿ, ‘ನೀನು ಸೂರೆಮಾಡಲಿಕ್ಕೆ ಬಂದಿಯೋ? ಕೊಳ್ಳೆಹೊಡೆದು ಬೆಳ್ಳಿಬಂಗಾರವನ್ನು ದೋಚಿಕೊಂಡು, ದನ ಮುಂತಾದ ಸೊತ್ತನ್ನು ಅಪಹರಿಸಿ, ಅಪಾರವಾದ ಆಸ್ತಿಯನ್ನು ಸುಲಿದುಕೊಂಡು ಹೋಗಲು ನಿನ್ನ ತಂಡವನ್ನು ಕೂಡಿಸಿಕೊಂಡು ಬಂದಿಯೋ?’ ಎಂದು ಕೇಳುವರು.


ಪಾರಿವಾಳ ರೆಕ್ಕೆಗಳಂಥ ಕನಕದಾಕೃತಿಗಳಿದೋ I ಗರಿಗಳಂತೆ ಥಳಥಳಿಸುವ ಬಂಗಾರ ರೇಖೆಗಳಿದೋ I ನೀವಾದರೋ ಕುರಿದೊಡ್ಡಿಗಳಲ್ಲಿ ಬೆಚ್ಚನಿದ್ದಿರೋ? II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು