Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 33:4 - ಕನ್ನಡ ಸತ್ಯವೇದವು C.L. Bible (BSI)

4 ಅವರು ಕೊಳ್ಳೆಗೆ ಒಳಗಾಗುವರು; ಜನ ಮಿಡತೆಗಳಂತೆ ಆ ಕೊಳ್ಳೆಗೆ ಹಾರಿಬೀಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನಿಮ್ಮ ಕೊಳ್ಳೆಯು ಮಿಡತೆಗಳು ಕೂಡಿಸುವ ಹಾಗೆ ಕೂಡಿಸಲ್ಪಡುವುದು, ಮಿಡತೆಗಳು ಓಡಾಡುವ ಹಾಗೆ ಮನುಷ್ಯರು ಅದರ ಮೇಲೆ ಓಡಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನೀವು ಕೊಳ್ಳೆಹೊಡೆದದ್ದನ್ನು ಇತರರು ವಿುಡತೆಗಳಂತೆ ಕೊಳ್ಳೆಮಾಡುವರು; ಶಲಭಗಳಂತೆ ಅದರ ಮೇಲೆ ಹಾರಿಬೀಳುವರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನೀವು ಯುದ್ಧದಲ್ಲಿ ದೋಚಿಕೊಂಡಿದ್ದೀರಿ. ಅವುಗಳು ನಿಮ್ಮಿಂದ ತೆಗೆಯಲ್ಪಡುವವು. ಅನೇಕಾನೇಕ ಜನರು ಬಂದು ನಿಮ್ಮ ಸಂಪತ್ತನ್ನು ದೋಚಿಕೊಳ್ಳುವರು. ಮಿಡತೆಗಳು ನಿಮ್ಮ ಬೆಳೆಯನ್ನು ತಿಂದು ನಾಶಮಾಡಿದಂತೆ ಅದಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ನಿಮ್ಮ ಕೊಳ್ಳೆಯನ್ನು ಇತರರು ಮಿಡತೆಗಳಂತೆ ಕೊಳ್ಳೆಮಾಡುವರು, ಮಿಡತೆಗಳು ಓಡಾಡುವ ಹಾಗೆ ಮನುಷ್ಯರು ಅದರ ಮೇಲೆ ಓಡಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 33:4
11 ತಿಳಿವುಗಳ ಹೋಲಿಕೆ  

ಗುಂಪುಮಿಡತೆ, ಕಂಬಳಿಮಿಡತೆ, ಚೂರಿಮಿಡತೆ, ನಾನು ಕಳುಹಿಸಿದ ಈ ಮಿಡತೆಗಳ ಸೈನ್ಯಗಳು ತಿಂದು ನಷ್ಟಮಾಡಿದ ವರ್ಷಗಳನ್ನು ನಿಮಗೆ ಭರಿಸಿಕೊಡುವೆನು.


ಪಟ್ಟಣಗಳ ಮೇಲೆ ಹಾರಾಡುತ್ತವೆ, ಗೋಡೆಗಳ ಮೇಲೆ ಓಡಾಡುತ್ತವೆ, ಮನೆಗಳನ್ನು ಹತ್ತಿ, ಕಳ್ಳರಂತೆ ಕಿಟಕಿಗಳಲ್ಲಿ ನುಗ್ಗುತ್ತವೆ.


ಶತ್ರು ಹಡಗುಗಳ ಹಗ್ಗಗಳು ಸಡಿಲ, ಅದರ ಕೂವೆಯ ಬುಡ ಸಡಿಲ; ಅದರ ಹಾಯಿಯನ್ನು ಮುದುರದಂತೆ ಹಿಡಿದುಕೊಳ್ಳಲು ಅಸಾಧ್ಯ. ಅವುಗಳನ್ನು ಸೂರೆಮಾಡಿ ಕೊಳ್ಳೆಹೊಡೆದು, ಸಮನಾಗಿ ಹಂಚಿಕೊಳ್ಳಲು ಎಲ್ಲರಿಗೂ ಆಸ್ಪದವುಂಟು. ಕುಂಟರು ಕೂಡ ತಮ್ಮ ಪಾಲನ್ನು ಪಡೆಯಬಲ್ಲರು.


ಯೆಹೋಷಾಫಾಟನೂ ಅವನ ಜನರೂ ಸುಲಿಗೆಮಾಡುವುದಕ್ಕಾಗಿ ಅಲ್ಲಿಗೆ ಹೋದರು. ಅವರಿಗೆ ದ್ರವ್ಯ, ವಸ್ತ್ರ, ಶ್ರೇಷ್ಠಾಯುಧ, ಇವುಗಳು ರಾಶಿರಾಶಿಯಾಗಿ ಸಿಕ್ಕಿದವು. ಅವರು ಹೊರಲಾರದಷ್ಟನ್ನೂ ಸುಲಿದುಕೊಂಡರು. ಕೊಳ್ಳೆಯ ಮೊತ್ತ ಹೆಚ್ಚಾಗಿದ್ದುದರಿಂದ ಅವರು ಮೂರು ದಿನಗಳವರೆಗೂ ಕೂಡಿಸುತ್ತಿದ್ದರು.


ಅವರು ಸೋತು ಓಡಿಹೋದಾಗ ಆಸನೂ ಅವನ ಜನರೂ ಗೆರಾರಿನವರೆಗೂ ಅವರನ್ನು ಹಿಂದಟ್ಟಿ ಸಂಹರಿಸಿದರು. ಅವರಲ್ಲಿ ಯಾರೂ ಜೀವದಿಂದುಳಿಯಲಿಲ್ಲ. ಸರ್ವೇಶ್ವರನ ಮತ್ತು ಅವರ ಸೈನ್ಯದ ಮುಂದೆ ಸುಡಾನರು ಭಿನ್ನಭಿನ್ನರಾದರು. ಇಸ್ರಯೇಲರಿಗೆ ಅಪರಿಮಿತವಾದ ಕೊಳ್ಳೆಸಿಕ್ಕಿತು.


ನಿಮ್ಮ ಮೇಘಗರ್ಜನೆಗೆ ಜನಾಂಗಗಳು ಓಡುತ್ತವೆ. ನೀವು ಎದ್ದುನಿಂತಾಗ ರಾಷ್ಟ್ರಗಳು ದಿಕ್ಕುಪಾಲಾಗುತ್ತವೆ.


ಸರ್ವೇಶ್ವರ ಸ್ವಾಮಿ ಉನ್ನತೋನ್ನತರು, ಮೇಲಿನ ಲೋಕದಲ್ಲಿ ಆಸೀನರು. ಅವರು ಜೆರುಸಲೇಮನ್ನು ನ್ಯಾಯನೀತಿಯಿಂದಲೂ ಸತ್ಯಸಂಧತೆಯಿಂದಲೂ ತುಂಬಿಸುವರು.


ಆದುದರಿಂದ ಇಗೋ, ನಾನು ನಿನ್ನ ಮೇಲೆ ಕೈಯೆತ್ತಿ ಸುಲಿಗೆಗಾಗಿ ನಿನ್ನನ್ನು ಮ್ಲೇಚ್ಛರಿಗೆ ವಶಪಡಿಸುವೆನು. ಜನಾಂಗಗಳಿಂದ ಕಿತ್ತು, ದೇಶಗಳಿಂದ ನಿನ್ನ ಹೆಸರನ್ನು ಅಳಿಸಿ ನಿನ್ನನ್ನು ಹಾಳುಮಾಡುವೆನು; ಆಗ ನಾನೇ ಸರ್ವೇಶ್ವರ ಎಂದು ನಿನಗೆ ಗೊತ್ತಾಗುವುದು.”


ಚೂರಿಮಿಡತೆ ತಿಂದು ಉಳಿದಿದ್ದ ಬೆಳೆಯನ್ನು ಗುಂಪುಮಿಡತೆ ತಿಂದುಬಿಟ್ಟಿತು. ಗುಂಪುಮಿಡತೆ ತಿಂದುಬಿಟ್ಟಿದ್ದನ್ನು ಕುದುರೆಮಿಡತೆ ತಿಂದುಬಿಟ್ಟಿತು; ಕುದುರೆಮಿಡತೆ ಬಿಟ್ಟದ್ದನ್ನು ಕಂಬಳಿಮಿಡತೆ ತಿಂದುಬಿಟ್ಟಿತು.


ಅದರ ಮುಂದೆ ಕಬಳಿಸುವ ಬೆಂಕಿ; ಅದರ ಹಿಂದೆ ಧಗಧಗಿಸುವ ಜ್ವಾಲೆ. ಅದು ಬರುವ ಮುನ್ನ ನಾಡು ಏದೆನ್ ಉದ್ಯಾನವನ; ಅದು ದಾಟಿದ ನಂತರ ಸುಡುಗಾಡು. ಅದರ ಆಪತ್ತಿನಿಂದ ಯಾರೂ ತಪ್ಪಿಸಿಕೊಳ್ಳುವಂತಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು