Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 34:10 - ಕನ್ನಡ ಸತ್ಯವೇದವು C.L. Bible (BSI)

10 ಅದು ಹಗಲಿರುಳು ಆರದೆ ಉರಿಯುವುದು. ಅದರ ಹೊಗೆ ನಿರಂತರವಾಗಿ ಏರುತ್ತಿರುವುದು. ನಾಡು ತಲತಲಾಂತರಕ್ಕೂ ಹಾಳುಬಿದ್ದಿರುವುದು, ಯುಗಯುಗಾಂತರಕ್ಕೂ ಅಲ್ಲಿ ಯಾರೂ ಹಾದುಹೋಗರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅದು ಹಗಲಿರುಳೂ ಆರುವುದಿಲ್ಲ. ಅದರ ಹೊಗೆಯು ನಿರಂತರವಾಗಿ ಏರುತ್ತಿರುವುದು. ದೇಶವು ತಲತಲಾಂತರಕ್ಕೂ ಹಾಳು ಬಿದ್ದಿರುವುದು, ಯುಗಯುಗಾಂತರಕ್ಕೂ ಅಲ್ಲಿ ಯಾರೂ ಹಾದು ಹೋಗರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಅದು ಹಗಲಿರುಳೂ ಆರದು, ಅದರ ಹೊಗೆ ನಿರಂತರ ಏರುತ್ತಿರುವದು. ದೇಶವು ತಲತಲಾಂತರಕ್ಕೂ ಹಾಳುಬಿದ್ದಿರುವದು, ಯುಗಯುಗಾಂತರಕ್ಕೂ ಅಲ್ಲಿ ಯಾರೂ ಹಾದು ಹೋಗರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಬೆಂಕಿಯು ಹಗಲಿರುಳು ಉರಿಯುವದು. ಯಾರಿಗೂ ಅದನ್ನು ನಂದಿಸಲು ಸಾಧ್ಯವಿಲ್ಲ. ಎದೋಮಿನಿಂದ ಹೊಗೆಯು ಯಾವಾಗಲೂ ಮೇಲಕ್ಕೇರುವದು. ಆ ದೇಶವು ನಿತ್ಯಕಾಲಕ್ಕೂ ನಾಶವಾಗಿ ಹೋಗುವದು. ಆ ದೇಶದೊಳಗೆ ಯಾರೂ ಪ್ರಯಾಣ ಮಾಡುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಅದು ರಾತ್ರಿಯಲ್ಲಾದರೂ ಇಲ್ಲವೆ ಹಗಲಿನಲ್ಲಾದರೂ ಆರುವುದಿಲ್ಲ. ಅದರ ಹೊಗೆಯು ನಿರಂತರವಾಗಿ ಏಳುತ್ತಿರುವುದು. ಅದು ತಲತಲಾಂತರಕ್ಕೂ ಹಾಳಾಗಿ ಬಿದ್ದಿರುವುದು, ಅದನ್ನು ಎಂದೆಂದಿಗೂ ಯಾರೂ ಹಾದು ಹೋಗರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 34:10
15 ತಿಳಿವುಗಳ ಹೋಲಿಕೆ  

ಅವರು ಮತ್ತೊಮ್ಮೆ, “ಅಲ್ಲೆಲೂಯ ! ಅವಳ ದಹನದಿಂದ ಹೊಗೆ ಸತತ ಮೇಲೇರುತಿಹುದು ಒಂದೇಸಮನೆ,” ಎಂದು ಕೂಗಿದರು.


ಅವರು ಹೊರಟುಹೋಗುವಾಗ ನೋಡುವರು ನನಗೆ ದ್ರೋಹವೆಸಗಿದವರ ಹೆಣಗಳನು ಸಾಯುವುದಿಲ್ಲ ಅವುಗಳನ್ನು ಕಡಿಯುವ ಹುಳು ಆರುವುದಿಲ್ಲ ಅವುಗಳನ್ನು ಸುಡುವ ಬೆಂಕಿಯು ಎಲ್ಲ ಮನುಜರಿಗವು ಅಸಹ್ಯವಾಗಿರುವುವು.”


ಅದು ಎಂದಿಗೂ ನಿವಾಸಕ್ಕೆ ಯೋಗ್ಯವಾಗದು. ತಲತಲಾಂತರಕ್ಕೂ ಅಲ್ಲಿ ಜನರು ಒಕ್ಕಲು ಮಾಡರು. ಯಾವ ಅರಬ್ಬಿಯನೂ ಅಲ್ಲಿ ಗುಡಾರಹಾಕನು. ಕುರುಬರು ಅಲ್ಲಿ ಮಂದೆಗಳನ್ನು ತಂಗಿಸರು.


ಅವರು ಅವಳನ್ನು ದಹಿಸಿದ ಬೆಂಕಿಯ ದಟ್ಟ ಹೊಗೆಯನ್ನು ಕಂಡು, “ಈ ಮಹಾನಗರಿಗೆ ಸರಿಸಮನಾದ ನಗರವೊಂದುಂಟೇ?” ಎಂದು ಉದ್ಗರಿಸಿದರು.


ಯಾವ ವ್ಯಕ್ತಿಯೂ ಅಲ್ಲಿ ಹೆಜ್ಜೆಯಿಟ್ಟು ಹಾದುಹೋಗನು; ನಲವತ್ತು ವರ್ಷ ನಿರ್ಜನವಾಗಿರುವುದು.


ಒಣಹುಲ್ಲಿನ ಮೆದೆಗೆ ಬೆಂಕಿಯ ಕಿಡಿಬಿದ್ದು ಸುಟ್ಟುಹೋಗುವಂತೆ ನಿಮ್ಮಲ್ಲಿನ ಬಲಿಷ್ಠರು ತಮ್ಮ ದುಷ್ಕೃತ್ಯಗಳಿಂದಲೇ ನಾಶವಾಗುವರು. ಈ ವಿನಾಶವನ್ನೂ ಯಾರಿಂದಲೂ ತಡೆಗಟ್ಟಲಾಗದು.


“ಸರ್ವೇಶ್ವರನಾದ ನಾನು ಹೇಳುವುದನ್ನು ಗಮನಿಸಿರಿ; ಇಗೋ, ನನ್ನ ಕೋಪವೆಂಬ ರೋಷಾಗ್ನಿಯನ್ನು ಈ ಸ್ಥಳದ ಮೇಲೆ ಸುರಿಸುವೆನು. ನರಮಾನವರ ಮೇಲೂ ಪಶುಪ್ರಾಣಿಗಳ ಮೇಲೂ ಕಾಡುಮರಗಳ ಮೇಲೂ ಭೂಮಿಯ ಬೆಳೆಯ ಮೇಲೂ ಅದನ್ನು ಕಾರುವೆನು. ಅದು ಆರದೆ ದಹಿಸುವುದು!”


ಇಗೋ, ಸರ್ವೇಶ್ವರ ಬರಿದುಮಾಡುವರು ಧರೆಯನು, ನಿರ್ಜನ ಪ್ರದೇಶವಾಗಿಸುವರು ವಿರೂಪಗೊಳಿಸಿ ಅದನು, ಚದರಿಸುವರು ಅದರ ನಿವಾಸಿಗಳನು.


ಅವರೇ, ಇವುಗಳಿಗೆ ಹಂಚಿಕೊಟ್ಟಿದ್ದಾರೆ, ಅವರ ಕೈಯೇ ನೂಲುಹಿಡಿದು ನಾಡನ್ನು ಇವುಗಳಿಗೆ ವಿಭಾಗಮಾಡಿದೆ; ಅದು ಇವುಗಳಿಗೆ ಶಾಶ್ವತ ಸೊತ್ತಾಗುವುದು, ತಲತಲಾಂತರಕ್ಕೂ ಅವು ಅಲ್ಲಿ ವಾಸಮಾಡುವುವು.


ನಿನೆವೆ ಬರಿದಾಗಿದೆ; ಬಟ್ಟಬರಿದಾಗಿ ಪಾಳುಬಿದ್ದಿದೆ; ಎದೆಕರಗಿದೆ, ಮೊಣಕಾಲುಗಳು ಅದರುತ್ತಿವೆ. ಎಲ್ಲರ ಸೊಂಟಗಳು ಮುರಿದಂತಾಗಿವೆ, ಅವರ ಮುಖಗಳು ಬಾಡಿಹೋಗಿವೆ.


ಕೆಡುವಲಾದ ಸೊದೋಮ್, ಗೋಮೊರ ನಗರಗಳಲ್ಲೂ ಸುತ್ತಣ ಊರುಗಳಲ್ಲೂ ಆದಂತೆಯೇ ಎದೋಮಿನಲ್ಲೂ ಆಗುವುದು. ಅಲ್ಲಿ ಯಾರೂ ವಾಸಿಸರು, ಯಾವ ನರಪ್ರಾಣಿಯೂ ನೆಲಸದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು