Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 36:12 - ಕನ್ನಡ ಸತ್ಯವೇದವು C.L. Bible (BSI)

12 ಅದಕ್ಕೆ ಆ ದಳಪತಿಯು, “ನನ್ನ ಯಜಮಾನನು, ನಿಮ್ಮ ಸಂಗಡವಾಗಲಿ ಮತ್ತು ನಿಮ್ಮ ಒಡೆಯರ ಸಂಗಡವಾಗಲಿ ಮಾತ್ರ ಮಾತನಾಡಬೇಕೆಂದು ನನ್ನನ್ನು ಕಳುಹಿಸಲಿಲ್ಲ. ಈ ಗೋಡೆಯ ಮೇಲೆ ಕುಳಿತಿರುವ ಜನರ ಸಂಗಡವೂ ಮಾತನಾಡುವುದಕ್ಕಾಗಿ ಕಳುಹಿಸಿದ್ದಾರೆ. ಈ ಜನರು ನಮಗೆ ವಿರುದ್ಧವಾಗಿ ಹೋರಾಡಿದರೆ ನಿಮ್ಮ ಹಾಗೆ ಇವರು ಕೂಡ ತಮ್ಮ ಸ್ವಂತ ಮಲಮೂತ್ರವನ್ನು ತಿಂದು ಕುಡಿಯಬೇಕಾಗುತ್ತದೆ” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಅದಕ್ಕೆ ರಬ್ಷಾಕೆಯು, “ನನ್ನ ಯಜಮಾನನು ನಿಮ್ಮ ಸಂಗಡವಾಗಲಿ, ನಿಮ್ಮ ಒಡೆಯನ ಸಂಗಡವಾಗಲಿ ಈ ಮಾತುಗಳನ್ನು ಹೇಳುವುದಕ್ಕೆ ನನ್ನನ್ನು ಕಳುಹಿಸಲಿಲ್ಲ. ಈ ಗೋಡೆಯ ಮೇಲೆ ಕುಳಿತಿರುವ ಜನರ ಸಂಗಡ ಮಾತನಾಡುವುದಕ್ಕೋಸ್ಕರ ಕಳುಹಿಸಿದ್ದಾನೆ. ಅವರು ನನ್ನ ವಿರುದ್ಧವಾಗಿ ನಿಂತರೆ ನಿಮ್ಮೊಡನೆ ಸ್ವಂತ ಮಲವನ್ನು ತಿಂದು ಸ್ವಂತ ಮೂತ್ರವನ್ನು ಕುಡಿಯಬೇಕಾಗುವುದು” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಅದಕ್ಕೆ ರಬ್ಷಾಕೆಯು - ನನ್ನ ಯಜಮಾನನು ನಿಮ್ಮ ಸಂಗಡವಾಗಲಿ ನಿಮ್ಮ ಒಡೆಯನ ಸಂಗಡವಾಗಲಿ ಮಾತಾಡಬೇಕೆಂದು ನನ್ನನ್ನು ಕಳುಹಿಸಲಿಲ್ಲ. ಈ ಗೋಡೆಯ ಮೇಲೆ ಕೂತಿರುವ ಜನರ ಸಂಗಡ ಮಾತಾಡುವದಕ್ಕೋಸ್ಕರ ಕಳುಹಿಸಿದ್ದಾನೆ. ಅವರು ನನಗೆ ವಿರುದ್ಧವಾಗಿ ನಿಂತರೆ ನಿಮ್ಮೊಡನೆ ಸ್ವಂತ ಮಲವನ್ನು ತಿಂದು ಸ್ವಂತ ಮೂತ್ರವನ್ನು ಕುಡಿಯಬೇಕಾಗುವದು ಎಂದು ಉತ್ತರಕೊಟ್ಟು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಸೇನಾದಂಡನಾಯಕನು ಅದಕ್ಕುತ್ತರವಾಗಿ, “ನನ್ನ ಒಡೆಯನು ನಿಮ್ಮೊಂದಿಗೂ ನಿಮ್ಮ ಅರಸನೊಂದಿಗೂ ಮಾತ್ರ ಮಾತನಾಡಲು ಕಳುಹಿಸಲಿಲ್ಲ. ನನ್ನ ಒಡೆಯನು ಕೋಟೆಗೋಡೆಯ ಮೇಲೆ ಕುಳಿತಿರುವ ಜನರೊಂದಿಗೆ ಮಾತಾಡಲು ಕಳುಹಿಸಿದ್ದಾನೆ. ಆ ಜನರಿಗೆ ಊಟಕ್ಕೆ ಆಹಾರ, ಕುಡಿಯಲು ನೀರು ದೊರಕುವದಿಲ್ಲ. ಅವರು ನಿಮ್ಮ ಹಾಗೆ ತಮ್ಮ ಸ್ವಂತ ಮಲವನ್ನು ತಿಂದು ಮೂತ್ರವನ್ನು ಕುಡಿಯುವರು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆದರೆ ರಬ್ಷಾಕೆಯು ಅವರಿಗೆ, “ನನ್ನ ಯಜಮಾನನು ನಿಮ್ಮ ಸಂಗಡವಾಗಲಿ, ನಿಮ್ಮ ಯಜಮಾನನ ಸಂಗಡವಾಗಲಿ ಮಾತ್ರ ಈ ಮಾತುಗಳನ್ನು ಹೇಳುವುದಕ್ಕೆ ಕಳುಹಿಸಲಿಲ್ಲ. ಈ ಗೋಡೆಯ ಮೇಲೆ ಕುಳಿತ ಜನರ ಸಂಗಡವೂ ಮಾತನಾಡುವುದಕ್ಕಾಗಿ ಕಳುಹಿಸಿದ್ದಾರೆ. ಈ ಜನರು ನಿಮ್ಮ ಸಂಗಡ ಇದ್ದರೆ ನಿಮ್ಮ ಹಾಗೆ ಇವರೂ ಸಹ ತಮ್ಮ ಸ್ವಂತ ಮಲಮೂತ್ರವನ್ನು ತಿಂದು ಕುಡಿಯಬೇಕಾಗುತ್ತದೆ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 36:12
11 ತಿಳಿವುಗಳ ಹೋಲಿಕೆ  

ಅದಕ್ಕೆ ರಬ್ಷಾಕೆಯು, “ನನ್ನ ಯಜಮಾನರು, ನಿಮ್ಮ ಸಂಗಡವಾಗಲಿ ಮತ್ತು ನಿಮ್ಮ ಒಡೆಯರ ಸಂಗಡವಾಗಲಿ ಮಾತನಾಡಬೇಕೆಂದು ನನ್ನನ್ನು ಕಳುಹಿಸಲಿಲ್ಲ. ಈ ಗೋಡೆಯ ಮೇಲೆ ಕುಳಿತಿರುವ ಜನರ ಸಂಗಡ ಮಾತನಾಡುವುದಕ್ಕಾಗಿಯೇ ಕಳುಹಿಸಿದ್ದಾರೆ. ಈ ಜನರು ನಿಮ್ಮೊಡನೆ ಇದ್ದರೆ ನಿಮ್ಮ ಹಾಗೆ ಇವರು ಕೂಡ ತಮ್ಮ ಸ್ವಂತ ಮಲಮೂತ್ರವನ್ನು ತಿಂದು ಕುಡಿಯಬೇಕಾಗುತ್ತದೆ,” ಎಂದು ಉತ್ತರಕೊಟ್ಟನು.


ಇದಲ್ಲದೆ ಅವರು ನನಗೆ ಹೀಗೆ ಹೇಳಿದರು: “ನರಪುತ್ರನೇ, ನಾನು ಜೆರುಸಲೇಮಿನಲ್ಲಿ ಆಹಾರ ಸರಬರಾಜನ್ನು ನಿಲ್ಲಿಸಿಬಿಡುವೆನು. ನಿವಾಸಿಗಳು ಅನ್ನವನ್ನು ತೂಕಮಾಡಿ ಅಂಜಿಕೆಯಿಂದ ತಿನ್ನುವರು, ನೀರನ್ನು ಅಳತೆಮಾಡಿ ಕಳವಳದಿಂದ ಕುಡಿಯುವರು;


ಅವರ ಶತ್ರುಗಳು, ಕೊಲೆಗಡುಕರು ಅವರನ್ನು ಮುತ್ತಿ ನಸುಕುವಾಗ ಒಬ್ಬರು ಮತ್ತೊಬ್ಬರನ್ನು ತಿನ್ನುವುದು ಮಾತ್ರವಲ್ಲ, ತಮ್ಮ ಪುತ್ರಪುತ್ರಿಯರ ಮಾಂಸವನ್ನೇ ತಿನ್ನುವರು.’


ಅತ್ತ ಕಿತ್ತುತಿಂದರೂ ಅವರಿಗೆ ತೃಪ್ತಿಯಿಲ್ಲ. ಇತ್ತ ಕುಡಿದು ಕಬಳಿಸಿದರೂ ಅವರ ಹಸಿವು ನೀಗುವುದಿಲ್ಲ. ಒಬ್ಬೊಬ್ಬನೂ ತನ್ನ ಕಂದನನ್ನೇ ಕೊಂದು ತಿನ್ನುತ್ತಾನೆ.


ನೀವು ನಿಮ್ಮ ಗಂಡುಹೆಣ್ಣು ಮಕ್ಕಳ ಮಾಂಸವನ್ನೇ ತಿನ್ನುವಿರಿ.


ಆಗ ಎಲ್ಯಾಕೀಮ್, ಶೆಬ್ನ ಮತ್ತು ಯೋವ ಎಂಬವರು ಆ ದಳಪತಿಗೆ, “ದಯವಿಟ್ಟು ನಿನ್ನ ಸೇವಕರಾದ ನಮ್ಮೊಡನೆ ಆರಾಮಾಯಿಕ ಭಾಷೆಯಲ್ಲಿ ಮಾತನಾಡಿ, ಅದು ನಮಗೆ ಅರ್ಥವಾಗುತ್ತದೆ. ಆದರೆ ಹಿಬ್ರು ಭಾಷೆಯಲ್ಲಿ ಮಾತನಾಡಬೇಡಿ, ಅದು ಪೌಳಿಗೋಡೆಯ ಮೇಲಿರುವ ಎಲ್ಲರಿಗೂ ಅರ್ಥವಾಗುತ್ತದೆ,” ಎಂದರು.


ಬಳಿಕ ಆ ದಳಪತಿಯು ಆ ಗೋಡೆಯ ಮೇಲೆ ನಿಂತಿದ್ದವರನ್ನು ಉದ್ದೇಶಿಸಿ ಹಿಬ್ರು ಭಾಷೆಯಲ್ಲಿ, “ನೀವು ಅಸ್ಸೀರಿಯದ ರಾಜಾಧಿರಾಜನ ಮಾತನ್ನು ಕೇಳಿರಿ;


ನೀನು ಸೌದೆಗೆ ಬದಲಾಗಿ ಮನುಷ್ಯನ ಮಲವನ್ನು ಉರಿಸಿ, ನಿನ್ನ ಜನರ ಕಣ್ಣೆದುರಿಗೆ ಆ ಹಿಟ್ಟನ್ನು ರೊಟ್ಟಿಮಾಡಿ ಜವೆಗೋದಿಯ ರೊಟ್ಟಿಗಳಂತೆ ತಿನ್ನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು