17 ಸ್ವಲ್ಪ ಕಾಲವಾದನಂತರ ಆತನು ಬಂದು ನಿಮ್ಮನ್ನು ಇನ್ನೊಂದು ನಾಡಿಗೆ ಕರೆದುಕೊಂಡು ಹೋಗುವನು. ಅಲ್ಲಿ ಧಾನ್ಯ, ದ್ರಾಕ್ಷಾರಸ, ಆಹಾರ, ದ್ರಾಕ್ಷಿತೋಟ ಇವು ಸಮೃದ್ಧಿಯಾಗಿರುವುವು, ನಿಮ್ಮ ನಾಡಿಗೆ ಸರಿಸಮಾನವಾಗಿರುವುವು;
17 ಸ್ವಲ್ಪ ಕಾಲವಾದ ನಂತರ ನಾನು ಬಂದು ನಿಮ್ಮನ್ನು ಧಾನ್ಯ, ದ್ರಾಕ್ಷಾರಸ, ಆಹಾರ, ದ್ರಾಕ್ಷಿತೋಟ ಇವು ಸಮೃದ್ಧಿಯಾಗಿರುವ ನಿಮ್ಮ ದೇಶಕ್ಕೆ ಸಮಾನವಾದ ಇನ್ನೊಂದು ದೇಶಕ್ಕೆ ಕರೆದುಕೊಂಡು ಹೋಗುವೆನು.”
17 ಸ್ವಲ್ಪ ಕಾಲವಾದನಂತರ ನಾನು ಬಂದು ನಿಮ್ಮನ್ನು ಧಾನ್ಯ ದ್ರಾಕ್ಷಾರಸ, ಆಹಾರ, ದ್ರಾಕ್ಷೇತೋಟ ಇವು ಸಮೃದ್ಧಿಯಾಗಿರುವ ನಿಮ್ಮ ದೇಶಕ್ಕೆ ಸಮಾನವಾದ ಇನ್ನೊಂದು ದೇಶಕ್ಕೆ ಕರಕೊಂಡು ಹೋಗುವೆನು;
17 ಹೀಗೆ ನೀವು ಸೇವಿಸುತ್ತಾ ಇದ್ದರೆ ನಾನು ಬಂದು ನಿಮ್ಮ ದೇಶಕ್ಕೆ ಸಮಾನವಾದ ಇನ್ನೊಂದು ದೇಶಕ್ಕೆ ನಿಮ್ಮನ್ನು ಕರೆದೊಯ್ಯವೆನು. ಆ ಹೊಸ ದೇಶದಲ್ಲಿ ನೀವು ಒಳ್ಳೆಯ ಧಾನ್ಯವನ್ನು ಮತ್ತು ಹೊಸ ದ್ರಾಕ್ಷಾರಸವನ್ನು, ರೊಟ್ಟಿಯನ್ನು ಮತ್ತು ದ್ರಾಕ್ಷಿತೋಟಗಳನ್ನು ಹೊಂದುವಿರಿ.”
17 ಸ್ವಲ್ಪ ಕಾಲವಾದ ನಂತರ ನಾನು ಬಂದು ನಿಮ್ಮನ್ನು ಧಾನ್ಯ, ದ್ರಾಕ್ಷಾರಸ, ಆಹಾರ, ದ್ರಾಕ್ಷಿತೋಟ, ಇವು ಸಮೃದ್ಧಿಯಾಗಿರುವ ನಿಮ್ಮ ದೇಶಕ್ಕೆ ಸಮಾನವಾಗಿರುವ ಇನ್ನೊಂದು ದೇಶಕ್ಕೆ ಕರೆದುಕೊಂಡು ಹೋಗುವೆನು.
ಸ್ವಲ್ಪಕಾಲವಾದ ನಂತರ ನಾನು ಬಂದು ನಿಮ್ಮನ್ನು ಇನ್ನೊಂದು ನಾಡಿಗೆ ಕರೆದುಕೊಂಡು ಹೋಗುವೆನು. ಅಲ್ಲಿ ಧಾನ್ಯ, ದ್ರಾಕ್ಷಾರಸ, ಆಹಾರ, ದ್ರಾಕ್ಷೀತೋಟ, ಎಣ್ಣೇಮರ, ಜೇನುತುಪ್ಪ ಸಮೃದ್ಧಿಯಾಗಿರುವುವು. ನಿಮ್ಮ ನಾಡಿಗೆ ಸರಿಸಮಾನವಾಗಿರುವುವು; ನೀವು ಸಾಯುವುದಿಲ್ಲ, ಬದುಕುವಿರಿ; ‘ಸರ್ವೇಶ್ವರ ನಮ್ಮನ್ನು ರಕ್ಷಿಸುವರು’ ಎಂಬ ನಂಬಿಕೆಯನ್ನು ಹಿಜ್ಕೀಯನು ನಿಮ್ಮಲ್ಲಿ ಮೂಡಿಸದಂತೆ ಎಚ್ಚರಿಕೆಯಾಗಿರಿ.
ಆದಕಾರಣ ಅವರನ್ನು ಈಜಿಪ್ಟಿನವರ ಕೈಯಿಂದ ಬಿಡಿಸುವುದಕ್ಕು ಮತ್ತು ಆ ದೇಶದಿಂದ ಹೊರತಂದು ಹಾಲೂ ಜೇನೂ ಹರಿಯುವ ಸವಿಸ್ತಾರವಾದ ಒಳ್ಳೆಯ ನಾಡಿಗೆ, ಅಂದರೆ ಕಾನಾನ್ಯರು, ಹಿತ್ತಿಯರು, ಆಮೋರಿಯರು, ಪೆರಿಜೀಯರು, ಹಿವ್ವಿಯರು ಹಾಗು ಯೆಬೂಸಿಯರು ವಾಸವಾಗಿರುವ ನಾಡಿಗೆ ನಡೆಸಿಕೊಂಡು ಹೋಗುವುದಕ್ಕು ಇಳಿದು ಬಂದಿದ್ದೇನೆ.
ಅಸ್ಸೀರಿಯದ ಅರಸನಾದ ನನ್ನ ಒಡೆಯನ ಮಾತನ್ನು ಕೇಳಿ; ಆತನೊಡನೆ ಒಪ್ಪಂದ ಮಾಡಿಕೊಂಡು ಆತನ ಆಶ್ರಯವನ್ನು ಸೇರಿರಿ. ಆಗ ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ಅಂಜೂರಮರದ ಹಾಗೂ ದ್ರಾಕ್ಷಾಲತೆಯ ಹಣ್ಣುಗಳನ್ನು ತಿನ್ನುವನು; ತನ್ನ ಬಾವಿಯ ನೀರನ್ನು ಕುಡಿಯುವನು.
‘ಸರ್ವೇಶ್ವರ ನಮ್ಮನ್ನು ರಕ್ಷಿಸುವರು’ ಎಂಬ ನಂಬಿಕೆಯನ್ನು ಹಿಜ್ಕೀಯನು ನಿಮ್ಮಲ್ಲಿ ಮೂಡಿಸದಂತೆ ಎಚ್ಚರಿಕೆಯಾಗಿರಿ. ಯಾವ ರಾಷ್ಟ್ರದ ದೇವರುಗಳು ತಾನೇ ಅಸ್ಸೀರಿಯದ ಅರಸನ ಕೈಯಿಂದ ನಾಡನ್ನು ಬಿಡಿಸಿಕೊಂಡಿದ್ದಾರೆ?