Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 36:18 - ಕನ್ನಡ ಸತ್ಯವೇದವು C.L. Bible (BSI)

18 ‘ಸರ್ವೇಶ್ವರ ನಮ್ಮನ್ನು ರಕ್ಷಿಸುವರು’ ಎಂಬ ನಂಬಿಕೆಯನ್ನು ಹಿಜ್ಕೀಯನು ನಿಮ್ಮಲ್ಲಿ ಮೂಡಿಸದಂತೆ ಎಚ್ಚರಿಕೆಯಾಗಿರಿ. ಯಾವ ರಾಷ್ಟ್ರದ ದೇವರುಗಳು ತಾನೇ ಅಸ್ಸೀರಿಯದ ಅರಸನ ಕೈಯಿಂದ ನಾಡನ್ನು ಬಿಡಿಸಿಕೊಂಡಿದ್ದಾರೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 “ಯೆಹೋವನು ನಮ್ಮನ್ನು ರಕ್ಷಿಸುವನು ಎಂಬ ನಂಬಿಕೆಯನ್ನು ಹಿಜ್ಕೀಯನು ನಿಮ್ಮಲ್ಲಿ ಹುಟ್ಟಿಸಾನು ನೋಡಿಕೊಳ್ಳಿರಿ. ಯಾವ ಜನಾಂಗದ ದೇವತೆಯು ತನ್ನ ದೇಶವನ್ನು ಅಶ್ಶೂರದ ಅರಸನ ಕೈಗೆ ಸಿಕ್ಕದಂತೆ ಕಾಪಾಡಿತು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಯೆಹೋವನು ನಮ್ಮನ್ನು ರಕ್ಷಿಸುವನು ಎಂಬ ನಂಬಿಕೆಯನ್ನು ಹಿಜ್ಕೀಯನು ನಿಮ್ಮಲ್ಲಿ ಹುಟ್ಟಿಸಾನು ನೋಡಿಕೊಳ್ಳಿರಿ. ಯಾವ ಜನಾಂಗದ ದೇವತೆಯು ತನ್ನ ದೇಶವನ್ನು ಅಶ್ಶೂರದ ಅರಸನ ಕೈಗೆ ಸಿಕ್ಕದಂತೆ ಕಾಪಾಡಿತು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 “‘ಹಿಜ್ಕೀಯನು ತನ್ನ ಮಾತುಗಳಿಂದ ನಿಮ್ಮನ್ನು ಮೋಸಗೊಳಿಸದಂತೆ ನೋಡಿಕೊಳ್ಳಿರಿ. ಅವನು, “ಯೆಹೋವನು ನಮ್ಮನ್ನು ರಕ್ಷಿಸುತ್ತಾನೆ” ಎಂದು ಹೇಳುತ್ತಾನೆ. ನಾನು ನಿಮಗೆ ಒಂದು ಪ್ರಶ್ನೆ ಕೇಳುತ್ತೇನೆ. ಬೇರೆ ದೇಶದ ದೇವರುಗಳು ಅವರ ದೇಶವನ್ನು ಅಶ್ಶೂರದ ಅರಸನಿಂದ ಕಾಪಾಡಲು ಶಕ್ತರಾದರೋ? ಇಲ್ಲ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 “ ‘ಯೆಹೋವ ದೇವರು ನಮ್ಮನ್ನು ರಕ್ಷಿಸುವರು,’ ಎಂದು ಹೇಳಿ ಹಿಜ್ಕೀಯನು ನಿಮ್ಮನ್ನು ಪ್ರೇರೇಪಿಸದಂತೆ ಎಚ್ಚರಿಕೆಯಾಗಿರಿ. ಯಾವ ಜನಾಂಗದ ದೇವರುಗಳಾದರೂ ತನ್ನ ದೇಶಗಳನ್ನು ಅಸ್ಸೀರಿಯದ ಅರಸನ ಕೈಯಿಂದ ಬಿಡಿಸಿದ್ದು ಉಂಟೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 36:18
25 ತಿಳಿವುಗಳ ಹೋಲಿಕೆ  

ಹಿಜ್ಕೀಯನು ನಿಮಗೆ, ‘ಸರ್ವೇಶ್ವರ ಸ್ವಾಮಿಯಲ್ಲಿ ನಂಬಿಕೆಯಿಡಿ; ಅವರು ನಿಮ್ಮನ್ನು ಹೇಗಾದರೂ ಮಾಡಿ ರಕ್ಷಿಸುವರು; ಈ ಪಟ್ಟಣವು ಅಸ್ಸೀರಿಯದ ರಾಜನ ವಶವಾಗುವುದಿಲ್ಲ,’ ಎಂಬುದಾಗಿ ಹೇಳಿದರೆ ಅವನಿಗೆ ಕಿವಿಗೊಡಬೇಡಿ, ಒಪ್ಪಿಕೊಳ್ಳಬೇಡಿ.


ಈಗಲಾದರು ನೀವು ಸಿದ್ಧರಾಗಿದ್ದು ತುತೂರಿ, ಕೊಳಲು, ಕಿನ್ನರಿ, ತಂಬೂರಿ, ವೀಣೆ, ಓಲಗ ಮುಂತಾದ ಸಕಲ ವಾದ್ಯಗಳ ಧ್ವನಿ ಕೇಳಿದ ಕೂಡಲೆ ಅಡ್ಡಬಿದ್ದು ನಾನು ಸ್ಥಾಪಿಸಿದ ಪ್ರತಿಮೆಯನ್ನು ಆರಾಧಿಸಿದರೆ ಸರಿ, ಇಲ್ಲವಾದರೆ ಈ ಗಳಿಗೆಯಲ್ಲೆ ನಿಮ್ಮನ್ನು ಧಗಧಗನೆ ಉರಿಯುವ ಆವಿಗೆಯೊಳಗೆ ಹಾಕಲಾಗುವುದು. ನಿಮ್ಮನ್ನು ನನ್ನ ಕೈಯಿಂದ ಬಿಡಿಸಬಲ್ಲ ದೇವರು ಯಾರಿದ್ದಾನೆ?” ಎಂದು ಹೇಳಿದನು.


“ಜೆರುಸಲೇಮ್ ನನ್ನ ವಶವಾಗುವುದಿಲ್ಲವೆಂದು ನೀನು ನಂಬುವ ದೇವರು ಹೇಳಿ, ನಿನ್ನನ್ನು ಮೋಸಗೊಳಿಸಿದ್ದಾನೆ.


ಈ ನಾಡನ್ನು ಹಾಳುಮಾಡುವುದಕ್ಕೆ ಸರ್ವೇಶ್ವರ ಸ್ವಾಮಿಯ ಒಪ್ಪಿಗೆಯಿಲ್ಲದೆ ಇಲ್ಲಿಗೆ ನಾನು ಬಂದೆನೆಂದು ನೆನಸುತ್ತೀಯೋ? ‘ಇಲ್ಲಿಗೆ ಬಂದು ಇದನ್ನು ಹಾಳುಮಾಡಿಬಿಡು’ ಎಂದು ಆ ಸರ್ವೇಶ್ವರ ಸ್ವಾಮಿಯೇ ನಿನಗೆ ಆಜ್ಞೆಮಾಡಿದ್ದಾರೆ,’ ಎಂಬ ಈ ಮಾತುಗಳು ಅರಸನ ಮಾತುಗಳೆಂದು ಹೋಗಿ ತಿಳಿಸಿರಿ” ಎಂದನು.


‘ಬಹುಶಃ, ನೀನು ‘ನಮ್ಮ ದೇವರಾದ ಸರ್ವೇಶ್ವರನನ್ನೇ ನಂಬಿಕೊಂಡಿದ್ದೇವೆ’, ಎಂದು ಹೇಳಬಹುದು. ಹಿಜ್ಕೀಯನು, ಇದೇ ಬಲಿಪೀಠದ ಮುಂದೆ ಆರಾಧನೆಮಾಡಬೇಕು ಎಂದು ಯೆಹೂದ್ಯರಿಗೆ ಮತ್ತು ಜೆರುಸಲೇಮಿನವರಿಗೆ ಆಜ್ಞಾಪಿಸಿ ಆ ಸರ್ವೇಶ್ವರ ಸ್ವಾಮಿಯ ಪೂಜಾಸ್ಥಳಗಳನ್ನೂ ಬೇರೆ ಎಲ್ಲಾ ಬಲಿಪೀಠಗಳನ್ನೂ ಹಾಳುಮಾಡಿದನಲ್ಲವೆ?


“ನಮ್ಮ ತುಟಿಗೆ ಹತೋಟಿ ಬೇಕಿಲ್ಲ; ನಾಲಗೆಯೇ ಗೆಲುವಿನ ಮೂಲ I ನಮಗೊಡೆಯನ ಅವಶ್ಯವಿಲ್ಲ” ಎಂದವರಾಡುವುದು ಸಲ್ಲ II


ಸ್ವಲ್ಪ ಕಾಲವಾದನಂತರ ಆತನು ಬಂದು ನಿಮ್ಮನ್ನು ಇನ್ನೊಂದು ನಾಡಿಗೆ ಕರೆದುಕೊಂಡು ಹೋಗುವನು. ಅಲ್ಲಿ ಧಾನ್ಯ, ದ್ರಾಕ್ಷಾರಸ, ಆಹಾರ, ದ್ರಾಕ್ಷಿತೋಟ ಇವು ಸಮೃದ್ಧಿಯಾಗಿರುವುವು, ನಿಮ್ಮ ನಾಡಿಗೆ ಸರಿಸಮಾನವಾಗಿರುವುವು;


ಅಸ್ಸೀರಿಯದ ಅರಸನಿಂದ ಬಂದಿರುವ ಸೇನಾಪತಿ ಆಡಿದ ಮಾತುಗಳನ್ನು ನಿನ್ನ ದೇವರಾದ ಸರ್ವೇಶ್ವರ ಕೇಳಿದ್ದಾರೆ. ಆ ಸೇನಾಪತಿ ತನ್ನ ಒಡೆಯನ ಹೆಸರಿನಲ್ಲಿ ಜೀವಸ್ವರೂಪರಾದ ಆ ದೇವರನ್ನು ದೂಷಿಸಿದ್ದಾನೆ. ಅವನಿಗೆ ತಕ್ಕ ದಂಡನೆಯಾಗಬೇಕು. ಹೀಗಿರಲು ಅಳಿದುಳಿದಿರುವ ಜನರಿಗಾಗಿ ದೇವರನ್ನು ನೀನು ಪ್ರಾರ್ಥನೆ ಮಾಡಬೇಕೆಂದು ಹಿಜ್ಕೀಯ ಕೇಳಿಕೊಂಡಿದ್ದಾನೆ,’ ಎಂದು ತಿಳಿಸಿ.”


ಅಸ್ಸೀರಿಯದ ಅರಸನು ಎಲ್ಲಾ ರಾಜ್ಯಗಳನ್ನು ಸಂಪೂರ್ಣವಾಗಿ ನಾಶಮಾಡಿದ್ದಾನೆಂಬ ಸಮಾಚಾರ ನಿನಗೆ ಮುಟ್ಟಿರಬೇಕು. ಹೀಗಿರುವಲ್ಲಿ ನೀನು ಮಾತ್ರ ತಪ್ಪಿಸಿಕೊಳ್ಳುವಿಯೋ?


ಆದರೆ ಅಸ್ಸೀರಿಯದ ಆಲೋಚನೆಯೇ ಬೇರೆ. ಅನೇಕಾನೇಕ ಜನಾಂಗಗಳನ್ನು ತಾನೇ ಸಂಹರಿಸಿ ನಿರ್ಮೂಲಮಾಡಬೇಕೆಂಬ ಯೋಜನೆ ಅದರದು.


ಸಮಾರ್ಯವನ್ನೂ ಅದರ ವಿಗ್ರಹಗಳನ್ನೂ ನಾಶಮಾಡಿದ ಪ್ರಕಾರ ಜೆರುಸಲೇಮನ್ನೂ ಅದರ ಮೂರ್ತಿಗಳನ್ನೂ ನಾಶಮಾಡುತ್ತೇನೆ” ಎಂದು ಅಸ್ಸೀರಿಯ ಕೊಚ್ಚಿಕೊಳ್ಳುತ್ತಿದೆ.


ಇಂತಿರಲು ವನವೃಕ್ಷಗಳಲೆಲ್ಲ ಆ ವೃಕ್ಷ ಅತ್ಯುನ್ನತವಾಗಿತ್ತು ಅದರ ರೆಂಬೆಗಳು ನಿಬಿಡವಾಗಿದ್ದವು, ಉದ್ದುದ್ದ ಚಾಚಿಕೊಂಡಿದ್ದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು