Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 36:22 - ಕನ್ನಡ ಸತ್ಯವೇದವು C.L. Bible (BSI)

22 ಬಳಿಕ, ಹಿಲ್ಕೀಯನ ಮಗನೂ ರಾಜ ಗೃಹಾಧಿಪತಿಯೂ ಆಗಿದ್ದ ಎಲ್ಯಾಕೀಮ್, ಕಾರ್ಯದರ್ಶಿ ಶೆಬ್ನ, ಆಸಾಫನ ಮಗನೂ ಮಂತ್ರಿಯೂ ಆಗಿದ್ದ ಯೋವ ಎಂಬವರು ಸಿಟ್ಟಿನಿಂದ ಬಟ್ಟೆಗಳನ್ನು ಹರಿದುಕೊಂಡು, ಅರಸ ಹಿಜ್ಕೀಯನ ಬಳಿಗೆ ಬಂದು, ಅವನಿಗೆ ಆ ಸೇನಾಪತಿಯ ಮಾತುಗಳನ್ನು ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಹಿಲ್ಕೀಯನ ಮಗನೂ ರಾಜಗೃಹಾಧಿಪತಿಯೂ ಆಗಿದ್ದ ಎಲ್ಯಾಕೀಮ್, ಲೇಖಕನಾದ ಶೆಬ್ನ, ಆಸಾಫನ ಮಗನೂ ಮಂತ್ರಿಯೂ ಆಗಿದ್ದ ಯೋವ ಎಂಬುವವರು ತಮ್ಮ ಬಟ್ಟೆಗಳನ್ನು ಹರಿದುಕೊಂಡು ಅರಸನಾದ ಹಿಜ್ಕೀಯನ ಬಳಿಗೆ ಬಂದು ಅವನಿಗೆ ರಬ್ಷಾಕೆಯ ಮಾತುಗಳನ್ನು ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಹಿಲ್ಕೀಯನ ಮಗನೂ ರಾಜಗೃಹಾಧಿಪತಿಯೂ ಆಗಿದ್ದ ಎಲ್ಯಾಕೀಮ್, ಲೇಖಕನಾದ ಶೆಬ್ನ, ಆಸಾಫನ ಮಗನೂ ಮಂತ್ರಿಯೂ ಆಗಿದ್ದ ಯೋವ ಎಂಬವರು ತಮ್ಮ ಬಟ್ಟೆಗಳನ್ನು ಹರಿದುಕೊಂಡು ಅರಸನಾದ ಹಿಜ್ಕೀಯನ ಬಳಿಗೆ ಬಂದು ಅವನಿಗೆ ರಬ್ಷಾಕೆಯ ಮಾತುಗಳನ್ನು ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಹಿಲ್ಕೀಯನ ಮಗನೂ ಅರಮನೆಯ ಆಡಳಿತಾಧಿಕಾರಿಯೂ ಆಗಿದ್ದ ಎಲ್ಯಾಕೀಮ್, ಲೇಖಕನಾದ ಶೆಬ್ಹ, ಆಸಾಫನ ಮಗನೂ ಮಂತ್ರಿಯೂ ಆಗಿದ್ದ ಯೋವ ಎಂಬವರು ತಮ್ಮ ಬಟ್ಟೆಗಳನ್ನು ಹರಿದುಕೊಂಡು ಹಿಜ್ಕೀಯನ ಬಳಿಗೆ ಬಂದು ಅಶ್ಶೂರದ ಸೇನಾದಂಡನಾಯಕ ಹೇಳಿದ್ದನ್ನೆಲ್ಲಾ ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಆಗ ಅರಮನೆಯ ಮೇಲ್ವಿಚಾರಕನಾದ ಹಿಲ್ಕೀಯನ ಮಗ ಎಲ್ಯಾಕೀಮನೂ ಕಾರ್ಯದರ್ಶಿಯಾದ ಶೆಬ್ನನೂ, ದಾಖಲೆಗಾರನಾದ ಆಸಾಫನ ಮಗ ಯೋವ ಎಂಬವನೂ ತಮ್ಮ ಬಟ್ಟೆಗಳನ್ನು ಹರಿದುಕೊಂಡು ಹಿಜ್ಕೀಯನ ಬಳಿಗೆ ಬಂದು ಸೈನ್ಯಾಧಿಕಾರಿಯಾದ ರಬ್ಷಾಕೆ ಹೇಳಿದ ಮಾತುಗಳನ್ನು ಅವನಿಗೆ ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 36:22
12 ತಿಳಿವುಗಳ ಹೋಲಿಕೆ  

ಆಮೇಲೆ ಹಿಲ್ಕೀಯನ ಮಗನೂ ರಾಜಗೃಹಾಧಿಪತಿಯೂ ಆದ ಎಲ್ಯಾಕೀಮ್, ಕಾರ್ಯದರ್ಶಿಯಾದ‍ ಶೆಬ್ನ ಮತ್ತು ಆಸಾಫನ ಮಗನೂ ಮಂತ್ರಿಯೂ ಆಗಿದ್ದ ಯೋವ ಎಂಬ ಮೂವರು ಅಲ್ಲಿಗೆ ಬಂದರು.


ಇಗೋ, ವೀರರು ಹೊರಗೆ ಹಾಹಾಕಾರ ಮಾಡುತಿಹರು. ಶಾಂತಿದೂತರಾದ ರಾಯಭಾರಿಗಳು ಘೋರವಾಗಿ ಅಳುತಿಹರು.


ಇದನ್ನು ಕೇಳಿದ್ದೇ ಪ್ರಧಾನಯಾಜಕನು ತನ್ನ ಉಡುಪನ್ನು ಕೋಪದಿಂದ ಹರಿದುಕೊಂಡನು. “ಇವನು ದೇವದೂಷಣೆ ಆಡಿದ್ದಾನೆ. ಇನ್ನು ನಮಗೆ ಸಾಕ್ಷಿಗಳು ಏತಕ್ಕೆ?


ಆಗ ಎಲ್ಯಾಕೀಮ್, ಶೆಬ್ನ ಮತ್ತು ಯೋವ ಎಂಬವರು ಆ ದಳಪತಿಗೆ, “ದಯವಿಟ್ಟು ನಿನ್ನ ಸೇವಕರಾದ ನಮ್ಮೊಡನೆ ಆರಾಮಾಯಿಕ ಭಾಷೆಯಲ್ಲಿ ಮಾತನಾಡಿ, ಅದು ನಮಗೆ ಅರ್ಥವಾಗುತ್ತದೆ. ಆದರೆ ಹಿಬ್ರು ಭಾಷೆಯಲ್ಲಿ ಮಾತನಾಡಬೇಡಿ, ಅದು ಪೌಳಿಗೋಡೆಯ ಮೇಲಿರುವ ಎಲ್ಲರಿಗೂ ಅರ್ಥವಾಗುತ್ತದೆ,” ಎಂದರು.


ಈ ಸಮಾಚಾರವನ್ನು ಕೇಳಿದೊಡನೆ ನಾನು ಸಿಟ್ಟಿನಿಂದ ಬಟ್ಟೆಗಳನ್ನೂ ಮೇಲಂಗಿಯನ್ನೂ ಹರಿದುಕೊಂಡು, ಸ್ತಬ್ಧನಾಗಿ ಕುಳಿತುಕೊಂಡೆ.


ಇಸ್ರಯೇಲರ ಅರಸನು ಈ ಪತ್ರವನ್ನು ಓದಿದ ಕೂಡಲೆ, ಸಿಟ್ಟಿನಿಂದ ಬಟ್ಟೆಗಳನ್ನು ಹರಿದುಕೊಂಡು, ತನ್ನ ಪರಿವಾರದವರಿಗೆ, “ತಾನು ಕಳುಹಿಸಿದ ವ್ಯಕ್ತಿಯನ್ನು ಚರ್ಮರೋಗದಿಂದ ನಾನು ವಾಸಿಮಾಡಬೇಕಂತೆ! ಇದು ಎಂಥ ಅಪ್ಪಣೆ; ನಾನೇನು ದೇವರೋ? ಜೀವದಾನ ಮಾಡುವುದಕ್ಕಾಗಲಿ ಜೀವಹರಣ ಮಾಡುವುದಕ್ಕಾಗಲಿ ನನಗೆ ಸಾಮರ್ಥ್ಯವುಂಟೇ? ಇವನು ನನ್ನೊಡನೆ ಯುದ್ಧಮಾಡುವುದಕ್ಕೆ ನೆಪ ಹುಡುಕುತ್ತಾನಲ್ಲದೆ ಮತ್ತೇನು? ನೀವೇ ಆಲೋಚಿಸಿ ನೋಡಿ,” ಎಂದು ಹೇಳೀದನು.


ಆಗ ಹಿಲ್ಕೀಯನ ಮಗನೂ ರಾಜಗೃಹಾಧಿಪತಿಯೂ ಆದ ಎಲ್ಯಾಕೀಮ್, ಕಾರ್ಯದರ್ಶಿಯಾದ ಶೆಬ್ನ ಮತ್ತು ಆಸಾಫನ ಮಗನೂ ಮಂತ್ರಿಯೂ ಆಗಿದ್ದ ಯೋವ ಎಂಬವರು ಅಲ್ಲಿಗೆ ಬಂದರು.


ಸೇನಾಧೀಶ್ವರ ಸರ್ವೇಶ್ವರ ಸ್ವಾಮಿ ಹೀಗೆ ನುಡಿದಿದ್ದಾರೆ : “ಹೋಗು, ಅರಮನೆಯ ಮೇಲ್ವಿಚಾರಕ ಶೆಬ್ನ ಎಂಬ ಅಧ್ಯಕ್ಷನಿಗೆ ಹೀಗೆಂದು ಹೇಳು :


“ಆ ದಿನದಂದು, ನನ್ನ ದಾಸನೂ ಹಿಲ್ಕಿಯನ ಮಗನೂ ಆದ ಎಲ್ಯಾಕೀಮನನ್ನು ಬರಮಾಡುವೆನು.


ಅರಸನೇ ಆಗಲಿ, ಅವನ ಸೇವಕರಲ್ಲಿ ಯಾರೇ ಆಗಲಿ, ಸುರುಳಿಯ ಮಾತುಗಳನ್ನೆಲ್ಲಾ ಕೇಳಿಯೂ ಭಯಪಡಲಿಲ್ಲ. ದುಃಖಸೂಚನೆಗಾಗಿ ತಮ್ಮ ಬಟ್ಟೆಯನ್ನು ಹರಿದುಕೊಳ್ಳಲಿಲ್ಲ.


ಅನಂತರ ನಾನು ಅರೀಯೇಲನ್ನು ಬಾಧಿಸುವೆನು. ಅಲ್ಲಿ ಅರಚಾಟ ಕಿರಿಚಾಟ ಇರುವುದು. ಆ ಪಟ್ಟಣವು ವಾಸ್ತವವಾಗಿ ನನಗೆ ಅರೀಯೇಲಾಗಿಯೇ ಪರಿಣಮಿಸುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು