Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 36:7 - ಕನ್ನಡ ಸತ್ಯವೇದವು C.L. Bible (BSI)

7 ‘ಬಹುಶಃ, ನೀನು ‘ನಮ್ಮ ದೇವರಾದ ಸರ್ವೇಶ್ವರನನ್ನೇ ನಂಬಿಕೊಂಡಿದ್ದೇವೆ’, ಎಂದು ಹೇಳಬಹುದು. ಹಿಜ್ಕೀಯನು, ಇದೇ ಬಲಿಪೀಠದ ಮುಂದೆ ಆರಾಧನೆಮಾಡಬೇಕು ಎಂದು ಯೆಹೂದ್ಯರಿಗೆ ಮತ್ತು ಜೆರುಸಲೇಮಿನವರಿಗೆ ಆಜ್ಞಾಪಿಸಿ ಆ ಸರ್ವೇಶ್ವರ ಸ್ವಾಮಿಯ ಪೂಜಾಸ್ಥಳಗಳನ್ನೂ ಬೇರೆ ಎಲ್ಲಾ ಬಲಿಪೀಠಗಳನ್ನೂ ಹಾಳುಮಾಡಿದನಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಒಂದು ವೇಳೆ ನೀನು, ನಮ್ಮ ದೇವರಾದ ಯೆಹೋವನನ್ನು ನಂಬಿಕೊಂಡಿದ್ದೇವೆ’ ಎಂದು ಹೇಳಬಹುದು. ಹಿಜ್ಕೀಯನು, ‘ನೀವು ಯೆರೂಸಲೇಮಿನಲ್ಲಿರುವ ಇದೇ ಯಜ್ಞವೇದಿಯ ಮುಂದೆ ಆರಾಧನೆ ಮಾಡಬೇಕು’ ಎಂಬುದಾಗಿ ಯೆಹೂದ್ಯರಿಗೂ, ಯೆರೂಸಲೇಮಿನವರಿಗೂ ಆಜ್ಞಾಪಿಸಿ, ಆ ಯೆಹೋವನ ಪೂಜಾಸ್ಥಳಗಳನ್ನೂ ಬೇರೆ ಎಲ್ಲಾ ಯಜ್ಞವೇದಿಗಳನ್ನೂ ಹಾಳುಮಾಡಿದನಲ್ಲಾ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಒಂದು ವೇಳೆ ನೀನು - ನಮ್ಮ ದೇವರಾದ ಯೆಹೋವನನ್ನು ನಂಬಿಕೊಂಡಿದ್ದೇವೆಂದು ಹೇಳಬಹುದು. ಹಿಜ್ಕೀಯನು ಇದೇ ಯಜ್ಞವೇದಿಯ ಮುಂದೆ ಆರಾಧನೆ ಮಾಡಬೇಕೆಂಬದಾಗಿ ಯೆಹೂದ್ಯರಿಗೂ ಯೆರೂಸಲೇವಿುನವರಿಗೂ ಆಜ್ಞಾಪಿಸಿ ಆ ಯೆಹೋವನ ಪೂಜಾ ಸ್ಥಳಗಳನ್ನೂ ಬೇರೆ ಎಲ್ಲಾ ಯಜ್ಞವೇದಿಗಳನ್ನೂ ಹಾಳು ಮಾಡಿದನಲ್ಲಾ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 “‘ಒಂದುವೇಳೆ ನೀವು, “ನಾವು ನಮ್ಮ ದೇವರಾದ ಯೆಹೋವನ ಮೇಲೆ ಭರವಸವಿಟ್ಟಿದ್ದೇವೆ” ಎಂದು ಹೇಳಬಹುದು. ಆದರೆ ಜನರು ಯೆಹೋವನನ್ನು ಆರಾಧಿಸುತ್ತಿದ್ದ ವೇದಿಕೆಗಳನ್ನೂ ಎತ್ತರವಾದ ಸ್ಥಳಗಳನ್ನೂ ಹಿಜ್ಕೀಯನು ನಾಶಮಾಡಿದ್ದಾನೆ. ಅಲ್ಲದೆ, ಯೆಹೂದ ಮತ್ತು ಜೆರುಸಲೇಮಿನಲ್ಲಿರುವ ಜನರಿಗೆ, “ನೀವು ಜೆರುಸಲೇಮಿನಲ್ಲಿರುವ ಯಜ್ಞವೇದಿಕೆಯಲ್ಲಿಯೇ ಆರಾಧಿಸಬೇಕು” ಎಂದು ಆಜ್ಞಾಪಿಸಿರುವುದು ನನಗೆ ಗೊತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಬಹುಶಃ ನೀವು, “ನಮ್ಮ ದೇವರಾದ ಯೆಹೋವ ದೇವರನ್ನೇ ನಂಬಿಕೊಂಡಿದ್ದೇವೆ,” ಎಂದು ಹೇಳಬಹುದು. “ಯೆರೂಸಲೇಮಿನ ಬಲಿಪೀಠದ ಮುಂದೆಯೇ ಆರಾಧನೆ ಮಾಡಬೇಕು” ಎಂದು ಯೆಹೂದ್ಯರಿಗೆ ಮತ್ತು ಯೆರೂಸಲೇಮಿನವರಿಗೆ ಹಿಜ್ಕೀಯನು ಆಜ್ಞಾಪಿಸಿ, ಆ ಯೆಹೋವ ದೇವರ ಪೂಜಾಸ್ಥಳಗಳನ್ನೂ, ಬೇರೆ ಎಲ್ಲಾ ಬಲಿಪೀಠಗಳನ್ನೂ ಹಾಳುಮಾಡಿದನಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 36:7
15 ತಿಳಿವುಗಳ ಹೋಲಿಕೆ  

ದೇವರ ಆತ್ಮವನ್ನು ಹೊಂದಿದವನು ಎಲ್ಲವನ್ನೂ ವಿಚಾರಣೆಮಾಡಿ ತಿಳಿದುಕೊಳ್ಳುತ್ತಾನೆ. ಅವನನ್ನು ಯಾರೂ ವಿಚಾರಣೆಗೆ ಗುರಿಮಾಡಲಾಗದು.


ಎನ್ನ ಮನವೆ, ಚಿಂತಿಸುವೆಯೇಕೆ? I ವ್ಯಥೆಪಡುವುದೇಕೆ? ದೇವನಲ್ಲಿಡು ನಂಬಿಕೆ I ಮತ್ತೆ ಸ್ತುತಿಸುವೆ ನಾನಾತನನು, ಮುಕ್ತಿದಾತ, ಪರಮಾತ್ಮ ಆತನೆನಗೆ II


ಹಿಜ್ಕೀಯನು ಒಂದೇ ಬಲಿಪೀಠದ ಮುಂದೆ ಆರಾಧನೆಮಾಡಿ ಅದರ ಮೇಲೆಯೇ ಧೂಪಹಾಕಬೇಕೆಂಬುದಾಗಿ ಯೆಹೂದ್ಯರಿಗೂ ಜೆರುಸಲೇಮಿಗೂ ಆಜ್ಞಾಪಿಸಿ, ದೇವರ ಬೇರೆ ಎಲ್ಲ ಪೂಜಾಸ್ಥಳಗಳನ್ನೂ ಯಜ್ಞವೇದಿಗಳನ್ನೂ ಹಾಳುಮಾಡಿದನು ಅಲ್ಲವೆ?


ಇದಾದನಂತರ ನೆರೆದುಬಂದ ಇಸ್ರಯೇಲರೆಲ್ಲರು ಜುದೇಯ ನಾಡಿನ ಪಟ್ಟಣಗಳಿಗೆ ಹೋಗಿ ಕಲ್ಲುಕಂಬಗಳನ್ನು ಒಡೆದು, ಆಶೇರ ವಿಗ್ರಹಸ್ತಂಭಗಳನ್ನು ಕಡಿದುಹಾಕಿ, ಪೂಜಾಸ್ಥಳಗಳನ್ನೂ ಯಜ್ಞವೇದಿಗಳನ್ನೂ ಹಾಳುಮಾಡಿಬಿಟ್ಟರು. ಜುದೇಯ ಹಾಗು ಬೆನ್ಯಾಮೀನ್ ಪ್ರಾಂತಗಳಲ್ಲಿ ಮಾತ್ರವಲ್ಲ, ಎಫ್ರಯಿಮ್, ಮನಸ್ಸೆ ಪ್ರಾಂತಗಳಲ್ಲೂ ಯಾವುದೊಂದನ್ನೂ ಉಳಿಸಲಿಲ್ಲ. ಆಮೇಲೆ ಇಸ್ರಯೇಲರೆಲ್ಲರೂ ತಮ್ಮ ತಮ್ಮ ಆಸ್ತಿಪಾಸ್ತಿಯಿದ್ದ ಪಟ್ಟಣಗಳಿಗೆ ಹೋದರು.


ಅವರು ಜೆರುಸಲೇಮಿನಲ್ಲಿದ್ದ ಯಜ್ಞವೇದಿಗಳನ್ನೂ ಧೂಪವೇದಿಗಳನ್ನೂ ತೆಗೆದುಕೊಂಡು ಹೋಗಿ ಕಿದ್ರೋನ್ ಹಳ್ಳದಲ್ಲಿ ಬಿಸಾಡಿಬಿಟ್ಟರು.


ಅವರು ದೇವರಲ್ಲಿ ನಂಬಿಕೆಯನ್ನಿಟ್ಟು ಸಹಾಯಕ್ಕಾಗಿ ಪ್ರಾರ್ಥಿಸಿದರು. ದೇವರು ಅವರ ಪ್ರಾರ್ಥನೆಯನ್ನು ಆಲಿಸಿ ಹಗ್ರೀಯರನ್ನೂ ಅವರೊಂದಿಗೆ ಒಪ್ಪಂದ ಮಾಡಿಕೊಂಡವರನ್ನೂ ಸೋಲಿಸಿ ಅವರ ಮೇಲೆ ಜಯಹೊಂದುವಂತೆ ಸಹಾಯ ಮಾಡಿದರು.


“ಬಹುಶಃ, ನೀವು ‘ನಮ್ಮ ದೇವರಾದ ಸರ್ವೇಶ್ವರನನ್ನೇ ನಂಬಿಕೊಂಡಿದ್ದೇವೆ,’ ಎಂದು ಹೇಳಬಹುದು. ಜೆರುಸಲೇಮಿನ ಬಲಿಪೀಠದ ಮುಂದೆಯೇ ಆರಾಧನೆಮಾಡಬೇಕು ಎಂದು ಯೆಹೂದ್ಯರಿಗೂ ಮತ್ತು ಜೆರುಸಲೇಮಿನವರಿಗೂ ಹಿಜ್ಕೀಯನು ಆಜ್ಞಾಪಿಸಿ ಆ ಸರ್ವೇಶ್ವರ ಸ್ವಾಮಿಯ ಪೂಜಾಸ್ಥಳಗಳನ್ನೂ ಬೇರೆ ಎಲ್ಲಾ ಬಲಿಪೀಠಗಳನ್ನೂ ಹಾಳುಮಾಡಿದನಲ್ಲವೆ?


ಆದುದರಿಂದ ಬಾ, ಎಂದು ನನ್ನ ಒಡೆಯನಾದ ಅಸ್ಸೀರಿಯದ ಅರಸನೊಂದಿಗೆ ಒಂದು ಒಪ್ಪಂದ ಮಾಡಿಕೊ. ಅವನು ನಿನಗೆ ಎರಡು ಸಾವಿರ ಕುದುರೆಗಳನ್ನು ಕೊಡುವನು; ಅವುಗಳ ಮೇಲೆ ಕೂರಿಸುವಷ್ಟು ಮಂದಿ ಸವಾರರು ನಿನಗಿದ್ದಾರೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು