Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 37:25 - ಕನ್ನಡ ಸತ್ಯವೇದವು C.L. Bible (BSI)

25 ಪರನಾಡುಗಳಲ್ಲಿ ಬಾವಿತೋಡಿ ನೀರು ಕುಡಿದಿದ್ದೇನೆ, ನನ್ನ ಅಂಗಾಲಿನಿಂದಲೇ ಈಜಿಪ್ಟಿನ ನದಿಗಳನ್ನೆಲ್ಲಾ ಬತ್ತಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಪರದೇಶಗಳಲ್ಲಿ ಅಗೆದು ನೀರು ತೆಗೆದುಕೊಂಡು ಕುಡಿದಿದ್ದೇನೆ; ನನ್ನ ಪಾದಗಳಿಂದ ಐಗುಪ್ತದ ಎಲ್ಲಾ ಹೊಳೆಗಳನ್ನು ಬತ್ತಿಸಿದ್ದೇನೆ’ ಎಂಬುದಾಗಿ ನೀನು ಕೊಚ್ಚಿಕೊಂಡಿದ್ದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 [ಪರದೇಶಗಳಲ್ಲಿ] ಅಗೆದು ನೀರು ತೆಗೆದು ಕುಡಿದಿದ್ದೇನೆ; ನನ್ನ ಪಾದಗಳಿಂದ ಐಗುಪ್ತದ ಎಲ್ಲಾ ಹೊಳೆಗಳನ್ನು ಬತ್ತಿಸಿದ್ದೇನೆ ಎಂಬದಾಗಿ ನೀನು ಕೊಚ್ಚಿಕೊಂಡಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ನಾನು ಬಾವಿಗಳನ್ನು ತೋಡಿ ಹೊಸಹೊಸ ಸ್ಥಳದ ನೀರು ಕುಡಿದಿರುವೆನು. ಈಜಿಪ್ಟಿನ ನದಿಗಳನ್ನು ಬತ್ತಿಸಿ ದೇಶದಲ್ಲೆಲ್ಲಾ ಸಂಚರಿಸಿದೆನು” ಎಂದು ನೀನು ಹೇಳಿದೆ.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಪರದೇಶಗಳಲ್ಲಿ ನಾನು ಬಾವಿಗಳನ್ನು ಅಗೆದು, ನೀರು ಕುಡಿದಿದ್ದೇನೆ. ನನ್ನ ಅಂಗಾಲುಗಳಿಂದ ಈಜಿಪ್ಟಿನವರ ಎಲ್ಲಾ ನದಿಗಳನ್ನು ಬತ್ತಿಹೋಗುವಂತೆ ಮಾಡಿದ್ದೇನೆ, ಎಂದು ಕೊಚ್ಚಿಕೊಂಡಿದ್ದೀ.’

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 37:25
8 ತಿಳಿವುಗಳ ಹೋಲಿಕೆ  

ಆಗ ಅವರು ಅಹಾಬನಿಗೆ, “ಸಮಾರಿಯ ಪಟ್ಟಣವನ್ನು ಸಂಪೂರ್ಣವಾಗಿ ನಾಶಮಾಡುವೆನು; ಲೆಕ್ಕವಿಲ್ಲದ ನನ್ನ ಸೈನಿಕರು ಅದರಲ್ಲಿ ಒಂದು ಹಿಡಿ ಧೂಳನ್ನೂ ಬಿಡುವುದಿಲ್ಲ; ಬಿಟ್ಟರೆ ದೇವತೆಗಳು ನನಗೆ ಬೇಕಾದದ್ದನ್ನು ಮಾಡಲಿ!” ಎಂದು ಹೇಳಿಕಳುಹಿಸಿದನು.


ಅದಕ್ಕೆ ಆ ದಳಪತಿಯು, “ನನ್ನ ಯಜಮಾನನು, ನಿಮ್ಮ ಸಂಗಡವಾಗಲಿ ಮತ್ತು ನಿಮ್ಮ ಒಡೆಯರ ಸಂಗಡವಾಗಲಿ ಮಾತ್ರ ಮಾತನಾಡಬೇಕೆಂದು ನನ್ನನ್ನು ಕಳುಹಿಸಲಿಲ್ಲ. ಈ ಗೋಡೆಯ ಮೇಲೆ ಕುಳಿತಿರುವ ಜನರ ಸಂಗಡವೂ ಮಾತನಾಡುವುದಕ್ಕಾಗಿ ಕಳುಹಿಸಿದ್ದಾರೆ. ಈ ಜನರು ನಮಗೆ ವಿರುದ್ಧವಾಗಿ ಹೋರಾಡಿದರೆ ನಿಮ್ಮ ಹಾಗೆ ಇವರು ಕೂಡ ತಮ್ಮ ಸ್ವಂತ ಮಲಮೂತ್ರವನ್ನು ತಿಂದು ಕುಡಿಯಬೇಕಾಗುತ್ತದೆ” ಎಂದು ಉತ್ತರಕೊಟ್ಟನು.


ನೀವು ಸ್ವಾಧೀನಮಾಡಿಕೊಳ್ಳಲು ಹೋಗುವ ನಾಡು ನೀವು ಬಿಟ್ಟುಬಂದ ಈಜಿಪ್ಟ್ ದೇಶದ ಹಾಗಲ್ಲ. ಈಜಿಪ್ಟಿನಲ್ಲಿ ನೀವು ಹೊಲಗದ್ದೆಗಳಲ್ಲಿ ಬೀಜ ಬಿತ್ತಿದ ಮೇಲೆ ಕಾಯಿಪಲ್ಯಗಳ ತೋಟವನ್ನು ಸಾಗುವಳಿಮಾಡುವ ರೀತಿಯಲ್ಲಿ ಏತವನ್ನು ತುಳಿದು ನೀರುಕಟ್ಟುತ್ತಿದ್ದಿರಿ.


ಕಾಲುವೆಗಳು ನಾರುವುವು. ಈಜಿಪ್ಟಿನ ಉಪನದಿಗಳು ಇಳಿದು ಇಂಗಿಹೋಗುವುವು.


ಅಸ್ಸೀರಿಯದ ಅನಿಸಿಕೆಯಿದು: “ನಾನು ವಿವೇಕಿ, ನನ್ನ ಭುಜಬಲದಿಂದಲೇ ಇದನ್ನು ಮಾಡಿದ್ದೇನೆ. ನನ್ನ ಜ್ಞಾನಶಕ್ತಿಯಿಂದಲೇ ಇದನ್ನು ಸಾಧಿಸಿದ್ದೇನೆ. ನಾಡುಗಳ ಮಧ್ಯೆಯಿರುವ ಎಲ್ಲೆಗಳನ್ನು ಕಿತ್ತುಹಾಕಿದ್ದೇನೆ. ಅವು ಕೂಡಿಸಿಟ್ಟುಕೊಂಡಿದ್ದ ನಿಕ್ಷೇಪಗಳನ್ನು ಸೂರೆಮಾಡಿದ್ದೇನೆ. ಗದ್ದುಗೆಯ ಮೇಲೆ ಕುಳಿತಿರುವವರನ್ನು ಮಹಾ ವೀರನಂತೆ ಕೆಡವಿಬಿಟ್ಟಿದ್ದೇನೆ.


(ಬೇಡನು)ಹಕ್ಕಿಯ ಗೂಡನ್ನು ಕಂಡುಹಿಡಿಯುವಂತೆ ಜನಾಂಗಗಳ ಆಸ್ತಿಪಾಸ್ತಿಯನ್ನು ಹಿಡಿದುಕೊಂಡಿದ್ದೇನೆ. ಹಕ್ಕಿ ಬಿಟ್ಟುಹೋದ ಮೊಟ್ಟೆಗಳನ್ನು ಒಟ್ಟುಗೂಡಿಸಿಟ್ಟುಕೊಳ್ಳುವಂತೆ ಸಮಸ್ತ ರಾಷ್ಟ್ರಗಳನ್ನು ಒಟ್ಟುಗೂಡಿಸಿದ್ದೇನೆ. ರೆಕ್ಕೆಯಾಡಿಸಿ ಬೆದರಿಸಲು ಯಾರೂ ಇರಲಿಲ್ಲ. ಕೊಕ್ಕು ತೆರೆದು ಕೀಚುಗುಟ್ಟಲು ಯಾರೂ ಕಾಣಲಿಲ್ಲ.”


ನೈಲ್ ನದಿಯ ನೀರು ಬತ್ತಿಹೋಗುವುದು. ಅದರ ಪ್ರಭಾವ ಕ್ರಮೇಣ ಒಣಗಿಹೋಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು