Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 37:27 - ಕನ್ನಡ ಸತ್ಯವೇದವು C.L. Bible (BSI)

27 ಬಲವಿಲ್ಲದವರಾದರು ಆ ನಗರವಾಸಿಗಳು ನನ್ನ ನಿಮಿತ್ತವೆ, ಸಮಾನರಾದರು ಹೊಲದ ಸಸಿಗೆ, ಎಳೆಗರಿಕೆಗೆ, ಮಾಳಿಗೆ ಮೇಲಿನ ಹುಲ್ಲಿಗೆ. ಬೆಳೆಯುವುದಕ್ಕೆ ಮೊದಲೆ ತುತ್ತಾದರು ಬಿರುಗಾಳಿಯ ಹೊಡೆತಕ್ಕೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಅವುಗಳ ನಿವಾಸಿಗಳು ಬಲವಿಲ್ಲದವರಾಗಿ ಆಶಾಭಂಗಪಟ್ಟು ಕಳವಳಗೊಂಡರು. ಅವರು ಹೊಲದ ಗಿಡಕ್ಕೂ, ಹಸಿರು ಹುಲ್ಲಿಗೂ, ಮಾಳಿಗೆಯ ಮೇಲಣ ಹುಲ್ಲಿಗೂ, ಹೊಡೆಯುವುದಕ್ಕಿಂತ ಮೊದಲೇ ಒಣಗಿ ಹೋದ ಪೈರಿಗೂ ಸಮಾನರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಅವುಗಳ ನಿವಾಸಿಗಳು ಬಲವಿಲ್ಲದವರಾಗಿ ಆಶಾಭಂಗಪಟ್ಟು ಕಳವಳಗೊಂಡರು; ಅವರು ಹೊಲದ ಕಾಯಿಪಲ್ಯಕ್ಕೂ ಎಳೆಗರಿಕೆಗೂ ಮಾಳಿಗೆಯ ಮೇಲಣ ಹುಲ್ಲಿಗೂ ಹೊಡೆಹಾಯುವದಕ್ಕಿಂತ ಮೊದಲೇ [ಒಣಗಿ ಹೋದ] ಪೈರಿಗೂ ಸಮಾನರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಆ ಪಟ್ಟಣಗಳಲ್ಲಿದ್ದ ಜನರು ನಿಸ್ಸಹಾಯಕರಾದರು ಮತ್ತು ಬಲಹೀನರಾದರು. ಅವರು ಹೆದರಿ ಗಲಿಬಿಲಿಗೊಂಡಿದ್ದರು. ಅವರು ಹೊಲದ ಹುಲ್ಲಿನಂತೆಯೂ ಸಸಿಗಳಂತೆಯೂ ಕಡಿದುಹಾಕಲ್ಪಡಲಿದ್ದಾರೆ. ಅವರು ಮನೆಯ ಮೇಲೆ ಬೆಳೆಯುವ ಹುಲ್ಲಿನಂತಿದ್ದಾರೆ. ಅವು ಉದ್ದವಾಗಿ ಬೆಳೆಯುವ ಮೊದಲೇ ಸಾಯುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಆದ್ದರಿಂದ ಅವುಗಳ ನಿವಾಸಿಗಳು ಬಲಹೀನರಾಗಿ ಹೆದರಿ ಆಶಾಭಂಗಹೊಂದಿ ನಾಚಿಕೆಪಟ್ಟರು. ಅವರು ಹೊಲದ ಹುಲ್ಲಿನಂತೆಯೂ, ಹಸಿರು ಸಸಿಗಳಂತೆಯೂ, ಮಾಳಿಗೆಯ ಮೇಲಿನ ಹುಲ್ಲಿನಂತೆಯೂ, ಬೆಳೆಯುವುದಕ್ಕಿಂತ ಮುಂಚೆಯೇ ಬಾಡಿಹೋಗುವ ಪೈರಿನಂತೆಯೂ ಅವರಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 37:27
17 ತಿಳಿವುಗಳ ಹೋಲಿಕೆ  

ಅವರಾಗಲಿ ಮಾಳಿಗೆ ಮೇಲಿನ ಹುಲ್ಲಿನಂತೆ I ಒಣಗಿಹೋಗುವುದದು ಹೂ ಬಿಡುವುದಕ್ಕೆ ಮುಂಚೆ II


ಪವಿತ್ರಗ್ರಂಥದಲ್ಲಿ ಬರೆದಿರುವಂತೆ : ನರಮಾನವರೆಲ್ಲರೂ ಗರಿಹುಲ್ಲಿನಂತೆ ಅವರ ವೈಭವವೆಲ್ಲವೂ ಹುಲ್ಲಿನ ಹೂವಿನಂತೆ. ಹುಲ್ಲೊಣಗಿ ಹೂ ಬಾಡಿಬೀಳುವುದು ಪ್ರಭುವಿನ ವಾಕ್ಯವಾದರೋ ಶಾಶ್ವತವಾಗಿ ನಿಲ್ಲುವುದು.


ದಾಳಿಮಾಡುವ ಆ ಬಾಬಿಲೋನಿಯರನ್ನು ನೀವು ಪೂರ್ತಿಯಾಗಿ ಸೋಲಿಸಿದರೂ, ಅವರಲ್ಲಿ ಗಾಯಗೊಂಡವರು ಮಾತ್ರ ನಿಮ್ಮಲ್ಲಿ ಉಳಿದರೂ, ಆ ಗಾಯಗೊಂಡವರೇ ತಮ್ಮ ತಮ್ಮ ಗುಡಾರಗಳಿಂದ ಎದ್ದುಬಂದು ಈ ನಗರವನ್ನು ಬೆಂಕಿಯಿಂದ ಸುಟ್ಟುಬಿಡುವರು.


ಆಕ್ರಮಣಕಾರರಿಗೆ ಕರೆ; ಸಿಯೋನೆಂಬ ದ್ರಾಕ್ಷಾತೋಟದ ಸಾಲುಗಿಡಗಳನ್ನು ಹಾಳುಮಾಡಿ. ಆದರೆ ಅದನ್ನು ನಿರ್ಮೂಲಮಾಡಬೇಡಿ. ಅದರ ರೆಂಬೆಗಳನ್ನು ಕಿತ್ತುಹಾಕಿ. ಅವು ಸರ್ವೇಶ್ವರನಾದ ನನಗೆ ಸೇರಿದವುಗಳಲ್ಲ.


ಆ ದಿನದಂದು ಈಜಿಪ್ಟಿನವರು ಹೆಂಗಸರಂತೆ ಅಂಜುಬುರುಕರಾಗುವರು; ಸೇನಾಧೀಶ್ವರ ಸರ್ವೇಶ್ವರ ತಮ್ಮನ್ನು ದಂಡಿಸಲು ಕೈಯೆತ್ತುವಾಗ ಅವರು ಭಯಪಟ್ಟು ನಡುಗುವರು.


ಮಾನವನ ಆಯುಷ್ಕಾಲ ಹುಲ್ಲಿಗೆ ಸಮಾನ I ಹೊಲದ ಹೂವಿನಂತೆ ಅವನ ಬೆಡಗು ಬಿನ್ನಾಣ II


ದುರುಳರು ಚಿಗುರಬಹುದು ಹುಲ್ಲಿನಂತೆ I ಕೆಡುಕರು ಅರಳಬಹುದು ಹೂವಿನಂತೆ I ಅವರ ಅಳಿವಂತೂ ಕಟ್ಟಿಟ್ಟ ಬುತ್ತಿಯಂತೆ II


ಅವರು ಒಣಗಿಹೋಗುವರು ಕಾಡುಗರಿಕೆಯಂತೆ I ಬೇಗ ಬಾಡಿಹೋಗುವರು ಕಾಯಿಪಲ್ಯದಂತೆ II


ಬಲವಿಲ್ಲದವರಾದರು ಆ ನಗರವಾಸಿಗಳು ನನ್ನ ನಿಮಿತ್ತವೆ, ಸಮಾನರಾದರು ಹೊಲದ ಸಸಿಗೆ, ಎಳೆಗರಿಕೆಗೆ, ಮಾಳಿಗೆ ಮೇಲಿನ ಹುಲ್ಲಿಗೆ; ಬೆಳೆಯುವುದಕ್ಕೆ ಮೊದಲೆ ತುತ್ತಾದರು ಬಿರುಗಾಳಿಯ ಹೊಡೆತಕ್ಕೆ!


ಆದ್ದರಿಂದ ಸರ್ವೇಶ್ವರನಿಗೆ ವಿರುದ್ಧ ದಂಗೆ ಏಳಬೇಡಿ. ಆ ನಾಡಿನ ಜನರಿಗೆ ದಿಗಿಲುಪಡಬೇಡಿ. ಅವರು ನಮಗೆ ತುತ್ತಾಗುವರು. ನಾವು ಪುಷ್ಠಿಯಾಗುವೆವು. ಅವರಿಗೆ ನೆರಳಾಗಿದ್ದ ದೇವರು ಅವರನ್ನು ಕೈಬಿಟ್ಟಿದ್ದಾನೆ. ಸರ್ವೇಶ್ವರ ನಮ್ಮ ಕಡೆ ಇದ್ದಾರೆ. ಅವರಿಗೆ ಭಯಪಡಬೇಡಿ”


ನಾನು ಕತ್ತಲಲ್ಲಿ ಹೇಳುವುದನ್ನು ನೀವು ಬೆಳಕಿನಲ್ಲಿ ಪ್ರಚುರಪಡಿಸಿರಿ, ಕಿವಿಮಾತಾಗಿ ಕೇಳಿದ್ದನ್ನು ಮನೆಮಾಳಿಗೆಯ ಮೇಲೆ ನಿಂತು ಸಾರಿರಿ.


ಅವುಗಳ ಹಿಂದೆಯೇ ಮೂಡಣಗಾಳಿಯಿಂದ ಒಣಗಿ, ಬತ್ತಿಹೋಗಿದ್ದ ಬೇರೆ ಏಳು ತೆನೆಗಳು ಮೊಳೆತು ಬಂದವು.


ನಿನ್ನವರು ದೊಡ್ಡ ಬಾಯಿಮಾಡಿ ನನ್ನ ಮೇಲೆ ಆಡಿದ ಅತಿಯಾದ ಹರಟೆಗಳನ್ನು ಕೇಳಿದ್ದೇನೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು