Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 37:3 - ಕನ್ನಡ ಸತ್ಯವೇದವು C.L. Bible (BSI)

3 ಅವನಿಗೆ ಹೀಗೆಂದು ಹೇಳಿ : ‘ಈ ದಿನ ನಮಗೆ ಮಹಾಸಂಕಟದ ದಿನ, ದಂಡನೆಯ ದಿನ, ನಿಂದೆ ಅವಮಾನದ ದಿನ. ಹೆರಿಗೆಯ ಕಾಲ ಬಂದಿದೆ, ಆದರೆ ಹೆರುವುದಕ್ಕೆ ಶಕ್ತಿ ಸಾಲದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆಗ ಅವರು ಯೆಶಾಯನಿಗೆ, “ಹಿಜ್ಕೀಯನು ಹೀಗೆ ಹೇಳುತ್ತಾನೆ, ‘ಈ ದಿನದಲ್ಲಿ ನಮಗೆ ಮಹಾಕಷ್ಟವೂ, ಶಿಕ್ಷೆಯೂ, ನಿಂದೆಯೂ ಸಂಭವಿಸಿರುತ್ತದೆ. ಹೆರಿಗೆಯ ಕಾಲ ಬಂದದೆ; ಆದರೆ ಹೆರುವುದಕ್ಕೆ ಬಲ ಸಾಲದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅವರು ಅದರಂತೆ ಯೆಶಾಯನ ಬಳಿಯಲ್ಲಿ - ಈ ದಿವಸದಲ್ಲಿ ನಮಗೆ ಮಹಾಕಷ್ಟವೂ ಶಿಕ್ಷೆಯೂ ನಿಂದೆಯೂ ಸಂಭವಿಸಿರುತ್ತದೆ. ಹೆರಿಗೆಯ ಕಾಲ ಬಂದದೆ; ಆದರೆ ಹೆರುವದಕ್ಕೆ ಬಲ ಸಾಲದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಇವರು ಯೆಶಾಯನಿಗೆ, “ಅರಸನಾದ ಹಿಜ್ಕೀಯನು ಈ ದಿವಸವನ್ನು ಶೋಕದ ದಿವಸವನ್ನಾಗಿ ಘೋಷಿಸಿದ್ದಾನೆ. ಇದು ದುಃಖದ ಸಮಯವಾಗಿದೆ. ಇದು ದಿನತುಂಬಿ ತಾಯಿಯ ಹೊಟ್ಟೆಯೊಳಗಿಂದ ಹೊರಬರಲು ಶಕ್ತವಾಗಿಲ್ಲದ ಕೂಸಿನಂತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆಗ ಅವರು ಯೆಶಾಯನಿಗೆ, “ಈ ದಿವಸವು ಕಷ್ಟಕರವಾಗಿಯೂ ಗದರಿಕೆಯಾಗಿಯೂ ಅವಮಾನಕರವಾಗಿಯೂ ಇದೆ. ಏಕೆಂದರೆ ಹೆರಿಗೆಯ ಸಮಯವು ಬಂದಿದೆ ಆದರೆ ಹೆರುವುದಕ್ಕೆ ಶಕ್ತಿಯಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 37:3
20 ತಿಳಿವುಗಳ ಹೋಲಿಕೆ  

ಎಫ್ರಯಿಮಿಗೆ ಪ್ರಸವವೇದನೆ ಬಂದಿದೆ. ಅಷ್ಟೇ ಅಲ್ಲ. ಅದೊಂದು ಮಂಕು ಮಗುವಿನಂತಿದೆ. ಹುಟ್ಟಿ, ಹೊರಗೆ ಬರಬಹುದಾದರೂ, ಅದು ಬಾರದೆ ಇದೆ.


ಪ್ರಸವಕ್ಕೆ ತಂದ ನಾನು ಹೆರಲಿಕ್ಕೆ ಬಿಡದಿರುವೆನೊ?’ - ಎನ್ನುತ್ತಾರೆ ನಿಮ್ಮ ದೇವರು. ‘ಹೆರುವಂತೆ ಮಾಡುವವನಾದ ನಾನು ಗರ್ಭ ಮುಚ್ಚಿಬಿಡುವೆನೊ?’ ಎನ್ನುತ್ತಾರೆ ಸ್ವಾಮಿ ಸರ್ವೇಶ್ವರ.


ಕಷ್ಟದಲಿ ಮೊರೆಯಿಡೆ, ನೆರವಾಗುವೆ I ಆಗ ನೀ ನನ್ನನು ಕೊಂಡಾಡುವೆ II


ಅವನಿಗೆ ಹೀಗೆಂದು ಹೇಳಿ: ‘ಈ ದಿನ ನಮಗೆ ಮಹಾಸಂಕಟದ ದಿನ, ದಂಡನೆಯ ದಿನ, ನಿಂದೆ ಅವಮಾನದ ದಿನ; ಹೆರಿಗೆಯ ಕಾಲ ಬಂದಿದೆ. ಆದರೆ ಹೆರುವುದಕ್ಕೆ ಶಕ್ತಿಸಾಲದು.


ಸರ್ವೇಶ್ವರಾ, ನಮಗೆ ಕೃಪೆತೋರಿ. ನಿಮಗಾಗಿ ಕಾದಿದ್ದೇವೆ. ದಿನದಿಂದ ದಿನಕ್ಕೆ ನಮಗೆ ಬೆಂಬಲವಾಗಿರಿ. ಆಪತ್ಕಾಲದಲ್ಲಿ ನಮಗೆ ರಕ್ಷಣೆ ನೀಡಿರಿ.


ಆತನ ಕರೆಗೆ ಕಿವಿಗೊಟ್ಟರೆನಿತೋ ಒಳ್ಳಿತು ನೀವಿಂದೇ I ಕಲ್ಲಾಗಿಸಿಕೊಳ್ಳದಿರಿ ಹೃದಯವನು ನಿಮ್ಮ ಪೂರ್ವಜರಂತೆ I ಮೆರಿಬಾದಲಿ, ಮಸ್ಸಾ ಮರುಭೂಮಿಯಲಿ ಅವರು ಮಾಡಿದಂತೆ II


ನನಗೆ ಮೊರೆಯಿಟ್ಟಾಗ ಕಿವಿಗೊಡುವೆನು I ಸಂಕಟದೊಳು ಅವನ ಸಂಗಡವಿರುವೆನು I ಅವನನು ಉದ್ಧರಿಸಿ ಘನಪಡಿಸುವೆನು II


ಅವರು ತಮ್ಮ ಇಕ್ಕಟ್ಟಿನಲ್ಲಿ ಇಸ್ರಯೇಲ್ ದೇವರಾದ ಸರ್ವೇಶ್ವರನ ಕಡೆಗೆ ತಿರುಗಿಕೊಂಡರು; ಹುಡುಕಿದಾಗ ಸರ್ವೇಶ್ವರ ಅವರಿಗೆ ಸಿಕ್ಕಿದರು.


ನನ್ನ ಪ್ರೀತಿಪಾತ್ರರನ್ನು ನಾನು ಖಂಡಿಸುತ್ತೇನೆ ಮತ್ತು ದಂಡಿಸುತ್ತೇನೆ. ಆದುದರಿಂದ ಉತ್ಸಾಹದಿಂದಿರು, ದೇವರಿಗೆ ಅಭಿಮುಖನಾಗಿರು.


ಸೇನಾಧೀಶ್ವರ ಸರ್ವೇಶ್ವರ ಸ್ವಾಮಿ ಕಳುಹಿಸಿರುವ ದಿನವಿದು - ದಿವ್ಯದರ್ಶನದ ಕಣಿವೆಯ ದಿನ, ಗಲಿಬಿಲಿಯ ದಿನ, ತುಳಿದಾಟದ ದಿನ, ಭಯಭ್ರಾಂತಿಯ ದಿನ, ಕೋಟೆಕೊತ್ತಲಗಳನ್ನು ಹೊಡೆದುರುಳಿಸುವ ದಿನ. ಕೂಗಾಟವು ಬೆಟ್ಟದಲ್ಲಿ ಮಾರ್ದನಿಸುವ ದಿನ !


“ನಾನು ನನ್ನ ನಿವಾಸಕ್ಕೆ ಹಿಂದಿರುಗುವೆನು. ನನ್ನ ಜನರು ತಮ್ಮ ದೋಷಫಲವನ್ನು ಅನುಭವಿಸಿ, ನನ್ನ ಸಾನಿಧ್ಯವನ್ನು ಹರಸುವ ತನಕ ಅಲ್ಲೇ ಇರುವೆನು. ಸಂಕಟದಲ್ಲಿ ಸಿಕ್ಕಿಕೊಂಡಾಗ, ಕೂಡಲೆ ಅವರು ನನ್ನನ್ನು ಆಶ್ರಯಿಸುವರು.”


ಹೌದು, ಭಯಂಕರವಾದ ದಿನ ಬರಲಿದೆ, ಅದಕ್ಕಿರದು ಎಣೆ! ಅದು ಇಕ್ಕಟ್ಟಿನ ದಿನ, ಆದರೂ ಅದರಿಂದ ಯಕೋಬ್ಯರಿಗಿದೆ ಬಿಡುಗಡೆ.”


ಮರಣವನ್ನು ಶಾಶ್ವತವಾಗಿ ನಿರ್ನಾಮಮಾಡುವರು. ಸರ್ವೇಶ್ವರ ಸ್ವಾಮಿ ಎಲ್ಲರ ಕಣ್ಣೀರನ್ನು ಒರೆಸಿಬಿಡುವರು. ತಮ್ಮ ಪ್ರಜೆಗಾದ ಅವಮಾನವನ್ನು ಜಗದಿಂದಲೇ ತೊಲಗಿಸಿಬಿಡುವರು. ಸರ್ವೇಶ್ವರ ಸ್ವಾಮಿಯೇ ಇಂತೆಂದು ನುಡಿದಿದ್ದಾರೆ.


ನಿನ್ನಾಶ್ರಯ ಕೋರಿದರು, ಸರ್ವೇಶ್ವರಾ, ಜನ ಇಕ್ಕಟ್ಟಿಗೆ ಸಿಕ್ಕಿದಾಗ ಪ್ರಾರ್ಥನೆ ಗೈದರವರು ನಿನ್ನ ಶಿಕ್ಷೆಗೆ ಗುರಿಯಾದಾಗ.


“ ‘ಪ್ರಸವವೇದನೆಗೆ ಮುಂಚೆಯೇ ಹೆರಿಗೆಯಾಯಿತು; ಪ್ರಸವವೇದನೆ ಪಡುವುದರೊಳಗೆ ಗಂಡನ್ನು ಹೆತ್ತಳು’.


ದಂಡನೆಯ ದಿನದಲ್ಲಿ ಎಫ್ರಯಿಮ್ ಹಾಳಾಗುವುದು. ಇಗೋ, ಇಸ್ರಯೇಲಿನ ಕುಲಗಳ ಭವಿಷ್ಯವನ್ನು ಖಚಿತವಾಗಿ ತಿಳಿಸಿದ್ದೇನೆ:


ಅನಂತರ ನಾನು ಅರೀಯೇಲನ್ನು ಬಾಧಿಸುವೆನು. ಅಲ್ಲಿ ಅರಚಾಟ ಕಿರಿಚಾಟ ಇರುವುದು. ಆ ಪಟ್ಟಣವು ವಾಸ್ತವವಾಗಿ ನನಗೆ ಅರೀಯೇಲಾಗಿಯೇ ಪರಿಣಮಿಸುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು