Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 37:38 - ಕನ್ನಡ ಸತ್ಯವೇದವು C.L. Bible (BSI)

38 ನಿನೆವೆ ಪಟ್ಟಣಕ್ಕೆ ಹೋಗಿ ಅಲ್ಲಿನ ದೇವರಾದ ನಿಸ್ರೋಕನನ್ನು ಆರಾಧನೆ ಮಾಡುತ್ತಿರುವಾಗ, ಅದ್ರಮ್ಮೆಲೆಕ್ ಮತ್ತು ಸರೆಚೆರ್ ಎಂಬ ಅವನ ಇಬ್ಬರು ಮಕ್ಕಳು ಅವನನ್ನು ಕತ್ತಿಯಿಂದ ಕೊಂದು ಅರರಾಟ್ ನಾಡಿಗೆ ಪಲಾಯನಗೈದರು. ಬಳಿಕ ಅವನ ಇನ್ನೊಬ್ಬ ಮಗ ಏಸರ್ ಹದ್ದೋನನು ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 ಅವನು ಒಂದು ದಿನ ಗುಡಿಗೆ ಹೋಗಿ ತನ್ನ ದೇವರಾದ ನಿಸ್ರೋಕನನ್ನು ಮನೆಯಲ್ಲಿ ಪೂಜಿಸುತ್ತಿರುವಾಗ ಅದ್ರಮ್ಮೆಲೆಕ್, ಸರೆಚೆರ್ ಎಂಬ ಅವನ ಮಕ್ಕಳು ಅವನನ್ನು ಕತ್ತಿಯಿಂದ ಕೊಂದು, ಅರರಾಟ್ ದೇಶಕ್ಕೆ ಓಡಿಹೋದರು. ಅವನಿಗೆ ಬದಲಾಗಿ ಅವನ ಮಗನಾದ ಏಸರ್ ಹದ್ದೋನನು ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

38 ಅವನು ಒಂದು ದಿವಸ ಗುಡಿಗೆ ಹೋಗಿ ತನ್ನ ದೇವರಾದ ನಿಸ್ರೋಕನನ್ನು ಆರಾಧಿಸುತ್ತಿರುವಾಗ ಅದ್ರಮ್ಮೆಲೆಕ್, ಸರೆಚೆರ್ ಎಂಬ ಅವನ ಮಕ್ಕಳು ಅವನನ್ನು ಕತ್ತಿಯಿಂದ ಕೊಂದು ಅರರಾಟ್ ದೇಶಕ್ಕೆ ಓಡಿಹೋದರು. ಅವನಿಗೆ ಬದಲಾಗಿ ಅವನ ಮಗನಾದ ಏಸರ್‍ಹದ್ದೋನನು ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

38 ಒಂದು ದಿವಸ ಸನ್ಹೇರೀಬನು ತನ್ನ ದೇವರಾದ ನಿಸ್ರೋಕನ ಮಂದಿರದಲ್ಲಿ ಪೂಜಿಸುತ್ತಿರುವಾಗ ಅವನ ಇಬ್ಬರು ಮಕ್ಕಳಾದ ಅದ್ರಮ್ಮೆಲೆಕ್ ಮತ್ತು ಸರೆಚರ್ ಎಂಬವರು ಅವನನ್ನು ಕತ್ತಿಯಿಂದ ಸಂಹರಿಸಿ ಅರರಾಟ್‌ಗೆ ಪಲಾಯನಗೈದರು. ಅನಂತರ ಸನ್ಹೇರೀಬನ ಮಗ ಏಸರ್‌ಹದ್ದೋನನು ಅಶ್ಶೂರದ ಹೊಸ ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

38 ಒಂದು ದಿನ ಅವನು ತನ್ನ ದೇವರಾದ ನಿಸ್ರೋಕನ ಒಂದು ದಿನ ಅವನು ತನ್ನ ದೇವರಾದ ನಿಸ್ರೋಕನ ಆಲಯದಲ್ಲಿ ಆರಾಧನೆ ಮಾಡುತ್ತಿರುವಾಗ, ಅವನ ಮಕ್ಕಳಾದ ಅದ್ರಮ್ಮೆಲೆಕ್, ಸರೆಚೆರ್ ಎಂಬವರು ಅವನನ್ನು ಖಡ್ಗದಿಂದ ಕೊಂದು, ಅರಾರಾಟ್ ದೇಶಕ್ಕೆ ತಪ್ಪಿಸಿಕೊಂಡು ಹೋದರು. ಅವನ ಮಗ ಏಸರ್‌ಹದ್ದೋನನು ಅವನಿಗೆ ಬದಲಾಗಿ ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 37:38
13 ತಿಳಿವುಗಳ ಹೋಲಿಕೆ  

ಏಳನೆಯ ತಿಂಗಳಿನ ಹದಿನೇಳನೆಯ ದಿನ ನಾವೆಯು ಅರಾರಾಟ್ ನಾಡಿನ ಬೆಟ್ಟದ ಸಾಲಿನಲ್ಲಿ ನಿಂತಿತು.


“ನಾಡಿನಲ್ಲಿ ಧ್ವಜವೆತ್ತಿರಿ, ರಾಜ್ಯಗಳಲ್ಲೆಲ್ಲ ಕೊಂಬೂದಿರಿ, ರಾಷ್ಟ್ರಗಳನ್ನು ಸಜ್ಜುಮಾಡಿರಿ. ಬಾಬಿಲೋನಿನ ಮೇಲೆ ಬೀಳಲಿಕ್ಕೆ ಅರರಾಟ್, ಮಿನ್ನಿ, ಅಷ್ಕೆನಜ್ ಎಂಬ ರಾಷ್ಟ್ರಗಳನ್ನು ಕರೆದುಕೊಳ್ಳಿ. ಸೋಲಿಸಬಲ್ಲ ಸೇನಾಪತಿಯನ್ನು ನೇಮಿಸಿರಿ. ಬಿರುಸಾದ ಅಶ್ವಬಲವನ್ನು ಮಿಡತೆಗಳ ದಂಡಿನೋಪಾದಿ ಬರಮಾಡಿ.


ಅವರು ಜೆರುಬ್ಬಾಬೆಲನ ಬಳಿಗೂ ಗೋತ್ರಪ್ರಧಾನರ ಬಳಿಗೂ ಬಂದು, “ನಿಮ್ಮೊಡನೆ ಕಟ್ಟುವುದಕ್ಕೆ ನಮಗೂ ಅಪ್ಪಣೆಯಾಗಲಿ; ಏಕೆಂದರೆ ನಿಮ್ಮಂತೆ ನಾವೂ ನಿಮ್ಮ ದೇವರ ಭಕ್ತರು; ನಮ್ಮನ್ನು ಇಲ್ಲಿ ತಂದಿರಿಸಿದ ಅಸ್ಸೀರಿಯದ ಅರಸ ಏಸರ್ಹದ್ದೋನನ ಕಾಲದಿಂದ ನಾವು ಆ ದೇವರಿಗೇ ಬಲಿಯರ್ಪಣೆ ಮಾಡುತ್ತಾ ಬಂದಿದ್ದೇವೆ,” ಎಂದು ಹೇಳಿದರು.


“ಜೆರುಸಲೇಮ್ ನನ್ನ ವಶವಾಗುವುದಿಲ್ಲವೆಂದು ನೀನು ನಂಬುವ ದೇವರು ಹೇಳಿ, ನಿನ್ನನ್ನು ಮೋಸಗೊಳಿಸಿದ್ದಾನೆ.


‘ಸರ್ವೇಶ್ವರ ನಮ್ಮನ್ನು ರಕ್ಷಿಸುವರು’ ಎಂಬ ನಂಬಿಕೆಯನ್ನು ಹಿಜ್ಕೀಯನು ನಿಮ್ಮಲ್ಲಿ ಮೂಡಿಸದಂತೆ ಎಚ್ಚರಿಕೆಯಾಗಿರಿ. ಯಾವ ರಾಷ್ಟ್ರದ ದೇವರುಗಳು ತಾನೇ ಅಸ್ಸೀರಿಯದ ಅರಸನ ಕೈಯಿಂದ ನಾಡನ್ನು ಬಿಡಿಸಿಕೊಂಡಿದ್ದಾರೆ?


ಹಿಜ್ಕೀಯನು ನಿಮಗೆ, ‘ಸರ್ವೇಶ್ವರ ಸ್ವಾಮಿಯಲ್ಲಿ ನಂಬಿಕೆಯಿಡಿ; ಅವರು ನಿಮ್ಮನ್ನು ಹೇಗಾದರೂ ಮಾಡಿ ರಕ್ಷಿಸುವರು; ಈ ಪಟ್ಟಣವು ಅಸ್ಸೀರಿಯದ ರಾಜನ ವಶವಾಗುವುದಿಲ್ಲ,’ ಎಂಬುದಾಗಿ ಹೇಳಿದರೆ ಅವನಿಗೆ ಕಿವಿಗೊಡಬೇಡಿ, ಒಪ್ಪಿಕೊಳ್ಳಬೇಡಿ.


ಮುಂಜಾನೆಯ ನಕ್ಷತ್ರವೆ, ಉದಯ ಕುಮಾರನೆ, ಆಗಸದಿಂದ ಹೇಗೆ ಬಿದ್ದೆ? ರಾಷ್ಟ್ರಗಳನ್ನು ಗೆದ್ದ ನೀನು, ನೆಲಕ್ಕೆ ಅದು ಹೇಗೆ ಉರುಳಿದೆ?


ನಿನ್ನ ಸ್ವಾಗತಿಸಲು ಸಡಗರದಿಂದಿದೆ ಪಾತಾಳಲೋಕವು, ಚೇತನಗೊಂಡಿವೆ ಲೋಕಮುಖಂಡರ ಪ್ರೇತಗಳು, ಎದ್ದು ನಿಂತಿಹರು ಸಕಲ ರಾಷ್ಟ್ರಗಳ ಅರಸರುಗಳು.


ಅಸ್ಸೀರಿಯದ ಅರಸನ ದಂಡಿನಲ್ಲಿದ್ದ ಎಲ್ಲ ಶೂರರನ್ನೂ ನಾಯಕರನ್ನೂ ಅಧಿಪತಿಗಳನ್ನೂ ಸಂಹರಿಸಿದರು; ಆ ಅರಸನು ನಾಚಿಕೆಯಿಂದ ತನ್ನ ದೇಶಕ್ಕೆ ಹಿಂದಿರುಗಬೇಕಾಯಿತು. ಅಲ್ಲಿ ಅವನು ತನ್ನ ದೇವರ ಗುಡಿಗೆ ಹೋಗಿದ್ದಾಗ ಅವನ ಸ್ವಂತ ಮಕ್ಕಳೇ ಅವನನ್ನು ಕತ್ತಿಯಿಂದ ಕೊಂದರು.


ಜೆರುಸಲೇಮಿನ ದೇವರು ಮನುಷ್ಯರ ಕೈಕೆಲಸವಾಗಿರುವ ಅನ್ಯದೇಶಗಳ ಜನರ ದೇವತೆಗಳಿಗೆ ಸಮಾನನಾಗಿರುತ್ತಾನೆ, ಎಂಬ ಅರ್ಥದಲ್ಲಿ ಅವರ ಬಗ್ಗೆ ಗಟ್ಟಿಯಾಗಿ ಕೂಗಿ ಹೇಳಿದರು; ಆ ಜನರೊಡನೆ ಹಿಬ್ರುಭಾಷೆಯಲ್ಲೆ ಮಾತಾಡಿದರು.


ನನ್ನ ತಂದೆತಾತಂದಿರು ನಾಶಮಾಡಿಬಿಟ್ಟ ಆ ರಾಜ್ಯಗಳ ದೇವರುಗಳಲ್ಲಿ ಯಾವನು ತಾನೆ ತನ್ನ ಪ್ರಜೆಯನ್ನು ನನ್ನ ಕೈಯಿಂದ ಬಿಡಿಸುವುದಕ್ಕೆ ಸಮರ್ಥನಾಗಿದ್ದನು? ಹೀಗಿರುವಲ್ಲಿ ನಿಮ್ಮ ದೇವರು ನಿಮ್ಮನ್ನು ನನ್ನ ಕೈಗೆ ಸಿಕ್ಕದಂತೆ ತಪ್ಪಿಸಿ ಕಾಪಾಡುವುದಕ್ಕೆ ಶಕ್ತನಾಗಿರುತ್ತಾನೋ?


ಅವನ ಮೇಲೆ ಭಯಾತ್ಮನನ್ನು ಬರಮಾಡುವೆನು, ಅವನ ಒಂದು ಸುದ್ದಿಯನ್ನು ಕೇಳಿ ಸ್ವದೇಶಕ್ಕೆ ಹಿಂದಿರುಗಿ ಅಲ್ಲೆ ಕತ್ತಿಗೆ ತುತ್ತಾಗುವಂತೆ ಮಾಡುವೆನು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು