Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 38:10 - ಕನ್ನಡ ಸತ್ಯವೇದವು C.L. Bible (BSI)

10 ನನ್ನ ರೋಗದಲ್ಲಿ ನಾನು ಇಂತೆಂದುಕೊಂಡೆ : ಮಧ್ಯಪ್ರಾಯದಲ್ಲೇ ಮೃತ್ಯುಲೋಕವನ್ನು ಸಮೀಪಿಸಿರುವೆ ನನ್ನ ಆಯುಷ್ಯವನ್ನು ನಾ ಕಳೆದುಕೊಂಡಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನನ್ನ ರೋಗದಲ್ಲಿ ಹೀಗೆಲ್ಲಾ ಅಂದುಕೊಂಡೆನು, “ನನ್ನ ಮಧ್ಯಪ್ರಾಯದಲ್ಲಿ ಪಾತಾಳ ದ್ವಾರಗಳೊಳಗೆ ಸೇರಿದ್ದೇನೆ, ನನ್ನ ಆಯುಷ್ಯದಲ್ಲಿ ಕಳೆದು ಉಳಿದ ವರ್ಷಗಳು ನನಗೆ ನಷ್ಟವಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 [ನನ್ನ ರೋಗದಲ್ಲಿ] ಹೀಗೆಲ್ಲಾ ಅಂದುಕೊಂಡೆನು - ನನ್ನ ಮಧ್ಯಪ್ರಾಯದಲ್ಲಿ ಪಾತಾಳದ್ವಾರಗಳೊಳಗೆ ಸೇರಿದ್ದೇನೆ, ನನ್ನ ಆಯುಷ್ಯದಲ್ಲಿ ಕಳೆದು ವಿುಕ್ಕ ವರುಷಗಳು ನನಗೆ ನಷ್ಟವಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ನಾನು ವೃದ್ಧನಾಗುವ ತನಕ ಬದುಕುವೆನೆಂದು ನಾನು ನನ್ನೊಳಗೆ ಅಂದುಕೊಂಡಿದ್ದೆನು. ಆದರೆ ನಾನು ಮರಣದ್ವಾರದ ಮೂಲಕ ಹೋಗುವ ಸಮಯ ಬಂತು. ನನ್ನ ಜೀವಮಾನವೆಲ್ಲ ಅಲ್ಲಿ ಕಳೆಯುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 “ನನ್ನ ಜೀವನದ ಮಧ್ಯಪ್ರಾಯದಲ್ಲೇ ನಾನು ಪಾತಾಳದ ದ್ವಾರದೊಳಗೆ ಹೋಗಬೇಕು. ನನ್ನ ಆಯುಷ್ಯದಲ್ಲಿ ಕಳೆದು ಉಳಿದ ವರುಷಗಳು ನನಗೆ ತಪ್ಪಿಹೋಯಿತು,” ಎಂದು ನಾನು ಅಂದುಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 38:10
12 ತಿಳಿವುಗಳ ಹೋಲಿಕೆ  

ನಿಜವಾಗಿಯೂ ನಮಗೆ ಮರಣದಂಡನೆ ವಿಧಿಸಲಾಗಿದೆಯೆಂದು ಭಾವಿಸಿದೆವು. ಇದರಿಂದ ನಾವು ನಮ್ಮ ಸ್ವಂತ ಶಕ್ತಿಯನ್ನೇ ನಂಬಿಕೊಳ್ಳದೆ, ಸತ್ತವರನ್ನು ಪುನರುತ್ಥಾನಗೊಳಿಸುವ ದೇವರಲ್ಲಿ ಭರವಸೆಯಿಡುವಂತೆ ಹೀಗಾಯಿತು.


ಎಂತಲೆ ನಾನು : “ಅರ್ಧಾಯುಷ್ಯದಲೆ ನನ್ನೊಯ್ಯಬೇಡ ದೇವಾ I ತಲತಲಾಂತರದವರೆಗೂ ನಿನ್ನ ವರುಷಗಳು ಉಳಿದಿವೆಯಲ್ಲಾ II


ಅಸಹ್ಯಪಟ್ಟರು ಅನ್ನ ಆಹಾರಗಳಿಗೆ I ಹತ್ತಿರವಾದರವರು ಮೃತ್ಯುದ್ವಾರಕೆ II


ನೆನೆಸಿಕೊಳ್ಳೋ ದೇವಾ, ನನ್ನ ಜೀವ ಕೇವಲ ಉಸಿರು ನನ್ನ ಕಣ್ಣುಗಳು ಇನ್ನು ಕಾಣವು ನಲಿವು.


ಆ ದಿನಗಳಲ್ಲಿ ಹಿಜ್ಕೀಯನು ರೋಗದಿಂದ ಮರಣಾವಸ್ಥೆಯಲ್ಲಿದ್ದನು. ಆಗ ಆಮೋಚನ ಮಗನೂ ಪ್ರವಾದಿಯೂ ಆದ ಯೆಶಾಯನು ಅವನ ಬಳಿಗೆ ಬಂದು, “ನೀನು ಉಳಿಯುವ ಹಾಗಿಲ್ಲ, ಸಾಯಬೇಕಾಗಿದೆ. ಆದುದರಿಂದ ನಿನ್ನ ಸಂಸಾರವನ್ನು ವ್ಯವಸ್ಥೆಮಾಡಬೇಕು ಎಂದು ಸರ್ವೇಶ್ವರ ಹೇಳಿದ್ದಾರೆ,” ಎಂದು ತಿಳಿಸಿದನು.


ನಾನು ನಿರೀಕ್ಷೆಯಿಂದಿರಲು ನನಗಾಧಾರವೇನು? ನಾನು ತಾಳ್ಮೆಯಿಂದಿರಲು ನನ್ನ ಅಂತ್ಯಸ್ಥಿತಿಯೇನು?


ನಿನ್ನ ಕೈಗೆ ಸಿಕ್ಕಿದ ಕೆಲಸವನ್ನೆಲ್ಲ ಪೂರ್ಣಶಕ್ತಿಯಿಂದ ಮಾಡು. ಏಕೆಂದರೆ ನೀನು ಹೋಗಲಿಕ್ಕಿರುವ ಪಾತಾಳದಲ್ಲಿ ಯಾವ ಕೆಲಸವೂ ಯೋಜನೆಯೂ ತಿಳುವಳಿಕೆಯೂ ಜ್ಞಾನವೂ ಇರುವುದಿಲ್ಲ.


ಜುದೇಯದ ಅರಸ ಹಿಜ್ಕೀಯನು ರೋಗದಿಂದ ಗುಣಹೊಂದಿದಾಗ ಬರೆದ ಸ್ತುತಿಗೀತೆ :


ಪರ್ವತಗಳ ತಳಹದಿಗೆ ದೇವಾ, ನಾನಿಳಿದೆ ಮುಚ್ಚಿಕೊಂಡವು ಜಗದ ದ್ವಾರಗಳು ನನ್ನ ಹಿಂದೆ. ಎನ್ನ ಕಾಪಾಡಿದೆ ಅಂಥ ಕೋಪದಿಂದ ಸರ್ವೇಶ್ವರಾ, ಮೇಲಕ್ಕೆತ್ತಿದೆಯೆನ್ನ ಜೀವಸಹಿತ.


ಪ್ರಭುವಿನ ಭಕ್ತರೇ, ಪ್ರೀತಿಸಿ ನೀವಾತನನು ಅಧಿಕಾಧಿಕವಾಗಿ I ಶರಣರನು ರಕ್ಷಿಸಿ, ಸೊಕ್ಕಿನವರನು ಶಿಕ್ಷಿಸುವನಾತ ಸರಿಯಾಗಿ II


ಆದಿಯಲೆ ನೀ ಭುವಿಗೆ ಅಸ್ತಿವಾರ ಹಾಕಿದೆ I ಗಗನಮಂಡಲವು ಸಹ ನಿನ್ನ ಸೃಷ್ಟಿಯಾಗಿದೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು