Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 38:5 - ಕನ್ನಡ ಸತ್ಯವೇದವು C.L. Bible (BSI)

5 “ನೀನು ಹೋಗಿ ಹಿಜ್ಕೀಯನಿಗೆ ಹೀಗೆಂದು ತಿಳಿಸು : ‘ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದ್ದೇನೆ, ನಿನ್ನ ಕಣ್ಣೀರನ್ನು ನೋಡಿದ್ದೇನೆ; ಇಗೋ, ನಿನ್ನ ಆಯುಷ್ಯಕ್ಕೆ ಇನ್ನೂ ಹದಿನೈದು ವರ್ಷಗಳನ್ನು ಸೇರಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 “ನೀನು ಹೋಗಿ ನನ್ನ ಪ್ರಜೆಗಳ ಪ್ರಭುವಾಗಿರುವ ಹಿಜ್ಕೀಯನಿಗೆ, ‘ದಾವೀದನ ಪೂರ್ವಿಕರಾದ ಯೆಹೋವನು ಹೀಗೆ ಹೇಳುತ್ತಾನೆ, ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದ್ದೇನೆ, ನಿನ್ನ ಕಣ್ಣೀರನ್ನು ನೋಡಿದ್ದೇನೆ. ನಿನ್ನ ಆಯುಷ್ಯಕ್ಕೆ ಹದಿನೈದು ವರ್ಷಗಳನ್ನು ಕೂಡಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನೀನು ಹೋಗಿ ನನ್ನ ಪ್ರಜೆಗಳ ಪ್ರಭುವಾಗಿರುವ ಹಿಜ್ಕೀಯನಿಗೆ - ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದ್ದೇನೆ, ನಿನ್ನ ಕಣ್ಣೀರನ್ನು ನೋಡಿದ್ದೇನೆ; ನಿನ್ನ ಆಯುಷ್ಯಕ್ಕೆ ಹದಿನೈದು ವರುಷಗಳನ್ನು ಕೂಡಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 “ಹಿಜ್ಕೀಯನ ಬಳಿಗೆ ಹೋಗಿ ಹೇಳು, ನಿನ್ನ ಪೂರ್ವಿಕನಾದ ದಾವೀದನ ದೇವರಾದ ಯೆಹೋವನು ಹೇಳುವುದೇನೆಂದರೆ: ‘ನಿನ್ನ ಪ್ರಾರ್ಥನೆಯನ್ನು ನಾನು ಕೇಳಿದೆನು; ನಿನ್ನ ಕಣ್ಣೀರನ್ನು ನೋಡಿದೆನು. ನಿನ್ನ ಆಯುಷ್ಯಕ್ಕೆ ಹದಿನೈದು ವರ್ಷಗಳನ್ನು ಸೇರಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 “ನೀನು ಹೋಗಿ ಹಿಜ್ಕೀಯನಿಗೆ ಹೀಗೆ ಹೇಳು, ‘ನಿನ್ನ ತಂದೆಯಾದ ದಾವೀದನ ದೇವರಾದ ಯೆಹೋವ ದೇವರು ಹೇಳಿದ್ದೇನೆಂದರೆ: ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದ್ದೇನೆ, ನಿನ್ನ ಕಣ್ಣೀರನ್ನೂ ಕಂಡಿದ್ದೇನೆ. ನಿನ್ನ ಆಯುಷ್ಯಕ್ಕೆ ಹದಿನೈದು ವರ್ಷಗಳನ್ನು ಹೆಚ್ಚಾಗಿ ಕೂಡಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 38:5
29 ತಿಳಿವುಗಳ ಹೋಲಿಕೆ  

ನಿಂತಿಹನು ಕುರಿಮರಿಯಾದಾತನು ಸಿಂಹಾಸನದ ನಡುವೆ ಕಾಯುವನು ಅವರುಗಳನು ಕುರುಬನಂತೆ ನಡೆಸುವನು ಅವರನು ಜೀವಜಲದ ಒರತೆಗಳ ಬಳಿಗೆ ದೇವನೊರಸುವನು ಅವರ ಕಂಬನಿಗಳನು ಬಿಡದೆ', “ ಎಂದು ನನಗೆ ತಿಳಿಸಿದನು.


ನನ್ನ ಅಲೆಮಾರಿತನದ ಲೆಕ್ಕವಿಟ್ಟಿರುವೆ ನಿನ್ನಲಿ I ನನ್ನ ಕಣ್ಣೀರನು ತುಂಬಿಡು ನಿನ್ನ ಬುದ್ದಲಿಯಲಿ I ಅದರ ಕತೆ ಬರೆದಿದೆಯಲ್ಲವೆ ನಿನ್ನ ಪುಸ್ತಕದಲಿ? II


ದೂತನು ಅವನಿಗೆ, “ಜಕರೀಯಾ, ಭಯಪಡಬೇಡ! ನಿನ್ನ ಪ್ರಾರ್ಥನೆಯನ್ನು ದೇವರು ಆಲಿಸಿದ್ದಾರೆ. ನಿನ್ನ ಪತ್ನಿ ಎಲಿಜಬೇತಳಲ್ಲಿ ನಿನಗೆ ಒಂದು ಗಂಡುಮಗು ಹುಟ್ಟುವುದು. ನೀನು ಅವನಿಗೆ ‘ಯೊವಾನ್ನ’ ಎಂದು ನಾಮಕರಣ ಮಾಡಬೇಕು.


ವಾಸಿಮಾಡುವನು ಮುರಿದ ಮನಸ್ಸುಳ್ಳವರನು I ಕಟ್ಟಿ ಗುಣಪಡಿಸುವನು ಅವರ ಗಾಯಗಳನು II


ಪ್ರಭು ಅಲ್ಪವೆಂದೆಣಿಸನು I ತನ್ನ ಭಕ್ತರ ಮರಣವನು II


ಆದರೂ ಎದೆಗುಂದಿದವರನ್ನು ಸಂತೈಸುವ ದೇವರು ತೀತನನ್ನು ಕಳುಹಿಸಿ ನಮ್ಮನ್ನು ಸಂತೈಸಿದರು.


ಆಗ ಆಮೋಚನ ಮಗನಾದ ಯೆಶಾಯನು ಹಿಜ್ಕೀಯನಿಗೆ ಹೇಳಿಕಳುಹಿಸಿದ್ದೇನೆಂದರೆ: ” ಇಸ್ರಯೇಲಿನ ದೇವರಾದ ಸರ್ವೇಶ್ವರಸ್ವಾಮಿಯ ಈ ಮಾತುಗಳನ್ನು ಕೇಳು: ನೀನು ಅಸ್ಸೀರಿಯದ ರಾಜನಾದ ಸನ್ಹೇರೀಬನ ವಿಷಯವಾಗಿ ಮಾಡಿದ ಬಿನ್ನಹಗಳು ಸರ್ವೇಶ್ವರಸ್ವಾಮಿಗೆ ಮುಟ್ಟಿವೆ. ಅವರು ಅವನನ್ನು ಕುರಿತು ಹೀಗೆಂದಿದ್ದಾರೆ:


‘ನಾನು ಅಬ್ರಹಾಮನಿಗೆ ದೇವರು, ಇಸಾಕನಿಗೆ ದೇವರು, ಯಕೋಬನಿಗೆ ದೇವರು ಆಗಿದ್ದೇನೆ,’ ಎಂದು ದೇವರೇ ನಿಮಗೆ ಹೇಳಿರುವುದನ್ನು ನೀವು ಓದಿಲ್ಲವೆ? ಹೀಗಿರುವಾಗ ಅವರು ಜೀವಿತರ ದೇವರೇ ಹೊರತು ಮೃತರ ದೇವರಲ್ಲ,” ಎಂದರು.


ಇವನು ಪಟ್ಟಕ್ಕೆ ಬಂದಾಗ ಇಪ್ಪತ್ತೈದು ವರ್ಷದವನು. ಜೆರುಸಲೇಮಿನಲ್ಲಿ ಇಪ್ಪತ್ತೊಂಬತ್ತು ವರ್ಷ ಆಳಿದನು. ಜೆಕರ್ಯನ ಮಗಳಾದ ಅಬೀ ಎಂಬಾಕೆ ಇವನ ತಾಯಿ.


ಇಸ್ರಯೇಲ್ ದೇವರಾದ ಸರ್ವೇಶ್ವರಾ, ನೀವು ನನ್ನ ತಂದೆ ದಾವೀದನಿಗೆ, ನಿನ್ನ ಸಂತಾನದವರು ನಿನ್ನಂತೆ ಜಾಗರೂಕತೆಯಿಂದ ನನ್ನ ಮಾರ್ಗದಲ್ಲೇ ನಡೆದುಕೊಳ್ಳುವುದಾದರೆ, ಅವರು ಇಸ್ರಯೇಲ್ ಸಿಂಹಾಸನದ ಮೇಲೆ ಕೂತುಕೊಳ್ಳುವುದು ತಪ್ಪದು; ಎಂಬುದಾಗಿ ವಾಗ್ದಾನಮಾಡಿದ್ದೀರಿ; ಅದನ್ನು ನೆರವೇರಿಸಿರಿ.


‘ಪೌಲನೇ, ಭಯಪಡಬೇಡ. ನೀನು ಚಕ್ರವರ್ತಿಯ ಸಮ್ಮುಖದಲ್ಲಿ ನಿಲ್ಲಲೇಬೇಕಾಗಿದೆ; ಇಗೋ, ನಿನ್ನ ಸಂಗಡ ಪ್ರಯಾಣಮಾಡುವ ಎಲ್ಲರ ಪ್ರಾಣಗಳನ್ನು ದೇವರು ನಿನ್ನ ನಿಮಿತ್ತ ಉಳಿಸಿದ್ದಾರೆ,’ ಎಂದು ಅಭಯವಿತ್ತನು.


ನನ್ನ ಮೊರೆಯ ಕೇಳು, ಪ್ರಾರ್ಥನೆಯನಾಲಿಸು I ಸುಮ್ಮನಿರದೆ ನನ್ನ ಕಂಬನಿಯನೀಕ್ಷಿಸು II ಹೇ ಪ್ರಭು, ನಾನಿನ್ನ ಆಗಂತುಕನಯ್ಯಾ I ಪೂರ್ವಜರಂತೆ ನಾ ಪರದೇಶಿಯಯ್ಯಾ II


ಮಾನವನ ದಿನಗಳೆಷ್ಟೆಂದು ತೀರ್ಮಾನವಾಗಿದೆ ಅವನ ತಿಂಗಳುಗಳ ಲೆಕ್ಕ ನಿನಗೆ ಗೊತ್ತಿದೆ ನೀ ನೇಮಿಸಿರುವೆ ಅವನಿಗೆ ದಾಟಲಾಗದ ಗಡಿಗಳನೆ.


ಅರಸ ಹಿಜ್ಕೀಯನ ಆಳ್ವಿಕೆಯ ಹದಿನಾಲ್ಕನೆಯ ವರ್ಷದಲ್ಲಿ, ಅಸ್ಸೀರಿಯದ ಅರಸನಾದ ಸನ್ಹೇರೀಬನು ಬಂದು ಜುದೇಯ ಪ್ರಾಂತ್ಯದ ಸುಭದ್ರ ಪಟ್ಟಣಗಳನ್ನೆಲ್ಲಾ ಸ್ವಾಧೀನಮಾಡಿಕೊಂಡನು.


ಹಿತ್ತಿಯನಾದ ಊರೀಯನ ವಿಷಯವೊಂದನ್ನು ಬಿಟ್ಟರೆ, ಬೇರೆ ಯಾವ ವಿಷಯದಲ್ಲೂ ತಮ್ಮ ಆಜ್ಞೆಯನ್ನು ಮೀರದೆ, ಜೀವದಿಂದಿರುವವರೆಗೂ ತಮ್ಮ ಚಿತ್ತಕ್ಕನುಸಾರ ನಡೆದ ದಾವೀದನ ನಿಮಿತ್ತ, ಸರ್ವೇಶ್ವರಸ್ವಾಮಿ ಜೆರುಸಲೇಮಿನಲ್ಲಿನ ಇವನ ದೀಪವನ್ನು ಆರಿಸಲಿಲ್ಲ.


ಯೋಷೀಯನು ತನ್ನ ಆಳ್ವಿಕೆಯ ಎಂಟನೆಯ ವರ್ಷದಲ್ಲಿ, ಇನ್ನೂ ಯೌವನಸ್ಥನಾಗಿರುವಾಗಲೇ, ತನ್ನ ಪೂರ್ವಜನಾದ ದಾವೀದನ ದೇವರನ್ನು ಅವಲಂಬಿಸುವವನಾದನು; ಹನ್ನೆರಡನೆಯ ವರ್ಷ ಜುದೇಯದಲ್ಲೂ, ಜೆರುಸಲೇಮಿನಲ್ಲೂ ಇದ್ದ ಪೂಜಾಸ್ಥಳಗಳನ್ನು, ಆಶೇರಸ್ತಂಭಗಳನ್ನು ಹಾಗು ಕೆತ್ತಿದ ಮತ್ತು ಎರಕದ ವಿಗ್ರಹಗಳನ್ನು ತೆಗೆದುಹಾಕಿ ನಾಡನ್ನು ಶುದ್ಧಪಡಿಸಿದನು.


ಆಗ ಸರ್ವೇಶ್ವರ ಯೆಶಾಯನಿಗೆ,


ಆಲಿಸಿಹನು ಪ್ರಭು ಎನ್ನ ಪ್ರಾರ್ಥನೆಯನು I ಅಂಗೀಕರಿಸಿಹನು ಎನ್ನಯ ವಿಜ್ಞಾಪನೆಯನು II


ಕೊಲ್ಲುವ ಸಮಯ, ಗುಣಪಡಿಸುವ ಸಮಯ ಕೆಡವಿಬಿಡುವ ಸಮಯ, ಕಟ್ಟಿ ಎಬ್ಬಿಸುವ ಸಮಯ.


ಆಗ ಆಮೋಚನ ಮಗ ಯೆಶಾಯನು ಹಿಜ್ಕೀಯನಿಗೆ ಹೇಳಿಕಳುಹಿಸಿದ್ದೇನೆಂದರೆ : “ಇಸ್ರಯೇಲಿನ ದೇವರಾದ ಸರ್ವೇಶ್ವರ ಸ್ವಾಮಿಯ ಈ ಮಾತುಗಳನ್ನು ಕೇಳು : ನೀನು ಅಸ್ಸೀರಿಯದ ಅರಸ ಸನ್ಹೇರೀಬನ ವಿಷಯವಾಗಿ ಮಾಡಿದ ಬಿನ್ನಹಗಳು ಸರ್ವೇಶ್ವರ ಸ್ವಾಮಿಗೆ ಮುಟ್ಟಿವೆ. ಅವರು ಅವನಿಗೆ ವಿರುದ್ಧ ಹೀಗೆಂದಿದ್ದಾರೆ -


ನನ್ನ ನಿಟ್ಟುಸಿರಿಗೂ ಮೊರೆಗೂ ಕಿವಿಮುಚ್ಚಿಕೊಳ್ಳಬೇಡ ಎಂದೆ ಆಗ ನೀನು ನನ್ನ ಧ್ವನಿಯನ್ನು ಕೇಳಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು