Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 39:2 - ಕನ್ನಡ ಸತ್ಯವೇದವು C.L. Bible (BSI)

2 ಹಿಜ್ಕೀಯನು ಆ ದೂತರನ್ನು ಸಂತೋಷದಿಂದ ಬರಮಾಡಿಕೊಂಡು ಅವರಿಗೆ ಬೆಳ್ಳಿಬಂಗಾರ, ಸುಗಂಧದ್ರವ್ಯ, ಪರಿಮಳತೈಲ ಮೊದಲಾದ ಪದಾರ್ಥಗಳಿಂದ ಕೂಡಿದ ಕರಂಡಗಳನ್ನು, ಆಯುಧ ಶಾಲೆಯನ್ನು ಮತ್ತು ತನ್ನ ಭಂಡಾರದಲ್ಲಿದ್ದ ಒಡವೆವಸ್ತುಗಳನ್ನು ತೋರಿಸಿದನು. ಅವನ ಅರಮನೆಯಲ್ಲೂ ರಾಜ್ಯದಲ್ಲೂ ಇದ್ದ ಸಮಸ್ತವನ್ನು ತೋರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಹಿಜ್ಕೀಯನು ಬಂದ ದೂತರನ್ನು ಸಂತೋಷದಿಂದ ನೋಡಿ ಅವರಿಗೆ ಬೆಳ್ಳಿ, ಬಂಗಾರ, ಸುಗಂಧದ್ರವ್ಯ, ಪರಿಮಳತೈಲ ಮೊದಲಾದ ಪದಾರ್ಥಗಳಿರುವ ಮನೆಯನ್ನೂ, ಆಯುಧಶಾಲೆಯನ್ನೂ, ತನ್ನ ಭಂಡಾರದಲ್ಲಿದುದ್ದೆಲ್ಲವನ್ನೂ ತೋರಿಸಿದನು. ಅವನ ಅರಮನೆಯಲ್ಲಿಯೂ ರಾಜ್ಯದಲ್ಲಿಯೂ ಅವರಿಗೆ ತೋರಿಸದಿದ್ದ ವಸ್ತುವು ಒಂದೂ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಹಿಜ್ಕೀಯನು ಬಂದ ದೂತರನ್ನು ಸಂತೋಷದಿಂದ ನೋಡಿ ಅವರಿಗೆ ಬೆಳ್ಳಿ, ಬಂಗಾರ, ಸುಗಂಧ ದ್ರವ್ಯ, ಪರಿಮಳತೈಲ ಮೊದಲಾದ ಪದಾರ್ಥಗಳಿರುವ ಮನೆಯನ್ನೂ ಆಯುಧ ಶಾಲೆಯನ್ನೂ ತನ್ನ ಭಂಡಾರದಲ್ಲಿದ್ದದ್ದೆಲ್ಲವನ್ನೂ ತೋರಿಸಿದನು. ಅವನ ಅರಮನೆಯಲ್ಲಿಯೂ ರಾಜ್ಯದಲ್ಲಿಯೂ ಅವರಿಗೆ ತೋರಿಸದಿದ್ದ ವಸ್ತುವು ಒಂದೂ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಅವುಗಳನ್ನು ನೋಡಿ ಹಿಜ್ಕೀಯನಿಗೆ ಬಹು ಸಂತೋಷವಾಯಿತು. ಅವನು ಬಾಬಿಲೋನಿನ ದೂತರಿಗೆ ತನ್ನ ಅರಮನೆಯ ಉಗ್ರಾಣದಲ್ಲಿದ್ದ ಎಲ್ಲಾ ಬೆಲೆಬಾಳುವ ವಸ್ತುಗಳನ್ನೂ ತಾನು ಕೊಡಿಸಿಟ್ಟಿದ್ದ ಬೆಳ್ಳಿಬಂಗಾರಗಳನ್ನೂ ಸಾಂಬಾರ ಪದಾರ್ಥಗಳನ್ನೂ ಮತ್ತು ಸುಗಂಧದ್ರವ್ಯಗಳನ್ನೂ ತೋರಿಸಿದನು. ಅಲ್ಲದೆ ಯುದ್ಧದಲ್ಲಿ ಉಪಯೋಗಿಸುವ ಖಡ್ಗಗಳನ್ನು, ಗುರಾಣಿಗಳನ್ನು ತೋರಿಸಿದನು; ಅಲ್ಲದೆ ತನ್ನ ರಾಜ್ಯದಲ್ಲಿರುವ ಪ್ರತಿಯೊಂದು ವಿಷಯಗಳನ್ನು ಅವರಿಗೆ ಪ್ರದರ್ಶಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಹಿಜ್ಕೀಯನು ಅದಕ್ಕೆ ಸಂತೋಷಪಟ್ಟು ಅವರಿಗೆ ಬೆಳ್ಳಿ, ಬಂಗಾರ, ಸುಗಂಧದ್ರವ್ಯ, ಪರಿಮಳ ತೈಲ ಮೊದಲಾದ ಅಮೂಲ್ಯ ಪದಾರ್ಥಗಳಿರುವ ಮನೆಯನ್ನೂ, ಆಯುಧ ಶಾಲೆಯನ್ನೂ, ತನ್ನ ಭಂಡಾರದಲ್ಲಿ ಇರುವುದೆಲ್ಲವನ್ನೂ ತೋರಿಸಿದನು. ಹೀಗೆ ಹಿಜ್ಕೀಯನು ತನ್ನ ಅರಮನೆಯಲ್ಲಿಯೂ, ತನ್ನ ಸಮಸ್ತ ರಾಜ್ಯದಲ್ಲಿಯೂ ಅವರಿಗೆ ತೋರಿಸದಿದ್ದ ವಸ್ತುವು ಒಂದೂ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 39:2
18 ತಿಳಿವುಗಳ ಹೋಲಿಕೆ  

ಆದುದರಿಂದ ಅವನ ನಾಡಿನಲ್ಲಾದ ಅದ್ಭುತಕರವಾದ ಮಾರ್ಪಾಟುಗಳನ್ನು ಪರಿಶೀಲಿಸುವುದಕ್ಕಾಗಿ ಬಾಬಿಲೋನಿಯದ ಅಧಿಪತಿಗಳು ರಾಯಭಾರಿಗಳನ್ನು ಅವನ ಬಳಿಗೆ ಕಳುಹಿಸಿದರು. ಅವರು ಬಂದಾಗ, ಅವನನ್ನು ಪರೀಕ್ಷಿಸುವುದಕ್ಕಾಗಿ ಹಾಗು ಅವನ ಅಂತರಾಳವನ್ನು ತಿಳಿದುಕೊಳ್ಳುವುದಕ್ಕಾಗಿ ದೇವರು ಅವನನ್ನು ಕೈಬಿಟ್ಟರು.


ಆದರೆ ಹಿಜ್ಕೀಯನು ಈ ಉಪಕಾರಕ್ಕೆ ತಕ್ಕಂತೆ ನಡೆಯದೆ ಅಹಂಕಾರಿಯಾದನು. ಆದ್ದರಿಂದ ಜುದೇಯದ ಮೇಲೂ ಜೆರುಸಲೇಮಿನವರ ಮೇಲೂ ದೇವರ ಕೋಪವೆರಗಿತು.


ಮಾನವ ಹೃದಯ ಎಲ್ಲಕ್ಕಿಂತ ವಂಚಕ ಅದಕ್ಕೆ ಅಂಟಿದೆ ಗುಣವಾಗದ ರೋಗ ಅದರ ಗುಟ್ಟನ್ನು ಅರಿತುಕೊಳ್ಳಬಲ್ಲವರೂ ಇಲ್ಲ.


ನನ್ನ ಆಸ್ತಿ ಅಪಾರವೆಂದು ಕೊಚ್ಚಿಕೊಂಡಿದ್ದರೆ ನಾನೇ ಸಂಪಾದಿಸಿದ ಸಂಪತ್ತೆಂದು ಹೆಚ್ಚಳಪಟ್ಟಿದ್ದರೆ,


ನನಗೆ ತಿಳಿಸಲಾದ ಗಹನ ಸತ್ಯಗಳಿಂದ ನಾನು ಉಬ್ಬಿಹೋಗದ ಹಾಗೆ ನನ್ನ ದೇಹದಲ್ಲಿ ಶೂಲದಂತೆ ನಾಟಿರುವ ಬೇನೆಯೊಂದನ್ನು ನನಗೆ ಕೊಡಲಾಯಿತು. ನಾನು ಅಹಂಕಾರಪಡದ ಹಾಗೆ ಇದು ನನ್ನನ್ನು ತಿವಿತಿವಿದು ಸೈತಾನನ ದೂತನಂತೆ ಕಾಡಿಸುತ್ತಿತ್ತು.


ಪಾಪಮಾಡದೆ ಧರ್ಮವನ್ನೇ ಆಚರಿಸುವ ಸತ್ಪುರುಷ ಜಗದಲ್ಲಿ ಇಲ್ಲವೇ ಇಲ್ಲ.


ನಿನ್ನ ಹೃದಯವನ್ನು ಕಾಪಾಡು ಜಾಗರೂಕತೆಯಿಂದ; ಏಕೆಂದರೆ ಜೀವಧಾರೆ ಹೊರಡುವುದು ಅದರಿಂದ.


ಹಿಜ್ಕೀಯನಿಗೆ ಅತ್ಯಧಿಕವಾದ ಧನಘನತೆಗಳು ಒದಗಿದವು; ಅವನು ಬೆಳ್ಳಿಬಂಗಾರ, ರತ್ನ, ಪರಿಮಳ ದ್ರವ್ಯ, ಗುರಾಣಿ ಮುಂತಾದ ಶ್ರೇಷ್ಠಾಯುಧಗಳನ್ನು ಇಡುವುದಕ್ಕಾಗಿ ಭಂಡಾರಗಳನ್ನು ಏರ್ಪಡಿಸಿದನು. ಧಾನ್ಯ, ದ್ರಾಕ್ಷಾರಸ, ಎಣ್ಣೆ, ಇವುಗಳನ್ನು ಸಂಗ್ರಹಿಸುವುದಕ್ಕಾಗಿ ಉಗ್ರಾಣಗಳನ್ನು ಕಟ್ಟಿಸಿದನು;


ಆಕೆ ಅರಸನಿಗೆ 4000 ಕಿಲೋಗ್ರಾಂಗೂ ಹೆಚ್ಚು ಬಂಗಾರವನ್ನೂ ಅಪರಿಮಿತ ಸುಗಂಧದ್ರವ್ಯವನ್ನೂ ರತ್ನಗಳನ್ನೂ ಕೊಟ್ಟಳು. ಶೆಬಾದ ರಾಣಿ ಅರಸ ಸೊಲೊಮೋನನಿಗೆ ಕೊಟ್ಟ ಸುಗಂಧದ್ರವ್ಯಕ್ಕೆ ಸರಿಸಮಾನವಾದದ್ದು ಯಾವುದೂ ಇರಲಿಲ್ಲ.


ಶೆಬಾದ ರಾಣಿ ಸೊಲೊಮೋನನ ಕೀರ್ತಿಯನ್ನು ಕೇಳಿ, ಅವನನ್ನು ಒಗಟುಗಳಿಂದ ಪರೀಕ್ಷಿಸುವುದಕ್ಕೆ ಜೆರುಸಲೇಮಿಗೆ ಬಂದಳು. ಆಕೆ ಸುಗಂಧದ್ರವ್ಯ, ಅಪರಿಮಿತವಾದ ಬಂಗಾರ, ರತ್ನ ಇವುಗಳನ್ನು ಒಂಟೆಗಳ ಮೇಲೆ ಹೇರಿಸಿಕೊಂಡು ಮಹಾಪರಿವಾರದೊಡನೆ ಸೊಲೊಮೋನನ ಬಳಿಗೆ ಬಂದಳು. ತನ್ನ ಮನಸ್ಸಿನಲ್ಲಿ ಗೊತ್ತುಮಾಡಿಕೊಂಡಿದ್ದ ಎಲ್ಲಾ ವಿಷಯಗಳನ್ನು ಕುರಿತು ಅವನೊಡನೆ ಸಂಭಾಷಿಸಿದಳು.


ಹಿಜ್ಕೀಯನು ಬಂದಂಥ ದೂತರ ಮಾತನ್ನು ಕೇಳಿ, ಅವರಿಗೆ ಬೆಳ್ಳಿ, ಬಂಗಾರ, ಸುಗಂಧದ್ರವ್ಯ, ಪರಿಮಳತೈಲ, ಮೊದಲಾದ ಪದಾರ್ಥಗಳಿರುವ ಮನೆಯನ್ನೂ ಆಯುಧಶಾಲೆಯನ್ನೂ ತನ್ನ ಭಂಡಾರದಲ್ಲಿದ್ದದ್ದೆಲ್ಲವನ್ನೂ ತೋರಿಸಿದನು. ಅವನ ಅರಮನೆಯಲ್ಲೂ ರಾಜ್ಯದಲ್ಲೂ ಅವರಿಗೆ ತೋರಿಸದಿದ್ದ ವಸ್ತು ಒಂದೂ ಇರಲಿಲ್ಲ.


ಅವರೆಲ್ಲರೂ ಅವನಿಗೆ ವರ್ಷ ವರ್ಷ ಬೆಳ್ಳಿ ಬಂಗಾರದ ಸಾಮಾನು, ಉಡುಪು, ಯುದ್ಧಾಯುಧ, ಸುಗಂಧದ್ರವ್ಯ, ಕುದುರೆ, ಹೇಸರಗತ್ತೆ ಇವುಗಳನ್ನು ಕಾಣಿಕೆಯಾಗಿ ಕೊಡುತ್ತಿದ್ದರು.


ಪ್ರತಿವರ್ಷ ಸುಮಾರು ಇಪ್ಪತ್ತಮೂರು ಸಾವಿರ ಕಿಲೋಗ್ರಾಂ ಬಂಗಾರ ದೊರಕುತ್ತಿತ್ತು.


ಆಕೆ ಅರಸನಿಗೆ ನಾಲ್ಕು ಸಾವಿರ ಕಿಲೋಗ್ರಾಂಗೂ ಹೆಚ್ಚು ಬಂಗಾರವನ್ನು, ಅಪರಿಮಿತ ಸುಗಂಧದ್ರವ್ಯವನ್ನು ಹಾಗು ರತ್ನಗಳನ್ನು ಕೊಟ್ಟಳು. ಶೆಬದ ರಾಣಿ ಅರಸ ಸೊಲೊಮೋನನಿಗೆ ಕೊಟ್ಟಷ್ಟು ಸುಗಂಧದ್ರವ್ಯವನ್ನು ಬೇರೆ ಯಾರೂ ಈ ನಾಡಿಗೆ ಕೊಟ್ಟಿರಲಿಲ್ಲ.


ಆಕೆ ಸುಗಂಧದ್ರವ್ಯ, ಅಪರಿಮಿತವಾದ ಬಂಗಾರ, ರತ್ನ, ಇವುಗಳನ್ನು ಒಂಟೆಗಳ ಮೇಲೆ ಹೇರಿಸಿಕೊಂಡು ಮಹಾಪರಿವಾರದೊಡನೆ ಜೆರುಸಲೇಮಿಗೆ ಬಂದಳು. ತನ್ನ ಮನಸ್ಸಿನಲ್ಲಿ ಗೊತ್ತುಮಾಡಿಕೊಂಡಿದ್ದ ಎಲ್ಲಾ ವಿಷಯಗಳನ್ನು ಕುರಿತು ಸೊಲೊಮೋನನೊಡನೆ ಸಂಭಾಷಿಸಿದಳು.


ನಮ್ಮಲ್ಲಿ ಪಾಪವಿಲ್ಲವೆಂದು ನಾವು ಹೇಳಿಕೊಂಡರೆ, ನಮ್ಮನ್ನು ನಾವೇ ವಂಚಿಸಿಕೊಳ್ಳುತ್ತೇವೆ ಮತ್ತು ಸತ್ಯವೆಂಬುದೇ ನಮ್ಮಲ್ಲಿ ಇರುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು