Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 39:8 - ಕನ್ನಡ ಸತ್ಯವೇದವು C.L. Bible (BSI)

8 ಆಗ ರಾಜ ಹಿಜ್ಕೀಯನು ಹೇಗೂ ತನ್ನ ಜೀವಮಾನದಲ್ಲಿ ಶಾಂತಿ ಸೌಭಾಗ್ಯ ಇರುವುದೆಂದು ತಿಳಿದುಕೊಂಡು ಯೆಶಾಯನಿಗೆ, “ನೀನು ತಿಳಿಸಿದ ಸರ್ವೇಶ್ವರ ಸ್ವಾಮಿಯ ಮಾತು ಹಿತಕರವಾದುದು,” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 “ಹೇಗೂ ನನ್ನ ಜೀವಮಾನದಲ್ಲಿ ತಪ್ಪದೆ ಸೌಭಾಗ್ಯವಿರುವುದು” ಎಂದುಕೊಂಡು ಹಿಜ್ಕೀಯನು ಯೆಶಾಯನಿಗೆ, “ನೀನು ತಿಳಿಸಿದ ಯೆಹೋವನ ಮಾತು ಒಳ್ಳೆಯದಾಗಿದೆ” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಹೇಗೂ ನನ್ನ ಜೀವಮಾನದಲ್ಲಿ ತಪ್ಪದೆ ಸೌಭಾಗ್ಯವಿರುವದು ಅಂದುಕೊಂಡು ಹಿಜ್ಕೀಯನು ಯೆಶಾಯನಿಗೆ - ನೀನು ತಿಳಿಸಿದ ಯೆಹೋವನ ಮಾತು ಒಳ್ಳೇದಾಗಿದೆ ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಅದಕ್ಕೆ ಹಿಜ್ಕೀಯನು ಯೆಶಾಯನಿಗೆ, “ಯೆಹೋವನ ಮಾತುಗಳು ಒಳ್ಳೆಯವೇ ಸರಿ” ಎಂದು ಹೇಳಿದನು. (ಯಾಕೆಂದರೆ ತಾನು ಅರಸನಾಗಿರುವಷ್ಟು ಕಾಲ ದೇಶದಲ್ಲಿ ಸಮಾಧಾನವಿರುವುದೆಂದು ಅವನು ಯೋಚಿಸಿಕೊಂಡನು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆಗ ಹಿಜ್ಕೀಯನು, “ಹೇಗೂ ನನ್ನ ಜೀವಮಾನದಲ್ಲಿ ಸಮಾಧಾನವು, ಭದ್ರತೆಯೂ ಇರುವುವು,” ಎಂದುಕೊಂಡು ಯೆಶಾಯನಿಗೆ, “ನೀನು ಹೇಳಿದ ಯೆಹೋವ ದೇವರ ವಾಕ್ಯವು ಒಳ್ಳೆಯದೇ!” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 39:8
12 ತಿಳಿವುಗಳ ಹೋಲಿಕೆ  

ಆಗ ಹಿಜ್ಕೀಯನ ಗರ್ವ ಇಳಿಯಿತು; ಜೆರುಸಲೇಮಿನವರೊಡನೆ ಅವನು ದೀನಮನಸ್ಕನಾದನು. ಈ ಕಾರಣ ಅವನ ಜೀವಮಾನದಲ್ಲಿ ಸರ್ವೇಶ್ವರನ ಕೋಪ ಅವರ ಮೇಲೆ ಬರಲಿಲ್ಲ.


ನಾನು ನಾಡಿನ ಮೇಲೂ ಇದರ ನಿವಾಸಿಗಳ ಮೇಲೂ ಬರಮಾಡುವ ಶಿಕ್ಷೆಗಳಲ್ಲಿ ನೀನು ಒಂದನ್ನೂ ನೋಡದೆ ಸಮಾಧಾನದಿಂದ ಮೃತಿಹೊಂದಿ ಸಮಾಧಿ ಸೇರುವಂತೆ ಅನುಗ್ರಹಿಸುವೆನು,’ ಎಂಬುದಾಗಿ ತಿಳಿಸಿರಿ,” ಎಂದು ಹೇಳಿದಳು. ಅವರು ಹಿಂದಿರುಗಿ ಬಂದು ಅರಸನಿಗೆ ಆ ಮಾತುಗಳನ್ನು ತಿಳಿಸಿದರು.


ದೇವರ ಪರಾಕ್ರಮಕ್ಕೆ ತಗ್ಗಿ ನಮ್ರರಾಗಿ ನಡೆದುಕೊಳ್ಳಿ. ಆಗ ಅವರು ನಿಮ್ಮನ್ನು ಸಕಾಲದಲ್ಲಿ ಮೇಲಕ್ಕೆತ್ತುವರು;


“ನಾಲ್ಕನೇ, ಐದನೇ, ಏಳನೇ ಮತ್ತು ಹತ್ತನೇ ತಿಂಗಳುಗಳ ಉಪವಾಸ ಇವು ಯೆಹೂದ್ಯ ವಂಶಕ್ಕೆ ವಿಶೇಷ ಹಬ್ಬದ ದಿನಗಳಾಗಿ ಮಾರ್ಪಟ್ಟು, ಜನರು ಹರ್ಷಿಸಿ ಆನಂದಿಸುವರು. ಇಂತಿರಲು ಸತ್ಯವನ್ನೂ ಸಮಾಧಾನವನ್ನೂ ಪ್ರೀತಿಸಿರಿ.”


“ನೀವು ಮಾಡಬೇಕಾದುದು ಏನೆಂದರೆ: ಪ್ರತಿಯೊಬ್ಬನು ತನ್ನ ನೆರೆಯವನೊಡನೆ ಸತ್ಯವನ್ನೇ ಆಡಲಿ. ನ್ಯಾಯಾಲಯಗಳಲ್ಲಿ ನಿಮ್ಮ ತೀರ್ಪು ನ್ಯಾಯಸಮ್ಮತವಾಗಿರಲಿ, ಶಾಂತಿಯ ಸಾಧನ ಆಗಿರಲಿ.


ಜೀವಾತ್ಮನಾದ ಮಾನವನು ತನ್ನ ಪಾಪದ ಶಿಕ್ಷೆಗಾಗಿ ಗೊಣಗುಟ್ಟುವುದೆಂತು?


ನಾವು ಉಳಿದಿರುವುದು ಸರ್ವೇಶ್ವರನ ಕರುಣೆಯಿಂದ ಆತನ ಕೃಪಾವರಗಳಿಗೆ ಕೊನೆಯೇ ಇಲ್ಲ.


ಮೌನದಿಂದಿರುವೆ, ಬಾಯ್ದೆರೆಯದಿರುವೆ I ನನಗೊದಗಿರುವುದು ನಿನ್ನಿಂದಲ್ಲವೆ? II


ಬರಿಗೈಯಲ್ಲಿ ಬಂದೆ ನಾನು ತಾಯಗರ್ಭದಿಂದ ಬರಿಗೈಯಲ್ಲಿ ಹಿಂತಿರುಗುವೆ ನಾನು ಇಲ್ಲಿಂದ ಸರ್ವೇಶ್ವರ ಕೊಟ್ಟ ಸರ್ವೇಶ್ವರ ತೆಗೆದುಕೊಂಡ ಆತನ ನಾಮಕ್ಕೆ ಸ್ತುತಿಸ್ತೋತ್ರ! ಎಂದನು.


‘ನಿನ್ನಲ್ಲಿ ನನಗೆ ಇಷ್ಟವಿಲ್ಲ,’ ಎಂದು ತೋರಿದರೆ ತಮಗೆ ಸರಿಕಂಡಂತೆ ಮಾಡಲಿ. ಅವರ ಚಿತ್ತದಂತೆ ಆಗಲಿ,” ಎಂದನು.


ಸಮುವೇಲನು ಮುಚ್ಚುಮರೆಯಿಲ್ಲದೆ ಎಲ್ಲವನ್ನೂ ತಿಳಿಸಿದನು. ಏಲಿ ಅದನ್ನು ಕೇಳಿ, “ಅವರೇ ಸರ್ವೇಶ್ವರ. ತಮಗೆ ಸರಿಕಂಡಂತೆ ಮಾಡಲಿ,” ಎಂದನು.


ಆಗ ಮೋಶೆ ಆರೋನನಿಗೆ: “’ನನ್ನ ಬಳಿಯಿರುವವರ ಮುಖಾಂತರವೆ ನನ್ನ ಪರಿಶುದ್ಧತೆಯನ್ನು ತೋರ್ಪಡಿಸುವೆ ಜನರೆಲ್ಲರ ಸಮ್ಮುಖದಲೆ ನನ್ನ ಮಹಿಮೆಯನು ಶೃತಪಡಿಸುವೆ, ಎಂಬ ಸರ್ವೇಶ್ವರನ ನುಡಿಗೆ ಇದೊಂದು ದೃಷ್ಟಾಂತವೇ ಸರಿ,” ಎಂದನು. ಅದಕ್ಕೆ ಆರೋನನು ಮೌನವಾಗಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು