ಯೆಶಾಯ 4:2 - ಕನ್ನಡ ಸತ್ಯವೇದವು C.L. Bible (BSI)2 ಆ ದಿನದಂದು ಸರ್ವೇಶ್ವರಸ್ವಾಮಿ ಅನುಗ್ರಹಿಸುವ ಗಿಡಮರಗಳು ಸುಂದರವಾಗಿರುವುವು, ಸಮೃದ್ಧಿಯಾಗಿ ಬೆಳೆದಿರುವುವು. ಭೂಮಿಯ ಸಿರಿಸುಗ್ಗಿ ಅಳಿದುಳಿದ ಇಸ್ರಯೇಲರಿಗೆ ಹಿಗ್ಗನ್ನೂ ಹೆಮ್ಮೆಯನ್ನೂ ತರುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಆ ದಿನದಲ್ಲಿ ಯೆಹೋವನು ದಯಪಾಲಿಸಿದ ಬೆಳೆಯಿಂದ ಇಸ್ರಾಯೇಲರಲ್ಲಿ ಉಳಿದವರಿಗೆ ಸೌಂದರ್ಯವೂ, ಮಹಿಮೆಯೂ ಉಂಟಾಗುವವು. ದೇಶದಿಂದ ಫಲವೂ, ಉನ್ನತಿಯೂ, ಭೂಷಣವೂ ಲಭಿಸುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಆ ದಿನದಲ್ಲಿ ಯೆಹೋವನು ದಯಪಾಲಿಸುವ ಬೆಳೆಯಿಂದ ಇಸ್ರಾಯೇಲ್ಯರಲ್ಲಿ ಉಳಿದವರಿಗೆ ಸೌಂದರ್ಯವೂ ಮಹಿಮೆಯೂ ಉಂಟಾಗುವವು, ದೇಶದ ಫಲದಿಂದ ಉನ್ನತಿಯೂ ಭೂಷಣವೂ ಲಭಿಸುವವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಆ ಸಮಯದಲ್ಲಿ ಯೆಹೋವನ ಸಸಿ (ಯೆಹೂದವು) ಬಹಳ ಚಂದವಾಗಿಯೂ ದೊಡ್ಡದಾಗಿಯೂ ಇರುವುದು. ಆ ಸಮಯದಲ್ಲಿ, ಚೀಯೋನಿನಲ್ಲಿ ಮತ್ತು ಜೆರುಸಲೇಮಿನಲ್ಲಿ ಇನ್ನೂ ವಾಸಿಸುತ್ತಿರುವ ಜನರು ತಮ್ಮ ದೇಶದಲ್ಲಿ ಬೆಳೆಯುವ ಫಲಗಳಿಗಾಗಿ ತುಂಬಾ ಹೆಚ್ಚಳಪಡುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಆ ದಿನದಲ್ಲಿ ಯೆಹೋವ ದೇವರ ಕೊಂಬೆಯು ಸುಂದರವಾಗಿಯೂ, ಮಹಿಮೆಯುಳ್ಳದ್ದಾಗಿಯೂ ಇರುವುದು. ಭೂಮಿಯ ಫಲವು ಇಸ್ರಾಯೇಲರಲ್ಲಿ ಉಳಿದವರಿಗೆ ಅಭಿಮಾನವೂ, ರಮ್ಯವಾಗಿಯೂ ಇರುವುದು. ಅಧ್ಯಾಯವನ್ನು ನೋಡಿ |