Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 40:14 - ಕನ್ನಡ ಸತ್ಯವೇದವು C.L. Bible (BSI)

14 ಜ್ಞಾನೋದಯ ನೀಡಿದವನಾರು ಆತನಿಗೆ? ನ್ಯಾಯಮಾರ್ಗ ತೋರಿಸಿದವನಾರು ಆತನಿಗೆ? ಬುದ್ಧಿ ಕಲಿಸಿದವನಾರು ಆತನಿಗೆ? ಏನೇ ಮಾರ್ಗವನ್ನು ಸೂಚಿಸಿದವನಾರು ಆತನಿಗೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆತನು ಯಾರ ಆಲೋಚನೆಯನ್ನು ಕೇಳಿದನು? ಯಾರು ಆತನಿಗೆ ಬುದ್ಧಿಕಲಿಸಿ ಆತನನ್ನು ನ್ಯಾಯಮಾರ್ಗದಲ್ಲಿ ನಡೆಯಿಸಿದನು? ಯಾರು ಆತನಿಗೆ ಜ್ಞಾನವನ್ನು ಬೋಧಿಸಿ ವಿವೇಕ ಮಾರ್ಗವನ್ನು ತೋರಿಸಿದವನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಆತನು ಯಾವನ ಆಲೋಚನೆಯನ್ನು ಕೇಳಿದನು? ಯಾವನು ಆತನಿಗೆ ಬುದ್ಧಿಕಲಿಸಿ ಆತನನ್ನು ನ್ಯಾಯಮಾರ್ಗದಲ್ಲಿ ನಡೆಯಿಸಿದನು? ಯಾವನು ಆತನಿಗೆ ಜ್ಞಾನವನ್ನು ಬೋಧಿಸಿ ವಿವೇಕಮಾರ್ಗವನ್ನು ತೋರಿಸಿದನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಯೆಹೋವನು ಯಾರಿಂದಾದರೂ ಸಹಾಯ ಕೇಳಿದನೋ? ಯಾರಾದರೂ ಆತನಿಗೆ ನ್ಯಾಯನೀತಿಯನ್ನು ಕಲಿಸಿದರೋ? ಯಾರಾದರೂ ಆತನಿಗೆ ಜ್ಞಾನವನ್ನು ತಿಳಿಸಿಕೊಟ್ಟರೋ? ಯಾವನಾದರೂ ಯೆಹೋವನಿಗೆ ತಿಳುವಳಿಕೆಯನ್ನು ಹೇಳಿಕೊಟ್ಟನೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ತನಗೆ ಜ್ಞಾನ ದೊರೆಯಲು ಯೆಹೋವ ದೇವರು ಯಾರ ವಿಚಾರ ತೆಗೆದುಕೊಂಡನು. ಆತನಿಗೆ ಸರಿಯಾದ ಮಾರ್ಗವನ್ನು ಕಲಿಸಿದವನು ಯಾರು? ಆತನಿಗೆ ಜ್ಞಾನವನ್ನು ಕಲಿಸಿದವನಾರು ಇಲ್ಲವೆ ತಿಳುವಳಿಕೆಯ ಮಾರ್ಗವನ್ನು ಆತನಿಗೆ ತೋರಿಸಿದವನಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 40:14
9 ತಿಳಿವುಗಳ ಹೋಲಿಕೆ  

ದೇವರಿಗೆ ಜ್ಞಾನಬೋಧೆ ಮಾಡಬಲ್ಲವನು ಇದ್ದಾನೆಯೇ? ಉನ್ನತರಿಗೂ ನ್ಯಾಯತೀರಿಸುವಂಥವನು ಆತನೇ ಅಲ್ಲವೇ?


ಕ್ರಿಸ್ತಯೇಸುವಿನಲ್ಲಿಯೇ ಜ್ಞಾನ, ವಿವೇಕ ಎಂಬ ಸಿರಿಸಂಪತ್ತು ಅಡಗಿದೆ.


ಎಲ್ಲಾ ಯೋಗ್ಯ ವರಗಳೂ ಉತ್ತಮ ಕೊಡುಗೆಗಳೂ ಬರುವುದು ಮೇಲಿನಿಂದಲೇ. ಜ್ಯೋತಿರ್ಮಂಡಲವನ್ನು ಉಂಟುಮಾಡಿದ ದೇವರೇ ಅವುಗಳ ಮೂಲದಾತರು. ಅವರಲ್ಲಿ ಚಂಚಲತೆ ಇಲ್ಲ, ಮಬ್ಬು ಮುಸುಕಿನ ಛಾಯೆಯೂ ಇಲ್ಲ.


ಭೂಮಿ ನಿರಾಕಾರವಾಗಿಯೂ ಬರಿದಾಗಿಯೂ ಇತ್ತು. ಆದಿಸಾಗರದ ಮೇಲೆ ಕಗ್ಗತ್ತಲು ಕವಿದಿತ್ತು. ದೇವರಾತ್ಮ ಜಲರಾಶಿಯ ಮೇಲೆ ಚಲಿಸುತ್ತಿತ್ತು.


ನಾನು ಭೂಮಿಗೆ ಅಸ್ತಿವಾರ ಹಾಕಿದಾಗ ನೀನೆಲ್ಲಿದ್ದೆ? ಉತ್ತರಕೊಡು, ನೀನು ಅಷ್ಟು ಜ್ಞಾನಿಯಾಗಿದ್ದರೆ.


ಎನ್ನ ನಡೆಸು ನಿನ್ನ ಆಜ್ಞಾಮಾರ್ಗದಲಿ I ಪಡೆಯುವೆ ಹರ್ಷಾನಂದವನು ಅದರಲಿ II


ನಾ ನೋಡಲು ಅವರಲ್ಲಿ ಸಮರ್ಥರಾರು ಇಲ್ಲ ನಾ ಪ್ರಶ್ನಿಸಲು ಉತ್ತರಿಸಬಲ್ಲ ವಿವೇಕಿ ಇಲ್ಲ.


ದೇವರಿಗೆ ಮಾರ್ಗತೋರಿಸಬಲ್ಲವನಾರು? ಆತನಿಗೆ ‘ನೀನು ಮಾಡಿರುವುದು ಅನ್ಯಾಯ,’ ಎನ್ನಬಲ್ಲವನಾರು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು