Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 40:30 - ಕನ್ನಡ ಸತ್ಯವೇದವು C.L. Bible (BSI)

30 ಯುವಕರೂ ದಣಿದು ಬಳಲುವರು ತರುಣರೂ ಸೊರಗಿ ಮುಗ್ಗರಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಯುವಕರೂ ದಣಿದು ಬಳಲುವರು, ತರುಣರೂ ಸೊರಗಿ ಮುಗ್ಗರಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಯುವಕರೂ ದಣಿದು ಬಳಲುವರು, ತರುಣರೂ ಸೊರಗಿ ಮುಗ್ಗರಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಯೌವನಸ್ಥರು ಆಯಾಸಗೊಳ್ಳುವರು. ಅವರಿಗೆ ವಿಶ್ರಾಂತಿ ಬೇಕು; ಹುಡುಗರೂ ಮುಗ್ಗರಿಸಿಬೀಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಯೌವನಸ್ಥರೋ ದಣಿದು ಬಳಲುವರು ಮತ್ತು ತರುಣರು ಸಂಪೂರ್ಣವಾಗಿ ಬೀಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 40:30
11 ತಿಳಿವುಗಳ ಹೋಲಿಕೆ  

ನಿಮ್ಮಲ್ಲಿ ದೌಡೋಡುವವನು ಕೂಡ ತಲೆತಪ್ಪಿಸಿಕೊಳ್ಳಲಾರನು. ಬಲಿಷ್ಠನೂ ಬಲಹೀನನಾಗುವನು. ಪರಾಕ್ರಮಿಯೂ ಪ್ರಾಣ ಉಳಿಸಿಕೊಳ್ಳಲಾರನು.


ಯುವ ಕೇಸರಿಗೆ ಇರಬಹುದು ಹಸಿವು, ದಾಹ I ಪ್ರಭುವನು ಅರಸುವವರಿಗಿರದು ಒಳಿತಿನ ಅಭಾವ II


ಅರಸನಾವನು ವಿಜೇತನಾಗನು ಮಹಾ ಸೇನಾಬಲದಿಂದಲೆ I ಶೂರನಾವನು ಜಯಶೀಲನಾಗನು ಕೇವಲ ಭುಜಬಲದಿಂದಲೆ II


ಲೋಕದಲ್ಲಿ ನಾನು ಇನ್ನೊಂದು ವಿಷಯವನ್ನು ಗಮನಿಸಿದೆ; ಓಟ ಪಂದ್ಯದಲ್ಲಿ ವೇಗವಾಗಿ ಓಡುವವನೇ ಯಾವಾಗಲೂ ಗೆಲ್ಲುವನು ಎನ್ನುವಂತಿಲ್ಲ; ಬಲಿಷ್ಠರಿಗೇ ಯುದ್ಧದಲ್ಲಿ ಜಯಗಿಟ್ಟುತ್ತದೆ ಎನ್ನುವಹಾಗಿಲ್ಲ. ಜ್ಞಾನಿಗೆ ಜೀವನಾಂಶ ದೊರಕುವುದು, ಜಾಣನಿಗೆ ಹಣ ಲಭಿಸುವುದು, ಪ್ರವೀಣನಿಗೆ ಪಟ್ಟಪದವಿ ಸಿಕ್ಕುವುದು ಎನ್ನುವಂತಿಲ್ಲ. ಇವರೆಲ್ಲರೂ ಸಮಯ ಸಂದರ್ಭಗಳಿಗೆ ಒಳಪಟ್ಟಿರುತ್ತಾರೆ.


ಇವರ ಬಿಲ್ಲುಗಳು ಯುವಜನರನ್ನು ಚೂರುಚೂರು ಮಾಡುವುವು; ಇವರು ಕರುಳ ಕುಡಿಗಳನ್ನೂ ಕನಿಕರಿಸರು; ಮಕ್ಕಳುಮರಿಗಳನ್ನೂ ಕರುಣಿಸದು ಇವರ ಕಣ್ಣು.


ಎಂದೇ ಅವರ ಯುವಕ ಯುವತಿಯರ ಬಗ್ಗೆ ಸ್ವಾಮಿಗೆ ಸಂತೋಷವಿಲ್ಲ; ಅವರ ಅನಾಥರ ಮತ್ತು ವಿಧವೆಯರ ಬಗ್ಗೆ ಸಹಾನುಭೂತಿಯಿಲ್ಲ. ಪ್ರತಿಯೊಬ್ಬನೂ ಧರ್ಮಭ್ರಷ್ಟನೂ ಅತಿ ದುಷ್ಟನೂ ಆಗಿದ್ದಾನೆ. ಪ್ರತಿಯೊಬ್ಬನ ಬಾಯಿ ನುಡಿಯುವುದು ಕೆಡುಕನ್ನೇ. ಇಷ್ಟಾದರೂ ಸರ್ವೇಶ್ವರನ ಕೋಪ ತಣಿಯದು; ಹೊಡೆಯಲು ಎತ್ತಿದ ಕೈ ಇಳಿಯದು.


ಆದಕಾರಣವೇ ನಿಮ್ಮ ಕೋಪ ನನ್ನಲ್ಲೂ ತುಂಬಿತುಳುಕುತ್ತಿದೆ. ಅದನ್ನು ತಡೆದು ನನಗೆ ಸಾಕಾಗಿದೆ,” ಎಂದೆನು. ಆಗ ಸರ್ವೇಶ್ವರ ನನಗೆ : “ಹಾಗಾದರೆ ಆ ಕೋಪವನ್ನು ಬೀದಿಯಲ್ಲಿನ ಮಕ್ಕಳ ಮೇಲೂ ಯುವಕರ ಕೂಟ಼ಗಳ ಮೇಲೂ ಕಾರಿಬಿಡು. ಗಂಡಹೆಂಡತಿಯರನ್ನೂ ಮುದುಕರನ್ನೂ ವಯೋವೃದ್ಧರನ್ನೂ ಅಪಹರಿಸಲಾಗುವುದು.


ನನ್ನಾಯುಸ್ಸು ಗೇಣುದ್ದ, ನಿನ್ನೆಣಿಕೆಗದು ಶೂನ್ಯ I ಮಾನವ ಜೀವನ ಕೇವಲ ಉಸಿರಿಗೆ ಸರಿಸಮಾನ! II


ಏಕೆಂದರೆ ಮೃತ್ಯು ನಮ್ಮ ಕಿಟಕಿಗಳನ್ನು ಏರಿಬಂದಿದೆ ನಮ್ಮ ಉಪ್ಪರಿಗೆಗಳೊಳಗೆ ನುಗ್ಗಿಬಿಟ್ಟಿದೆ ಬೀದಿಗಳಲ್ಲಿ ಮಕ್ಕಳೂ ಕಡಿದುಬಿದ್ದರು ಚೌಕಗಳಲ್ಲಿ ಯುವಕರೂ ಇಲ್ಲವಾದರು.


ಮೋವಾಬು ಹಾಳಾಗಿದೆ ಸುಟ್ಟುಹೋದ ಅದರ ನಗರಗಳಿಂದ ಹೊಗೆ ಎದ್ದಿದೆ. ಅದರ ಸರ್ವಶ್ರೇಷ್ಟ ಯುವಕರು ಹೋಗಿದ್ದಾರೆ ಹತರಾಗುವುದಕ್ಕೆ, ಸರ್ವಶಕ್ತ ಸರ್ವೇಶ್ವರನೆಂಬ ನಾಮವುಳ್ಳ ರಾಜಾಧಿರಾಜನ ನುಡಿಯಂತೆ.


ಆಮೇಲೆ ಆ ಹಳ್ಳದಿಂದ ಮೇಲೆ ಹತ್ತಲಾರದಷ್ಟು ಆಯಾಸಗೊಂಡ ಇನ್ನೂರು ಜನರು ಅಲ್ಲೇ ನಿಂತುಬಿಟ್ಟರು. ಆದ್ದರಿಂದ ದಾವೀದನು ಉಳಿದ ನಾನೂರು ಜನರನ್ನೇ ಕರೆದುಕೊಂಡು ಮುಂದೆ ನಡೆದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು