15 ಇಗೋ, ನಾನು ನಿನ್ನನ್ನು ಹೊಸ ಹಂತಿಕುಂಟೆಯನ್ನಾಗಿ ಮಾಡಿದ್ದೇನೆ. ಅದಕ್ಕೆ ಅನೇಕ ಹರಿತವಾದ ಹಲ್ಲುಗಳಿವೆ. ಬೇಸಾಯಗಾರರು ಧಾನ್ಯವನ್ನು ಹುಲ್ಲಿನಿಂದ ಪ್ರತ್ಯೇಕಿಸುವದಕ್ಕಾಗಿ ಅದನ್ನು ಉಪಯೋಗಿಸುವರು. ನೀವು ಬೆಟ್ಟದ ಶಿಖರಗಳಲ್ಲಿ ತುಳಿದಾಡಿ ಅದನ್ನು ಪುಡಿ ಮಾಡುವಿರಿ. ಆ ಬೆಟ್ಟಗಳನ್ನು ನೀವು ಕುಂಟೆಯಂತೆ ಮಾಡುವಿರಿ.
ಸರ್ವೇಶ್ವರ ಇಂತೆನ್ನುತ್ತಾರೆ: “ಸಿಯೋನ್ ನಗರಿಯೇ, ಎದ್ದು ಒಕ್ಕಣೆಮಾಡು. ಇದಕ್ಕಾಗಿ ನಿನ್ನ ಕೊಂಬನ್ನು ಕಬ್ಬಿಣವಾಗಿಸುವೆನು. ನಿನ್ನ ಗೊರಸನ್ನು ಕಂಚನ್ನಾಗಿ ಮಾಡುವೆನು. ಅನೇಕ ರಾಷ್ಟ್ರಗಳನ್ನು ನೀನು ತುಳಿದು ಧ್ವಂಸಮಾಡುವೆ. ಅವುಗಳನ್ನು ಕೊಳ್ಳೆಹೊಡೆದು ತಂದ ಸ್ವತ್ತನ್ನು ಸರ್ವೇಶ್ವರಸ್ವಾಮಿಗೆ ಮೀಸಲಾಗಿಡುವೆ. ಅವುಗಳಿಂದ ಬಂದ ಆಸ್ತಿಯನ್ನು ಲೋಕದೊಡೆಯನಿಗೆ ಪ್ರತ್ಯೇಕಿಸಿಡುವೆ.”
ಹೌದು, ಪ್ರಚಂಡ ಜಲಪ್ರವಾಹಗಳಂತೆ ಪ್ರಬಲ ರಾಷ್ಟ್ರಗಳು ಆರ್ಭಟಿಸುತ್ತವೆ. ಆದರೆ ದೇವರು ಅವರನ್ನು ಗದರಿಸುವರು. ಅವರು ಬಿರುಗಾಳಿಗೆ ಸಿಕ್ಕಿದ ಬೆಟ್ಟದ ಹೊಟ್ಟಿನಂತೆ, ಸುಂಟರಗಾಳಿಗೆ ಸುತ್ತುವ ಧೂಳಿನಂತೆ ಓಡುವರು.
ಆಗ ಕಬ್ಬಿಣ-ಮಣ್ಣು-ಕಂಚು-ಬೆಳ್ಳಿ-ಬಂಗಾರ ಇವುಗಳೆಲ್ಲವೂ ಪುಡಿಪುಡಿಯಾದವು; ಸುಗ್ಗಿಯ ಕಣಗಳ ಹೊಟ್ಟಿನಂತಾದವು. ಗಾಳಿ ಅವುಗಳನ್ನು ತೂರಿಕೊಂಡುಹೋಯಿತು. ಅವುಗಳಿಗೆ ನೆಲೆಯೇ ಇಲ್ಲವಾಯಿತು. ಪ್ರತಿಮೆಗೆ ಬಡಿದ ಆ ಬಂಡೆ ಮಹಾ ಪರ್ವತವಾಗಿ ಭೂಲೋಕದಲ್ಲೆಲ್ಲಾ ತುಂಬಿಕೊಂಡಿತು.
ಸಿಂಹವು ತಿರುಗಾಡುತ್ತಾ ಕಾಡುಮೃಗಗಳನ್ನು ಕಬಳಿಸುತ್ತದೆ. ಪ್ರಾಯದ ಸಿಂಹವು ಓಡಾಡುತ್ತಾ ಸುರಕ್ಷಣೆಯಿಲ್ಲದ ಕುರಿಮಂದೆಗಳನ್ನು ಸೀಳಿಹಾಕುತ್ತದೆ. ಅಂತೆಯೇ ಯಕೋಬನ ಅಳಿದುಳಿದ ಜನರು ದೇಶವಿದೇಶಗಳ ಹಲವಾರು ರಾಷ್ಟ್ರಗಳ ನಡುವೆ ನಾಶಕರವಾಗಿರುವರು.
ಆಮೇಲೆ ನಾಡನ್ನು ನಿಮಗೆ ಕೊಟ್ಟಿರುತ್ತೇನೆ. ಅದರಲ್ಲಿ ಕಾಡುಗಳಿದ್ದರೂ ನೀವು ಅವುಗಳನ್ನು ಕಡಿದು ಹಾಕಬಹುದು. ಅದಕ್ಕೆ ಸೇರಿರುವ ಬಯಲುಭೂಮಿ ನಿಮ್ಮದೇ. ಕಾನಾನ್ಯರು ಬಲಿಷ್ಠರು ಹಾಗೂ ಕಬ್ಬಿಣದ ರಥಗಳುಳ್ಳವರು. ಆದರೂ ನೀವು ಅವರನ್ನು ಹೊರದೂಡಬಲ್ಲಿರಿ,” ಎಂದು ಉತ್ತರ ಕೊಟ್ಟನು.