Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 41:9 - ಕನ್ನಡ ಸತ್ಯವೇದವು C.L. Bible (BSI)

9 ಬರಮಾಡಿದೆ ನಾನು ನಿನ್ನನ್ನು ಭೂಮಿಯ ಕಟ್ಟಕಡೆಯಿಂದ ಕರೆದುತಂದೆ ನಿನ್ನನ್ನು ದಿಗಂತದಿಂದ. ನಿನಗೆ ನಾನು ಇಂತೆಂದೆ : ನೀನೆನ್ನ ದಾಸ, ನಿನ್ನ ನಾ ತಿರಸ್ಕರಿಸದೆ ಆರಿಸಿಕೊಂಡೆ !

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನಾನು ಭೂಮಿಯ ಕಟ್ಟಕಡೆಯಲ್ಲಿ ಹಿಡಿದು ದಿಗಂತಗಳಿಂದ ಕರೆದ ಜನವೇ, “ನೀನು ನನ್ನ ಸೇವಕನು, ನಾನು ನಿನ್ನನ್ನು ಆರಿಸಿಕೊಂಡೆನು, ತಳ್ಳಲಿಲ್ಲ” ಎಂದು ನಾನು ಹೇಳಿ ಸಂಬೋಧಿಸಿದ ಪ್ರಜೆಯೇ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನಾನು ಭೂವಿುಯ ಕಟ್ಟಕಡೆಯಲ್ಲಿ ಹಿಡಿದು ದಿಗಂತಗಳಿಂದ ಕರೆದ ಜನವೇ, ನೀನು ನನ್ನ ಸೇವಕನು, ನಾನು ನಿನ್ನನ್ನು ಆರಿಸಿಕೊಂಡೆನು, ತಳ್ಳಲಿಲ್ಲ ಎಂದು ನಾನು ಹೇಳಿ ಸಂಬೋಧಿಸಿದ ಪ್ರಜೆಯೇ, ನೀನಂತು ಹೆದರಬೇಡ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ನೀನು ದೂರದೇಶದಲ್ಲಿದ್ದೆ. ಆದರೆ ಕೈಚಾಚಿ ಆ ದೇಶದಿಂದ ನಿನ್ನನ್ನು ಕರೆದೆನು. ‘ನೀನು ನನ್ನ ಸೇವಕ’ ಎಂದು ಹೇಳಿದೆನು. ನಾನು ನಿನ್ನನ್ನು ಆರಿಸಿಕೊಂಡೆನು. ಆದರೆ ನಿನ್ನನ್ನು ತಳ್ಳಿಬಿಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ನಿನ್ನನ್ನು ಭೂಮಿಯ ಕಟ್ಟಕಡೆಗಳಿಂದ ಆರಿಸಿಕೊಂಡು, ಅದರ ದೂರದ ಕೊನೆಯಿಂದ ಕರೆದು, ‘ನೀನು ನನ್ನ ಸೇವಕನು,’ ನಿನ್ನನ್ನು ನಾನು ಆಯ್ದುಕೊಂಡಿದ್ದೇನೆ. ನಿನ್ನನ್ನು ತಳ್ಳಿಬಿಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 41:9
23 ತಿಳಿವುಗಳ ಹೋಲಿಕೆ  

ಸರ್ವೇಶ್ವರನ ದಯೆ ನಿಮ್ಮನ್ನು ಸ್ವಕೀಯ ಜನರನ್ನಾಗಿ ಆರಿಸಿಕೊಂಡ ಮೇಲೆ, ಅವರು ತಮ್ಮ ಮಹೋನ್ನತ ನಾಮದ ನಿಮಿತ್ತ, ನಿಮ್ಮನ್ನು ಖಂಡಿತವಾಗಿ ಕೈಬಿಡುವುದಿಲ್ಲ.


ತಳ್ಳಿಬಿಡಲು ಪ್ರಭು ತನ್ನ ಜನರನು I ಕೈಬಿಡನವನು ತನ್ನ ಸ್ವಕೀಯರನು II


ನನ್ನ ಪ್ರಿಯ ಸಹೋದರರೇ, ಪ್ರಪಂಚದ ದೃಷ್ಟಿಗೆ ಬಡವರಾಗಿ ಕಾಣುವವರನ್ನು ವಿಶ್ವಾಸದಲ್ಲಿ ಸಿರಿವಂತರನ್ನಾಗಿಸಲು ದೇವರು ಆರಿಸಿಕೊಳ್ಳಲಿಲ್ಲವೇ? ತಮ್ಮನ್ನು‍ ಪ್ರೀತಿಸುವವರು ಸ್ವರ್ಗಸಾಮ್ರಾಜ್ಯಕ್ಕೆ ಬಾಧ್ಯಸ್ಥರೆಂದು ದೇವರೇ ವಾಗ್ದಾನ ಮಾಡಿಲ್ಲವೇ?


ಅವರು ಈ ಹೊಸ ಗೀತೆಯನ್ನು ಹಾಡುತ್ತಿದ್ದರು: :ಸುರುಳಿಯನ್ನು ಸ್ವೀಕರಿಸಲು ನೀ ಯೋಗ್ಯನು ಅದರ ಮುದ್ರೆಗಳನ್ನು ಮುರಿಯಲು ನೀ ಶಕ್ತನು. ಸಮರ್ಪಿಸಿಕೊಂಡಿರುವೆ ನಿನ್ನನೇ ನೀ ಬಲಿಯರ್ಪಣೆಯಾಗಿ ಸಕಲ ದೇಶ, ಭಾಷೆ, ಕುಲಗೋತ್ರಗಳಿಂದ ಕೊಂಡುಕೊಂಡಿರುವೆ ಮಾನವರನು ನಿನ್ನ ರಕ್ತದಿಂದ.


ಚತುರ್ದಿಕ್ಕುಗಳಿಂದಲೂ ಜನರು ಬಂದು, ದೇವರ ಸಾಮ್ರಾಜ್ಯದ ಹಬ್ಬದೂಟದಲ್ಲಿ ಭಾಗಿಗಳಾಗುವರು.


ಇಂತಿರಲು ನನ್ನ ದಾಸನಾದ ಇಸ್ರಯೇಲೇ, ನಾನು ಆಯ್ದುಕೊಂಡ ಯಕೋಬೇ, ನನ್ನ ಗೆಳೆಯ ಅಬ್ರಹಾಮನ ಸಂತತಿಯೇ,


ಕರೆತಂದವರಾರು ಆ ಪರಾಕ್ರಮಿಯನ್ನು ಪೂರ್ವದಿಂದ? ಅವನು ಗೆದ್ದುಬರುವಂತೆ ಮಾಡಿದವರಾರು ದಿಗ್ವಿಜಯದಿಂದ? ರಾಷ್ಟ್ರಗಳನ್ನು, ರಾಜರುಗಳನ್ನು ಸೋಲಿಸಿದವರಾರು ಅವನ ಕೈಯಿಂದ? ಧೂಳು ಧೂಳಾಗಿಸುತ್ತಾನೆ ಅವರನ್ನು ಅವನ ಖಡ್ಗದಿಂದ ಗಾಳಿಗೆ ತೂರಿಹೋಗುವ ಹುಲ್ಲನ್ನಾಗಿಸುತ್ತಾನೆ ಅವನ ಬಿಲ್ಲಿನಿಂದ.


ಏಕೆಂದರೆ ನೀವು ನಿಮ್ಮ ದೇವರಾದ ಸರ್ವೇಶ್ವರನಿಗೆ ಮೀಸಲು ಜನ. ಅವರು ಜಗದಲ್ಲಿರುವ ಸಮಸ್ತಜನಾಂಗಗಳಲ್ಲಿ ನಿಮ್ಮನ್ನೇ ಸ್ವಕೀಯಜನರಾಗುವುದಕ್ಕೆ ಆರಿಸಿಕೊಂಡಿದ್ದಾರೆ.


ಆಯ್ದುಕೊಂಡನಾತ ಯಕೋಬ್ಯ ವಂಶವನು I ಸ್ವಕೀಯ ಜನರನ್ನಾಗಿ ಇಸ್ರಯೇಲರನು II


ಆ ದಿನದಂದು ಅಸ್ಸೀರಿಯ, ಈಜಿಪ್ಟ್, ಪತ್ರೋಸ್, ಸುಡಾನ್, ಏಲಾಮ್, ಬಾಬಿಲೋನಿಯ, ಹಮಾಥ್ ಹಾಗೂ ಸಮುದ್ರದ ಕರಾವಳಿ - ಈ ಸ್ಥಳಗಳಿಂದ ಸರ್ವೇಶ್ವರ ತಮ್ಮ ಅಳಿದುಳಿದ ಜನರನ್ನು ಬಿಡಿಸಿ ಬರಮಾಡಿಕೊಳ್ಳಲು ಮತ್ತೆ ಕೈನೀಡುವರು.


ದಯೆತೋರಿಸುವರು ಸರ್ವೇಶ್ವರ ಯಕೋಬ್ಯರಿಗೆ, ಆರಿಸಿಕೊಳ್ಳುವರು ಮತ್ತೆ ಇಸ್ರಯೇಲರನ್ನೆ, ನೆಲೆಗೊಳಿಸುವರವರನ್ನು ತಾಯಿನಾಡಿನಲ್ಲೆ. ಹೊರನಾಡಿಗರು ಕೂಡಿಕೊಳ್ಳುವರು ಅವರೊಡನೆ, ಸೇರಿಕೊಳ್ಳುವರವರು ಯಕೋಬ ಮನೆತನಕ್ಕೆ.


ಇಗೋ, ನನ್ನ ದಾಸನು ! ನನ್ನ ಆಧಾರ ಪಡೆದವನು ನನ್ನಿಂದ ಆಯ್ಕೆಯಾದವನು ನನಗೆ ಪರಮ ಪ್ರಿಯನು. ನೆಲೆಗೊಳಿಸಿರುವೆ ಇವನಲ್ಲಿ ನನ್ನ ಆತ್ಮವನು ಅನ್ಯರಾಷ್ಟ್ರಗಳಿಗೆ ಸಾರುವನಿವನು ಸದ್ಧರ್ಮವನು.


“ಕೇಳೀಗ ನನ್ನ ದಾಸ ಯಕೋಬೇ, ನಾನು ಆರಿಸಿಕೊಂಡ ಇಸ್ರಯೇಲೇ,


ನನ್ನ ಸೇವಕನಾದ ಯಕೋಬನ ನಿಮಿತ್ತ ನಾನು ಆರಿಸಿಕೊಂಡ ಇಸ್ರಯೇಲಿನ ನಿಮಿತ್ತ ನನ್ನ ಅರಿವೇ ಇಲ್ಲದ ನಿನ್ನನು ಹೆಸರು ಹಿಡಿದು ಕರೆದಿರುವೆನು, ಬಿರುದಿತ್ತು ಸನ್ಮಾನಿಸಿರುವೆನು.


“ನಿಮ್ಮ ಮೇಲೆ ನನಗೆ ಪ್ರೀತಿ ಇದೆ” ಎನ್ನುತ್ತಾರೆ ಸರ್ವೇಶ್ವರ. ನೀವಾದರೋ, “ಯಾವ ವಿಷಯದಲ್ಲಿ ನಮಗೆ ಪ್ರೀತಿ ತೋರಿಸಿದ್ದೀರಿ?” ಎಂದು ಕೇಳುತ್ತೀರಿ. ಅದಕ್ಕೆ ಅವರು, “ಏಸಾವನು ಯಕೋಬನ ಅಣ್ಣನಲ್ಲವೇ? ಆದರೂ ನಾನು ಯಕೋಬನನ್ನು ಪ್ರೀತಿಸಿದೆ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು