Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 42:11 - ಕನ್ನಡ ಸತ್ಯವೇದವು C.L. Bible (BSI)

11 ಘೋಷಿಸಲಿ ಮರುಭೂಮಿಯೂ ಅದರ ನಗರಗಳೂ ಕೇದಾರಿನವರೂ ಗ್ರಾಮನಿವಾಸಿಗಳೂ ಜಯಘೋಷಮಾಡಲಿ ಸೆಲ ಪಟ್ಟಣದವರೂ ಸಂತೋಷದಿಂದ ಹರ್ಷಧ್ವನಿಗೈಯಲಿ ಆ ಪರ್ವತದ ತುತ್ತತುದಿಗಳಿಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅರಣ್ಯವೂ, ಅಲ್ಲಿನ ಊರುಗಳೂ, ಕೇದಾರಿನವರು ವಾಸಿಸುವ ಗ್ರಾಮಗಳೂ ಆರ್ಭಟಿಸಲಿ, ಸೆಲ ಪಟ್ಟಣದವರು ಹರ್ಷಧ್ವನಿಗೈದು ಪರ್ವತಾಗ್ರಗಳಲ್ಲಿ ಜಯಘೋಷ ಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಅರಣ್ಯವೂ ಅಲ್ಲಿನ ಊರುಗಳೂ ಕೇದಾರಿನವರ ಗ್ರಾಮಗಳೂ ಆರ್ಭಟಿಸಲಿ, ಸೆಲಪಟ್ಟಣದವರು ಹರ್ಷಧ್ವನಿಗೈದು ಪರ್ವತಾಗ್ರಗಳಲ್ಲಿ ಕೇಕೆ ಹಾಕಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಮರುಭೂಮಿಗಳೂ ನಗರಗಳೂ ಕೇದಾರಿನ ಹಳ್ಳಿಗಳೂ ಯೆಹೋವನನ್ನು ಸ್ತುತಿಸಲಿ. ಸೆಲಾ ಪಟ್ಟಣವಾಸಿಗಳೇ, ಹರ್ಷದಿಂದ ಹಾಡಿರಿ. ನಿಮ್ಮ ಪರ್ವತಗಳ ತುದಿಯಿಂದ ಗಾನ ಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಮರುಭೂಮಿಯು, ಅದರ ಪಟ್ಟಣಗಳು ಘೋಷಿಸಲಿ. ಕೇದಾರ್ ಊರಿನ ನಿವಾಸಿಗಳು ಬಂಡೆಯ ಪ್ರದೇಶದ ನಿವಾಸಿಗಳು ಹಾಡಲಿ. ಸೆಲ ಪಟ್ಟಣದವರೂ ಹರ್ಷಧ್ವನಿಗೈಯಲಿ; ಅವರು ಪರ್ವತದ ತುದಿಯಲ್ಲಿ ಆರ್ಭಟಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 42:11
21 ತಿಳಿವುಗಳ ಹೋಲಿಕೆ  

ಸತ್ಯಸಂಧತೆ ಕಾಡುಮೇಡೆನ್ನದೆ ಎಲ್ಲೆಡೆ ನೆಲೆಗೊಳ್ಳುವುದು. ಸರ್ವರೂ ಸತ್ಯಸಂಧರಾಗಿರುವುದರಿಂದ ಸಮಾಧಾನ ನೆಲೆಗೊಳ್ಳುವುದು.


ನಿನ್ನಲ್ಲಿ ಕೂಡುವುವು ಕೇದಾರಿನ ಸಕಲ ಮಂದೆಗಳು ಬಲಿಯರ್ಪಣೆಗೊದಗುವುವು ನೆಬಾಯೋತಿನ ಟಗರುಗಳು. ಏರುವುವು ನನಗೆ ಸಮರ್ಪಕವಾದ ಹೋಮವಾಗಿ ಬಲಿಪೀಠವನು. ಚಂದಗೊಳಿಸುವೆನು ನನ್ನ ಸುಂದರವಾದ ಆಲಯವನು.


ಇಗೋ, ಶುಭಸಂದೇಶವನ್ನು ಸಾರಲು ದೂತನೊಬ್ಬನು ಪರ್ವತದಿಂದ ಇಳಿದು ಬರುತ್ತಿದ್ದಾನೆ! ಶಾಂತಿ ಸಮಾಧಾನವನ್ನು ಘೋಷಿಸಲು ತ್ವರೆಪಡುತ್ತಿದ್ದಾನೆ! ಜುದೇಯ ನಾಡೇ, ನಿನ್ನ ಹಬ್ಬಗಳನ್ನು ಆಚರಿಸು. ನಿನ್ನ ಹರಕೆಗಳನ್ನು ಸಲ್ಲಿಸು. ಆ ದುಷ್ಟ ಶತ್ರು ಇನ್ನೆಂದಿಗೂ ನಿನಗೆ ಮುತ್ತಿಗೆಹಾಕಲಾರನು. ಅವನು ಸಂಪೂರ್ಣವಾಗಿ ನಾಶವಾಗಿದ್ದಾನೆ!


ಶುಭಕರ ಸಮಾಚಾರವನು ತರುವ ಶಾಂತಿಸಮಾಧಾನವನು ಸಾರುವ ಸಂತಸದ ಸಂದೇಶವನು ಅರುಹುವ ಜೀವೋದ್ಧಾರವನು ಪ್ರಕಟಿಸುವ ‘ನಿನ್ನ ದೇವರೇ ರಾಜ್ಯಭಾರ ವಹಿಸುವ ಎಂದು ಸಿಯೋನಿಗೆ ತಿಳಿಯಪಡಿಸುತ್ತ ಪರ್ವತಗಳಿಂದ ಇಳಿದುಬರುವ ಶಾಂತಿದೂತನ ಪಾದಪದ್ಮಗಳು ಎಷ್ಟೊಂದು ಸುಂದರ!


ಜಿಗಿಯುವನು ಕುಂಟನು ಜಿಂಕೆಯಂತೆ ಹಾಡುವುದು ಮೂಕನ ನಾಲಿಗೆ ಹರ್ಷಗೀತೆ. ಒರತೆಗಳು ಒಡೆಯುವುವು ಅರಣ್ಯದಲಿ ನದಿಗಳು ಹುಟ್ಟಿಹರಿಯುವುವು ಒಣನೆಲದಲಿ.


ಸರ್ವೇಶ್ವರ ನನಗೆ ಹೀಗೆಂದರು : “ಗುಲಾಮಗಿರಿಯ ವಾಯಿದೆಯ ಪ್ರಕಾರ, ಒಂದು ವರ್ಷದೊಳಗೆ ಕೇದಾರಿನ ಸಕಲ ವೈಭವ ಗತಿಸಿಹೋಗುವುದು.


ಕಳುಹಿಸಿ ಕುರಿಗಳನು ಕಪ್ಪಕಾಣಿಕೆಯಾಗಿ ದೇಶಾಧಿಪತಿಗೆ, ಕಳುಹಿಸಿ ಮರುಭೂಮಿಯ ಸೆಲಾದಿಂದ ಸಿಯೋನ್ ಪರ್ವತಕೆ.


ಅಯ್ಯೋ ತಂಗಬೇಕಲ್ಲಾ ಮೇಷೆಕಿನವರ ಮಧ್ಯದಲಿ II ಅಕಟಾ ಇರಬೇಕಲ್ಲಾ ಕೇದಾರಿನ ಪಾಳೆಯಗಳಲಿ II


ಸರ್ವೇಶ್ವರ ಆಕೆಗೆ ಇಂತೆಂದರು: ನಿನ್ನ ಉದರದೊಳಿವೆ ಜನಾಂಗಗಳೆರಡು ಹುಟ್ಟಿನಿಂದ ವೈರಿಗಳಾ ರಾಷ್ಟ್ರಗಳೆರಡು ಬಲಿಷ್ಠವಿರುವುದು ಒಂದು ಮತ್ತೊಂದಕೆ ಜ್ಯೇಷ್ಠನೇ ದಾಸನಾಗುವನು ಕನಿಷ್ಠನಿಗೆ.


ಪರ್ವತಾಗ್ರಗಳಲ್ಲಿ ನೆಲೆಗೊಂಡ ಜನತೆಯೇ, ಬಂಡೆಯ ಬಿರುಕುಗಳಲ್ಲಿ ವಾಸಿಸುವ ಜನತೆಯೇ, ನಿನ್ನ ಭೀಕರತ್ವವೆಲ್ಲಿ? ನಿನ್ನೆದೆಯ ಗರ್ವ ನಿನ್ನನ್ನು ಮೋಸಗೊಳಿಸಿದೆ. ಹದ್ದಿನಂತೆ ನೀನು ಉನ್ನತಸ್ಥಾನದಲ್ಲಿ ಗೂಡನ್ನು ಕಟ್ಟಿಕೊಂಡರೂ ನಿನ್ನನ್ನು ಅಲ್ಲಿಂದ ಇಳಿಸಿಬಿಡುವೆನು. ಇದು ನನ್ನ ನುಡಿ,” ಎನ್ನುತ್ತಾರೆ ಸರ್ವೇಶ್ವರ.


“ಮೋವಾಬ್ಯರೇ, ನಗರಗಳನ್ನು ಬಿಟ್ಟು ಹೋಗಿ ಬಂಡೆಗಳ ಗುಹೆಯಲ್ಲಿ ವಾಸಮಾಡಿ. ಹಳ್ಳಕೊಳ್ಳಗಳ ಆಚೆಯ ಪಕ್ಕದಲ್ಲಿ ಗೂಡನ್ನು ಕಟ್ಟಿಕೊಳ್ಳುವ ಪಾರಿವಾಳದಂತೆ ಜೀವಿಸಿರಿ.


ಕಣಿವೆಯಲ್ಲಿನ ನಗರಿಯೇ, ಬಯಲಿನ ಬಂಡೆಯಲ್ಲಿರುವ ಪುರಿಯೇ, ‘ನಮ್ಮ ಮೇಲೆ ಯಾರಿಳಿದು ಬಂದಾರು? ನಮ್ಮ ನಿವಾಸಗಳಿಗೆ ಯಾರು ನುಗ್ಗಿಯಾರು?’ ಎನ್ನುವವರೇ, ಇಗೋ ನಾನೆ ನಿಮಗೆ ವಿರುದ್ಧವಾಗಿದ್ದೇನೆ.


ಇಗೋ, ನೂತನ ಕಾರ್ಯವನು ನಾನೆಸಗುವೆ ಈಗಲೇ ಅದು ತಲೆದೋರುತಲಿದೆ, ನಿಮಗೆ ಕಾಣುವುದಿಲ್ಲವೇ? ಮಾರ್ಗವನ್ನು ಏರ್ಪಡಿಸುವೆ ಮರುಭೂಮಿಯಲಿ, ಹರಿಸುವೆ ತೊರೆಗಳನ್ನು ಅರಣ್ಯದಲಿ.


ಆನಂದಿಸಲಿ ಅರಣ್ಯವೂ ಮರುಭೂಮಿಯೂ ಹೂಗಳಂತೆ ಅರಳಿ ಹರ್ಷಿಸಲಿ ಒಣನೆಲವು.


ನಿನ್ನ ದುರಹಂಕಾರ ನಿನ್ನನ್ನು ವಂಚಿಸಿದೆ.” ‘ಉನ್ನತಸ್ಥಾನದಲ್ಲಿ ವಾಸವಾಗಿದ್ದೇನೆ; ಬಂಡೆಗಳ ಬಿರುಕುಗಳಲ್ಲಿ ಭದ್ರವಾಗಿದ್ದೇನೆ; ನನ್ನನ್ನು ನೆಲಕ್ಕೆ ಇಳಿಸಬಲ್ಲವರು ಯಾರು?’ ಎನ್ನುತ್ತಿರುವೆ.


ಇಗೋ, ಈ ವಾಣಿಯನ್ನು ಕೇಳಿ : “ಸರ್ವೇಶ್ವರ ಸ್ವಾಮಿಗೆ ಮಾರ್ಗವನ್ನು ಸಿದ್ಧಮಾಡಿ ಅರಣ್ಯದಲಿ ನಮ್ಮ ದೇವರಿಗೆ ರಾಜಮಾರ್ಗವನ್ನು ಸರಾಗಮಾಡಿ ಅಡವಿಯಲಿ.


ಹಾಡಿರಿ ಸರ್ವೇಶ್ವರನಿಗೆ ಸ್ತುತಿಯನು ಎಸಗಿಹನಾತ ಮಹಿಮಾಕಾರ್ಯಗಳನು ತಿಳಿಸಿರಿ ಜಗದಾದ್ಯಂತಕೆ ಈ ವಿಷಯವನು.


ಅದಕ್ಕೆ ಬಾಗಿಲೂ ಇಲ್ಲ, ಬೀಗವೂ ಇಲ್ಲ’ ಎನ್ನುತ್ತಿದ್ದಾನೆ.


“ಅರಾಬ್ಯರೂ, ಕೇದಾರಿನ ಪ್ರಮುಖರೂ ನಿನ್ನ ಕೈಕೆಳಗಣ ವರ್ತಕರು: ಕುರಿ, ಟಗರು, ಹೋತಗಳನ್ನು ನಿನಗಾಗಿ ಸಾಗಿಸಿಕೊಂಡು ಬರುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು