Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 42:13 - ಕನ್ನಡ ಸತ್ಯವೇದವು C.L. Bible (BSI)

13 ಸರ್ವೇಶ್ವರ ಹೊರಟಿರುವನು ಶೂರನಂತೆ ರೌದ್ರದಿಂದಿರುವನು ಯುದ್ಧವೀರನಂತೆ ಆರ್ಭಟಿಸಿ ಗರ್ಜಿಸುವನು ರಣಕಹಳೆಯಂತೆ ಶತ್ರುಗಳ ಮೇಲೆ ಬೀಳುವನು ಪರಾಕ್ರಮಿಯಂತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಯೆಹೋವನು ಶೂರನಂತೆ ಹೊರಟು, ಯುದ್ಧವೀರನ ಹಾಗೆ ತನ್ನ ರೌದ್ರವನ್ನು ಎಬ್ಬಿಸುವನು. ಆರ್ಭಟಿಸಿ ಗರ್ಜಿಸಿ ಶತ್ರುಗಳ ಮೇಲೆ ಬಿದ್ದು ತನ್ನ ಪರಾಕ್ರಮವನ್ನು ತೋರ್ಪಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಯೆಹೋವನು ಶೂರನಂತೆ ಹೊರಟು ಯುದ್ಧವೀರನ ಹಾಗೆ ತನ್ನ ರೌದ್ರವನ್ನು ಎಬ್ಬಿಸುವನು; ಆರ್ಭಟಿಸಿ ಗರ್ಜಿಸಿ ಶತ್ರುಗಳ ಮೇಲೆ ಬಿದ್ದು ತನ್ನ ಪರಾಕ್ರಮವನ್ನು ತೋರ್ಪಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಯೆಹೋವನು ಯುದ್ಧವೀರನಂತೆ ಹೊರಡುವನು. ಆತನು ಯುದ್ಧಮಾಡಲು ತಯಾರಾಗಿರುವ ಶೂರನಂತಿದ್ದಾನೆ. ಆತನು ಉತ್ಸಾಹದಿಂದ ಗಟ್ಟಿಯಾಗಿ ಕೂಗುತ್ತಾ ತನ್ನ ವೈರಿಗಳನ್ನು ಸೋಲಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಯೆಹೋವ ದೇವರು ಪರಾಕ್ರಮಶಾಲಿಯಾಗಿ ಮುಂದೆ ಹೋಗುವರು; ಯುದ್ಧವೀರನ ಹಾಗೆ ತಮ್ಮ ರೌದ್ರವನ್ನು ಎಬ್ಬಿಸುವರು. ಆರ್ಭಟಿಸಿ ಗರ್ಜಿಸಿ ತಮ್ಮ ಶತ್ರುಗಳಿಗೆ ವಿರೋಧವಾಗಿ ಜಯಶಾಲಿಯಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 42:13
19 ತಿಳಿವುಗಳ ಹೋಲಿಕೆ  

ಪ್ರಭುವೆದ್ದನು ನಿದ್ರೆಯಿಂದಲೋ ಎಂಬಂತೆ I ಮಧುವಿನ ಅಮಲಿನಿಂದೆಚ್ಚೆತ್ತ ಬಲಿಷ್ಠನಂತೆ II


ಆದುದರಿಂದ ಸರ್ವೇಶ್ವರ ಇಂತೆನ್ನುತ್ತಾರೆ: “ಸ್ವಲ್ಪತಾಳಿರಿ, ನಾನು ತಪ್ಪನ್ನು ನಿಮಗೆ ತೋರಿಸುವ ದಿನಕ್ಕಾಗಿ ಕಾದಿರಿ. ರಾಷ್ಟ್ರಗಳನ್ನು ಒಂದಾಗಿಸಲು, ರಾಜ್ಯಗಳನ್ನು ಒಂದುಗೂಡಿಸಲು ನಿರ್ಧರಿಸಿದ್ದೇನೆ; ಹೀಗೆ ಅವುಗಳ ಮೇಲೆ ನನ್ನ ರೌದ್ರವನ್ನು, ಹೌದು, ನನ್ನ ಉಗ್ರಕೋಪವನ್ನು ಸುರಿಸಲು ತೀರ್ಮಾನಿಸಿದ್ದೇನೆ. ಲೋಕವೆಲ್ಲವು ನನ್ನ ಕೋಪಾಗ್ನಿಯಿಂದ ಧ್ವಂಸವಾಗುವುದು.


ಆಮೋಸನ ಪ್ರಕಟನೆ: ಗರ್ಜಿಸುತಿಹನು ಸರ್ವೇಶ್ವರ ಸಿಯೋನಿನಿಂದ ಧ್ವನಿಗೈಯುತಿಹನು ಜೆರುಸಲೇಮಿನಿಂದ; ಬಾಡಿಹೋಗುತ್ತಿವೆ ಕುರುಬರಾ ಹುಲ್ಲುಗಾವಲುಗಳು ಒಣಗಿಹೋಗುತ್ತಿವೆ ಕಾರ್ಮೆಲ್ ಗುಡ್ಡದ ನೆತ್ತಿಯ ಗಿಡಗಳು.


ಸ್ವಾಮಿಯ ಆ ರೌದ್ರದಿನದಂದು, ಅವರ ಬೆಳ್ಳಿಯಾಗಲೀ ಬಂಗಾರವಾಗಲೀ ಅವರನ್ನು ರಕ್ಷಿಸಲಾರದು. ಸ್ವಾಮಿಯ ರೋಷಾಗ್ನಿ ಧರೆಯನ್ನೆಲ್ಲಾ ದಹಿಸಿಬಿಡುವುದು; ಹೌದು, ಭೂನಿವಾಸಿಗಳೆಲ್ಲರನ್ನೂ ತಟ್ಟನೆ ಕೊನೆಗಾಣಿಸುವುದು.


ಸರ್ವೇಶ್ವರ ಸ್ವಗೌರವವನು ಕಾಪಾಡಿಕೊಳ್ಳುವ ದೇವರು ಮುಯ್ಯಿತೀರಿಸುವ, ಹೌದು, ಕಡುಕೋಪದಿಂದ ಮುಯ್ಯಿತೀರಿಸುವ ದೇವರು. ಸರ್ವೇಶ್ವರ ಮುಯ್ಯಿತೀರಿಸುತ್ತಾರೆ ತನ್ನ ವಿರೋಧಿಗಳಿಗೆ ದೀರ್ಘರೋಷವಿಡುತ್ತಾರೆ, ತಮ್ಮ ಶತ್ರುಗಳ ಮೇಲೆ.


“ಶತ್ರುಗಳ ಕಡೆಗೆ ಸಿಂಹದಂತೆ ಗರ್ಜಿಸುವ ಸ್ವಾಮಿಯನ್ನು ಆ ಜನರು ಹಿಂಬಾಲಿಸುತ್ತಾರೆ. ಆತ ಆರ್ಭಟಿಸಲು ಅವರ ಮಕ್ಕಳು ನಡುನಡುಗುತ್ತಾ ಬರುತ್ತಾರೆ.


“(ಯೆರೆಮೀಯನೇ), ನೀನು ಪ್ರವಾದಿಸುತ್ತಾ ಅವರಿಗೆ ಈ ಮಾತುಗಳನ್ನು ಹೇಳು: ‘ಸರ್ವೇಶ್ವರ ಗರ್ಜಿಸುವನು ಮೇಲಣಲೋಕದಿಂದ ದನಿಗೈವನು ತನ್ನ ಘನ ನಿವಾಸದಿಂದ ಗಟ್ಟಿಯಾಗಿ ಕೂಗುವನು ತನ್ನ ಹುಲ್ಲುಗಾವಲಿನ ಮಂದೆಯ ವಿರುದ್ಧ ಕೂಗಾಡುವನು ದ್ರಾಕ್ಷೆಯ ಹಣ್ಣನ್ನು ತುಳಿಯುವವರಂತೆ ಭೂನಿವಾಸಿಗಳೆಲ್ಲರು ಭಯಭ್ರಾಂತರಾಗುವಂತೆ.


ಸರ್ವೇಶ್ವರ ನನಗೆ ಹೀಗೆಂದು ಹೇಳಿದ್ದಾರೆ : “ಸಿಂಹವೋ ಪ್ರಾಯದ ಸಿಂಹವೋ ಬೇಟೆಯ ಮೇಲೆ ಬಿದ್ದು ಗುರುಗುಟ್ಟುತ್ತಿರುವಾಗ, ಆ ಕೂಗನ್ನು ಕೇಳಿ ಕುರುಬರನೇಕರು ಕೂಡಿಬಂದರೂ ಅದು ಅವರ ಕೂಗಾಟಕ್ಕೆ ಹೆದರದು, ಅವರ ಗದ್ದಲಕ್ಕೆ ಎದೆಗುಂದದು. ಅಂತೆಯೇ ಸೇನಾಧೀಶ್ವರ ಸರ್ವೇಶ್ವರ ಸ್ವಾಮಿ ಆದ ನಾನು ಯುದ್ಧಮಾಡಲು ಸಿಯೋನ್ ಶಿಖರದ ಮೇಲೆ ಇಳಿದು ಬರುವಾಗ ನನ್ನನ್ನು ಯಾರೂ ಹೆದರಿಸುವುದಿಲ್ಲ, ಎದೆಗುಂದಿಸುವಂತಿಲ್ಲ.


ಅವರ ಮೇಲೆ ನೀ ಕೈಯೆತ್ತಿದರೂ, ಸರ್ವೇಶ್ವರಾ, ಲಕ್ಷಿಸರವರು ನಿನ್ನನ್ನು. ನಾಚಲಿ ಅವರು ನೋಡಿ ನಿನ್ನ ಸ್ವಜನಾಭಿಮಾನವನು ದಹಿಸಿಬಿಡಲಿ ಅಗ್ನಿಜ್ವಾಲೆಯು ಆ ನಿನ್ನ ವಿರೋಧಿಗಳನು.


ಇದನ್ನು ಕಂಡಾಗ ನಿಮ್ಮೆದೆ ಸಂತಸದಿಂದ ಉಬ್ಬುವುದು ಚಿಗುರುವುದು ಹಸಿಹುಲ್ಲಂತೆ ನಿಮ್ಮೆಲುಬು. ‘ಸರ್ವೇಶ್ವರನ ಕೃಪಾಹಸ್ತ ತನ್ನ ಭಕ್ತರ ಮೇಲೆ ಆತನ ರೋಷಾವೇಶ ಶತ್ರುಗಳ ಮೇಲೆ’ ಎಂಬುವುದು ವ್ಯಕ್ತವಾಗುವುದು ನಿಮಗೆ.


ಅಂತ್ಯವಿರದಾತನ ರಾಜ್ಯಾಭಿವೃದ್ಧಿಗೆ ಕೊನೆಯಿರದಾ ರಾಜ್ಯದ ಶಾಂತಿಗೆ. ಆಸೀನನಾಗುವನಾತ ದಾವೀದನ ಸಿಂಹಾಸನದ ಮೇಲೆ ಅಧಿಕಾರ ನಡೆಸುವನು ಆ ಸಾಮ್ರಾಜ್ಯದ ಮೇಲೆ. ಬಲಪಡಿಸುವನು ನ್ಯಾಯನೀತಿಯಿಂದದನು ಇಂದಿಗೂ ಎಂದೆಂದಿಗೂ ಸ್ಥಿರಪಡಿಸುವನದನು. ಸರ್ವಶಕ್ತಸ್ವಾಮಿಯ ಆಗ್ರಹವೆ ಸಾಧಿಸುವುದದನು.


ವಿಜಯಸಾಧನ ಪ್ರಭುವಿನಾ ಬಲಗೈಯಿಂದ I ಪರಾಕ್ರಮ, ಪ್ರದರ್ಶನವೂ ಅದರಿಂದ” II


ಸ್ವಾಮಿ ಸಿಯೋನಿನಿಂದ ಗರ್ಜಿಸುತ್ತಾರೆ, ಜೆರುಸಲೇಮಿನಿಂದ ಅವರ ಧ್ವನಿ ಮೊಳಗುತ್ತದೆ. ಭೂಮ್ಯಾಕಾಶಗಳು ನಡುಗುತ್ತವೆ. ಆದರೂ ಸರ್ವೇಶ್ವರ ತಮ್ಮ ಜನರಿಗೆ ಆಶ್ರಯ; ಇಸ್ರಯೇಲರಿಗೆ ರಕ್ಷಣಾ ದುರ್ಗ.


ಆ ಅಳಿದುಳಿದವರು ಜೆರುಸಲೇಮಿನಲ್ಲೇ ಹರಡಿಕೊಳ್ಳುವರು, ಸಿಯೋನ್ ಪರ್ವತದಲ್ಲಿ ಅಭಿವೃದ್ಧಿಯಾಗುವರು, ಸೇನಾಧೀಶ್ವರ ಸರ್ವೇಶ್ವರ ಸ್ವಾಮಿಯ ಆಗ್ರಹವೇ ಇದನ್ನು ಸಾಧಿಸುವುದು.


ಸ್ವಾಮಿ ಸರ್ವೇಶ್ವರಾ, ಆಕಾಶದಿಂದ ನಮ್ಮನು ಈಕ್ಷಿಸಿನೋಡಿ; ಪರಿಶುದ್ಧವೂ ಪೂಜ್ಯವೂ ಆದ ನಿಮ್ಮ ನಿವಾಸದಿಂದ ವೀಕ್ಷಿಸಿನೋಡಿ. ನಿಮ್ಮ ಹುರುಪು ಉತ್ಸಾಹವೆಲ್ಲಿ? ನಿಮ್ಮ ಸಾಹಸಕಾರ್ಯಗಳು ಏನಾದುವು? ನಮ್ಮಿಂದ ಬಿಗಿಹಿಡಿದಿರುವಿರಾ ನಿಮ್ಮ ಕನಿಕರವನು? ನಿಮ್ಮ ಕರುಳ ಕರೆಯನು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು