Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 42:20 - ಕನ್ನಡ ಸತ್ಯವೇದವು C.L. Bible (BSI)

20 ನೀವು ಗಮನಿಸುವುದಿಲ್ಲ ಹಲವಿಷಯಗಳನ್ನು ಕಂಡಿದ್ದರೂ ನೀವು ಕೇಳುವುದಿಲ್ಲ ನಿಮ್ಮ ಕಿವಿಗಳು ತೆರೆದಿದ್ದರೂ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ನೀನು ಬಹು ವಿಷಯಗಳನ್ನು ಕಂಡಿದ್ದರೂ ನಿನಗೆ ಗಮನವಿಲ್ಲ, ಇವನ ಕಿವಿ ತೆರೆದಿದ್ದರೂ ಕೇಳನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ನೀನು ಬಹು ವಿಷಯಗಳನ್ನು ಕಂಡಿದ್ದರೂ ನಿನಗೆ ಗಮನವಿಲ್ಲ; ಇವನ ಕಿವಿ ತೆರೆದಿದ್ದರೂ ಕೇಳನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ತಾನು ಮಾಡತಕ್ಕದ್ದನ್ನು ಕಣ್ಣಾರೆ ಕಂಡರೂ ಅವನು ನನಗೆ ವಿಧೇಯನಾಗುವುದಿಲ್ಲ. ಅವನು ಕಿವಿಯಾರೆ ಕೇಳಿದರೂ ನನ್ನ ಮಾತುಗಳಿಗೆ ವಿಧೇಯನಾಗುವದಿಲ್ಲ; ಅದನ್ನು ಕೇಳಿಸಿಕೊಳ್ಳುವದೂ ಇಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ನೀನು ಅನೇಕ ಸಂಗತಿಗಳನ್ನು ಕಂಡಿದ್ದರೂ, ನಿನಗೆ ಗಮನವಿಲ್ಲ. ಅವನ ಕಿವಿಗಳು ತೆರೆದಿದ್ದರೂ, ಕೇಳನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 42:20
20 ತಿಳಿವುಗಳ ಹೋಲಿಕೆ  

ಹೀಗೆ, ಇತರರಿಗೆ ಉಪದೇಶಿಸುವ ನೀನು, ನಿನಗೆ ನೀನೇ ಉಪದೇಶ ಮಾಡಿಕೊಳ್ಳಬಾರದೇನು? “ಕದಿಯಬಾರದು” ಎಂದು ಬೋಧಿಸುವ ನೀನೇ ಕಳ್ಳತನ ಮಾಡುತ್ತೀಯೇನು?


ಪ್ರಶ್ನೆ ಕೇಳುವುದಕ್ಕೆ ಬರುವ ಜನರಂತೆ, ಅವರು ನಿನ್ನ ಬಳಿಗೆ ಬಂದು, ನನ್ನ ಭಕ್ತರಾಗಿ ನಿನ್ನ ಮುಂದೆ ಕೂತುಕೊಂಡು, ನಿನ್ನ ಮಾತುಗಳನ್ನು ಕೇಳುತ್ತಾರೆ; ಆದರೆ ಕೈಗೊಳ್ಳುವುದಿಲ್ಲ. ಬಾಯಿಂದ ಬಹು ಪ್ರೀತಿಯನ್ನು ತೋರಿಸುತ್ತಾರೆ; ಅವರ ಮನಸ್ಸಾದರೋ ತಾವು ದೋಚಿಕೊಂಡದ್ದರ ಮೇಲೆ ಇರುತ್ತದೆ.


ಅದಕ್ಕೆ ನಾನು, “ಅಯ್ಯೋ ! ಯಾರ ಸಂಗಡ ನಾನು ಮಾತಾಡಿ ಅವರು ಗಮನಿಸುವಂತೆ ಮಾಡಲಿ? ಅವರ ಕಿವಿ ಮಂದ . ಅವರು ಕೇಳಿಸಿಕೊಳ್ಳುವುದಿಲ್ಲ . ಸರ್ವೇಶ್ವರ ಆದ ನಿಮ್ಮ ಮಾತು ಎಂದರೆ ಅವರಿಗೆ ತಿರಸ್ಕಾರ. ಅದು ಅವರಿಗೆ ರುಚಿಸುವುದಿಲ್ಲ.


ತಮ್ಮ ದೇವರ ವಿಧಿನಿಯಮಗಳನ್ನು ಬಿಡದೆ, ಧರ್ಮವನ್ನು ಆಚರಿಸುವ ಜನಾಂಗವೋ ಎಂಬಂತೆ, ಇವರು ದಿನದಿನವೂ ನನ್ನ ದರ್ಶನಕ್ಕಾಗಿ ಬರುತ್ತಾರೆ; ನನ್ನ ಮಾರ್ಗವನ್ನು ತಿಳಿದುಕೊಳ್ಳುವುದರಲ್ಲಿ ಸಂತೋಷಿಸುವಂತೆ ನಟಿಸುತ್ತಾರೆ. ಧೈರ್ಯವಾಗಿ ನನ್ನಿಂದ ನ್ಯಾಯವಿಧಿಗಳನ್ನು ಕೇಳುತ್ತಾರೆ. ದೇವದರ್ಶನದಲ್ಲಿ ಆನಂದಿಸುವವರಂತೆ ತೋರಿಸಿಕೊಳ್ಳುತ್ತಾರೆ.”


ಎತ್ತು ಯಜಮಾನನನ್ನು, ಕತ್ತೆ ಒಡೆಯನ ಕೊಟ್ಟಿಗೆಯನ್ನು ಬಲ್ಲವು. ಆದರೆ ನನ್ನ ಪ್ರಜೆಗಳಾದ ಇಸ್ರಯೇಲರಿಗೆ ಅಷ್ಟೂ ತಿಳಿದಿಲ್ಲ. ಅವರಿಗೆ ಏನೂ ತಿಳಿಯುವುದಿಲ್ಲ.


ಪರ್ಯಾಲೋಚಿಸಲಿವುಗಳನು ಬುದ್ಧಿವಂತರು I ಗ್ರಹಿಸಲಿ ಪ್ರಭುವಿನಚಲ ಪ್ರೀತಿಯನಾ ಜನರು II


ಹೀಗಿರುವಲ್ಲಿ, ನೀವು ಬಹಳ ಜಾಗರೂಕತೆಯಿಂದಿರಿ; ನಿಮ್ಮ ಕಣ್ಣುಗಳಿಂದಲೇ ನೋಡಿದ ಘಟನೆಗಳನ್ನು ಎಷ್ಟು ಮಾತ್ರಕ್ಕೂ ಮರೆಯದಿರಿ; ಜೀವಮಾನಪರ್ಯಂತ ಇವುಗಳನ್ನು ನೆನಪಿನಲ್ಲಿ ಇಡಿ; ನಿಮ್ಮ ಮಕ್ಕಳಿಗೂ ಮೊಮ್ಮಕ್ಕಳಿಗೂ ತಿಳಿಸುತ್ತಾ ಹೋಗಿ,


ಈಜಿಪ್ಟ್ ದೇಶದಲ್ಲೂ ಮರುಭೂಮಿಯಲ್ಲೂ ನಾನು ಮಾಡಿದ ಮಹತ್ಕಾರ್ಯಗಳನ್ನು ಹಾಗೂ ನನ್ನ ಅಸ್ತಿತ್ವದ ತೇಜಸ್ಸನ್ನು ಈ ಮಾನವರೆಲ್ಲರೂ ನೋಡಿದ್ದರೂ ನನ್ನ ಮಾತಿಗೆ ಕಿವಿಗೊಡಲಿಲ್ಲ. ಬದಲಿಗೆ ನನ್ನನ್ನು ಪದೇ ಪದೇ ಪರೀಕ್ಷಿಸಿದ್ದಾರೆ.


ಅವರೊಡನೆ ಸಾಮತಿ ರೂಪದಲ್ಲಿ ಮಾತನಾಡುವುದಕ್ಕೆ ಕಾರಣ ಇದು: ಅವರು ಕಣ್ಣಾರೆ ನೋಡಿದರೂ ಕಾಣುವುದಿಲ್ಲ; ಕಿವಿಯಾರೆ ಕೇಳಿದರೂ ಕಿವಿಗೊಡುವುದಿಲ್ಲ; ಗ್ರಹಿಸುವುದೂ ಇಲ್ಲ.


ಅದಕ್ಕೆ, “ನೀನು ಜನರ ಬಳಿಗೆ ಹೋಗಿ ಹೀಗೆಂದು ಹೇಳು : ‘ನೀವು ಕಿವಿಯಾರೆ ಕೇಳಿದರೂ ತಿಳಿಯಬಾರದು. ಕಣ್ಣಾರೆ ಕಂಡರೂ ಗ್ರಹಿಸಬಾರದು.’


ಇಗೋ, ನಿನ್ನ ಮಾತು ಅವರ ಎಣಿಕೆಯಲ್ಲಿ ಒಬ್ಬ ಸಂಗೀತಗಾರನು ವಾದ್ಯವನ್ನು ಜಾಣತನದಿಂದ ಬಾರಿಸಿ ಮಧುರಸ್ವರದಿಂದ ಹಾಡುವ ಪ್ರೇಮಗೀತೆಗೆ ಸಮಾನವಾಗಿದೆ; ನಿನ್ನ ಮಾತುಗಳನ್ನು ಕೇಳುತ್ತಾರೆ, ಆದರೆ ಕೈಗೊಳ್ಳುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು