Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 43:24 - ಕನ್ನಡ ಸತ್ಯವೇದವು C.L. Bible (BSI)

24 ನನಗೋಸ್ಕರ ನೀನು ಹಣ ತೆತ್ತು ಅಗರಬತ್ತಿ ತರಲಿಲ್ಲ ಯಜ್ಞಪಶುಗಳ ವಪೆಯಿಂದ ನನ್ನನ್ನು ತೃಪ್ತಿಪಡಿಸಲಿಲ್ಲ. ಬದಲಿಗೆ ನನ್ನನ್ನು ಪೀಡಿಸಿರುವೆ ನಿನ್ನ ಪಾಪಗಳಿಂದ ಬೇಸರಗೊಳಿಸಿರುವೆ ನನ್ನನು ನಿನ್ನ ದೋಷಗಳಿಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ನೀನು ನನಗೋಸ್ಕರ ಹಣಕೊಟ್ಟು ತೈಲವನ್ನು ತರಲಿಲ್ಲ, ಯಜ್ಞಪಶುಗಳ ಕೊಬ್ಬಿನಿಂದ ನನ್ನನ್ನು ತೃಪ್ತಿಪಡಿಸಲಿಲ್ಲ. ಆದರೆ ನಿನ್ನ ಪಾಪಗಳಿಂದ ನನ್ನನ್ನು ನೀನು ತೊಂದರೆಗೆ ಗುರಿಮಾಡಿರುವೆ. ನಿನ್ನ ದೋಷಗಳಿಂದ ನನ್ನನ್ನು ಬೇಸರಗೊಳಿಸಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ನೀನು ನನಗೋಸ್ಕರ ಹಣಕೊಟ್ಟು ಬಜೆಯನ್ನು ತರಲಿಲ್ಲ, ಯಜ್ಞಪಶುಗಳ ವಪೆಯಿಂದ ನನ್ನನ್ನು ತೃಪ್ತಿಪಡಿಸಲಿಲ್ಲ; ಆದರೆ ನಿನ್ನ ಪಾಪಗಳಿಂದ ನನ್ನನ್ನು ನೀನು ತೊಂದರೆಪಡಿಸಿದ್ದೀ, ನಿನ್ನ ದೋಷಗಳಿಂದ ನನ್ನನ್ನು ಬೇಸರಗೊಳಿಸಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ನೀನು ನನ್ನ ಗೌರವಾರ್ಥವಾಗಿ ಕಾಣಿಕೆಗಳನ್ನು ಮತ್ತು ಧೂಪವನ್ನು ಖರೀದಿ ಮಾಡಲು ನಿನ್ನ ಹಣವನ್ನು ಖರ್ಚು ಮಾಡಲಿಲ್ಲ. ಆದರೆ ನೀನು ನನ್ನನ್ನು ನಿನ್ನ ಗುಲಾಮನಾಗುವಂತೆ ಬಲವಂತಪಡಿಸಿದೆ. ನೀನು ನಿನ್ನ ಪಾಪಗಳಿಂದ ನನಗೆ ಭಾರವನ್ನುಂಟುಮಾಡಿರುವೆ ಮತ್ತು ನಿನ್ನ ಅಪರಾಧಗಳಿಂದ ನನ್ನನ್ನು ಕುಗ್ಗಿಸಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ನೀನು ನನಗೋಸ್ಕರ ಹಣದಿಂದ ಪರಿಮಳ ತೈಲವನ್ನು ಕೊಂಡುಕೊಳ್ಳಲಿಲ್ಲ. ನಿನ್ನ ಯಜ್ಞಪಶುಗಳ ಕೊಬ್ಬಿನಿಂದ ನನ್ನನ್ನು ತೃಪ್ತಿಪಡಿಸಲಿಲ್ಲ. ಆದರೆ ನಿನ್ನ ಪಾಪಗಳಿಂದ ನನ್ನನ್ನು ನೀನು ತೊಂದರೆಗೆ ಗುರಿಮಾಡಿರುವೆ. ನಿನ್ನ ಅಕ್ರಮಗಳಿಂದ ನನ್ನನ್ನು ಬೇಸರಗೊಳಿಸಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 43:24
18 ತಿಳಿವುಗಳ ಹೋಲಿಕೆ  

ಆಗ ಯೆಶಾಯನು: “ದಾವೀದ ವಂಶಜರೇ, ಕೇಳಿರಿ, ಮಾನವರನ್ನು ಕೆಣಕಿದ್ದು ಸಾಲದೆಂದು ದೇವರನ್ನೇ ಕೆಣಕುತ್ತಿರುವಿರಾ?


ಅವರು ಶೆಬದ ಧೂಪವನ್ನಾಗಲಿ, ದೂರದೇಶದ ಒಳ್ಳೆಯ ಸುಗಂಧವನ್ನಾಗಲಿ ತಂದು ನನಗೆ ಅರ್ಪಿಸುವುದರಿಂದ ನನಗೆ ಏನೂ ಪ್ರಯೋಜನವಿಲ್ಲ. ಅವರು ಒಪ್ಪಿಸುವ ದಹನಬಲಿಗಳನ್ನು ನಾನು ಮೆಚ್ಚುವುದಿಲ್ಲ. ಅವರ ಯಜ್ಞಬಲಿಗಳೂ ನನಗೆ ಇಷ್ಟವಿಲ್ಲ.


ನಿಮ್ಮ ಹಬ್ಬ ಹುಣ್ಣಿಮೆಗಳು, ಉತ್ಸವ ದಿನಗಳು ನನ್ನ ಮನಕ್ಕೆ ವಿರುದ್ಧ, ಹೊರಲಾಗದ ಭಾರ, ಸಹಿಸಲಾಗದ ಬೇಸರ.


ಹೀಗೆ ಅಳಿದುಳಿದು ಸೆರೆಗೆ ಒಯ್ಯಲ್ಪಟ್ಟು ಜನಾಂಗಗಳ ಮಧ್ಯೆ ವಾಸಿಸುವ ನಿಮ್ಮವರು ನನ್ನನ್ನು ಸ್ಮರಿಸಿಕೊಳ್ಳುವರು. ಅನ್ಯದೇವತೆಗಳಲ್ಲಿನ ಮೋಹದಿಂದ ನನ್ನನ್ನು ತೊರೆದು ತಮ್ಮ ಹೃದಯವನ್ನು ಹಾಗು ತಮ್ಮ ವಿಗ್ರಹಗಳ ಮೇಲಣ ಕಾಮದಿಂದ ದೇವದ್ರೋಹ ಮಾಡಿದ ತಮ್ಮ ಕಣ್ಣುಗಳನ್ನು ಭಂಗಪಡಿಸಿದವನು ನಾನೇ ಎಂಬುದಾಗಿ ನನ್ನನ್ನು ಜ್ಞಾಪಕಮಾಡಿಕೊಳ್ಳುವರು. ತಾವು ಬಹಳ ಅಸಹ್ಯಕಾರ್ಯಗಳನ್ನು ನಡೆಸಿ ಕೆಟ್ಟತನವನ್ನು ಮಾಡಿದ್ದೇವೆಂದು ತಮ್ಮನ್ನು ತಾವೇ ಹೇಸಿಕೊಳ್ಳುವರು.


ಅವರಾದರೋ ಬಂಡಾಯವೆದ್ದರು; ಸ್ವಾಮಿಯ ಪವಿತ್ರಾತ್ಮನನ್ನು ದುಃಖಪಡಿಸಿದರು. ಎಂತಲೇ ಸರ್ವೇಶ್ವರ ಅವರಿಗೆ ಶತ್ರುವಾಗಿ ಮಾರ್ಪಟ್ಟರು, ತಾವೇ ಅವರಿಗೆ ವಿರುದ್ಧವಾಗಿ ಹೋರಾಡಿದರು.


ನಲವತ್ತು ವರುಷ ಆ ಪೀಳಿಗೆಯ ಬಗ್ಗೆ ನಾ ಬೇಸರಗೊಂಡೆ I ‘ತಪ್ಪುಮನಸ್ಕರು ಇವರು, ನನ್ನ ಮಾರ್ಗವನು ಮೆಚ್ಚರಿವರು’ ಎಂದುಕೊಂಡೆ II


“ತನ್ನ ಹಿಂಡಿನಲ್ಲಿರುವ ಗಂಡು ಪಶುವನ್ನು ಕೊಡುವುದಾಗಿ ಹರಕೆ ಹೊತ್ತು, ಬದಲಿಗೆ ಕಳಂಕವಾದ ಪಶುವನ್ನು ಸರ್ವೇಶ್ವರಸ್ವಾಮಿಗೆ ಬಲಿದಾನಮಾಡುವವನು ಮೋಸಗಾರ, ಅವನು ಶಾಪಗ್ರಸ್ತ. ನಾನೋ ರಾಜಾಧಿರಾಜ. ನನ್ನ ನಾಮಕ್ಕೆ ಅನ್ಯರಾಷ್ಟ್ರಗಳೂ ಭಯಪಡುತ್ತವೆ,” ಎನ್ನುತ್ತಾರೆ ಸೇನಾಧೀಶ್ವರ ಸರ್ವೇಶ್ವರ.


ಆದ್ದರಿಂದ ಧಾನ್ಯ ತುಂಬಿದ ಬಂಡೆ ನಸುಕುವಂತೆ ನಿಮ್ಮನ್ನು ಇದ್ದಲ್ಲಿಯೇ ನಸುಕಿಬಿಡುವೆನು.


ನೀನು ನಿನ್ನ ಯೌವನಕಾಲವನ್ನು ನೆನೆಸಿಕೊಳ್ಳದೆ, ಈ ದುಷ್ಕೃತ್ಯಗಳನ್ನೆಲ್ಲಾ ನಡೆಸಿ, ನನ್ನನ್ನು ರೇಗಿಸಿದ್ದರಿಂದ ಇಗೋ, ನಾನು ನಿನ್ನ ದುರ್ಮಾರ್ಗದ ಫಲವನ್ನು ನಿನ್ನ ತಲೆಗೆ ಕಟ್ಟುವೆನು; ನೀನು ಲೆಕ್ಕವಿಲ್ಲದ ದುರಾಚಾರಗಳನ್ನು ನಡೆಸಿದ್ದಲ್ಲದೆ ಈ ಅಸಹ್ಯಕಾರ್ಯವನ್ನೂ ಮಾಡಿರುವೆ. ಇದು ಸರ್ವೇಶ್ವರನಾದ ದೇವರ ನುಡಿ.


ಇಂತಿರಲು ಒಡೆಯರು, ಸೇನಾಧೀಶ್ವರರು, ಇಸ್ರಯೇಲರ ಪರಾಕ್ರಮಿಯು ಆದ ಸರ್ವೇಶ್ವರ ಹೀಗೆನ್ನುತ್ತಾರೆ: “ಇಗೋ ನನ್ನ ಶತ್ರುಗಳಾದ ನಿಮ್ಮ ಮೇಲೆ ಸೇಡು ತೀರಿಸುವೆನು. ನನ್ನ ವಿರೋಧಿಗಳಾದ ನಿಮ್ಮನ್ನು ಸದೆಬಡಿದು ಶಾಂತನಾಗಿರುವೆನು.


ಶಾತಿಸಮಾಧಾನದ ಬಲಿಪ್ರಾಣಿಗಳ ಕೊಬ್ಬನ್ನು ಪ್ರತ್ಯೇಕಿಸುವ ಪ್ರಕಾರ ಯಾಜಕನು ಇದರ ಎಲ್ಲ ಕೊಬ್ಬನ್ನು ಪ್ರತ್ಯೇಕಿಸಿ ಸರ್ವೇಶ್ವರನಿಗೆ ಸುವಾಸನೆಯನ್ನುಂಟುಮಾಡಲು ಬಲಿಪೀಠದ ಮೇಲೆ ಹೋಮಮಾಡಲಿ. ಹೀಗೆ ಯಾಜಕನು ಅವನಿಗೋ‍ಸ್ಕರ ದೋಷಪರಿಹಾರ ಮಾಡುವುದರಿಂದ ಅವನಿಗೆ ಕ್ಷಮೆ ದೊರಕುವುದು.


ಯಾಜಕನು ಅದನ್ನು ಬಲಿಪೀಠದ ಮೇಲೆ ಹೋಮಮಾಡಬೇಕು. ಅದು ಸುಗಂಧಹೋಮ ರೂಪವಾಗಿ ಸರ್ವೇಶ್ವರನಿಗೆ ಆಹಾರವಾಗಿರುವುದು. ಬಲಿಪ್ರಾಣಿಗಳ ಕೊಬ್ಬೆಲ್ಲವು ಸರ್ವೇಶ್ವರನದು.


ಸರ್ವೇಶ್ವರ ಮೋಶೆಗೆ ಮತ್ತೆ ಆಜ್ಞಾಪಿಸಿದ್ದೇನೆಂದರೆ: “ನೀನು ಹಾಲುಮಡ್ಡಿ, ಗುಗ್ಗುಲ ಹಾಗು ಗಂಧದಚೆಕ್ಕೆ ಎಂಬ ಪರಿಮಳ ದ್ರವ್ಯಗಳನ್ನು ಮತ್ತು ಸ್ವಚ್ಚವಾದ ಧೂಪವನ್ನು ಸಮಭಾಗವಾಗಿ ತೆಗೆದುಕೊಂಡು ಸುವಾಸನೆಯುಳ್ಳ ಬುಕ್ಕಿಟ್ಟಾಗಿರುವಂತೆ


ಆರೋನನು ಪ್ರತಿನಿತ್ಯವು ಬೆಳಿಗ್ಗೆ ದೀಪಗಳನ್ನು ಸರಿಪಡಿಸುವಾಗ ಹಾಗು ಸಂಜೆದೀಪಗಳನ್ನು ಹೊತ್ತಿಸುವಾಗ ಆ ವೇದಿಕೆಯ ಮೇಲೆ ಸುಗಂಧದ್ರವ್ಯಗಳಿಂದ ಧೂಪವನ್ನು ಹಾಕಬೇಕು.


ನೀವು ನಡೆಸಿದ ದುರಾಚಾರಗಳನ್ನು ಹಾಗು ಅಸಹ್ಯಕಾರ್ಯಗಳನ್ನು ಸರ್ವೇಶ್ವರ ಇನ್ನು ಸಹಿಸಲಾರದೆ ಹೋದುದರಿಂದಲೇ ನಿಮ್ಮ ನಾಡು ಹಾಳುಬಿದ್ದಿದೆ. ನಿರ್ಜನವಾಗಿ ಭಯಭೀತಿಗೆ ಎಡೆ ಆಗಿದೆ. ಅದರ ಸ್ಥಿತಿ ಈಗಲೂ ಬದಲಾಗಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು