Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 43:27 - ಕನ್ನಡ ಸತ್ಯವೇದವು C.L. Bible (BSI)

27 ಪಾಪಿಷ್ಟನಾಗಿದ್ದನು ನಿನ್ನ ಮೂಲಪಿತೃವು ನನಗೆ ದ್ರೋಹಿಗಳಾಗಿದ್ದರು ನಿನ್ನ ಪರವಾದಿಗಳು ನನ್ನ ಪವಿತ್ರಾಲಯವನ್ನು ಹೊಲೆಮಾಡಿದರು ನಿನ್ನ ಅಧಿಪತಿಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ನಿನ್ನ ಮೂಲಪಿತೃ ಪಾಪಮಾಡಿದ್ದಾನೆ, ನಿನ್ನ ಬೋಧಕರು ನನಗೆ ದ್ರೋಹಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ನಿನ್ನ ಮೂಲಪಿತೃವು ಪಾಪಿಷ್ಠನು, ನಿನ್ನ ಮಧ್ಯಸ್ಥರು ನನಗೆ ದ್ರೋಹಮಾಡಿದವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ನಿನ್ನ ಮೊದಲನೆ ತಂದೆಯು ಪಾಪದಲ್ಲಿ ಬಿದ್ದನು. ನಿನ್ನ ವಕೀಲರು ನನಗೆ ವಿರುದ್ಧವಾಗಿ ಕಾರ್ಯ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ನಿನ್ನ ಮೂಲಪಿತೃ ಪಾಪಮಾಡಿದ್ದಾನೆ. ನಿನ್ನ ಬೋಧಕರು ನನಗೆ ವಿರೋಧವಾಗಿ ದ್ರೋಹ ಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 43:27
32 ತಿಳಿವುಗಳ ಹೋಲಿಕೆ  

ಪ್ರವಾದಿಗಳೇ ಸುಳ್ಳು ಪ್ರವಾದನೆಮಾಡುತ್ತಾರೆ. ಯಾಜಕರು ಅಂಥವರಿಂದ ಅಧಿಕಾರ ಪಡೆದು ದೊರೆತನಮಾಡುತ್ತಾರೆ. ನನ್ನ ಜನರಿಗೆ ಚೆನ್ನಾಗಿ ಹಿಡಿಸುವುದು ಇಂಥದ್ದೇ. ಆದರೆ ಅಂತ್ಯ ಬಂದಾಗ ಏನು ಮಾಡುವರು?”


ಯಾಜಕರು, ಪ್ರವಾದಿಗಳು ಮದ್ಯಪಾನದಿಂದ ಮತ್ತರಾಗಿದ್ದಾರೆ; ದ್ರಾಕ್ಷಾರಸದಿಂದ ಓಲಾಡುತ್ತಿದ್ದಾರೆ; ಕುಡಿತದಿಂದ ತೂರಾಡುತ್ತಿದ್ದಾರೆ. ದ್ರಾಕ್ಷಾರಸವೇ ಅವರನ್ನು ಮುಳುಗಿಸಿಬಿಟ್ಟಿದೆ. ಹೌದು, ಅವರು ಮದ್ಯದಲ್ಲಿ ತೇಲಾಡುತ್ತಿದ್ದಾರೆ. ದೈವದರ್ಶನವಾಗುತ್ತಿರುವಾಗಲೂ ಅವರು ಓಲಾಡುತ್ತಾರೆ.


ಸರ್ವೇಶ್ವರ ದೇವರು ಜೆರುಸಲೇಮೆಂಬಾಕೆಗೆ ಈ ಮಾತನ್ನು ಹೇಳಿ ಕಳುಹಿಸಿದ್ದಾರೆ: “ನೀನು ಹುಟ್ಟಿದ್ದು ಕಾನಾನ್ ದೇಶದಲ್ಲಿ, ಅದೇ ನಿನ್ನ ಜನ್ಮಭೂಮಿ. ನಿನ್ನ ತಂದೆ ಅಮೋರಿಯನು, ನಿನ್ನ ತಾಯಿ ಹಿತ್ತಿಯಳು.


ಒಬ್ಬ ಮನುಷ್ಯನಿಂದಲೇ ಪಾಪ, ಪಾಪದಿಂದ ಮರಣ, ಈ ಲೋಕವನ್ನು ಪ್ರವೇಶಿಸಿದವು. ಎಲ್ಲರೂ ಪಾಪಮಾಡಿದ್ದರಿಂದ ಮರಣವು ಎಲ್ಲರಿಗೂ ಪ್ರಾಪ್ತಿಯಾಯಿತು.


ಸ್ತೇಫನನು ಮುಂದುವರೆದು, “ಎಷ್ಟು ಹಟಮಾರಿಗಳು ನೀವು; ಎಂಥಾ ಕಠಿಣ ಹೃದಯಿಗಳು ನೀವು’ ದೇವರ ಸಂದೇಶಕ್ಕೆ ಎಷ್ಟು ಕಿವುಡರು ನೀವು! ನಿಮ್ಮ ಪೂರ್ವಜರಂತೆ ನೀವು ಸಹ ಪವಿತ್ರಾತ್ಮ ಅವರನ್ನು ಯಾವಾಗಲೂ ಪ್ರತಿಭಟಿಸುತ್ತೀರಿ.


ಅಂತೆಯೇ ಮುಖ್ಯಯಾಜಕರು, ಧರ್ಮಶಾಸ್ತ್ರಿಗಳು ಮತ್ತು ಪ್ರಮುಖರು,


ಬೆಳಗಾಯಿತು. ಎಲ್ಲ ಮುಖ್ಯಯಾಜಕರೂ ಜನರ ಪ್ರಮುಖರೂ ಸೇರಿ ಯೇಸುವನ್ನು ಕೊಲ್ಲಿಸುವುದಕ್ಕೆ ಸಮಾಲೋಚನೆಮಾಡಿದರು.


ಅವರನ್ನು ಅವರಷ್ಟಕ್ಕೇ ಬಿಡಿ; ಅವರೊ ಕುರುಡರು, ಮತ್ತೊಬ್ಬರಿಗೆ ದಾರಿ ತೋರಿಸಲು ಹೋಗುತ್ತಾರೆ. ಕುರುಡನು ಕುರುಡನಿಗೆ ದಾರಿ ತೋರಿಸಿದರೆ ಇಬ್ಬರೂ ಹಳ್ಳದಲ್ಲಿ ಬೀಳುತ್ತಾರಷ್ಟೆ,” ಎಂದರು.


ನಿಮ್ಮ ಪೂರ್ವಜರ ಕಾಲದಿಂದಲೂ ನನ್ನ ವಿಧಿಗಳನ್ನು ಅನುಸರಿಸದೆ, ಅಡ್ಡದಾರಿ ಹಿಡಿದಿದ್ದೀರಿ. ಈಗ ಮರಳಿ ನನಗೆ ಅಭಿಮುಖರಾಗಿರಿ. ನಾನು ನಿಮಗೆ ಅಭಿಮುಖನಾಗುವೆನು.” ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ. ‘ನಾವು ನಿಮಗೆ ಅಭಿಮುಖರಾಗಲು ಏನು ಮಾಡಬೇಕು?’ ಎಂದು ಕೇಳುತ್ತೀರೋ?


ನಿಮ್ಮ ಮುಖಂಡರು ಲಂಚಕ್ಕಾಗಿ ನ್ಯಾಯತೀರಿಸುತ್ತಾರೆ. ನಿಮ್ಮ ಯಾಜಕರು ಸಂಬಳಕ್ಕಾಗಿ ಉಪದೇಶಮಾಡುತ್ತಾರೆ. ಆದರೂ ಸರ್ವೆಶ್ವರಸ್ವಾಮಿಯ ಮೇಲೆ ಭಾರಹಾಕಿದವರಂತೆ, “ಸ್ವಾಮಿ ನಮ್ಮೊಡನೆ ಇಲ್ಲವೆ? ನಮಗೆ ಕೇಡು ಸಂಭವಿಸುವುದಾದರೂ ಹೇಗೆ?” ಎಂದುಕೊಳ್ಳುತ್ತಾರೆ.


ಜನರು ಜ್ಞಾನಹೀನರಾಗಿ ಅಳಿದುಹೋಗುತ್ತಿದ್ದಾರೆ. “ನೀವು ದೈವಜ್ಞಾನವನ್ನು ತಿರಸ್ಕರಿಸಿದ್ದೀರಿ; ನಾನು ಸಹ ಯಾಜಕವರ್ಗದಿಂದ ನಿಮ್ಮನ್ನು ವರ್ಜಿಸಿಬಿಡುತ್ತೇನೆ. ನೀವು ದೇವರ ಧರ್ಮೋಪದೇಶವನ್ನು ಮರೆತುಬಿಟ್ಟಿದ್ದೀರಿ; ನಾನು ನಿಮ್ಮ ಮಕ್ಕಳನ್ನು ಮರೆತುಬಿಡುತ್ತೇನೆ.


ನಾವೇ ತಂದುಕೊಂಡ ಅವಮಾನವೆಂಬ ಹಾಸಿಗೆಯಲ್ಲಿ ಬಿದ್ದಿರೋಣ. ನಾಚಿಕೆಯೆಂಬ ಹೊದಿಕೆ ನಮ್ಮನ್ನು ಮುಚ್ಚಿಬಿಡಲಿ. ಚಿಕ್ಕತನದಿಂದ ಈವರೆಗು ನಾವೂ ನಮ್ಮ ಪೂರ್ವಜರೂ ನಮ್ಮ ದೇವರಾದ ಸರ್ವೇಶ್ವರ ಸ್ವಾಮಿಗೆ ಇದಿರಾಗಿ ಪಾಪಮಾಡುತ್ತಾ ಬಂದಿರುವುದು ನಿಶ್ಚಯ. ಆ ಸ್ವಾಮಿಯ ಮಾತನ್ನು ಕೇಳದೆಹೋದೆವಲ್ಲಾ!” ಎಂದು ಮೊರೆಯಿಡುತ್ತಿದ್ದಾರೆ.


ನನ್ನ ಜನರನ್ನೋ ಬಾಧಿಸುತ್ತಿರುವವರು ಹುಡುಗರು; ಆಳುತ್ತಿರುವವರೋ ಹೆಂಗಳೆಯರು. ಎಲೈ ನನ್ನ ಜನರೇ, ನಿಮ್ಮ ನಾಯಕರು ನಿಮ್ಮನ್ನು ತಪ್ಪುದಾರಿಗೆ ಎಳೆಯುತ್ತಿದ್ದಾರೆ. ನಿಮ್ಮ ಮಾರ್ಗವನ್ನು ವಕ್ರಗೊಳಿಸುತ್ತಿದ್ದಾರೆ.


ಮರೆಯರು ನನ್ನ ಮಹತ್ಕಾರ್ಯಗಳನು I ಇಡುವರು ನನ್ನಲ್ಲೇ ಭರವಸೆಯನು I ಕೈಗೊಳ್ಳುವರು ನನ್ನ ಆಜ್ಞೆಗಳನು II


ಈಗ ಈ ದುಷ್ಟ ಪೀಳಿಗೆಗೆ ಸೇರಿದವರಾದ ನೀವು ನಿಮ್ಮ ಪೂರ್ವಜರಿಗೆ ಬದಲಾಗಿ ಬಂದು ಇಸ್ರಯೇಲರ ಮೇಲಿದ್ದ ಸರ್ವೇಶ್ವರನ ಕೋಪಾಗ್ನಿಯನ್ನು ಮತ್ತಷ್ಟು ಹೆಚ್ಚಿಸುತ್ತಿದ್ದೀರಿ.


ಓಲಾಡುವುದು ಭೂಮಿ ಅಮಲೇರಿದವನಂತೆ, ತೂಗಾಡುವುದು ಬಿರುಗಾಳಿಗೆ ಸಿಕ್ಕಿದ ಗುಡಿಸಲಂತೆ, ಕುಸಿದು ಬೀಳುವುದು ದ್ರೋಹದ ಭಾರಕೆ, ಮರಳಿ ಏಳದಂತೆ.


ಸರ್ವೇಶ್ವರ ನಿಮ್ಮ ಮೇಲೆ ಗಾಢನಿದ್ರೆಯನ್ನು ಬರಮಾಡಿ ಪ್ರವಾದಿಗಳೆಂಬ ಕಣ್ಣುಗಳನ್ನು ಕಟ್ಟಿಬಿಟ್ಟಿದ್ದಾರೆ. ದಿವ್ಯದರ್ಶನಗಳೆಂಬ ಕಲೆಗಳಿಗೆ ಮುಸುಕು ಹಾಕಿಬಿಟ್ಟಿದ್ದಾರೆ.


ಸರ್ವೇಶ್ವರ ಹೀಗೆನ್ನುತ್ತಾರೆ : “ವಿವಾಹ ವಿಚ್ಛೇದನಗೈದ ಗಂಡಸಿನಂತೆ ನಾನು ನಿಮ್ಮ ಜನಾಂಗವನ್ನು ಪರಿತ್ಯಜಿಸಿದುಂಟೊ? ತನ್ನ ಮಕ್ಕಳನ್ನು ಜೀತಕ್ಕೆ ಇರಿಸುವವನಂತೆ ನಾನು ನಿಮ್ಮನ್ನು ನನ್ನ ಸಾಲಗಾರರಿಗೆ ಮಾರಿದುಂಟೊ? ಇಲ್ಲ, ನೀವು ಸೆರೆವಾಸಿಗಳಾದಿರಿ ನಿಮ್ಮ ದೋಷಗಳ ನಿಮಿತ್ತ; ನಿಮ್ಮ ತಾಯಿಯನು ಬಿಡಲಾಯಿತು ನಿಮ್ಮ ದ್ರೋಹಗಳ ನಿಮಿತ್ತ.


ನೆನೆಯಿರಿ ನಿಮ್ಮ ಮೂಲಪುರುಷ ಅಬ್ರಹಾಮನನು ಅವನ ಸತಿ ಸಾರಳನು. ಅಬ್ರಹಾಮನನ್ನು ನಾ ಕರೆದಾಗ ಆತನು ಒಬ್ಬಂಟಿಗನು ಆಶೀರ್ವಾದದಿ ನಾ ಬೆಳೆಸಿದೆ ಆತನ ಸಂತಾನವನು.


ಸರ್ವೇಶ್ವರ ಸ್ವಾಮಿ ಇಂತೆನ್ನುತ್ತಾರೆ : “ಗಟ್ಟಿಯಾಗಿ ಕೂಗು, ನಿಲ್ಲಿಸಬೇಡ; ಕೊಂಬಿನಂತೆ ಸ್ವರವೆತ್ತಿ ನನ್ನ ಜನರಿಗೆ ಅವರ ದ್ರೋಹವನ್ನು ತಿಳಿಸು; ಯಕೋಬ ವಂಶದವರಿಗೆ ಅವರ ಪಾಪವನ್ನು ತಿಳಿಸು;


‘ನಾವು ಜ್ಞಾನಿಗಳು. ಸರ್ವೇಶ್ವರನ ಧರ್ಮಶಾಸ್ತ್ರ ನಮ್ಮಲ್ಲಿದೆ’ ಎಂದು ನೀವು ಹೇಗೆ ತಾನೇ ಹೇಳಬಲ್ಲಿರಿ? ಧರ್ಮಶಾಸ್ತ್ರಿಗಳ ಸುಳ್ಳು ಲೇಖನಿ ಅದನ್ನು ಸುಳ್ಳನ್ನಾಗಿ ಮಾಡಿದೆ.


ಜ್ಞಾನಿಗಳು ನಾಚಿಕೆಪಡುವರು, ನಿಬ್ಬೆರಗಾಗಿ ಬೋನಿಗೆ ಸಿಕ್ಕಿಬೀಳುವರು. ಏಕೆಂದರೆ ಸರ್ವೇಶ್ವರನಾದ ನನ್ನ ಮಾತನ್ನು ಅವರು ನಿರಾಕರಿಸಿದ್ದಾರೆ. ಇದು ತಾನೋ ಅವರ ಜ್ಞಾನ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು