Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 44:12 - ಕನ್ನಡ ಸತ್ಯವೇದವು C.L. Bible (BSI)

12 ಕಮ್ಮಾರನು ಮುಟ್ಟನ್ನು ತೆಗೆದುಕೊಂಡು ಕೆಂಡದಲ್ಲಿ ಕೆಲಸ ಮಾಡುತ್ತಾನೆ; ಬಲವಾದ ತೋಳಿನಿಂದ ಚಮಟಿಕೆ ಹಿಡಿದು ಬಡಿದು ವಿಗ್ರಹವನ್ನು ರೂಪಿಸುತ್ತಾನೆ; ಹಸಿದು ಬಳಲುತ್ತಾನೆ, ಬಾಯಾರಿ ಸೊರಗುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಕಮ್ಮಾರನು ತನ್ನ ಸಲಕರಣೆಗಳನ್ನು ತೆಗೆದುಕೊಂಡು ಕೆಂಡದಲ್ಲಿ ಕೆಲಸಮಾಡುತ್ತಾ, ಚಮಟಿಕೆಗಳಿಂದ ಬಡಿದು ತೋಳಿನ ಬಲದಿಂದ ವಿಗ್ರಹವನ್ನು ರೂಪಿಸುವನು. ಅವನು ಹಸಿದು ಬಳಲುವನು, ನೀರಿಲ್ಲದೆ ದಣಿಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಕಮ್ಮಾರನು ಮುಟ್ಟನ್ನು ತೆಗೆದುಕೊಂಡು ಕೆಂಡದಲ್ಲಿ ಕೆಲಸಮಾಡುತ್ತಾ ಚಮಟಿಕೆಗಳಿಂದ ಬಡಿದು ತೋಳಿನ ಬಲದಿಂದ ವಿಗ್ರಹವನ್ನು ರೂಪಿಸುವನು; ಅವನೂ ಹಸಿದು ಬಳಲುವನು, ನೀರಿಲ್ಲದೆ ಕಂಗೆಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಒಬ್ಬನು ಕುಲಿಮೆಯ ಬೆಂಕಿಯ ಮೇಲೆ ಕಬ್ಬಿಣವನ್ನು ಕಾಯಿಸುತ್ತಾನೆ. ಅವನು ತನ್ನ ಸುತ್ತಿಗೆಯಿಂದ ಆ ಲೋಹವನ್ನು ವಿಗ್ರಹವನ್ನಾಗಿ ಮಾಡುತ್ತಾನೆ. ಅವನು ಅದನ್ನು ತನ್ನ ತೋಳ್ಬಲದಿಂದ ಮಾಡುತ್ತಾನೆ. ಆದರೆ ಅವನು ಹಸಿದಾಗ ಅವನ ಶಕ್ತಿಯು ಕಡಿಮೆಯಾಗುತ್ತದೆ. ಆ ಮನುಷ್ಯನು ನೀರನ್ನು ಕುಡಿಯದಿದ್ದರೆ ಅವನು ಬಲಹೀನನಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಕಮ್ಮಾರನು ಸಲಕರಣೆಯನ್ನು ತೆಗೆದುಕೊಂಡು ಕೆಂಡದಲ್ಲಿ ಕೆಲಸ ಮಾಡುತ್ತಾನೆ; ಅವನು ಸುತ್ತಿಗೆ ಹಿಡಿದು ತನ್ನ ತೋಳಿನ ಬಲದಿಂದ ವಿಗ್ರಹವನ್ನು ರೂಪಿಸುತ್ತಾನೆ; ಅವನು ಹಸಿದು ಬಲಹೀನನಾಗಿದ್ದರೂ, ನೀರು ಕುಡಿಯದೇ ದಣಿಯುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 44:12
11 ತಿಳಿವುಗಳ ಹೋಲಿಕೆ  

ವಿಗ್ರಹವಾದರೋ ಎರಕ ಹೊಯ್ಯಲ್ಪಟ್ಟಿತು ಶಿಲ್ಪಿಯಿಂದ ಅದಕ್ಕೆ ಬಡಿದಿರುವ ಚಿನ್ನದ ಕವಚ ಅಕ್ಕಸಾಲಿಗನಿಂದ ಅದಕ್ಕೆ ತೊಡಿಸಿರುವ ಬೆಳ್ಳಿಸರಪಣಿ ಆ ವಾಜನಿಂದ.


ಜನರು ದುಡಿದದ್ದು ಬೆಂಕಿಗೆ ತುತ್ತಾಗುವುದು. ಜನಾಂಗಗಳು ಪಟ್ಟ ಪರಿಶ್ರಮ ವ್ಯರ್ಥವಾಗುವುದು. ಇದೆಲ್ಲ ಸೇನಾಧೀಶ್ವರ ಸರ್ವೇಶ್ವರನ ಚಿತ್ತವಷ್ಟೆ.


ನಾನು ಅವರಿಗೆ ಆಜ್ಞಾಪಿಸಿದ ಮಾರ್ಗವನ್ನು ಇಷ್ಟು ಬೇಗನೆ ತೊರೆದುಬಿಟ್ಟು ತಮಗೇ ಲೋಹದ ಹೋರಿಕರುವನ್ನು ಮಾಡಿಸಿಕೊಂಡು, ಅದಕ್ಕೆ ಅಡ್ಡಬಿದ್ದು, ಬಲಿಗಳನ್ನರ್ಪಿಸಿ, ‘ಇಸ್ರಯೇಲರೇ ನೋಡಿ, ನಿಮ್ಮನ್ನು ಈಜಿಪ್ಟಿನಿಂದ ಕರೆದುತಂದ ದೇವರು’ ಎಂದು ಹೇಳಿಕೊಳ್ಳುತ್ತಿದ್ದಾರೆ.


ಅವನು ಆ ಚಿನ್ನವನ್ನು ತನ್ನ ವಶಕ್ಕೆ ತೆಗೆದುಕೊಂಡು, ಹೋರಿಕರುವಿನ ಆಕಾರವನ್ನು ಉಳಿಯಿಂದ ರೂಪಿಸಿ ಎರಕ ಹೊಯಿಸಿದನು. ಆಗ ಜನರು, “ಇಸ್ರಯೇಲರೇ ನೋಡಿ, ನಿಮ್ಮನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದ ದೇವರು ಇದೇ” ಎಂದು ಹೇಳಿದರು.


ಅಲ್ಲಿ ಮಾನವರ ಕೈಯಿಂದ ಮಾಡಲಾದ ಮರ ಮತ್ತು ಕಲ್ಲಿನ ದೇವರುಗಳನ್ನು ಪೂಜಿಸುವಿರಿ; ಅವುಗಳಿಂದ ನೋಡುವುದಕ್ಕಾಗಲಿ, ಕೇಳುವುದಕ್ಕಾಗಲಿ, ತಿನ್ನಲಿಕ್ಕಾಗಲಿ, ಮೂಸುವುದಕ್ಕಾಗಲಿ ಆಗದು.


ಇಷ್ಟು ಹಣವನ್ನು ವೆಚ್ಚ ಮಾಡಲಾಗದ ಬಡವನು ಹುಡುಕುವನು ಹುಳಿತುಹೋಗದ ಮರವನು ಬಾಗಿ ಬೀಳದ ವಿಗ್ರಹವನ್ನು ಮಾಡಬಲ್ಲಾ ಕುಶಲನನು.


ಕೆತ್ತನೆಯ ವಿಗ್ರಹದಿಂದ ಪ್ರಯೋಜನ ಏನು? ಅದು ಕೇವಲ ಮಾನವನ ಕೃತಿ, ಸುಳ್ಳು ಕಣಿಗಾಗಿ ಇಟ್ಟುಕೊಂಡ ಎರಕದ ಗೊಂಬೆ. ಅದನ್ನು ನಿರ್ಮಿಸಿದಾತನಿಗೆ ಅದು ಯಾವ ಅಭಯವನ್ನು ತಾನೇ ತಂದೀತು? ಅದು ಬಾಯ್ದೆರೆಯಲಾಗದ ಮೂಕ ಬೊಂಬೆಯಷ್ಟೆ.


ಅನಂತರ ಸರ್ವೇಶ್ವರ ನನಗೆ ನಾಲ್ಕುಮಂದಿ ಸುತ್ತಿಗೆ ಹಿಡಿದವರನ್ನು ತೋರಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು