Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 44:14 - ಕನ್ನಡ ಸತ್ಯವೇದವು C.L. Bible (BSI)

14 ತನ್ನ ಕೆಲಸಕ್ಕಾಗಿ ದೇವದಾರುಗಳನ್ನು ಕಡಿಯುತ್ತಾನೆ, ತುರಾಯಿ ಅಲ್ಲೋನ್ ಮರಗಳನ್ನು ಆರಿಸಿಕೊಳ್ಳುತ್ತಾನೆ; ಅವುಗಳನ್ನು ವನವೃಕ್ಷಗಳ ನಡುವೆ ಬೆಳೆಸುತ್ತಾನೆ; ಪೀತದಾರ ಮರವನ್ನು ನೆಟ್ಟು, ಮಳೆ ಸುರಿದು ಬೆಳೆಯುವವರೆಗೂ ಕಾಯುತ್ತಾನೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಅವನು ತನ್ನ ಕೆಲಸಕ್ಕಾಗಿ ದೇವದಾರುಗಳನ್ನು ಕಡಿಯುವನು, ತುರಾಯಿ, ಅಲ್ಲೋನ್ ಮರಗಳನ್ನು ತೆಗೆದುಕೊಳ್ಳುವನು. ವನವೃಕ್ಷಗಳನ್ನು ತನಗೋಸ್ಕರ ಬೆಳೆಯುವನು. ಅವನು ಪೀತದಾರವನ್ನು ನೆಡಲು, ಮಳೆಯು ಅದನ್ನು ಬೆಳೆಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಅವನು ತನ್ನ ಕೆಲಸಕ್ಕಾಗಿ ದೇವದಾರುಗಳನ್ನು ಕಡಿಯುವನು, ತುರಾಯಿ ಅಲ್ಲೋನ್ ಮರಗಳನ್ನು ತೆಗೆದುಕೊಳ್ಳುವನು, ವನವೃಕ್ಷಗಳಲ್ಲಿ ಒಂದನ್ನು ತನಗೋಸ್ಕರ ಸಲಹುವನು; ಅವನು ಪೀತದಾರವನ್ನು ನೆಡಲು ಮಳೆಯು ಅದನ್ನು ಬೆಳೆಯಿಸುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಅವನು ತನ್ನ ಕೆಲಸಕ್ಕಾಗಿ ದೇವದಾರು ಮರಗಳನ್ನು, ತುರಾಯಿ ಮರಗಳನ್ನು, ಓಕ್ ಮರಗಳನ್ನು ಕಡಿಯುತ್ತಾನೆ. (ಅವನು ಆ ಮರಗಳನ್ನು ಬೆಳೆಯಿಸಲಿಲ್ಲ. ಅವು ತಾವಾಗಿಯೇ ಅಡವಿಯಲ್ಲಿ ಬೆಳೆದವು. ಅವನು ಮರದ ಸಸಿಯನ್ನು ನೆಟ್ಟರೆ ಮಳೆಯು ಆ ಸಸಿಯನ್ನು ಮರವನ್ನಾಗಿ ಬೆಳೆಯಿಸುವುದು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಅರಣ್ಯದ ಮಧ್ಯದಲ್ಲಿ ಇರುವ ಮರಗಳಲ್ಲಿ ದೇವದಾರುಗಳನ್ನು ಕಡಿದು, ತುರಾಯಿ, ಸೈಪ್ರಸ್ ಮತ್ತು ಏಲಾ ಮರಗಳನ್ನು ತನ್ನ ಕೆಲಸಕ್ಕೋಸ್ಕರ ತೆಗೆದುಕೊಳ್ಳುತ್ತಾನೆ. ಪೀತದಾರ ಮರವನ್ನು ಅವನು ನೆಡಲು, ಮಳೆಯು ಅದನ್ನು ಬೆಳೆಯಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 44:14
6 ತಿಳಿವುಗಳ ಹೋಲಿಕೆ  

ಇಷ್ಟು ಹಣವನ್ನು ವೆಚ್ಚ ಮಾಡಲಾಗದ ಬಡವನು ಹುಡುಕುವನು ಹುಳಿತುಹೋಗದ ಮರವನು ಬಾಗಿ ಬೀಳದ ವಿಗ್ರಹವನ್ನು ಮಾಡಬಲ್ಲಾ ಕುಶಲನನು.


ಮರದ ತುಂಡಿಗೆ, ‘ಎಚ್ಚೆತ್ತುಕೊ’; ಜಡಕಲ್ಲಿಗೆ, ‘ಎದ್ದೇಳು’ ಎಂದು ಆಜ್ಞಾಪಿಸುವವನು ನಿಜಕ್ಕೂ ಬುದ್ಧಿಹೀನನು. ಬೊಂಬೆಯು ಬೋಧಿಸಬಲ್ಲದೇ? ಬೆಳ್ಳಿಬಂಗಾರವನ್ನು ಅದಕ್ಕೆ ಹೊದಿಸಿರುವುದೇನೋ ನಿಜ. ಆದರೆ ಅದಕ್ಕೆ ಉಸಿರೋ ಇಲ್ಲವೇ ಇಲ್ಲ.


ನನ್ನ ಜನರು ಮರದ ತುಂಡನ್ನು ಹಿಡಿದು ಕಣಿ ಕೇಳುತ್ತಾರೆ; ಕೈಯಲ್ಲಿ ಹಿಡಿದ ದೊಣ್ಣೆಯಿಂದ ವಿವೇಕವಾಣಿಯನ್ನು ಪಡೆಯಲೆತ್ನಿಸುತ್ತಾರೆ. ವ್ಯಭಿಚಾರಗುಣ ಅವರನ್ನು ತಪ್ಪುದಾರಿಗೆ ಎಳೆದಿದೆ. ದೇವರ ಸದ್ಭಕ್ತಿಯನ್ನು ತೊರೆದು ಅವರು ಧರ್ಮಭ್ರಷ್ಠರಾಗಿದ್ದಾರೆ.


ಬಡಗಿಯು ಮರಕ್ಕೆ ನೂಲು ಹಿಡಿದು, ಮೊಳೆಯಿಂದ ಗೆರೆ ಎಳೆಯುತ್ತಾನೆ; ಕೈವಾರದಿಂದ ಗುರುತಿಸುತ್ತಾನೆ, ಉಳಿ ಬಾಚಿಗಳಿಂದ ಕೆತ್ತುತ್ತಾನೆ; ಸುಂದರವಾದ ನರನಂತೆ ರೂಪಿಸಿ ಮಂದಿರದಲ್ಲಿ ಇಡಲು ಯೋಗ್ಯವಾಗುವಂತೆ ಮಾಡುತ್ತಾನೆ.


ಅದರ ಒಂದು ಭಾಗ ಒಲೆಗಾಗುತ್ತದೆ, ಚಳಿ ಕಾಯಿಸಿಕೊಳ್ಳುವುದಕ್ಕೆ ಆಗುತ್ತದೆ, ರೊಟ್ಟಿ ಸುಡುವುದಕ್ಕಾಗುತ್ತದೆ. ಇನ್ನೊಂದು ಭಾಗದಿಂದ ದೇವತೆಯನ್ನು ಮಾಡಿ ಮನುಷ್ಯ ಪೂಜಿಸುತ್ತಾನೆ; ವಿಗ್ರಹ ಕೆತ್ತಿ ಅದಕ್ಕೆ ಅಡ್ಡಬೀಳುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು