Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 44:18 - ಕನ್ನಡ ಸತ್ಯವೇದವು C.L. Bible (BSI)

18 ಇಂಥವರು ಮಂದಮತಿಗಳು, ಏನೂ ಗ್ರಹಿಸಲಾರದವರು; ಅವರ ಕಣ್ಣು ಕಾಣದಂತೆಯೂ ಹೃದಯ ಗ್ರಹಿಸದಂತೆಯೂ ಅವರಿಗೆ ಅಂಟು ಬಳಿಯಲಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಇಂಥವರು ಏನೂ ತಿಳಿಯದವರು, ಏನೂ ಗ್ರಹಿಸಲಾರದವರು ಏಕೆಂದರೆ ಅವರ ಕಣ್ಣು ಕಾಣದಂತೆಯೂ, ಹೃದಯ ಗ್ರಹಿಸದಂತೆಯೂ ಯೆಹೋವನು ಮುಚ್ಚಿಬಿಟ್ಟಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಇಂಥವರು ಏನೂ ತಿಳಿಯದವರು, ಏನೂ ಗ್ರಹಿಸಲಾರದವರು; ಅವರ ಕಣ್ಣು ಕಾಣದಂತೆಯೂ ಹೃದಯ ಗ್ರಹಿಸದಂತೆಯೂ ಯೆಹೋವನು ಅಂಟು ಬಳಿದಿದ್ದಾನಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಅವರಿಗೆ ತಾವು ಮಾಡುವುದು ಗೊತ್ತಿಲ್ಲ. ಅವರು ಅರ್ಥಮಾಡಿಕೊಳ್ಳುವುದಿಲ್ಲ. ಅವರು ಕಾಣಲಾರದಂತೆ ಅವರ ಕಣ್ಣುಗಳು ಮುಚ್ಚಲ್ಪಟ್ಟಿವೆಯೋ ಎಂಬಂತಿವೆ. ಅವರ ಹೃದಯಗಳು ಅರ್ಥಮಾಡಿಕೊಳ್ಳಲು ಪ್ರಯತ್ನಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಅವರು ಏನೂ ತಿಳಿಯದವರು ಇಲ್ಲವೆ ಏನೂ ಗ್ರಹಿಸಲಾರದವರು. ಏಕೆಂದರೆ ಆತನು ಅವರ ಕಣ್ಣು ಕಾಣದಂತೆಯೂ, ಹೃದಯಗಳು ಗ್ರಹಿಸದಂತೆಯೂ ಮುಚ್ಚಿಬಿಟ್ಟಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 44:18
34 ತಿಳಿವುಗಳ ಹೋಲಿಕೆ  

ಕಣ್ಣಿದ್ದರೂ ಕಾಣದ, ಕಿವಿಯಿದ್ದರೂ ಕೇಳದ, ಬುದ್ಧಿಯಿಲ್ಲದ ಜನರೇ, ಸರ್ವೇಶ್ವರನ ಈ ಮಾತನ್ನು ಕೇಳಿರಿ;


“ಎಂತಲೇ ಕೈಬಿಟ್ಟೆ ಅವರನು ಹಟಮಾರಿಗಳೆಂದು I ತಮಗಿಷ್ಟಬಂದಂತೆಯೆ ನಡೆದುಕೊಳ್ಳಲಿಯೆಂದು, II


ಕಾರಣ, ದೇವರಿಂದ ಸಿಗುವಂಥ ಗೌರವವನ್ನು ಅರಸದೆ ನಿಮ್ಮ ನಿಮ್ಮಲ್ಲೇ ಪರಸ್ಪರ ಗೌರವವನ್ನು ಬಯಸುತ್ತೀರಿ. ಹೀಗಿರುವಲ್ಲಿ ನಿಮ್ಮಲ್ಲಿ ವಿಶ್ವಾಸಮೂಡಲು ಹೇಗೆ ತಾನೆ ಸಾಧ್ಯ? ಪಿತನ ಮುಂದೆ ನಾನು ನಿಮ್ಮನ್ನು ಆಪಾದಿಸುತ್ತಿರುವೆನೆಂದು ಎಣಿಸಬೇಡಿ.


ನಾನು ಹೇಳುವುದು ನಿಮಗೆ ಅರ್ಥವಾಗುವುದಿಲ್ಲ, ಏಕೆ? ನನ್ನ ಸಂದೇಶಕ್ಕೆ ಕಿವಿಗೊಡಲು ನಿಮ್ಮಿಂದಾಗದಿರುವುದೇ ಇದಕ್ಕೆ ಕಾರಣ.


ಸರ್ವೇಶ್ವರ ನಿಮ್ಮ ಮೇಲೆ ಗಾಢನಿದ್ರೆಯನ್ನು ಬರಮಾಡಿ ಪ್ರವಾದಿಗಳೆಂಬ ಕಣ್ಣುಗಳನ್ನು ಕಟ್ಟಿಬಿಟ್ಟಿದ್ದಾರೆ. ದಿವ್ಯದರ್ಶನಗಳೆಂಬ ಕಲೆಗಳಿಗೆ ಮುಸುಕು ಹಾಕಿಬಿಟ್ಟಿದ್ದಾರೆ.


ಅವರು ತಮಗಿದ್ದ ದೇವರ ಜ್ಞಾನವನ್ನು ತಿರಸ್ಕರಿಸಿದ್ದರಿಂದ, ದೇವರು ಅವರನ್ನು ಅಶ್ಲೀಲ ನಡವಳಿಕೆಗೆ ಬಿಟ್ಟುಬಿಟ್ಟರು.


ಅನೇಕರು ತಮ್ಮನ್ನು ಶುದ್ಧೀಕರಿಸಿ, ಶುಭ್ರಮಾಡಿಕೊಂಡು ಶೋಧಿತರಾಗುವರು. ದುಷ್ಟರು ದುಷ್ಟರಾಗಿಯೇ ನಡೆಯುವರು. ಅವರಲ್ಲಿ ಯಾರಿಗೂ ವಿವೇಕವಿರದು. ಬುದ್ಧಿವಂತರಿಗೆ ವಿವೇಕವಿರುವುದು.


ಕೆಟ್ಟವರು ನ್ಯಾಯ ನೀತಿಯನ್ನು ಗ್ರಹಿಸರು; ಸರ್ವೇಶ್ವರನ ಭಕ್ತರು ಅದನ್ನು ಪೂರ್ತಿಯಾಗಿ ಗ್ರಹಿಸುವರು.


ಎತ್ತು ಯಜಮಾನನನ್ನು, ಕತ್ತೆ ಒಡೆಯನ ಕೊಟ್ಟಿಗೆಯನ್ನು ಬಲ್ಲವು. ಆದರೆ ನನ್ನ ಪ್ರಜೆಗಳಾದ ಇಸ್ರಯೇಲರಿಗೆ ಅಷ್ಟೂ ತಿಳಿದಿಲ್ಲ. ಅವರಿಗೆ ಏನೂ ತಿಳಿಯುವುದಿಲ್ಲ.


ಇದರ ಮುಂದೆ ತಿಳುವಳಿಕೆಯಿಲ್ಲದ ಪಶುಪ್ರಾಯರು ಜನರೆಲ್ಲರು. ತಾನು ಕೆತ್ತಿದ ವಿಗ್ರಹಕ್ಕಾಗಿ ಹೇಸುವನು ಪ್ರತಿಯೊಬ್ಬ ಅಕ್ಕಸಾಲಿಗನು. ಅವನು ಎರಕ ಹೊಯ್ದ ವಿಗ್ರಹಗಳು ಟೊಳ್ಳು, ಶ್ವಾಸವಿಲ್ಲದವುಗಳು.


ಅಂಥವನು ಮುಕ್ಕುವುದು ಬೂದಿಯನ್ನೇ; ಅವನ ಹೃದಯ ಮೋಸಗೊಂಡು ಅವನನ್ನು ತಪ್ಪುದಾರಿಗೆ ಎಳೆದಿದೆ. ಎಂದೇ, ಅವನು ಅಂಗೈ ಹುಣ್ಣಿನಂತಿರುವ ಆ ಸುಳ್ಳನ್ನೂ ಅರಿಯದೆ ಇದ್ದಾನೆ; ತನ್ನನ್ನೇ ರಕ್ಷಿಸಿಕೊಳ್ಳಲು ಆಗದೆ ಇದ್ದಾನೆ.


ಹಿಂದಿನ ಕಾಲದಲ್ಲಿ ಸಮಸ್ತ ಜನಾಂಗಗಳು ತಮಗೆ ಇಷ್ಟಬಂದಂತೆ ನಡೆಯಲೆಂದು ದೇವರು ಬಿಟ್ಟುಬಿಟ್ಟರು.


“ಅಳಿದುಳಿದ ಅನ್ಯಜನರೇ, ನೆರೆದು ಬನ್ನಿ, ಒಟ್ಟಿಗೆ ನನ್ನ ಬಳಿಗೆ ಬನ್ನಿ. ತಮ್ಮ ಮರದ ಬೊಂಬೆಯನು ಹೊತ್ತು ತಿರುಗುವವರು ರಕ್ಷಿಸಲಾಗದ ದೇವತೆಗೆ ಮೊರೆಯಿಡುವ ಬುದ್ಧಿಹೀನರು.


ಎಲೈ ವಿಷಸರ್ಪಗಳ ಪೀಳಿಗೆಯೇ, ಕೆಟ್ಟವರಾಗಿರುವ ನಿಮ್ಮ ಬಾಯಿಂದ ಒಳ್ಳೆಯ ಮಾತು ಬರಲು ಸಾಧ್ಯವೇ? ಹೃದಯದಲ್ಲಿ ತುಂಬಿತುಳುಕುವುದನ್ನೇ ನಾಲಿಗೆ ನುಡಿಯುತ್ತದೆ.


ಬುದ್ಧಿವಂತನು ಈ ಮಾತುಗಳನ್ನು ಗ್ರಹಿಸಿಕೊಳ್ಳಲಿ. ವಿವೇಕಿಯು ಈ ನುಡಿಗಳನ್ನು ಅರ್ಥಮಾಡಿಕೊಳ್ಳಲಿ. ಸರ್ವೇಶ್ವರಸ್ವಾಮಿಯ ಮಾರ್ಗಗಳು ನೇರವಾದವುಗಳು. ಸನ್ಮಾರ್ಗಿಗಳು ಅವುಗಳನ್ನು ಕೈಗೊಂಡು ನಡೆಯುವರು. ದುರ್ಮಾರ್ಗಿಗಳು ಅವುಗಳನ್ನು ಕೈಬಿಟ್ಟು ಮುಗ್ಗರಿಸಿ ಬೀಳುವರು.


ಕೇವಲ ಪಶುಪ್ರಾಯರು, ಮಂದಮತಿಗಳು, ಅವರೆಲ್ಲರು ಬೊಂಬೆ ಪೂಜೆಯಿಂದ ಬರುವ ಜ್ಞಾನ ಮರದಂತೆ ಮೊದ್ದು.


ಹೊಟ್ಟೆಬಾಕ ಕುನ್ನಿಗಳು; ಎಂದಿಗೂ ತೃಪ್ತಿ ಪಡೆಯದ ಶುನಕಗಳು. ಇಂಥವರು ಕುರಿಗಳನ್ನು ಕಾಯಲು ಯೋಗ್ಯರೋ? ಇವರು ಬುದ್ಧಿಹೀನರು. ಇವರಲ್ಲಿ ಪ್ರತಿಯೊಬ್ಬನು ಕೊಳ್ಳೆಹೊಡೆಯಬೇಕೆಂದು ತನ್ನದೇ ಆದ ಮಾರ್ಗವನ್ನು ಹಿಡಿದಿದ್ದಾನೆ.


ಇದನರಿಯನು ಪಶುಪ್ರಾಯನು I ಇದ ತಿಳಿಯನು ಬುದ್ಧಿಹೀನನು II


ವಿಗ್ರಹಗಳನ್ನು ಕೆತ್ತುವವರೆಲ್ಲರು ನಿರರ್ಥಕರು; ಅವರ ಇಷ್ಟಬೊಂಬೆಗಳು ಏತಕ್ಕೂ ಬಾರವು; ಅವುಗಳಲ್ಲಿ ವಿಶ್ವಾಸವಿಡುವವರು ಕುರುಡರು, ತಿಳುವಳಿಕೆ ಇಲ್ಲದವರು. ಅಂಥವರು ನಾಚಿಕೆಗೆ ಗುರಿಯಾಗುವರು.


ಇವರದು ಬರೀ ಕಾಮುಕ ಕಣ್ಣು; ಇವರು ಎಂದಿಗೂ ಇಂಗದ ಪಾಪಬಯಕೆಯುಳ್ಳವರು; ದುರ್ಬಲರನ್ನು ವಂಚಿಸಿ ವಶಪಡಿಸಿಕೊಳ್ಳುವುದೇ ಇವರ ಹವ್ಯಾಸ; ಲೋಭದಲ್ಲೇ ಪಳಗಿದ ಮನಸ್ಸುಳ್ಳವರು ಹಾಗೂ ಶಾಪಗ್ರಸ್ತ ಸಂತಾನದವರು ಇವರು!


ಅವರ ಮೇಲೆ ನೀ ಕೈಯೆತ್ತಿದರೂ, ಸರ್ವೇಶ್ವರಾ, ಲಕ್ಷಿಸರವರು ನಿನ್ನನ್ನು. ನಾಚಲಿ ಅವರು ನೋಡಿ ನಿನ್ನ ಸ್ವಜನಾಭಿಮಾನವನು ದಹಿಸಿಬಿಡಲಿ ಅಗ್ನಿಜ್ವಾಲೆಯು ಆ ನಿನ್ನ ವಿರೋಧಿಗಳನು.


“ಒಂದು ಭಾಗವನ್ನು ಬೆಂಕಿಯಲ್ಲಿ ಉರಿಸಿದ್ದೇನೆ. ಹೌದು, ಅದರ ಕೆಂಡದಲ್ಲಿ ರೊಟ್ಟಿಮಾಡಿ, ಮಾಂಸ ಸುಟ್ಟು ತಿಂದಿದ್ದೇನೆ; ಮಿಕ್ಕಿದ್ದರಿಂದ ವಿಗ್ರಹಮಾಡುವುದು ಸರಿಯೇ? ಆ ಮರದ ತುಂಡಿಗೆ ಅಡ್ಡಬೀಳುವುದು ಅಸಹ್ಯವಲ್ಲವೆ?” ಎಂದುಕೊಳ್ಳುವಷ್ಟು ವಿವೇಕ ಯಾರಿಗೂ ಇಲ್ಲ; ಯಾರೂ ಇದನ್ನು ಮನಸ್ಸಿನಲ್ಲಿ ಅರ್ಥೈಸಿಕೊಳ್ಳುವುದಿಲ್ಲ.


ಇದರ ಮುಂದೆ ಜನರು ತಿಳುವಳಿಕೆಯಿಲ್ಲದ ಪಶುಪ್ರಾಯರು ತಾನು ಕೆತ್ತಿದ ವಿಗ್ರಹಕ್ಕಾಗಿ ಹೇಸುವನು ಪ್ರತಿಯೊಬ್ಬ ಅಕ್ಕಸಾಲಿಗನು. ಪೊಳ್ಳು, ಶ್ವಾಸವಿಲ್ಲದವುಗಳು, ಅವನು ಎರಕಹೊಯ್ದ ಪುತ್ತಳಿಗಳು.


ಮರಗಳ ರೆಂಬೆಕೊಂಬೆಗಳು ಒಣಗಿ ಮುರಿದುಹೋಗಿವೆ. ಹೆಂಗಸರ ಕೈಗೆ ಒಲೆಪಾಲಾಗುವ ಸೌದೆಯಾಗಿವೆ. ಈ ಪ್ರಜೆಗಳು ಮಂದಮತಿಗಳೇ ಸರಿ. ಈ ಕಾರಣ, ಸೃಷ್ಟಿಕರ್ತನು ಇವರನ್ನು ಕರುಣಿಸನು. ನಿರ್ಮಿಸಿದಾತನು ಇವರಿಗೆ ದಯೆ ತೋರಿಸನು.


“ನರಪುತ್ರನೇ, ನೀನು ದ್ರೋಹಿವಂಶದ ಮಧ್ಯೆ ವಾಸಿಸುತ್ತಿರುವೆ. ಆ ವಂಶದವರು ದ್ರೋಹಿಗಳಾಗಿರುವುದರಿಂದ ಕಣ್ಣಿದ್ದರೂ ಕಾಣರು, ಕಿವಿಯಿದ್ದರೂ ಕೇಳರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು