Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 44:25 - ಕನ್ನಡ ಸತ್ಯವೇದವು C.L. Bible (BSI)

25 ಸುಳ್ಳುಶಕುನ ಹೇಳುವವರನು ನಿರರ್ಥಕಗೊಳಿಸುವವನು ನಾನೆ ಕಣಿ ಹೇಳುವವರನು ಮರುಳುಗೊಳಿಸುವವನು ನಾನೆ ವಿವೇಕಿಗಳೊಡನೆ ವಾದಿಸಿ ಅವರ ವಿವೇಕವೇ ಅವಿವೇಕವೆಂದು ತೋರಿಸಿದವನು ನಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ನಾನು ಕೊಚ್ಚಿಕೊಳ್ಳುವವರ ಶಕುನಗಳನ್ನು ನಿರರ್ಥಕಪಡಿಸಿ, ಕಣಿಹೇಳುವವರನ್ನು ಮರುಳುಗೊಳಿಸಿ, ಜ್ಞಾನಿಗಳನ್ನು ಹಿಂದಕ್ಕೆ ತಳ್ಳಿ ಅವರ ತಿಳಿವಳಿಕೆಯನ್ನು ಹುಚ್ಚುತನವಾಗ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ನಾನು ಕೊಚ್ಚಿಕೊಳ್ಳುವವರ ಶಕುನಗಳನ್ನು ನಿರರ್ಥಕಪಡಿಸಿ ಕಣಿಹೇಳುವವರನ್ನು ಮರುಳುಗೊಳಿಸಿ ಜ್ಞಾನಿಗಳನ್ನು ಹಿಂದಕ್ಕೆ ತಳ್ಳಿ ಅವರ ತಿಳುವಳಿಕೆಯನ್ನು ಹುಚ್ಚುತನವಾಗಮಾಡಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಸುಳ್ಳುಪ್ರವಾದಿಗಳು ಸುಳ್ಳನ್ನೇ ಹೇಳುತ್ತಾರೆ. ಅವರು ಹೇಳಿದ್ದೆಲ್ಲವೂ ಸುಳ್ಳು ಎಂದು ಯೆಹೋವನು ತೋರಿಸಿಕೊಡುತ್ತಾನೆ. ಮಂತ್ರಗಾರರನ್ನು ದೇವರು ಮೂರ್ಖರನ್ನಾಗಿ ಮಾಡುತ್ತಾನೆ. ಆತನು ಜ್ಞಾನಿಗಳನ್ನು ಗಲಿಬಿಲಿಗೊಳಿಸುತ್ತಾನೆ. ಅವರು ತಮಗೆ ಎಲ್ಲವೂ ಗೊತ್ತಿದೆ ಎಂದು ತಿಳಿದುಕೊಳ್ಳುತ್ತಾರೆ. ಆದರೆ ದೇವರು ಅವರನ್ನು ಮೂಢರನ್ನಾಗಿ ಮಾಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಸುಳ್ಳುಗಾರರ ಗುರುತುಗಳನ್ನು ನಿರರ್ಥಕ ಮಾಡುವವನೂ ಮತ್ತು ಕಣಿ ಹೇಳುವವರನ್ನು ಹುಚ್ಚರನ್ನಾಗಿ ಮಾಡುವವನೂ ಜ್ಞಾನಿಗಳನ್ನು ಹಿಂದಕ್ಕೆ ತಳ್ಳಿ, ಅವರ ತಿಳುವಳಿಕೆಯನ್ನು ಬುದ್ಧಿಹೀನವಾಗ ಮಾಡುವವನೂ

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 44:25
30 ತಿಳಿವುಗಳ ಹೋಲಿಕೆ  

ವ್ಯರ್ಥವಾಗಿಪನು ಪ್ರಭು ರಾಷ್ಟ್ರಯೋಜನೆಗಳನು I ನಿರರ್ಥಕವಾಗಿಪನು ಜನರ ದುಷ್ಟಸಂಕಲ್ಪಗಳನು II


ಅದು ಇರಿಯಲಿ ಕೊಚ್ಚಿಕೊಳ್ಳುವವರನ್ನು ಬಯಲಿಗೆಳೆಯಲಿ ಅವರ ಬುದ್ಧಿಹೀನತೆಯನ್ನು ಸಂಹರಿಸಲಿ ಆ ಬಾಬಿಲೋನಿನ ಶೂರರನ್ನು ಬೆಬ್ಬರಬೀಳುವಂತಾಗಿಸಲಿ ಅವರೆಲ್ಲರನ್ನು.


ಅಬ್ಷಾಲೋಮನ ಸಂಗಡ ಒಳಸಂಚು ಮಾಡಿದವರಲ್ಲಿ ಅಹೀತೋಫೆಲನೂ ಇದ್ದಾನೆಂಬ ವರ್ತಮಾನ ದಾವೀದನಿಗೆ ಮುಟ್ಟಿತು. ಅವನು, “ಸರ್ವೇಶ್ವರಾ, ಅಹೀತೋಫೆಲನ ಆಲೋಚನೆಗಳನ್ನು ನಿರರ್ಥಕಪಡಿಸು,” ಎಂದು ಪ್ರಾರ್ಥಿಸಿದನು.


ಬಾಬಿಲೋನಿನ ರಾಜ್ಯಪಾಲರು, ಮಂತ್ರಿಗಳು, ಅಧಿಪತಿಗಳು, ಅಧಿಕಾರಿಗಳು, ಯೋಧರು, ಇವರೆಲ್ಲರಿಗೆ ತಲೆಗೇರುವ ತನಕ ಕುಡಿಸುವೆನು. ಅವರು ಎಂದೆಂದಿಗೂ ಎಚ್ಚರಗೊಳ್ಳದೆ ಚಿರನಿದ್ರೆ ಮಾಡುವರು ಎನ್ನುತ್ತಾರೆ ಸೇನಾಧೀಶ್ವರ ಸರ್ವೇಶ್ವರನೆಂಬ ರಾಜಾಧಿರಾಜರು.”


ಇಂತಿರಲು ಇವರ ಮಧ್ಯೆ ಎಸಗುವೆನು ಅಧಿಕಾಶ್ಚರ್ಯವಾದ ಅದ್ಭುತಕಾರ್ಯಗಳನು, ಅಳಿವುದು ಇವರ ಜ್ಞಾನಿಗಳ ಜ್ಞಾನವು, ಅಡಗುವುದು ವಿವೇಕಿಗಳ ವಿವೇಕವು".


ಜೋಯಿಸರು, ಮಂತ್ರವಾದಿಗಳು, ಪಂಡಿತರು, ಶಾಕುನಿಕರು ಇವರೆಲ್ಲರು ನನ್ನ ಸಮ್ಮುಖಕ್ಕೆ ಬಂದರು. ನಾನು ಕನಸನ್ನು ತಿಳಿಸಿದೆ. ಆದರೆ ಅದರ ಅರ್ಥವನ್ನು ಅವರಿಂದ ತಿಳಿಸಲಾಗಲಿಲ್ಲ.


ಬಳಿಕ ರಾಜನು ಶಾಸ್ತ್ರೀಯ ವಿದ್ಯೆಯ ಎಲ್ಲ ವಿಷಯಗಳಲ್ಲಿ ಅವರನ್ನು ವಿಚಾರಮಾಡಿದಾಗ ಸಮಸ್ತರಾಜ್ಯದಲ್ಲಿನ ಎಲ್ಲ ಜೋಯಿಸರಿಗಿಂತಲೂ ಮಂತ್ರವಾದಿಗಳಿಗಿಂತಲೂ ಹತ್ತರಷ್ಟು ನಿಪುಣರಾಗಿ ಕಂಡುಬಂದರು.


ಎದೋಮನ್ನು ಕುರಿತು ಸೇನಾಧೀಶ್ವರ ಸರ್ವೇಶ್ವರ ಹೀಗೆನ್ನುತ್ತಾರೆ: “ತೇಮಾನ್ ನಾಡಿಗಿದ್ದ ಬುದ್ಧಿ ಏನಾಯಿತು? ವಿವೇಕಿಗಳಿಗಿದ್ದ ಆಲೋಚನಾಶಕ್ತಿ ಅಳಿದುಹೋಯಿತೋ? ಅವರ ಜ್ಞಾನ ಮಾಯವಾಯಿತೋ?


ಆ ದಿವಸ ಯುದ್ಧ ಬಹುಘೋರವಾಗಿತ್ತು. ಆದ್ದರಿಂದ ಇಸ್ರಯೇಲರ ಅರಸನು ಸಾಯಂಕಾಲದವರೆಗೂ ಸಿರಿಯಾದವರ ಎದುರಿಗೆ ತನ್ನ ರಥದಲ್ಲೇ ಆತುಕೊಂಡಿರಬೇಕಾಯಿತು.ಸೂರ್ಯಾಸ್ತಮಾನವಾದಾಗ ಅವನು ಸತ್ತನು.


ಉಳಿದ ಪ್ರವಾದಿಗಳೂ ಇದೇ ತರದ ಮಾತುಗಳನ್ನು ನುಡಿದು, “ರಾಮೋತ್‍ಗಿಲ್ಯಾದಿಗೆ ಹೋಗಿ, ನೀವು ಕೃತಾರ್ಥರಾಗಿ ಬರುವಿರಿ; ಸರ್ವೇಶ್ವರ ಅದನ್ನು ಅರಸರ ಕೈಗೆ ಒಪ್ಪಿಸುವರು,” ಎಂದರು.


ಅಹೀತೋಫೆಲನು ತನ್ನ ಆಲೋಚನೆ ನಡೆಯಲಿಲ್ಲವೆಂದು ತಿಳಿದು, ಕತ್ತೆಗೆ ತಡಿಹಾಕಿಸಿ ಕುಳಿತುಕೊಂಡು ತನ್ನ ಊರಿಗೆ ಹೋಗಿದ್ದನು. ಮನೆಯ ವ್ಯವಸ್ಥೆಮಾಡಿ ಅನಂತರ ಉರ್ಲು ಹಾಕಿಕೊಂಡು ಸತ್ತನು. ಅವನ ಶವವನ್ನು ಅವನ ತಂದೆಯ ಸ್ಮಶಾನಭೂಮಿಯಲ್ಲಿ ಸಮಾಧಿ ಮಾಡಿದರು.


ಆ ದಿನಗಳಲ್ಲಿ ಅಹೀತೋಫೆಲನ ಆಲೋಚನೆಗಳಿಗೆ ದೈವೋತ್ತರಗಳಿಗಿರುವಷ್ಟೇ ಬೆಲೆಯಿತ್ತು. ದಾವೀದನೂ ಅಬ್ಷಾಲೋಮನೂ ಅವನ ಸಲಹೆಗಳನ್ನು ಮಾನ್ಯಮಾಡುತ್ತಿದ್ದರು.


ಆ ಹುಣ್ಣುಗಳು ಮಂತ್ರವಾದಿಗಳಲ್ಲೂ ಈಜಿಪ್ಟಿನವರೆಲ್ಲರಲ್ಲೂ ಇದ್ದುದರಿಂದ ಆ ಮಂತ್ರವಾದಿಗಳು ಹುಣ್ಣುಗಳ ನಿಮಿತ್ತ ಮೋಶೆಯ ಮುಂದೆ ನಿಲ್ಲಲಾರದೆ ಹೋದರು.


ಅರಸನ ಶವವನ್ನು ಸಮಾರಿಯಕ್ಕೆ ತಂದು ಅಲ್ಲಿ ಸಮಾಧಿಮಾಡಿದರು.


ಇಗೋ, ದಂಡನೆಯ ದಿನಗಳು ಸಮೀಪಿಸಿವೆ; ಮುಯ್ಯಿ ತೀರಿಸುವ ದಿನಗಳು ಬಂದಿವೆ. ಇಸ್ರಯೇಲರಿಗೆ ಇದು ತಿಳಿದಿರಲಿ. “ಪ್ರವಾದಿಯು ಹುಚ್ಚನು; ದೇವರಾತ್ಮಪ್ರೇರಿತನು ಮೂರ್ಖನು,” ಎಂದು ಹೇಳಿಕೊಳ್ಳುತ್ತೀರಿ. ಅತ್ಯಧಿಕವಾಗಿರುವ ನಿಮ್ಮ ಅಧರ್ಮ, ಮಿತಿಮೀರಿರುವ ನಿಮ್ಮ ದ್ವೇಷ ಇದಕ್ಕೆ ಕಾರಣ.


ಹೀಗಾಗಿ ದಿವ್ಯದರ್ಶಿಗಳಿಗೆ ಅವಮಾನವಾಗುವುದು. ಕಣಿ ಹೇಳುವವರಿಗೆ ನಾಚಿಕೆಯಾಗುವುದು. ಅವರೆಲ್ಲರೂ ಬಟ್ಟೆಯಿಂದ ಬಾಯಿ ಮುಚ್ಚಿಕೊಳ್ಳಬೇಕಾಗುವುದು. ಕಾರಣ, ಅವರಿಗೆ ದೇವರಿಂದ ಯಾವ ಪ್ರತ್ಯುತ್ತರವೂ ಬರದು.


ಯಕೋಬ್ಯರಿಗೆ ವಿರುದ್ಧವಾದ ಶಕುನವಿಲ್ಲ ಇಸ್ರಯೇಲರಿಗೆ ವಿರುದ್ಧವಾದ ತಂತ್ರಮಂತ್ರವಿಲ್ಲ. ತಾನು ಮಾಡುವುದನ್ನು ತತ್ಕಾಲದಲ್ಲೇ ದೇವ ತಿಳಿಸುತ್ತಾನೆ ಯಕೋಬ್ಯರಿಗೆ ಅದನ್ನು ಸೂಚಿಸುತ್ತಾನೆ ಸಮಯೋಚಿತವಾಗಿ ಆ ಇಸ್ರಯೇಲರಿಗೆ.


ಈಜಿಪ್ಟಿನವರ ಚೈತನ್ಯ ಉಡುಗಿಹೋಗುವುದು. ಅವರ ಯೋಜನೆಗಳು ಭಂಗವಾಗುವುವು. ಜನರು ವಿಗ್ರಹಗಳನ್ನು, ಮಂತ್ರಗಾರರನ್ನು, ಪ್ರೇತವಿಚಾರಕರನ್ನು, ಕಣಿಹೇಳುವವರನ್ನು ಆಶ್ರಯಿಸುವರು.”


ಗೃಹದೇವತೆಗಳು ನುಡಿಯುವುದು ಜೊಳ್ಳು; ಶಕುನ ಹೇಳುವವರ ಮಾತು ಸುಳ್ಳು. ಸ್ವಪ್ನಕಾರರ ಕನಸುಗಳು ಕಲ್ಪಿತ, ಅವರು ಹೇಳುವ ಸಮಾಧಾನ ವ್ಯರ್ಥ, ಈ ಕಾರಣ ಜನರು ಕುರಿಗಳಂತೆ ಚದರಿದ್ದಾರೆ; ಕುರುಬನಿಲ್ಲದೆ ಕಂಗೆಟ್ಟಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು