Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 45:2 - ಕನ್ನಡ ಸತ್ಯವೇದವು C.L. Bible (BSI)

2 ನಿನ್ನ ಮುಂದೆ ಸಾಗುವೆನು ನಾನು ಸಮಮಾಡುವೆನು ಬೆಟ್ಟಗುಡ್ಡಗಳನು ಒಡೆದುಹಾಕುವೆನು ಕಂಚಿನ ಕದಗಳನು ಮುರಿದುಬಿಡುವೆನು ಕಬ್ಬಿಣದ ಅಗುಳಿಗಳನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ನಾನು ನಿನ್ನ ಮುಂದೆ ಹೋಗಿ, ದಿಣ್ಣೆಗಳನ್ನು ಸಮಮಾಡುವೆನು. ತಾಮ್ರದ ಕದಗಳನ್ನು ಒಡೆದು, ಕಬ್ಬಿಣದ ಅಗುಳಿಗಳನ್ನು ಮುರಿದುಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನಾನು ನಿನ್ನ ಮುಂದೆ ಹೋಗಿ ದಿಣ್ಣೆಗಳನ್ನು ಸಮಮಾಡುವೆನು, ತಾಮ್ರದ ಕದಗಳನ್ನು ಒಡೆದು ಕಬ್ಬಿಣದ ಅಗುಳಿಗಳನ್ನು ಮುರಿದು ಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಸೈರಸನೇ, ನಿನ್ನ ಸೈನ್ಯವು ಮುನ್ನುಗ್ಗುವದು. ನಾನು ನಿನ್ನ ಮುಂದೆ ಹೋಗಿ ಪರ್ವತಗಳನ್ನು ನೆಲಸಮ ಮಾಡುವೆನು. ಹಿತ್ತಾಳೆಯ ನಗರ ದ್ವಾರಗಳನ್ನು ಪುಡಿಪುಡಿ ಮಾಡುವೆನು. ದ್ವಾರಗಳ ಕಬ್ಬಿಣದ ಅಗುಳಿಗಳನ್ನು ತುಂಡು ಮಾಡಿ ಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ನಾನು ನಿನ್ನ ಮುಂದೆ ಹೋಗಿ ಬೆಟ್ಟಗುಡ್ಡಗಳನ್ನು ಸಮಮಾಡಿ, ಕಂಚಿನ ಕದಗಳನ್ನು ಒಡೆದು, ಕಬ್ಬಿಣದ ಅಗುಳಿಗಳನ್ನು ಮುರಿದುಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 45:2
17 ತಿಳಿವುಗಳ ಹೋಲಿಕೆ  

ತುಂಬಬೇಕು ಎಲ್ಲ ಹಳ್ಳಕೊಳ್ಳಗಳನು ಮಟ್ಟಮಾಡಬೇಕು ಎಲ್ಲ ಬೆಟ್ಟಗುಡ್ಡಗಳನು. ನೆಲಸಮಮಾಡಬೇಕು ದಿಬ್ಬದಿಣ್ಣೆಗಳನು ಸಮತಲಗೊಳಿಸಬೇಕು ತಗ್ಗುಮುಗ್ಗಾದ ಸ್ಥಳಗಳನು.


ಹಳ್ಳಕೊಳ್ಳಗಳೆಲ್ಲ ಭರ್ತಿಯಾಗಬೇಕು; ಬೆಟ್ಟಗುಡ್ಡಗಳು ಮಟ್ಟವಾಗಬೇಕು; ಅಂಕುಡೊಂಕಾದವು ನೆಟ್ಟಗಾಗಬೇಕು; ತಗ್ಗುಮುಗ್ಗಾದ ಹಾದಿಗಳು ಹಸನಾಗಬೇಕು.


ಕುರುಡರನ್ನು ನೆಪ್ಪಿಲ್ಲದ ಮಾರ್ಗದಲ್ಲಿ ಬರಮಾಡುವೆನು ಗೊತ್ತಿಲ್ಲದ ದಾರಿಗಳಲ್ಲಿ ಅವರನ್ನು ನಡೆಸುವೆನು. ಅವರೆದುರಿನ ಕತ್ತಲನ್ನು ಬೆಳಕಾಗಿಸುವೆನು ಅವರ ಹಾದಿಯ ಡೊಂಕನು ನೇರಮಾಡುವೆನು. ಬಿಡದೆ ಮಾಡುವೆನು ಈ ಕಾರ್ಯಗಳನು.


ಚೂರುಚೂರುಗೈದನು ಕಂಚಿನ ಕದಗಳನು I ಮುರಿದುಹಾಕಿದನು ಕಬ್ಬಿಣದ ಅಗುಳಿಗಳನು II


ಬಾಬಿಲೋನಿಯದ ಶೂರರು ಯುದ್ಧಕ್ಕೆ ಹಿಂಜರಿದು ಹೆಂಗಸರಂತೆ, ಹೇಡಿಗಳಂತೆ ತಮ್ಮ ಕೋಟೆಗಳಲ್ಲೆ ನಿಂತಿದ್ದಾರೆ. ಅದರ ಹೆಬ್ಬಾಗಿಲುಗಳು ಮುರಿದುಬಿದ್ದಿವೆ. ಅದರ ಮನೆಗೆ ಬೆಂಕಿಯಿಕ್ಕಲಾಗಿದೆ.


ಸ್ವಲ್ಪ ದಿನಗಳ ನಂತರ ಸುಮಾರು ನೂರ ಇಪ್ಪತ್ತು ಮಂದಿ ಭಕ್ತವಿಶ್ವಾಸಿಗಳು ಸಭೆ ಸೇರಿದ್ದರು. ಆಗ ಪೇತ್ರನು ಎದ್ದುನಿಂತು ಹೀಗೆಂದನು:


ಪುರದ್ವಾರವೇ, ಗೋಳಾಡು; ಪಟ್ಟಣವೇ, ಬೊಬ್ಬೆಯಿಡು, ಫಿಲಿಷ್ಟಿಯವೇ, ಕರಗಿಹೋಗು, ಉತ್ತರದಿಂದ ಬರುತ್ತಿದೆ ಧೂಮಧೂಳಿ ಆ ದಂಡಿನಲ್ಲಿಲ್ಲ ನೋಡು, ಯಾವ ಹೇಡಿ.


ಪಾಳುಬಿದ್ದಿದೆ ನಗರ, ಮುರಿದು ಬಿದ್ದಿದೆ ಪುರದ್ವಾರ.


ಧರ್ಮಸಾಧನೆಗಾಗಿ ಕೋರೆಷನನ್ನು ಉದಯಗೊಳಿಸಿರುವೆನು ಅವನ ಮಾರ್ಗಗಳನ್ನು ನಾನೇ ಸರಾಗಮಾಡುವೆನು ನನ್ನ ನಗರವನು ಪುನರ್ ನಿರ್ಮಾಣಮಾಡುವನು ಅವನು ಸೆರೆಯಾದ ನನ್ನ ಜನರನು ಬಿಡುಗಡೆ ಮಾಡುವನು ಸಂಬಳವನ್ನಾಗಲಿ ಸಂಭಾವನೆಯನ್ನಾಗಲಿ ಸ್ವೀಕರಿಸನು. ಇದ ನುಡಿದಿರುವೆನು ಸೇನಾಧೀಶ್ವರ ಸರ್ವೇಶ್ವರನಾದ ನಾನು.”


ಆತನನ್ನು ಹೆಸರಿಸಿ ಕರೆದವನು ನಾನೇ ಆತನನ್ನು ಬರಮಾಡಿದವನೂ ನಾನೇ. ಆತನು ಗಳಿಸುವುದು ಜಯವನ್ನೇ.


“ ನೀನು ಹೋಗಿ ಹನನ್ಯನಿಗೆ: ‘ಸರ್ವೇಶ್ವರ ಇಂತೆನ್ನುತ್ತಾರೆ - ನೀನು ಮರದ ನೊಗಗಳನ್ನು ಮುರಿದುಬಿಟ್ಟಿರುವೆ. ಅವುಗಳಿಗೆ ಬದಲಾಗಿ ಕಬ್ಬಿಣದ ನೊಗಗಳನ್ನು ಮಾಡು.


ಸೇನಾಧೀಶ್ವರ ಸರ್ವೇಶ್ವರ ಹೀಗೆನ್ನುತ್ತಾರೆ: ಬಾಬಿಲೋನಿನ ದೊಡ್ಡ ಪೌಳಿಗೋಡೆ ಪೂರ್ಣವಾಗಿ ನೆಲಸಮವಾಗುವುದು. ಅದರ ಉನ್ನತ ದ್ವಾರಗಳು ಬೆಂಕಿಯಿಂದ ಸುಟ್ಟುಹೋಗುವುವು ರಾಷ್ಟ್ರಗಳು ದುಡಿದದ್ದು ಬೆಂಕಿಗೆ ತುತ್ತಾಗುವುದು.”


‘ಫರ್ಸಿನ್’ ಎಂದರೆ ನಿನ್ನ ರಾಜ್ಯವನ್ನು ವಿಭಾಗಮಾಡಿ ಮೇದ್ಯರಿಗೂ ಪರ್ಷಿಯದವರಿಗೂ ಕೊಡಲಾಗಿದೆ,” ಎಂದು ಅರಿಕೆಮಾಡಿದನು.


ನಿನ್ನ ಯೋಧರನ್ನು ನೋಡು; ಅವರೆಲ್ಲ ಹೆಣ್ಣಿಗರು. ನಿನ್ನ ದೇಶದ ದ್ವಾರಗಳು ಶತ್ರುಗಳಿಗೆ ತೆರೆದ ಬಾಗಿಲುಗಳು. ಅದರ ಕಬ್ಬಿಣದ ಅಗುಳಿಗಳು ಬೆಂಕಿಯಿಂದ ಭಸ್ಮವಾದವು.


ಬೋಳುಬೆಟ್ಟದ ಮೇಲೆ ಧ್ವಜವನ್ನು ಏರಿಸಿರಿ. ಪ್ರಭುಗಳ ನಗರದ್ವಾರಗಳನ್ನು ಮುತ್ತುವಂತೆ ಸೈನಿಕರಿಗೆ ಸನ್ನೆಮಾಡಿ ಕೂಗಿ ಹೇಳಿರಿ.


ನಾನು ನೋಡುತ್ತಿದ್ದ ಹಾಗೆ ಆ ಟಗರು ಪಶ್ಚಿಮಕ್ಕೂ ಉತ್ತರಕ್ಕೂ ದಕ್ಷಿಣಕ್ಕೂ ಹಾದಾಡುತ್ತಿತ್ತು. ಯಾವ ಪ್ರಾಣಿಯೂ ಅದರ ಎದುರಿಗೆ ನಿಲ್ಲಲಾರದೆಹೋಯಿತು. ಅದರ ಕೈಯಿಂದ ಬಿಡಿಸಲು ಯಾವ ಮೃಗಕ್ಕೂ ಶಕ್ತಿಯಿರಲಿಲ್ಲ. ಅದು ಇಷ್ಟಬಂದಂತೆ ನಡೆದು ತನ್ನ ಶಕ್ತಿಯನ್ನು ಹೆಚ್ಚಿಸಿಕೊಂಡಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು