Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 45:21 - ಕನ್ನಡ ಸತ್ಯವೇದವು C.L. Bible (BSI)

21 ಹೇಳಿ, ನ್ಯಾಯಸ್ಥಾನಕ್ಕೆ ಬಂದು ನಿಮ್ಮ ವಾದವನ್ನು ಮಂಡಿಸಿ; ನಿಮ್ಮ ದೇವರುಗಳು ತಮ್ಮತಮ್ಮೊಳಗೆ ಪರ್ಯಾಲೋಚಿಸಿ ನೋಡಲಿ. ಪ್ರಾರಂಭದಿಂದಲೂ ಈ ವಿಷಯವನ್ನು ಪ್ರಕಟಿಸಿದವರು ಯಾರು? ಅದು ನಡೆಯುವುದಕ್ಕೆ ಮುಂಚೆಯೇ ತಿಳಿಸಿದವನು ನಾನಲ್ಲದೆ ಇನ್ಯಾರು? ನನ್ನ ಹೊರತು ಇನ್ನು ಯಾವ ದೇವರೂ ಇಲ್ಲ; ನಾನಲ್ಲದೆ ಸತ್ಯಸ್ವರೂಪನು, ಉದ್ಧಾರಕನು ಆದ ದೇವನಿಲ್ಲವೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಹೇಳಿರಿ, ನಿಮ್ಮ ನ್ಯಾಯಗಳನ್ನು ಮುಂದಕ್ಕೆ ತನ್ನಿರಿ, ನಿಮ್ಮ ದೇವರುಗಳು ತಮ್ಮತಮ್ಮೊಳಗೆ ಆಲೋಚಿಸಿಕೊಳ್ಳಲಿ. ಪೂರ್ವದಿಂದಲೂ ಈ ಸಂಗತಿಯನ್ನು ಪ್ರಕಟಿಸಿದವರು ಯಾರು? ಅದು ನಡೆಯುವುದಕ್ಕೆ ಮೊದಲೇ ಯಾರು ತಿಳಿಸಿದರು? ಯೆಹೋವನಾದ ನಾನೇ ಅಲ್ಲವೇ? ನನ್ನ ಹೊರತು ಬೇರೆ ದೇವರು ಇಲ್ಲವೇ ಇಲ್ಲ, ನನ್ನ ಹೊರತಾಗಿ ಸತ್ಯಸ್ವರೂಪನೂ, ರಕ್ಷಕನಾದ ದೇವರು ಇಲ್ಲವೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಹೇಳಿರಿ, ನಿಮ್ಮ ನ್ಯಾಯಗಳನ್ನು ಮುಂದಕ್ಕೆ ತನ್ನಿರಿ, ನಿಮ್ಮ ದೇವರುಗಳು ತಮ್ಮತಮ್ಮೊಳಗೆ ಆಲೋಚಿಸಿಕೊಳ್ಳಲಿ. ಪೂರ್ವದಿಂದಲೂ ಈ ಸಂಗತಿಯನ್ನು ಪ್ರಕಟಿಸಿದವರು ಯಾರು? ಅದು ನಡೆಯುವದಕ್ಕೆ ಮುಂಚೆ ಯಾರು ತಿಳಿಸಿದರು? ಯೆಹೋವನೆಂಬ ನಾನಲ್ಲವೆ. ನಾನು ಹೊರತು ಇನ್ನು ಯಾವ ದೇವರೂ ಇಲ್ಲ, ನನ್ನ ವಿನಹ ಸತ್ಯಸ್ವರೂಪನೂ ರಕ್ಷಕನೂ ಆದ ದೇವರು ಇಲ್ಲವೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ನನ್ನ ಬಳಿಗೆ ಬರಲು ಅವರಿಗೆ ಹೇಳು. ತಾವು ವಿಗ್ರಹಗಳನ್ನು ಯಾಕೆ ನಂಬುತ್ತಾರೆಂದು ನನ್ನೊಂದಿಗೆ ವಾದಿಸಲಿ.) “ಬಹಳ ಕಾಲದ ಹಿಂದೆ ನಡೆದ ಸಂಗತಿಗಳ ಬಗ್ಗೆ ನಿಮಗೆ ತಿಳಿಸಿದವರು ಯಾರು? ಬಹಳ ಕಾಲದಿಂದ ಈ ವಿಷಯಗಳನ್ನು ನಿಮಗೆ ತಿಳಿಸುತ್ತಾ ಬಂದವರು ಯಾರು? ನಾನೇ. ಯೆಹೋವನಾದ ನಾನೇ ನಿಮಗೆಲ್ಲವನ್ನು ತಿಳಿಸಿದೆನು. ನಾನೊಬ್ಬನೇ ದೇವರು. ನನ್ನಂಥ ದೇವರು ಬೇರೆ ಇದ್ದಾರೆಯೇ? ಕರುಣೆಯುಳ್ಳ ದೇವರು ಬೇರೆಲ್ಲಾದರೂ ಇರುವನೇ? ತನ್ನ ಜನರನ್ನು ವಿಮೋಚಿಸುವಂಥ ಬೇರೆ ದೇವರು ಇರುವನೇ? ಇಲ್ಲ! ಬೇರೆ ದೇವರು ಇಲ್ಲ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ನೀವು ಏನು ಸಾರಬೇಕೋ ಅದನ್ನು ಈಗ ತನ್ನಿರಿ ಹೌದು, ಒಟ್ಟಿಗೆ ಅವರು ಆಲೋಚಿಸಲಿ ಈ ಸಂಗತಿಗಳನ್ನು ಪುರಾತನ ಕಾಲದಿಂದಲೂ ಪ್ರಕಟಿಸಿದವರು ಯಾರು? ಪ್ರಾರಂಭದಿಂದ ಇದನ್ನು ತಿಳಿಸಿದವರು ಯಾರು? ಯೆಹೋವನಾದ ನಾನೇ ಅಲ್ಲವೇ? ನನ್ನ ಹೊರತು ಬೇರೆ ದೇವರು ಇಲ್ಲ. ನನ್ನ ಹೊರತಾಗಿ ನೀತಿಯುಳ್ಳ ದೇವರೂ, ರಕ್ಷಕನೂ ಇಲ್ಲವೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 45:21
33 ತಿಳಿವುಗಳ ಹೋಲಿಕೆ  

ಸರ್ವೇಶ್ವರ ನಾನಲ್ಲದೆ ಬೇರಾರು ಅಲ್ಲ ನನ್ನ ಹೊರತು ಯಾವ ದೇವರು ಇಲ್ಲ. ನೀನು ನನ್ನನ್ನು ಅರಿಯದವನಾಗಿರುವೆ ಆದರೂ ನಿನ್ನನ್ನು ಶಸ್ತ್ರಧಾರಿಯಾಗಿಸುವೆ.


“ನಾನು, ನಾನೇ ಸರ್ವೇಶ್ವರ, ನನ್ನ ಹೊರತು ಇಲ್ಲ ಬೇರೆ ಉದ್ಧಾರಕ.


ಬರಲಿ, ಎಲ್ಲಾ ಜನಾಂಗಗಳು ಒಟ್ಟಿಗೆ ನೆರೆಯಲಿ, ಸಕಲ ದೇಶಿಯರು ಇಲ್ಲಿಯೇ. ಅವರ ದೇವರುಗಳಲ್ಲಿ ಭವಿಷ್ಯವನ್ನು ನುಡಿಯಬಲ್ಲವರು ಯಾರು? ಗತಿಸಿದ ಘಟನೆಗಳನ್ನು ಮುಂತಿಳಿಸಿದವರಾರು? ಕರೆತರಲಿ, ಆ ದೇವರುಗಳು ಸಾಕ್ಷಿಗಳನು ಸ್ಥಾಪಿಸಿಕೊಳ್ಳಲಿ, ತಾವು ಸತ್ಯವಂತರೆಂಬುದನು; ರುಜುಪಡಿಸಲಿ ಕೇಳುವವರಿಗೆ ತಮ್ಮ ಮಾತು ನಿಜವೆಂಬುದನು.


ಪ್ರಸನ್ನವಾಗಿಹನು ದೇವ, ಸರ್ವೇಶ ನಿನ್ನ ಮಧ್ಯೆ ಕೊಡುವನಾ ಶೂರ ನಿನಗೆ ರಕ್ಷಣೆ ಹರ್ಷಾನಂದಗೊಳ್ಳುವನು ನಿನ್ನ ವಿಷಯದಲಿ ಪುನಶ್ಚೇತನಗೊಳಿಸುವನು ನಿನ್ನನು ಪ್ರಶಾಂತ ಪ್ರೀತಿಯಲಿ ಗಾನಗೀತೆಗಳಿಂದ ತೋಷಿಸುವನು ನಿನ್ನಲಿ ಹಬ್ಬಹುಣ್ಣಿಮೆಗಳ ತರದಲಿ.


ಒಟ್ಟುಗೂಡಿ ಕೇಳಿ ನೀವೆಲ್ಲರು ಇದನ್ನು : ಆ ದೇವರುಗಳಲ್ಲಿ ಮುಂತಿಳಿಸಿದವನಾರು ಈ ಸಂಗತಿಯನು? ನನ್ನ ಪ್ರೀತಿಗೆ ಪಾತ್ರನಾದ ವ್ಯಕ್ತಿ ಸೈರಸನು ಕಸ್ದೀಯರ ಮೇಲೆ ಕೈಯೆತ್ತುವನು, ಈಡೇರಿಸುವನು ಬಾಬೆಲಿನಲ್ಲಿ ನನ್ನ ಇಷ್ಟಾರ್ಥವನು.


ಪಡೆವರು ಇಸ್ರಯೇಲಿನ ವಂಶಜರೆಲ್ಲರು ಸರ್ವೇಶ್ವರನಲ್ಲೇ ಜೀವೋದ್ಧಾರವನು, ಆನಂದವನು.”


ಕೇಳಿ, ಆಕಾಶಮಂಡಲವನ್ನು ಸೃಷ್ಟಿಸಿದ ಸರ್ವೇಶ್ವರನ ಮಾತನ್ನು : ಭೂಲೋಕವನ್ನು ನಿರ್ಮಿಸಿ, ರೂಪಿಸಿ, ಸ್ಥಾಪಿಸಿದ ದೇವರು ಆತನು. ಅದನ್ನು ಶೂನ್ಯಸ್ಥಾನವಾಗಿ ಸೃಷ್ಟಿಸದೆ, ಜನನಿವಾಸಕ್ಕಾಗಿಯೇ ರೂಪಿಸಿದವನು ಆತನು. ಅಂಥವನು ಇಂತೆನ್ನುತ್ತಾನೆ : “ಸರ್ವೇಶ್ವರ ನಾನೇ; ನಾನಲ್ಲದೆ ಇನ್ನಾರೂ ಇಲ್ಲ.


ಕೇಳಿರಿ ಸರ್ವೇಶ್ವರನ ಈ ಮಾತನ್ನು : “ನಿಮ್ಮದಾಗುವುದು ಈಜಿಪ್ಟಿನ ಸಿರಿಯು, ಸುಡಾನಿನ ಸಂಪದವು. ನಿಮ್ಮನ್ನು ಸೇರಿ ನಿಮಗಧೀನರಾಗುವರು ಎತ್ತರದ ಸೆಬಾಯರು. ಬೇಡಿತೊಟ್ಟು ಅಡ್ಡಬೀಳುವರು ನಿಮ್ಮ ಮುಂದೆ ಅರಿಕೆಮಾಡಿಕೊಳ್ಳುವರು ಹೀಗೆಂದೆ : ‘ನಿಶ್ಚಯವಾಗಿ ನಿಮ್ಮಲ್ಲಿಹರು ದೇವರು ಅವರಲ್ಲದೆ ದೇವರಿಲ್ಲ ಬೇರೆಯಾರು.’


ನಿನ್ನ ದೇವರಾದ ಸರ್ವೇಶ್ವರ ನಾನು, ಇಸ್ರಯೇಲರ ಪರಮಪಾವನ ಸ್ವಾಮಿ, ನಿನ್ನ ರಕ್ಷಕ ನಾನು. ಈಡುಮಾಡಿದ್ದೇನೆ ಈಜಿಪ್ಟನ್ನು ನಿನ್ನ ವಿಮೋಚನೆಗಾಗಿ ಕೊಟ್ಟಿದ್ದೇನೆ ಸುಡಾನ್ ಸೆಬಾ ನಾಡುಗಳನ್ನು ನಿನಗೆ ಈಡಾಗಿ.


“ಎದೋಮಿನ ಬೊಚ್ರನಗರದಿಂದ ಬರುವ ಈತನು ಯಾರು? ರಕ್ತಗೆಂಪಾದ ಉಡುಪನ್ನುಟ್ಟು ಥಳಥಳಿಸುವ ವಸ್ತ್ರಗಳನ್ನು ಧರಿಸಿಕೊಂಡು, ಮಹಾಶೌರ್ಯದಿಂದ ಮೆರೆಯುತ್ತಾ ನಡೆದುಬರುವ ಈತನು ಯಾರು? “ಆತನು ನಾನೇ, ಸತ್ಯವನು ಘೋಷಿಸುವವನು, ಆತನು ನಾನೇ, ಉದ್ಧರಿಸಲು ಸಮರ್ಥನು".


“ಕೇಳು, ಎಲೈ ಯಕೋಬ ಮನೆತನವೇ, ನಿನಗೆ ತಿಳಿಸಿದೆ ಈವರೆಗೆ ನಡೆದ ಸಂಗತಿಗಳನು ಪೂರ್ವದಲೇ. ಹೌದು ಪ್ರಕಟಿಸಿದೆ ನಾನು, ಹೊರಡಿಸಿದೆ ನನ್ನ ಬಾಯಿಂದಲೇ ಕೈಗೂಡುವಂತೆ ಮಾಡಿದೆ ನಾನವುಗಳನು ಕೂಡಲೆ.


ಈ ಘಟನೆಯನ್ನು ಅರುಹಿದವನಾರು ಅದು ನೆರವೇರುವ ಮುಂದೆ? ಇದನ್ನು ಮುನ್ನ ತಿಳಿಸಿದವನಾರು ನಮಗೆ ಗೊತ್ತಾಗುವಂತೆ? ತಿಳಿಸಿದ್ದರೆ ಹೇಳುತ್ತಿದ್ದೆವು ಅವನು ಸತ್ಯವಂತನೆಂದೆ. ಆದರೆ ಇದನ್ನು ತಿಳಿಸಿದವನಿಲ್ಲ ಮುನ್ನ ತಿಳಿಸಬಲ್ಲವನಾರೂ ಇಲ್ಲ ನಿಮ್ಮಿಂದ ಮಾತೊಂದನ್ನು ಕೇಳಿದವನಾರೂ ಇಲ್ಲ.


ಪ್ರಭು ರಾಜನೆಂದು ಸಾರಿರಿ ರಾಷ್ಟ್ರಗಳಿಗೆ I ಕದಲದ ಸ್ಥಿರತೆಯನು ಇತ್ತಿಹನು ಧರೆಗೆ I ನ್ಯಾಯವಾದ ತೀರ್ಪು ಕೊಡುವನು ಜನಾಂಗಕೆ II


ದನಿಯೆತ್ತಿ ನಿನಗೆ ಧನ್ಯಗೀತೆ ಹಾಡುವೆನಯ್ಯಾ I ನಿನ್ನದ್ಭುತ ಕಾರ್ಯಗಳೆಲ್ಲವನು ಘೋಷಿಸುವೆನಯ್ಯಾ II


ಸಂತೋಷಿಸಿರಿ, ಆನಂದಿಸಿರಿ, ಸಿಯೋನಿನ ನಿವಾಸಿಗಳೇ, ಹರ್ಷೋದ್ಗಾರ ಮಾಡಿರಿ, ಜೆರುಸಲೇಮಿನ ಜನಗಳೇ, ಇಗೋ, ಬರುತಿಹನು ನಿಮ್ಮ ಅರಸನು ನ್ಯಾಯವಂತನು, ಜಯಶೀಲನು ಆತನು ವಿನಮ್ರನು, ಹೇಸರಗತ್ತೆಯನ್ನೇರಿ ಸಾಗಿಬರುತಿಹನು.


“ರಾಷ್ಟ್ರಗಳಲ್ಲಿ ಪ್ರಚುರಪಡಿಸಿರಿ, ಧ್ವಜವೆತ್ತಿ ಪ್ರಕಟಿಸಿರಿ, ಮುಚ್ಚುಮರೆಯಿಲ್ಲದೆ ಹೀಗೆಂದು ಸಾರಿರಿ: ‘ಬಾಬಿಲೋನ್ ಶತ್ರುವಶವಾಯಿತು. ಬೇಲ್ ದೇವತೆ ನಾಚಿಕೆಗೊಂಡಿದೆ. ಮೆರೋದಾಕ್ ದೇವತೆ ಬೆಚ್ಚಿಬಿದ್ದಿದೆ. ಅದರ ಮೂರ್ತಿಗಳು ಅವಮಾನಕ್ಕೆ ಗುರಿಯಾಗಿವೆ. ಅದರ ಬೊಂಬೆಗಳು ಚೂರುಚೂರಾಗಿವೆ.


ಆದರೆ ಅದರ ಮಧ್ಯೆಯಿರುವ ಸರ್ವೇಶ್ವರ ನ್ಯಾಯಸ್ವರೂಪಿ, ಎಂದಿಗೂ ಅನ್ಯಾಯ ಮಾಡುವುದಿಲ್ಲ. ದಿನದಿನವೂ ತಪ್ಪದೆ ನ್ಯಾಯ ದೊರಕಿಸುತ್ತಾರೆ. ಅವರಿಗೆ ಗುಟ್ಟಾಗಿರುವುದು ಯಾವುದೂ ಇಲ್ಲ. ಅನ್ಯಾಯಮಾಡುವವನಿಗಾದರೋ ನಾಚಿಕೆ ಎಂಬುದೇ ಇಲ್ಲ.


ಎಂಬೀ ಸರ್ವೇಶ್ವರನ ನುಡಿ ಎಂದಿನಿಂದಲೋ ತಿಳಿದಿಹುದು.’


ಇವರು ಅರಿಯಲಿ ಪ್ರಭುವೆಂಬ ನಾಮ ನಿನ್ನದೆಂದು I ಧರೆಯಲ್ಲೆಲ್ಲಾ ಸರ್ವೋನ್ನತ ನೀನೇ ಎಂದು II


ಇವು ಈಜಿಪ್ಟ್ ದೇಶಕ್ಕೆ ಸರ್ವೇಶ್ವರ ಸ್ವಾಮಿಯ ಸಂಕೇತವಾಗಿಯೂ ಸಾಕ್ಷಿಯಾಗಿಯೂ ಇರುವುವು. ಅವರು ತಮ್ಮನ್ನು ಬಾಧಿಸುವವರ ವಿರುದ್ಧ ಸರ್ವೇಶ್ವರ ಸ್ವಾಮಿಗೆ ಮೊರೆಯಿಟ್ಟಾಗ, ಸ್ವಾಮಿಯು ವೀರನಾದ ರಕ್ಷಕನೊಬ್ಬನನ್ನು ಕಳುಹಿಸುವರು. ಆತನು ಆ ಜನರನ್ನು ಬಿಡುಗಡೆಮಾಡಿ ಉದ್ಧರಿಸುವನು.


ಮೊಲೆಯೂಡಿಸುವರು ಜನಾಧಿಪತಿಗಳು ನಿನಗೆ ಮೊಲೆಗೂಸಾಗುವೆ ನೀನು ಜನಾಂಗಗಳಿಗೆ. ಆಗ ತಿಳಿಯುವೆ ನಿನ್ನನುದ್ಧರಿಸಿದ ಸರ್ವೇಶ್ವರ ನಾನೆಂದು ನಿನ್ನ ವಿಮೋಚಕನು, ಯಕೋಬ್ಯರ ಪರಾಕ್ರಮಿಯು ನಾನೆಂದು.


ಸರ್ವೇಶ್ವರ ಇಂತೆನ್ನುತ್ತಾರೆ: “ಈಜಿಪ್ಟಿನಿಂದ ನಿನ್ನನ್ನು ಬಿಡಿಸಿಕೊಂಡು ಬಂದಾಗಲಿಂದ ನಾನೇ ನಿನ್ನ ಸರ್ವೇಶ್ವರನಾದ ದೇವರು. ನಾನಲ್ಲದೆ ಬೇರೆ ದೇವರುಗಳು ನಿನಗಿಲ್ಲ. ನಾನಲ್ಲದೆ ನಿನಗೆ ಬೇರೆ ಉದ್ಧಾರಕರಿಲ್ಲ.


ಹಗಲಿರುಳು ಎನ್ನದೆ ನಿರಂತರವೂ ಬೆಳಕಾಗುವುದು. ಸಂಜೆಯು ಸಹ ಪ್ರಾಕಾಶಮಯವಾಗಿರುವುದು. ಆದರೆ ಇದು ಯಾವಾಗ ಸಂಭವಿಸುವುದೆಂಬುದು ಸರ್ವೇಶ್ವರಸ್ವಾಮಿಗೆ ಮಾತ್ರ ತಿಳಿದಿರುವುದು.


ಆಗ ಸರ್ವೇಶ್ವರ ಜಗಕ್ಕೆಲ್ಲಾ ಅರಸರಾಗಿರುವರು. ಅವರೊಬ್ಬರೇ ದೇವರೆಂದು, ಅವರ ಹೆಸರೊಂದೇ ಸ್ತುತ್ಯಾರ್ಹವೆಂದು ಎಲ್ಲರಿಗೂ ತಿಳಿದಿರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು