Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 45:3 - ಕನ್ನಡ ಸತ್ಯವೇದವು C.L. Bible (BSI)

3 ಹೆಸರು ಹಿಡಿದು ನಿನ್ನ ಕರೆಯುವ ಸರ್ವೇಶ್ವರ ನಾನು ಕೊಡುವೆ ನಾ ನಿನಗೆ ಕತ್ತಲಲಿ ಬಚ್ಚಿಟ್ಟ ಭಂಡಾರಗಳನು ಗುಪ್ತಸ್ಥಳಗಳಲ್ಲಿ ಮರೆಮಾಡಿರುವ ನಿಧಿನಿಕ್ಷೇಪಗಳನು. ಈ ಪರಿ ಅರಿತುಕೊಳ್ಳುವೆ ನೀನು ನಾನೇ ಇಸ್ರಯೇಲರ ದೇವರೆಂಬುದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನಿನ್ನ ಹೆಸರು ಹಿಡಿದು ಕರೆಯುವ ಯೆಹೋವನು ನಾನೇ. ಇಸ್ರಾಯೇಲರ ದೇವರು ಎಂದು ನೀನು ತಿಳಿದುಕೊಳ್ಳುವ ಹಾಗೆ ಕತ್ತಲಲ್ಲಿ ಬಚ್ಚಿಟ್ಟಿರುವ ಆಸ್ತಿಯನ್ನೂ, ಗುಪ್ತಸ್ಥಳಗಳಲ್ಲಿ ಮರೆಮಾಡಿದ ನಿಧಿನಿಕ್ಷೇಪವನ್ನೂ ನಿನಗೆ ಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ನಿನ್ನ ಹೆಸರುಹಿಡಿದು ಕರೆಯುವ ನಾನು ಯೆಹೋವನು, ಇಸ್ರಾಯೇಲ್ಯರ ದೇವರು ಎಂದು ನೀನು ತಿಳಿದುಕೊಳ್ಳುವ ಹಾಗೆ ಕತ್ತಲಲ್ಲಿ ಬಚ್ಚಿಟ್ಟಿರುವ ಆಸ್ತಿಪಾಸ್ತಿಯನ್ನೂ ಗುಪ್ತಸ್ಥಳಗಳಲ್ಲಿ ಮರೆಮಾಡಿದ ನಿಧಿನಿಕ್ಷೇಪವನ್ನೂ ನಿನಗೆ ಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಕತ್ತಲೆಯಲ್ಲಿ ಕೂಡಿಸಿಟ್ಟಿದ್ದ ಐಶ್ವರ್ಯವನ್ನೂ ಗುಪ್ತವಾಗಿಟ್ಟಿದ್ದ ನಿಕ್ಷೇಪವನ್ನೂ ನಾನು ನಿನಗೆ ಕೊಡುವೆನು. ನಾನೇ ಯೆಹೋವನೆಂದು ನೀನು ತಿಳಿಯುವಂತೆ ಇದನ್ನು ಮಾಡುವೆನು. ನಾನೇ ಇಸ್ರೇಲರ ದೇವರಾದ ಯೆಹೋವನು. ನಿನ್ನನ್ನು ಹೆಸರೆತ್ತಿ ಕರೆಯುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನಿನ್ನನ್ನು ಹೆಸರು ಹಿಡಿದು ಕರೆಯುವ ಯೆಹೋವ ದೇವರು ನಾನೇ! ಇಸ್ರಾಯೇಲಿನ ದೇವರು ಎಂದು ನೀನು ತಿಳಿದುಕೊಳ್ಳುವ ಹಾಗೆ ಕತ್ತಲಲ್ಲಿ ಬಚ್ಚಿಟ್ಟಿರುವ ಬಂಡಾರವನ್ನೂ, ಗುಪ್ತಸ್ಥಳಗಳಲ್ಲಿ ಮರೆಮಾಡಿದ ನಿಧಿನಿಕ್ಷೇಪಗಳನ್ನೂ ನಿನಗೆ ಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 45:3
15 ತಿಳಿವುಗಳ ಹೋಲಿಕೆ  

ಆತನನ್ನು ಹೆಸರಿಸಿ ಕರೆದವನು ನಾನೇ ಆತನನ್ನು ಬರಮಾಡಿದವನೂ ನಾನೇ. ಆತನು ಗಳಿಸುವುದು ಜಯವನ್ನೇ.


ಈಗಲಾದರೋ ಯಕೋಬ ವಂಶವೇ, ಇಸ್ರಯೇಲ್ ಸಂತಾನವೇ ಕೇಳು : ನಿನ್ನನ್ನು ಸೃಷ್ಟಿಸಿದ, ರೂಪಿಸಿದ ಸರ್ವೇಶ್ವರನ ನುಡಿಯನ್ನು ಕೇಳು; “ಭಯಪಡಬೇಡ, ನಿನ್ನನ್ನು ರಕ್ಷಿಸಿದಾತ ನಾನಲ್ಲವೆ? ನಿನ್ನನ್ನು ಹೆಸರು ಹಿಡಿದು ಕರೆದಾತ ನಾನಲ್ಲವೆ? ನೀನು ನನ್ನವನೇ ಅಲ್ಲವೆ?


ಪರ್ಷಿಯ ರಾಜನಾದ ಸೈರಸೆಂಬ ನನ್ನ ಮಾತನ್ನು ಕೇಳಿರಿ; ಪರಲೋಕ ದೇವರಾದ ಸರ್ವೇಶ್ವರಸ್ವಾಮಿ ಭೂಲೋಕದ ಎಲ್ಲ ರಾಜ್ಯಗಳನ್ನು ನನಗೆ ಕೊಟ್ಟಿದ್ದಾರೆ; ‘ನನಗಾಗಿ ಜುದೇಯ ನಾಡಿನ ಜೆರುಸಲೇಮಿನಲ್ಲಿ ಒಂದು ಆಲಯವನ್ನು ಕಟ್ಟಿಸಬೇಕು’ ಎಂದು ಅವರು ಆಜ್ಞಾಪಿಸಿದ್ದಾರೆ.


ಮೋಶೆ ಸರ್ವೇಶ್ವರ ಸ್ವಾಮಿಗೆ, ” ಈ ಜನರನ್ನು ಇಂಥ ಈ ನಾಡಿಗೆ ನಡೆಸಿಕೊಂಡು ಹೋಗಬೇಕೆಂದು ನನಗೆ ನೀವು ವಿಧಿಸಿದಿರಿ. ನನ್ನ ಸಂಗಡ ಬೇರೆ ಯಾರನ್ನು ಕಳುಹಿಸುವಿರೆಂದು ನನಗೆ ತಿಳಿಸಲಿಲ್ಲ. ‘ನಿನ್ನನ್ನು ಹೆಸರಿಡಿದು ಗುರುತಿಸಿದ್ದೇನೆ. ನಿನಗೆ ನನ್ನ ದಯೆ ದೊರಕಿದೆ,’ ಎಂದು ಹೇಳಿದ್ದೀರಿ.


ಅದಕ್ಕೆ ಸರ್ವೇಶ್ವರ, “ನಿನ್ನ ಕೋರಿಕೆಯಂತೆ ಮಾಡುವೆನು. ಏಕೆಂದರೆ ನೀನು ನನ್ನ ಅನುಗ್ರಹಕ್ಕೆ ಪಾತ್ರನು; ನಿನ್ನನ್ನು ಹೆಸರಿಡಿದು ಗುರುತಿಸಿದ್ದೇನೆ,” ಎಂದು ಮೋಶೆಗೆ ಹೇಳಿದರು.


ಹೊಡೆಯಲಿ ಅಶ್ವಗಳನ್ನೂ ರಥಗಳನ್ನೂ ಬಾಬಿಲೋನಿನಲ್ಲಿರುವ ನಾನಾ ವಿದೇಶಿಯರನ್ನೂ ಬೆದರಿಸಲಿ ಅವರ ಹೆಂಗಸರನ್ನು, ಕಬಳಿಸಲಿ, ಸೂರೆಮಾಡಲಿ ಆ ಖಡ್ಗ ಅವರ ಸಂಪತ್ತನ್ನು.


ಬಾಬಿಲೋನ್ ಆಕಾಶದ ತನಕ ಬೆಳೆದರೂ ಎತ್ತರವಾದ, ಬಲವಾದ ಕೋಟೆಕಟ್ಟಿ ಭದ್ರಪಡಿಸಿಕೊಂಡರೂ ನನ್ನ ಅಪ್ಪಣೆಯ ಮೇರೆಗೆ ಜನರು ಹಾಳುಮಾಡುವರು; ಅದರ ಮೇಲೆ ಬೀಳುವರು. ಸರ್ವೇಶ್ವರನಾದ ನನ್ನ ನುಡಿ ಇದು.”


ಕಿವಿಗೊಡಿ ನನ್ನ ದ್ವೀಪನಿವಾಸಿಗಳೇ, ಆಲಿಸಿ ನನ್ನನ್ನು ದೂರದ ಜನಾಂಗಗಳೇ, ಸರ್ವೇಶ್ವರ ಕರೆದನೆನ್ನನ್ನು ಗರ್ಭದಲ್ಲಿದ್ದಾಗಲೇ; ಹೆಸರಿಟ್ಟನೆನಗೆ ನಾನು ತಾಯಿಯ ಉದರದಲ್ಲಿದ್ದಾಗಲೇ.


ಆದರೆ ಆ ಎಂಬತ್ತು ಮಂದಿಯಲ್ಲಿ ಹತ್ತು ಜನರು ಇಷ್ಮಾಯೇಲನಿಗೆ, “ನಮ್ಮನ್ನು ಕೊಲ್ಲಬೇಡಿ; ಗೋದಿ, ಜವೆಗೋದಿ, ಎಣ್ಣೆ, ಜೇನುತುಪ್ಪ ಇವುಗಳನ್ನು ಕಾಡಿನಲ್ಲಿ ರಾಶಿಯಾಗಿ ಬಚ್ಚಿಟ್ಟಿದ್ದೇವೆ,” ಎಂದು ಬಿನ್ನವಿಸಿದರು. ಈ ಕಾರಣ ಅವರನ್ನು ಅವರ ಜೊತೆಯವರಂತೆ ಕೊಲ್ಲದೆ ಬಿಟ್ಟನು.


ತಿಳಿಸಿ ನಮಗೆ ಮುಂದೆ ನಡೆಯಬೇಕಾದವುಗಳನು ನಂಬುವೆವು ಆಗ ನೀವು ದೇವರುಗಳೆಂಬುದನು, ಪ್ರದರ್ಶಿಸಿ ಒಳಿತನ್ನಾಗಲಿ ಕೆಡುಕನ್ನಾಗಲಿ ಆಗ ನೋಡುವೆವು ಒಟ್ಟಿಗೆ ನಿಬ್ಬೆರಗಾಗಿ !


ಲೋಕದ ಕಟ್ಟಕಡೆಯಿಂದ ಬಾಬಿಲೋನಿಗೆ ಬನ್ನಿ. ಅದರ ಕಣಜಗಳನ್ನು ತೆರೆಯಿರಿ. ಆ ನಗರವನ್ನು ಹಾಳುದಿಬ್ಬವನ್ನಾಗಿ ಮಾಡಿ ಪೂರ್ತಿಯಾಗಿ ನಾಶಪಡಿಸಿರಿ. ಅದರಲ್ಲಿ ಏನೂ ಉಳಿಯದಿರಲಿ.


“ಬಹುಜಲಾಶ್ರಯಗಳ ನಡುವೆ ನಿಂತಿರುವ ನಗರಿಯೇ, ಧನಭರಿತ ಪುರಿಯೇ, ನಿನ್ನ ಅಂತ್ಯಕಾಲವು ಬಂದಿದೆ. ನೀನು ಕೊಳ್ಳೆಹೊಡೆದದ್ದು ಸಾಕಾಗಿದೆ.”


ಇಸ್ರಯೇಲ್ ದೇವರೇ, ಸರ್ವೇಶ್ವರಾ, ನೀವು ನಿಮ್ಮ ದಾಸ ದಾವೀದನಿಗೆ ನುಡಿದದ್ದೆಲ್ಲವೂ ಸಾರ್ಥಕವಾಗಲಿ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು