Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 45:5 - ಕನ್ನಡ ಸತ್ಯವೇದವು C.L. Bible (BSI)

5 ಸರ್ವೇಶ್ವರ ನಾನಲ್ಲದೆ ಬೇರಾರು ಅಲ್ಲ ನನ್ನ ಹೊರತು ಯಾವ ದೇವರು ಇಲ್ಲ. ನೀನು ನನ್ನನ್ನು ಅರಿಯದವನಾಗಿರುವೆ ಆದರೂ ನಿನ್ನನ್ನು ಶಸ್ತ್ರಧಾರಿಯಾಗಿಸುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನಾನೇ ಯೆಹೋವನು, ಇನ್ನು ಯಾರೂ ಇಲ್ಲ, ನನ್ನ ಹೊರತು ಯಾವ ದೇವರೂ ಇಲ್ಲ. ನೀನು ನನ್ನನ್ನು ಅರಿಯದವನಾಗಿದ್ದರೂ ನಿನಗೆ ನಡುಕಟ್ಟುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನಾನೇ ಯೆಹೋವ, ಇನ್ನು ಯಾವನೂ ಅಲ್ಲ, ನಾನು ಹೊರತು ಯಾವ ದೇವರೂ ಇಲ್ಲ; ನೀನು ನನ್ನನ್ನು ಅರಿಯದವನಾಗಿದ್ದರೂ ನಿನಗೆ ನಡುಕಟ್ಟುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಯೆಹೋವನೆಂಬ ನಾನೊಬ್ಬನೇ ದೇವರು. ನನ್ನ ಹೊರತು ಬೇರೆ ದೇವರುಗಳಿಲ್ಲ. ನೀನು ಬಟ್ಟೆಗಳನ್ನು ಧರಿಸಿಕೊಳ್ಳುವಂತೆ ಮಾಡಿದವನು ನಾನೇ. ಆದರೂ ನೀನು ನನ್ನನ್ನು ತಿಳಿದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನಾನೇ ಯೆಹೋವ ದೇವರು, ಮತ್ತೊಬ್ಬನಿಲ್ಲ. ನನ್ನ ಹೊರತು ಯಾವ ದೇವರೂ ಇಲ್ಲ. ನೀನು ನನ್ನನ್ನು ಅರಿಯದವನಾಗಿದ್ದರೂ ನಿನ್ನನ್ನು ಬಲಪಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 45:5
28 ತಿಳಿವುಗಳ ಹೋಲಿಕೆ  

ನೆನಪಿಗೆ ತಂದುಕೊಳ್ಳಿ ಪ್ರಾಚೀನ ಘಟನೆಗಳನ್ನು ಅರಿತುಕೊಳ್ಳಿ ನಾನೇ ದೇವರು, ಇನ್ನಾರೂ ಇಲ್ಲ ಎಂಬುದನ್ನು ನಾನೇ ಪರಮದೇವರು, ನನಗೆ ಸರಿಸಮಾನವಿಲ್ಲ ಎಂಬುದನ್ನು.


ಹೆದರಬೇಡಿ, ಅಂಜದಿರಿ, ನನ್ನ ಜನರೇ, ನನಗೆ ಸಾಕ್ಷಿಗಳು ನೀವೇ; ಪೂರ್ವಕಾಲದಿಂದ ನಡೆದವುಗಳನು ನಾ ನಿಮಗೆ ಮುಂತಿಳಿಸಿ ಶ್ರುತಪಡಿಸಿಲ್ಲವೆ? ನನ್ನ ಹೊರತು ಬೇರೆ ದೇವನಿರುವನೆ? ನನ್ನ ಹೊರತು ಬೇರೆ ಸೇನಾಧೀಶ್ವರನಿರುವನೆ? ಅಂಥವನಾರೋ ನಾನರಿಯೆ.”


ಇಂತೆನ್ನುತ್ತಾರೆ ಸೇನಾಧೀಶ್ವರ ಸರ್ವೇಶ್ವರ, ಇಸ್ರಯೇಲರ ಅರಸ, ಅವರ ಉದ್ಧಾರಕ: “ಆದಿಯು ನಾನೇ, ಅಂತ್ಯವು ನಾನೇ, ನನ್ನ ಹೊರತು ದೇವರಾರು ಇಲ್ಲ ಬೇರೆ.


ನಾನೇ ಇಸ್ರಯೇಲಿನ ಮಧ್ಯೆ ನೆಲೆಯಾಗಿ ಇರುವವನು ನಾನೇ ನಿಮ್ಮ ಸರ್ವೇಶ್ವರನಾದ ದೇವರು; ನಾನಲ್ಲದೆ ಬೇರೆ ದೇವರು ನಿಮಗಿಲ್ಲ. ನನ್ನ ಜನರಿಗೆ ಎಂದಿಗೂ ಆಶಾಭಂಗವಾಗದು ಎಂದು ನಿಮಗೆ ಮನದಟ್ಟಾಗುವುದು.


ಭೂಲೋಕದ ಜನರೆಲ್ಲರೂ ಸರ್ವೇಶ್ವರನ ಹೊರತು ಬೇರೆ ದೇವರಿಲ್ಲವೆಂಬುದನ್ನು ತಿಳಿದುಕೊಳ್ಳುವಂತೆ, ಅವರು ಅವಶ್ಯವಿರುವಾಗೆಲ್ಲಾ ತಮ್ಮ ದಾಸನ ಹಾಗು ಪ್ರಜೆಗಳಾದ ಇಸ್ರಯೇಲರ ನ್ಯಾಯವನ್ನು ಸ್ಥಾಪಿಸುತ್ತಾ ಬರಲಿ.


“ಇರುವಾತನು ನಾನೇ, ನಾನೊಬ್ಬನೇ ಬದುಕಿಸುವವನು, ಕೊಲ್ಲುವವನು ನಾನೇ, ಗಾಯಗೊಳಿಸುವವನು, ವಾಸಿಮಾಡುವವನು ನಾನೇ. ಇಂದಾದರು ತಿಳಿಯಿರಿ: ನನ್ನ ವಿನಾ ದೇವರಿಲ್ಲ ನನ್ನ ಕೈಯಿಂದ ತಪ್ಪಿಸಬಲ್ಲ ಶಕ್ತನಾರೂ ಇಲ್ಲ.


ಸರ್ವೇಶ್ವರ ಸ್ವಾಮಿಯೊಬ್ಬರೇ ದೇವರು, ಬೇರೆ ದೇವರೇ ಇಲ್ಲವೆಂದು ನೀವು ಅರಿತುಕೊಳ್ಳುವುದಕ್ಕಾಗಿ ಇದನ್ನೆಲ್ಲಾ ನಿಮಗೆ ಮಾತ್ರ ತೋರಿಸಲಾಗಿದೆ.


ಅಧಿಪತಿಗಳಿಗೆ ಉಂಟುಮಾಡುತ್ತಾನೆ ಅವಮಾನವನ್ನು ಬಿಚ್ಚಿಬಿಡುತ್ತಾನೆ ಬಲಾಢ್ಯರ ನಡುಕಟ್ಟನ್ನು.


ನನಗಿತ್ತೆ ನೀ ಕದನಕ್ಕಾಗುವ ಶೌರ್ಯವೆಂಬ ನಡುಕಟ್ಟು I ತಗ್ಗಿಸಿದೆ ಎದುರಾಳಿಗಳನು ನನಗಧೀನ ಮಾಡಿಬಿಟ್ಟು II


ನೀವು ಇದನ್ನೆಲ್ಲಾ ಆಲೋಚಿಸಿ, ಮೇಲೆ ಆಕಾಶದಲ್ಲಾಗಲಿ, ಕೆಳಗೆ ಭೂಮಿಯಲ್ಲಾಗಲಿ ಸರ್ವೇಶ್ವರಸ್ವಾಮಿ ಒಬ್ಬರೇ ದೇವರು, ಬೇರೆ ಯಾವ ದೇವರೂ ಇಲ್ಲವೆಂಬುದನ್ನು ಈಗ ಗ್ರಹಿಸಿಕೊಂಡು ಜ್ಞಾಪಕದಲ್ಲಿ ಇಡಬೇಕು.


ನಡುಕಟ್ಟಾಗಿ ನನಗೆ ಬಿಗಿದಿದ್ದಾನೆ ಶೌರ್ಯ I ಆತನಿಂದಲೇ ಸರಾಗ ನನ್ನ ಮಾರ್ಗ II


ಜಗತ್ತು ಉಂಟಾಗುವ ಮೊದಲೇ ‘ದಿವ್ಯವಾಣಿ’ ಎಂಬವರಿದ್ದರು. ಆ ದಿವ್ಯವಾಣಿ ದೇವರಾಗಿದ್ದರು. ಆ ದಿವ್ಯವಾಣಿ ದೇವರೊಂದಿಗೆ ಇದ್ದರು;


ಪರ್ಷಿಯ ರಾಜನಾದ ಸೈರಸೆಂಬ ನನ್ನ ಮಾತನ್ನು ಕೇಳಿರಿ; ಪರಲೋಕ ದೇವರಾದ ಸರ್ವೇಶ್ವರಸ್ವಾಮಿ ಭೂಲೋಕದ ಎಲ್ಲ ರಾಜ್ಯಗಳನ್ನು ನನಗೆ ಕೊಟ್ಟಿದ್ದಾರೆ; ‘ನನಗಾಗಿ ಜುದೇಯ ನಾಡಿನ ಜೆರುಸಲೇಮಿನಲ್ಲಿ ಒಂದು ಆಲಯವನ್ನು ಕಟ್ಟಿಸಬೇಕು’ ಎಂದು ಅವರು ಆಜ್ಞಾಪಿಸಿದ್ದಾರೆ.


ನಿನ್ನ ವಸ್ತ್ರವನ್ನು ಅವನಿಗೆ ತೊಡಿಸುವೆನು. ನಿನ್ನ ನಡುಕಟ್ಟನ್ನು ಅವನಿಗೆ ಕಟ್ಟುವೆನು. ನಿನ್ನ ಅಧಿಕಾರವನ್ನು ಅವನಿಗೆ ಒಪ್ಪಿಸುವೆನು. ಅವನು ಜೆರುಸಲೇಮಿನ ನಿವಾಸಿಗಳಿಗೂ ಜುದೇಯದ ಮನೆತನಕ್ಕೂ ತಂದೆಯಾಗಿರುವನು.


ಅರಸರು ಹಾಕಿದ ಬಂಧನವನ್ನು ಬಿಚ್ಚಿ ಬಿಗಿಯುತ್ತಾನೆ ಅವರ ಸೊಂಟಕ್ಕೆ ಚಿಂದಿ.


ಇಲ್ಲವಾದರೆ ಈ ಸಾರಿ ವಿಧಿಸುವ ಈ ಬಾಧೆಗಳು ನಿನ್ನ ಪ್ರಜಾಪರಿವಾರದವರಿಗೆ ಮಾತ್ರವಲ್ಲ ನಿನಗೂ ತಗಲುವುದು. ಇದರಿಂದ ಇಡೀ ಲೋಕದಲ್ಲಿ ನನಗೆ ಸಮಾನರು ಬೇರೆ ಯಾರೂ ಇಲ್ಲವೆಂದು ನೀನು ತಿಳಿದುಕೊಳ್ಳುವೆ.


ಪ್ರಭುವಲ್ಲದೆ ಇನ್ನಾವ ದೇವರುಂಟು? I ನಮ್ಮ ದೇವನಲ್ಲದೆ ಉದ್ಧಾರಕನೆಲ್ಲುಂಟು? II


ಇಂತೆನ್ನುತ್ತಾರೆ ಸರ್ವೇಶ್ವರ : “ನೀವೇ ನನಗೆ ಸಾಕ್ಷಿಗಳು; ನನ್ನಿಂದ ಆಯ್ಕೆಯಾದ ನನ್ನ ದಾಸರು; ಏಕೆನೆ ನಾನೇ ಪರಮಾತ್ಮನೆಂದು ಅರಿತು, ವಿಶ್ವಾಸವಿಟ್ಟು, ಗ್ರಹಿಸಬೇಕಾದವರು; ದೇವರಾರೂ ನನಗಿಂತ ಮುಂದೆ ಇರಲಿಲ್ಲ ನನ್ನಾನಂತರವೂ ಇರುವುದಿಲ್ಲ.


ಇಂತೆಂದರು ಸರ್ವೇಶ್ವರ ತಾನು ಅಭಿಷೇಕಿಸಿದ ಕೋರೆಷನಿಗೆ “ರಾಷ್ಟ್ರಗಳನ್ನು ನೀ ಸದೆಬಡಿಯುವಂತೆ ರಾಜಮಹಾರಾಜರನು ನಿಶ್ಯಸ್ತ್ರರನ್ನಾಗಿ ಮಾಡುವಂತೆ ಮುಚ್ಚಲಾಗದ ಹಾಗೆ ಬಾಗಿಲು ಹೆಬ್ಬಾಗಿಲುಗಳನ್ನು ತೆರೆಯುವಂತೆ ನಾ ನಿನ್ನ ಕೈಹಿಡಿದು ನಡೆಸುವೆನು ಮುಂದೆ.


ಇದ ಕಂಡು ತಿಳಿಯುವರೆಲ್ಲರು ಪೂರ್ವದಿಂದ ಪಶ್ಚಿಮದವರೆಗು : ನಿನ್ನ ವಿನಾ ದೇವರಾರು ಇಲ್ಲವೆಂದು ನಾನೇ ಸರ್ವೇಶ್ವರ ಮತ್ತಾರು ಅಲ್ಲವೆಂದು;


ಭೋಗಾಸಕ್ತಳೆ, ನೆಮ್ಮದಿಯಾಗಿ ನೆಲೆಗೊಂಡಿರುವವಳೇ, ‘ಏಕೈಕಳು ನಾನೇ, ನನ್ನ ಹೊರತು ಇನ್ನಾರು ಇಲ್ಲ,’ ಎನ್ನುವವಳೇ, ‘ವಿಧವೆಯಾಗೆನು, ಪುತ್ರಶೋಕ ಎನಗಿರದು’ ಎನ್ನುವವಳೇ, ಇದನು ಕೇಳು :


ನಾನು ಬಾಬಿಲೋನಿನ ಅರಸನ ಕೈಗಳನ್ನು ಬಲಪಡಿಸಿ, ನನ್ನ ಖಡ್ಗವನ್ನು ಅವನ ಕೈಗೆ ಕೊಟ್ಟು, ಫರೋಹನ ಕೈಗಳನ್ನು ಮುರಿಸುವಾಗ ಗಾಯದಿಂದ ಪ್ರಾಣಸಂಕಟ ಪಡುವವನಂತೆ ಫರೋಹನು ಆ ಅರಸನ ಮುಂದೆ ನರಳಾಡುವನು.


ನನಗಿತ್ತನಾತ ಹುಲ್ಲೆಯಂತ ಮೊನೆಗಾಲು I ಎನ್ನ ಬಿಗಿ ನಿಲ್ಲಿಸಿದ ಮಲೆಗಳ ಮೇಲೂ II


ಪ್ರಭು, ನೀನೊಬ್ಬನೇ ದೇವನು I ಅದ್ಭುತಶಾಲಿ, ಮಹೋನ್ನತನು II


ನಮ್ಮ ದೇವರಾದ ಸರ್ವೇಶ್ವರಾ, ನೀವೇ ಏಕೈಕ ಸರ್ವೇಶ್ವರ ಎಂಬುದನ್ನು ಭೂಮಿಯ ರಾಷ್ಟ್ರಗಳೆಲ್ಲವೂ ತಿಳಿದುಕೊಳ್ಳುವಂತೆ ನಮ್ಮನ್ನು ಅಸ್ಸೀರಿಯರ ಕೈಯಿಂದ ಬಿಡಿಸಿರಿ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು