Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಶಾಯ 46:10 - ಕನ್ನಡ ಸತ್ಯವೇದವು C.L. Bible (BSI)

10 ಆರಂಭದಲ್ಲಿಯೇ ಅಂತ್ಯವನು ತಿಳಿಸಿದವನು ನಾನು ಭೂತಕಾಲದಲ್ಲಿಯೆ ಭವಿಷ್ಯವನು ಅರುಹಿದವನು ನಾನು. ಸ್ಥಿರವಿರುವುದು ನನ್ನ ಸಂಕಲ್ಪ, ನೆರವೇರುವುದು ನನ್ನ ಇಷ್ಟಾರ್ಥ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆರಂಭದಲ್ಲಿಯೇ ಅಂತ್ಯವನ್ನು ತಿಳಿಸಿದ್ದೇನೆ. ‘ನನ್ನ ಸಂಕಲ್ಪವು ನಿಲ್ಲುವುದು, ನನ್ನ ಇಷ್ಟಾರ್ಥವನ್ನೆಲ್ಲಾ ನೆರವೇರಿಸುವೆನು’ ಎಂದು ಹೇಳಿ ಇನ್ನೂ ನಡೆಯದಿರುವ ಕಾರ್ಯಗಳನ್ನು ಪುರಾತನಕಾಲದಲ್ಲಿಯೇ ಅರುಹಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಆರಂಭದಲ್ಲಿಯೇ ಅಂತ್ಯವನ್ನು ತಿಳಿಸಿದ್ದೇನೆ; ನನ್ನ ಸಂಕಲ್ಪವು ನಿಲ್ಲುವದು, ನನ್ನ ಇಷ್ಟಾರ್ಥವನ್ನೆಲ್ಲಾ ನೆರವೇರಿಸುವೆನು ಎಂದು ಹೇಳಿ ಇನ್ನೂ ನಡೆಯದಿರುವ ಕಾರ್ಯಗಳನ್ನು ಪುರಾತನಕಾಲದಲ್ಲಿಯೇ ಅರುಹಿದ್ದೇನೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 “ನಾನು ಅಂತ್ಯದಲ್ಲಿ ನಡೆಯಲಿರುವ ವಿಷಯಗಳನ್ನು ಪ್ರಾರಂಭದಲ್ಲಿಯೇ ತಿಳಿಸಿರುತ್ತೇನೆ. ಬಹುಕಾಲದ ಹಿಂದೆ ಇನ್ನೂ ಸಂಭವಿಸದ ಸಂಗತಿಗಳನ್ನು ತಿಳಿಸಿದ್ದೇನೆ. ನಾನು ಯೋಜಿಸುವ ಸಂಗತಿಗಳು ನೆರವೇರುವವು. ನಾನು ಮಾಡಲು ಬಯಸುವ ಕಾರ್ಯಗಳನ್ನು ನೆರವೇರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆರಂಭದಲ್ಲಿಯೇ ಅಂತ್ಯವನ್ನೂ, ಪೂರ್ವಕಾಲದಿಂದ ಇನ್ನೂ ನಡೆಯದ ಸಂಗತಿಗಳನ್ನೂ ಪ್ರಕಟಿಸಿದ್ದೇನೆ. ನನ್ನ ಆಲೋಚನೆಯು ನಿಲ್ಲುವುದೆಂದೂ, ನನಗೆ ಮೆಚ್ಚಿದ್ದನ್ನು ಮಾಡುವೆನೆಂದೂ ಅರುಹಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಶಾಯ 46:10
38 ತಿಳಿವುಗಳ ಹೋಲಿಕೆ  

ಮನುಜನ ಮನದಲ್ಲಿ ಏಳುವ ಯೋಜನೆಗಳು ಹಲವು; ಈಡೇರುವುದಾದರೊ ಸರ್ವೇಶ್ವರನ ಸಂಕಲ್ಪವು.


ಪ್ರಭುವಿನ ಯೋಜನೆ ಶಾಶ್ವತ I ಅವನ ಸಂಕಲ್ಪ ಅನವರತ II


ಹೌದು, ನಾನೇ ಪರಮಾತ್ಮ ಆದಿಯಿಂದ ಬಿಡಿಸುವವರಾರು ಇಲ್ಲ ನನ್ನ ಕೈಯಿಂದ ನಾಗೈದುದನು ತಡೆಯಲಾಗದು ಯಾರಿಂದ.” ಈ ಪರಿ ನುಡಿದಿಹನು ಸರ್ವೇಶ್ವರನು, ನಿಮ್ಮ ಉದ್ಧಾರಕನು, ಇಸ್ರಯೇಲಿನ ಪರಮಪಾವನನು;


ಹೇಳಿ, ನ್ಯಾಯಸ್ಥಾನಕ್ಕೆ ಬಂದು ನಿಮ್ಮ ವಾದವನ್ನು ಮಂಡಿಸಿ; ನಿಮ್ಮ ದೇವರುಗಳು ತಮ್ಮತಮ್ಮೊಳಗೆ ಪರ್ಯಾಲೋಚಿಸಿ ನೋಡಲಿ. ಪ್ರಾರಂಭದಿಂದಲೂ ಈ ವಿಷಯವನ್ನು ಪ್ರಕಟಿಸಿದವರು ಯಾರು? ಅದು ನಡೆಯುವುದಕ್ಕೆ ಮುಂಚೆಯೇ ತಿಳಿಸಿದವನು ನಾನಲ್ಲದೆ ಇನ್ಯಾರು? ನನ್ನ ಹೊರತು ಇನ್ನು ಯಾವ ದೇವರೂ ಇಲ್ಲ; ನಾನಲ್ಲದೆ ಸತ್ಯಸ್ವರೂಪನು, ಉದ್ಧಾರಕನು ಆದ ದೇವನಿಲ್ಲವೇ ಇಲ್ಲ.


ಸರ್ವೇಶ್ವರನ ಮುಂದೆ ನಿಲ್ಲಬಲ್ಲ ಜ್ಞಾನವಿಲ್ಲ, ವಿವೇಚನೆಯಿಲ್ಲ, ಆಲೋಚನೆಯಿಲ್ಲ.


ಮಾಡುವನು ಪ್ರಭು ತನಗಿಷ್ಟ ಬಂದುದನು I ಭೂಮ್ಯಾಕಾಶ, ಸಮುದ್ರ ಸಾಗರದೊಳು II


ಇದು ದೈವಸಂಕಲ್ಪವಾಗಿದ್ದರೆ ಅವರನ್ನು ನಾಶಮಾಡಲು ನಿಮ್ಮಿಂದಾಗದು. ನೀವು ದೇವರಿಗೆ ವಿರುದ್ಧ ಹೋರಾಡಿದಂತೆ ಆದೀತು,” ಎಂದು ಹೇಳಿದನು. ಸಭಾಸದಸ್ಯರು ಗಮಲಿಯೇಲನ ಸಲಹೆಯನ್ನು ಅಂಗೀಕರಿಸಿದರು.


ನನಗೆ ಸಮಾನರು ಯಾರು? ರುಜುಪಡಿಸಲಿ, ನನ್ನ ಎದುರಿಗೆ ಬಂದು ವಾದಿಸಿ ಸ್ಥಿರಪಡಿಸಲಿ. ನರ ಸೃಷ್ಟಿಯಾದಂದಿನಿಂದ ನಡೆದುದೆಲ್ಲವನು ತಿಳಿಸಲಿ ಮುಂದಿನವುಗಳನು, ಭವಿಷ್ಯತ್ತುಗಳನು, ಈಗ ಊಹಿಸಿ ಹೇಳಲಿ.


ಮೂಡಲಿಂದ ಬೇಟೆಗಾಗಿ ರಣಹದ್ದನು ಕರೆದಂತೆ ಕರೆದಿಹೆನು ದೂರದೇಶದಿಂದ ನನ್ನ ಸಂಕಲ್ಪ ಈಡೇರಿಸಲೆಂದೇ. ನುಡಿದಿರುವೆನು ನಾನು; ಈಡೇರಿಸುವೆನು ಅದನ್ನು ಯೋಜಿಸಿರುವೆನು ನಾನು; ಸಾಧಿಸುವೆನು ಅದನ್ನು.


ಹಾಗೆಯೇ, ದೇವರು ತಮ್ಮ ವಾಗ್ದಾನವನ್ನು ಬಾಧ್ಯವಾಗಿ ಪಡೆಯುವವರಿಗೆ ತಮ್ಮ ಸಂಕಲ್ಪ ಅಚಲವಾದುದು ಎಂಬುದನ್ನು ಸ್ಪಷ್ಟಪಡಿಸಲು, ಶಪಥಮಾಡಿ ಸ್ಥಿರಪಡಿಸಿದರು.


ಆತನ ದೃಷ್ಟಿಯಲ್ಲಿ ಭೂನಿವಾಸಿಗಳೆಲ್ಲರು ಶೂನ್ಯರು ಇಹದ ಜನರೂ ಪರದ ದೂತರೂ ಆತನಿಗೆ ಅಧೀನರು. ಆತನ ಶಕ್ತಿಯುತ ಹಸ್ತವನ್ನು ಯಾರಿಂದಲೂ ತಡೆಯಲಾಗದು. ‘ನೀನು ಮಾಡುತ್ತಿರುವುದೇನು?’ ಎಂದು ಯಾರೂ ಆತನನ್ನು ಪ್ರಶ್ನಿಸಲಾರರು.


ರಾಜ್ಯಾಧಿಕಾರ ಪಡೆದವನು ಬರುವ ತನಕ ರಾಷ್ಟ್ರಗಳು ಆತನಿಗೆ ತಲೆಬಾಗುವ ತನಕ ತಪ್ಪದು ರಾಜದಂಡ ಯೆಹೂದನ ಕೈಯಿಂದ ಕದಲದು ಮುದ್ರೆಕೋಲು ಅವನ ವಂಶದಿಂದ.


ಎಂಬೀ ಸರ್ವೇಶ್ವರನ ನುಡಿ ಎಂದಿನಿಂದಲೋ ತಿಳಿದಿಹುದು.’


ಹಗೆತನವಿರಿಸುವೆನು ನಿನಗೂ ಈ ಮಹಿಳೆಗೂ ನಿನ್ನ ಸಂತಾನಕ್ಕೂ ಇವಳ ಸಂತಾನಕ್ಕೂ ಜಜ್ಜುವುದಿವಳ ಸಂತಾನ ನಿನ್ನ ತಲೆಯನ್ನು ಕಚ್ಚುವೆ ನೀನಾ ಸಂತಾನದ ಹಿಮ್ಮಡಿಯನ್ನು.”


ಆ ಪ್ರವಾದಿಗೆ ಕಿವಿಗೊಡದವನು ದೇವಜನರಿಂದ ದೂರವಾಗಿ ನಾಶವಾಗುತ್ತಾನೆ,’ ಎಂದು ಮೋಶೆ ಹೇಳಿದ್ದಾನೆ.


ಸೇನಾಧೀಶ್ವರ ಸರ್ವೇಶ್ವರ ಸ್ವಾಮಿಯ ಪ್ರತಿಜ್ಞೆಯಿದು : “ನೆರವೇರಿಯೇ ತೀರುವುದು ನಾ ಸಂಕಲ್ಪಿಸಿದ್ದು, ಈಡೇರಿಯೇ ತೀರುವುದು ನಾ ಯೋಚಿಸಿದ್ದು.


ಸರ್ವೇಶ್ವರಾ, ನೀನೆನ್ನ ದೇವನು, ಏಕೆನೆ ನೀನು ಸತ್ಯಸ್ವರೂಪನು, ನಿಷ್ಟಾವಂತನು, ಆದಿ ಯೋಜನೆಗಳನು ಪೂರೈಸುವವನು, ಅದ್ಭುತಕಾರ್ಯಗಳನು ಎಸಗಿದಂತವನು. ಘನಪಡಿಸುವೆ ನಾ ನಿನ್ನನು, ಸ್ತುತಿಸುವೆನು ನಿನ್ನ ನಾಮ ಮಹಿಮೆಯನು.


ಒಣಗಿ ಹೋಗುವುದಾ ಹುಲ್ಲು, ಬಾಡಿಹೋಗುವುದಾ ಹೂವು, ನಮ್ಮ ದೇವರ ನುಡಿಯಾದರೋ ಇರುವುದು ಚಿರಕಾಲವು.”


ಇದನ್ನೆಲ್ಲಾ ನಡೆಯಿಸಿ ನೆರವೇರಿಸಿದವನು ಯಾರು? ಆದಿಯಿಂದ ಈಗಿನವರೆಗೂ ತಲತಲಾಂತರಗಳನ್ನು ಬರಮಾಡುವವರು ಯಾರು? ಸರ್ವೇಶ್ವರನಾದ ನಾನೇ. ಹೌದು, ಆದಿಯಲ್ಲಿದ್ದವನು. ಅಂತ್ಯದಲ್ಲಿ ಇರುವವನು ಆದ ನಾನೇ.


“ಕೇಳು, ಎಲೈ ಯಕೋಬ ಮನೆತನವೇ, ನಿನಗೆ ತಿಳಿಸಿದೆ ಈವರೆಗೆ ನಡೆದ ಸಂಗತಿಗಳನು ಪೂರ್ವದಲೇ. ಹೌದು ಪ್ರಕಟಿಸಿದೆ ನಾನು, ಹೊರಡಿಸಿದೆ ನನ್ನ ಬಾಯಿಂದಲೇ ಕೈಗೂಡುವಂತೆ ಮಾಡಿದೆ ನಾನವುಗಳನು ಕೂಡಲೆ.


ಒಟ್ಟುಗೂಡಿ ಕೇಳಿ ನೀವೆಲ್ಲರು ಇದನ್ನು : ಆ ದೇವರುಗಳಲ್ಲಿ ಮುಂತಿಳಿಸಿದವನಾರು ಈ ಸಂಗತಿಯನು? ನನ್ನ ಪ್ರೀತಿಗೆ ಪಾತ್ರನಾದ ವ್ಯಕ್ತಿ ಸೈರಸನು ಕಸ್ದೀಯರ ಮೇಲೆ ಕೈಯೆತ್ತುವನು, ಈಡೇರಿಸುವನು ಬಾಬೆಲಿನಲ್ಲಿ ನನ್ನ ಇಷ್ಟಾರ್ಥವನು.


ಸರ್ವೇಶ್ವರನ ಚಿತ್ತದಂತೆ ಜಜ್ಜರಿತನಾದ ಹಿಂಸೆಬಾಧೆಗಳಿಂದ ಪಾಪ ಪ್ರಾಯಶ್ಚಿತ್ತಕ್ಕಾಗಿ ತನ್ನ ಪ್ರಾಣವನೆ ಸಮರ್ಪಿಸಿದ. ಈ ಪರಿ ಕಾಣುವನು ತನ್ನ ಸಿರಿಸಂತಾನವನು ಪಡೆಯುವನು ಚಿರಜೀವವನು ತಾನೇ ನೆರವೇರಿಸುವೆನು ಸರ್ವೇಶ್ವರನ ಸಂಕಲ್ಪವನು.


ಅಂತೆಯೇ, ನನ್ನ ಬಾಯಿಂದ ಹೊರಡುವ ಮಾತು ನನ್ನ ಇಷ್ಟಾರ್ಥವನು ನೆರವೇರಿಸಿದ ಹೊರತು, ನನ್ನ ಉದ್ದೇಶವನು ಕೈಗೂಡಿಸಿದ ಹೊರತು. ನನ್ನ ಬಳಿಗೆ ವ್ಯರ್ಥವಾಗಿ ಹಿಂದಿರುಗದು.


ಖಡ್ಗಕ್ಕೆ ತಪ್ಪಿಸಿಕೊಂಡ ಕೊಂಚ ಜನರು ಮಾತ್ರ ಈಜಿಪ್ಟಿನಿಂದ ಜುದೇಯಕ್ಕೆ ಹಿಂದಿರುಗುವರು. ಈಜಿಪ್ಟಿಗೆ ಹೋಗಿ ಪ್ರವಾಸಿಸುತ್ತಿರುವ ಅಳಿದು ಉಳಿದ ಯೆಹೂದ್ಯರೆಲ್ಲರು, ನನ್ನ ಮಾತು ದಿಟವಾಯಿತೋ ಅಥವಾ ಅವರ ಮಾತು ದಿಟವಾಯಿತೋ ಎಂದು ಆಗ ತಿಳಿದುಕೊಳ್ಳುವರು.’


ದಂಡನೆಯ ದಿನದಲ್ಲಿ ಎಫ್ರಯಿಮ್ ಹಾಳಾಗುವುದು. ಇಗೋ, ಇಸ್ರಯೇಲಿನ ಕುಲಗಳ ಭವಿಷ್ಯವನ್ನು ಖಚಿತವಾಗಿ ತಿಳಿಸಿದ್ದೇನೆ:


ಆತನದು ಏಕಚಿತ್ತ; ಅದನು ಬದಲಾಯಿಸಲಸಾಧ್ಯ ಆತ ಬಯಸಿದ್ದೆ ಸಿದ್ಧಿಯಾದಕಾರ್ಯ.


ಆದರೆ ಸರ್ವೇಶ್ವರನಾದ ನಾನು ಸಿಯೋನ್ ಪರ್ವತದಲ್ಲೂ ಜೆರುಸಲೇಮಿನಲ್ಲೂ ನನ್ನ ಗುರಿಯನ್ನು ಸಾಧಿಸಿದ ಮೇಲೆ ಆ ಅಸ್ಸೀರಿಯದ ಅರಸನನ್ನು ಅವನ ದುರಹಂಕಾರಕ್ಕಾಗಿ, ಗರ್ವದ ಭಾವನೆಗಳಿಗಾಗಿ ಸರಿಯಾಗಿ ದಂಡಿಸುವೆನು.


ಯಕೋಬ್ಯರ ಅರಸನಾದ ಸರ್ವೇಶ್ವರ ಇಂತೆನ್ನುತ್ತಾರೆ : “ನಾಡದೇವತೆಗಳೇ, ಹೊರಗೆ ಬರಲಿ ನಿಮ್ಮ ವ್ಯಾಜ್ಯ ಸಾಬೀತಾಗಲಿ ನಿಮ್ಮ ನ್ಯಾಯ.


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: “ಇಗೋ ಬಂದಿತು, ಸಂಭವಿಸಿತು; ನಾನು ಮುಂತಿಳಿಸಿದ ದಿನ ಇದೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು